Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಬಂದೂಕು ತೋರಿಸಿ ದರೋಡೆ ಪ್ರಕರಣ- ಆರೋಪಿಗಳು ಪೊಲೀಸರ ವಶ
    ಇತ್ತೀಚಿನ ಸುದ್ದಿ

    ಪುತ್ತೂರು: ಬಂದೂಕು ತೋರಿಸಿ ದರೋಡೆ ಪ್ರಕರಣ- ಆರೋಪಿಗಳು ಪೊಲೀಸರ ವಶ

    September 26, 2023
    Share

    ಪುತ್ತೂರು: ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ತೋಟದಮೂಲೆಯ ಕಸ್ತೂರಿ ರೈ ಹಾಗೂ ಅವರ ಪುತ್ರ ಗುರುಪ್ರಸಾದ್ ರೈ ಎಂಬುವರನ್ನು ಮನೆಯೊಳಗೆ ಕಟ್ಟಿಹಾಕಿ, ಬಂದೂಕು ತೋರಿಸಿ 15 ಪವನ್ ಚಿನ್ನ, 50 ಸಾವಿರ ರೂ. ಹಾಗೂ ಸಾಮಗ್ರಿ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಬಾಡೂರು ನಿವಾಸಿಯೊಬ್ಬನನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಟ್ಲ ಠಾಣಾ ವ್ಯಾಪ್ತಿಯಿಂದಲೂ ಓರ್ವನನ್ನು ವಶಕ್ಕೆ ಪಡೆದಿದ್ದು ಪ್ರಕರಣದಲ್ಲಿ ಐದಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಸಮೀಪ ಬಾಡೂರಿನ ಕ್ಲಬ್ ಒಂದರಲ್ಲಿ ಆಟವಾಡುತ್ತಿದ್ದ ಆರೋಪಿಯನ್ನು ಮಪ್ತಿಯಲ್ಲಿದ್ದ ಕರ್ನಾಟಕ ಪೊಲೀಸರು ಕ್ಲಬ್ ಕಟ್ಟಡಕ್ಕೆ ಸುತ್ತುವರಿದು ವಶಕ್ಕೆ ತೆಗೆದುಕೊಂಡಿದ್ದಾರೆ. ಗಾಂಜಾ ಮಾರಾಟ ಸೇರಿದಂತೆ ಕೆಲವೊಂದು ಕ್ರಿಮಿನಲ್ ಕೃತ್ಯಗಳಲ್ಲಿ ಶಾಮೀಲಾಗಿರುವ ಆತನ ವಿರುದ್ಧ ಬದಿಯಡ್ಕ ಪೊಲೀಸ್ ಠಾಣೆಯಲ್ಲೂ ಕೇಸು ದಾಖಲಾಗಿದೆ. ಪ್ರಕರಣದ ಆರಂಭದಿಂದಲೂ ಕಾಸರಗೋಡಿನ ವ್ಯಕ್ತಿಯೊಬ್ಬನ ಕೈವಾಡವಿರುವ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ತನಿಖೆಯನ್ನು ಕಾಸರಗೋಡಿಗೆ ವಿಸ್ತರಿಸಿದ್ದರು. ಪುತ್ತೂರಿನ ತೋಟದಮೂಲೆ ನಿವಾಸಿ ಕಸ್ತೂರಿ ರೈ ಹಾಗೂ ಅವರ ಪುತ್ರ ಗುರು ಪ್ರಸಾದ್ ರೈಯವರನ್ನು ಕಟ್ಟಿ ಹಾಕಿ ಕೃತ್ಯ ನಡೆಸಲಾಗಿತ್ತು. ತಡರಾತ್ರಿ 2 ಗಂಟೆಗೆ ಮನೆಗೆ ನುಗ್ಗಿದ್ದ ದರೋಡೆಕೋರರ ತಂಡ ಸರಿ ಸುಮಾರು ಎರಡೂವರೆ ಗಂಟೆ ಕಾಲ ಮನೆಯನ್ನು ಜಾಲಾಡಿ ಕೃತ್ಯ ನಡೆಸಿತ್ತು. ದರೋಡೆಕೋರರು ಕೈಯಲ್ಲಿ ಮಾರಕಾಯುಧಗಳನ್ನು ಹಿಡಿದುಕೊಂಡಿದ್ದರು. ಹಾಗೂ ಮನೆಯಲ್ಲಿದ್ದ ಮೊಬೈಲ್ ಪೋನ್ ಗಳನ್ನು ನೀರಿನಲ್ಲಿ ಹಾಕಿ ಬೈಕ್‌ನ ಕೀ ಹಾಗೂ ಟಾರ್ಚ್ ಹಿಡಿದುಕೊಂಡು ಪರಾರಿಯಾಗಿದ್ದರು.

    Post Views: 214

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.