Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: KVG ಎಂ.ಎಸ್ ರಾಮಕೃಷ್ಣ ಕೊಲೆ ಕೇಸ್–ಡಾ. ರೇಣುಕಾ ಪ್ರಸಾದ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ
    ಇತ್ತೀಚಿನ ಸುದ್ದಿ

    ಸುಳ್ಯ: KVG ಎಂ.ಎಸ್ ರಾಮಕೃಷ್ಣ ಕೊಲೆ ಕೇಸ್–ಡಾ. ರೇಣುಕಾ ಪ್ರಸಾದ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

    October 5, 2023
    Share

    ಬೆಂಗಳೂರು : ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಐದು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು ಇಂದು ತೀರ್ಪು ಪ್ರಕಟಿಸಿದ್ದಾರೆ.

    ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ವಾರದ ಹಿಂದೆ ರದ್ದುಗೊಳಿಸಿದ್ದ ಹೈಕೋರ್ಟ್ ಆರೋಪಿಗಳು ದೋಷಿಗಳೆಂದು ತೀರ್ಪು ನೀಡಿತ್ತು. ಡಾ.ರೇಣುಕಾ ಪ್ರಸಾದ್ ಕೆ.ವಿ. ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಶ್ರೀನಿವಾಸ್, ಹರೀಶ್ ಕುಮಾರ್ ಅವರಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಸೆ.27ರಂದು ಈ ಆದೇಶ ನೀಡಿತ್ತು.

    ಡಾ.ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿದ್ದ ಹೈಕೋರ್ಟ್ ಎಲ್ಲರನ್ನೂ ಕೊಲೆ, ಒಳಸಂಚು, ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿ ತೀರ್ಮಾನಿಸಿತ್ತು. ಆದರೆ ಏಳನೇ ಆರೋಪಿಯಾಗಿದ್ದ ಹೆಚ್.ಯು.ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಇಂದು ಕೋರ್ಟಿಗೆ ಶರಣಾಗಲು ಆರೋಪಿಗಳಿಗೆ ಸೂಚನೆ ನೀಡಿದ್ದ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿತ್ತು.

     ಅದರಂತೆ ಅಪರಾಧಿಗಳು, ಪ್ರಕರಣದ ವಿಚಾರಣೆ ನಡೆದಿದ್ದ ಪುತ್ತೂರಿನಲ್ಲಿರುವ ಐದನೇ ಹೆಚ್ಚುವರಿ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಬೇಕಿತ್ತು.‌ ಆದರೆ ನ್ಯಾಯಾಧೀಶರು ರಜೆಯಲ್ಲಿರುವುದಿಂದ ಪ್ರಭಾರ, ಆರನೇ ಹೆಚ್ಚುವರಿ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಬೇಕಾಯಿತು. ಅದರಂತೆ ಶರಣ್ ಹೊರತಾಗಿ ಇತರರು ಇಂದು ಅಪರಾಹ್ನ 2.30 ಕ್ಕೆ ಮಂಗಳೂರಿನಲ್ಲಿರುವ ಆರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಹಾಜರಾಗಿದ್ದರು.

    ವೀಡಿಯೋ ಕಾನ್ಪರೆನ್ಸ್ ಮೂಲಕ ಹೈ ಕೋರ್ಟ್ ನ್ಯಾಯಾಧೀಶರು ಅಪರಾಧಿಗಳ ಅಹವಾಲು ಆಲಿಸಿ ಬಳಿಕ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಅಪರಾಧಿಗಳಾದ ಡಾ.‌ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್.‌ನಾಗೇಶ್, ವಾಮನ್ ಪೂಜಾರಿ, ಭವಾನಿಶಂಕರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಯಿತು. ಇಂದು ಹಾಜರಾಗದ ಶರಣ್ ಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿಲ್ಲ. ಡಾ.ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ. ದಂಡವೂ ವಿಧಿಸಲಾಗಿದ್ದು, ಅದನ್ನು ಕೊಲೆಗೀಡಾದ ರಾಮಕೃಷ್ಣ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ. 2011 ಏಪ್ರಿಲ್ 28ರಂದು ಸಂಜೆ 7.45 ರ ವೇಳೆಗೆ ಸುಳ್ಯದ ಅಂಬಟೆಡ್ಕ ಬಳಿಯ ಶ್ರೀ ಕೃಷ್ಣ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರಾಮಕೃಷ್ಣ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಒಟ್ಟು ಏಳು ಆರೋಪಿಗಳಿದ್ದು ಸಾಕ್ಷ್ಯಾಧಾರಗಳ ಕೊರತೆಯಿಂದ ಅವರೆಲ್ಲರನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2016ರ ಅಕ್ಟೋಬರ್ 21ರಂದು ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಸರಕಾರ 2017ರಲ್ಲಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು.

    Post Views: 295

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.