Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS: ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ
    ಇತ್ತೀಚಿನ ಸುದ್ದಿ

    BIGG NEWS: ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

    September 12, 2023
    Share

    ಬೆಂಗಳೂರು: ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.‌

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು.

    ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಸಿಎಂ ನೀಡಿದ ಉಳಿದ ಸೂಚನೆಗಳು : ಸರ್ವೇ ಗೆ ಸಂಬಂಧಿಸಿದ ವ್ಯಾಜ್ಯಗಳು ಶೀಘ್ರ ವಿಲೇವಾರಿಗಾಗಿ ಕ್ರಮ, ಭೂ ಮಾಪಕರಿಂದ ಸರ್ವೇ ಪ್ರಕರಣಗಳು ಬಾಕಿ ಉಳಿಯಬಾರದು. ರೈತರು ಸರ್ವೇ ವ್ಯಾಜ್ಯಗಳಿಗಾಗಿ ಕಚೇರಿಗೆ ಅಲೆಯುವುದನ್ನು ತಕ್ಷಣದಿಂದ ತಪ್ಪಿಸಿ

    ಕಂದಾಯ ಇಲಾಖೆಯಲ್ಲಿ ಕಡತಗಳು ಅನಲೈನ ನಲ್ಲಿ 5-10 ದಿನದೊಳಗೆ ವಿಲೇವಾರಿ ಆಗಬೇಕು, ಸರ್ವೇ mismatch ಗಳನ್ನು ಭೂ ಮಾಪಕರು, ಎಸಿ, ತಹಸೀಲ್ದಾರ್ ಗಳ ಸರ್ವೇ ಮಾಡುವ ಬಗ್ಗೆ ಪಟ್ಟಿ ಮಾಡಿ, ಬಾಕಿ ಇರುವ ಸರ್ವೇ ಕಾರ್ಯವನ್ನು ವಿಲೀವಾರಿ ಮಾಡಬೇಕು

    ನಿಗದಿತ ಅವಧಿಯೊಳಗೆ ಜೋಡಿ ಗ್ರಾಮಗಳ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು, ಬೆಂಗಳೂರು ನಗರ ಸುತ್ತುಮುತ್ತ green belt ಪ್ರದೇಶದಲ್ಲಿ ಅನಧಿಕೃತ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕೆ ಸಹಕಾರ ನೀಡುತ್ತಿರುವ ಪಿಡಿಒ, ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು

    ಅನಧಿಕೃತ ಬಡಾವಣೆಗಳ ನಿರ್ಮಾಣ ವಿಷ ವರ್ತುಲವಿದ್ದಂತೆ. ಜಿಲ್ಲಾಧಿಕಾರಿಗಳು, ಸಿ ಇ ಓ ಗಳು ಈ ವಿಷಯಗಳನ್ನು ಗಂಬೀರವಾಗಿ ಪರಿಗಣಿಸಬೇಕು

    ಜಿಲ್ಲೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿಯನ್ನು ತಡೆಗಟ್ಟಲು ಅಗತ್ಯ ಗಮನ ಹರಿಸಬೇಕು

    ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಂತರ ಜಿಲ್ಲೆಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿಗೆ ಅಂತ್ಯ ಹಾಡಬೇಕಿದ್ದು, ಇದರ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಬೇಕು

    ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡಲೆಬಾರದಂದು ಅಧಿಕಾರಿಗಳು ತೀರ್ಮಾನಿಸಬೇಕು

    ಬೆಂಗಳೂರು ಸುತ್ತಮುತ್ತ ಹಸಿರು ವಲಯದಲ್ಲಿ ಖಾಸಗಿ ವ್ಯಕ್ತಿಗಳು ಬಡಾವಣೆಗಳನ್ನು ಮಾಡಿ, ನಿವೇಶನಗಳನ್ನು ಹಂಚಿಕೆ ಮನೆ ಕಟ್ಟಿಕೊಂಡಿದ್ದಾರೆ. ಇದನ್ನು ಪಿಡಿಓ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳ ಸಹಕಾರ ಇಲ್ಲದ ಮಾಡಲು ಸಾಧ್ಯವಿಲ್ಲ. ಇದು ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಸೂಚನೆ ನೀಡಿದರು

    ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಮುಖ್ಯ. ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಸಂಪೂರ್ಣ ಬೆಂಬಲ ನೀಡುತ್ತೇವೆ. ಅಕ್ರಮ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸೂಚಿಸಿದರು

    ಜಿಲ್ಲೆಗಳಲ್ಲಿ ರೆವೆನ್ಯೂ ಬಡಾವಣೆಗಳಿಗೆ ಅವಕಾಶ ನೀಡಬಾರದು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಕ್ರಮ ಬಡಾವಣೆಗಳ ಸಮಸ್ಯೆ ಕುರಿತು ಪ್ರತ್ಯೇಕ ಸಭೆ ನಡೆಸುವ ಅಗತ್ಯವಿದೆ. ಇತರ ಜಿಲ್ಲೆಗಳಲ್ಲಿ ಇದಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಅಧಿಕಾರಿಗಳು ಗಂಭೀರ ಸ್ವರೂಪದ ತಪ್ಪುಗಳನ್ನೆಸಗಿದಾಗ ಕ್ರಿಮಿನಲ್‌ ಪ್ರಕರಣಗಳನ್ನೇ ದಾಖಲಿಸಲು ಸೂಚಿಸಲಾಯಿತು

    ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಿದ್ದಾಗ, ಪೋಡಿಮುಕ್ತ ಗ್ರಾಮ ಅಭಿಯಾನ ನಡೆಸಿದ್ದರು. ಅದರ ಸ್ಥಿತಿಗತಿ ಏನು? 30.715 ಗ್ರಾಮಗಳಿವೆ. 175 ವಿಧಾನಸಭಾ ಕ್ಷೇತ್ರಗಳಲ್ಲಿ 16,850 ಗ್ರಾಮಗಳು ಪೋಡಿ ಮುಕ್ತ ಗ್ರಾಮಗಳಾಗಿವೆ. ಉಳಿದೆಡೆ ಕ್ರಮ ಆಗಬೇಕಿದೆ. 14,000 ಗ್ರಾಮಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಈ ಅಭಿಯಾನವನ್ನು ಮತ್ತೆ ಕೈಗೆತ್ತಿಕೊಳ್ಳಲು ಸೂಚಿಸಿದರು

    3292 ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ರೂಪಿಸುವ ನಿಟ್ಟಿನಲ್ಲಿ 812 ಗ್ರಾಮಗಳಿಗೆ ಅಧಿಸೂಚನೆ ಹೊರಡಿಸಲು ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಈ ಪ್ರಕ್ರಿಯೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ಸೂಚಿಸಿದರು

    ಸರ್ವೇ mismatch ಗಳನ್ನು ಭೂ ಮಾಪಕರು, ಎಸಿ, ತಹಸೀಲ್ದಾರ್ ಗಳ ಸರ್ವೇ ಮಾಡುವ ಬಗ್ಗೆ ಪಟ್ಟಿ ಮಾಡಿ, ಬಾಕಿ ಇರುವ ಸರ್ವೇ ಕಾರ್ಯವನ್ನು ವಿಲೀವಾರಿ ಮಾಡಬೇಕು, ನಿಗದಿತ ಅವಧಿಯೊಳಗೆ ಜೋಡಿ ಗ್ರಾಮಗಳ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು

    ಬೆಂಗಳೂರು ನಗರ ಸುತ್ತುಮುತ್ತ green belt ಪ್ರದೇಶದಲ್ಲಿ ಅನಧಿಕೃತ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕೆ ಸಹಕಾರ ನೀಡುತ್ತಿರುವ ಪಿಡಿಒ, ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು, ಅನಧಿಕೃತ ಬಡಾವಣೆಗಳ ನಿರ್ಮಾಣ ವಿಷ ವರ್ತುಲವಿದ್ದಂತೆ. ಜಿಲ್ಲಾಧಿಕಾರಿಗಳು, ಸಿ ಇ ಓ ಗಳು ಈ ವಿಷಯಗಳನ್ನು ಗಂಬೀರವಾಗಿ ಪರಿಗಣಿಸಬೇಕು

    ಜಿಲ್ಲೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿಯನ್ನು ತಡೆಗಟ್ಟಲು ಅಗತ್ಯ ಗಮನ ಹರಿಸಬೇಕು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಂತರ ಜಿಲ್ಲೆಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿಗೆ ಅಂತ್ಯ ಹಾಡಬೇಕಿದ್ದು, ಇದರ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಬೇಕು

    ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡಲೆಬಾರದಂದು ಅಧಿಕಾರಿಗಳು ತೀರ್ಮಾನಿಸಬೇಕು

    Post Views: 212

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.