Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮನೆ ಕಳವು ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ
    ಇತ್ತೀಚಿನ ಸುದ್ದಿ

    ಮನೆ ಕಳವು ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

    November 22, 2025
    Share

    ಕುಂದಾಪುರ: ಆರು ತಿಂಗಳ ಹಿಂದೆ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಬೀತಾಗಿದ್ದು, ಆತ ಅಪರಾಧಿಯೆಂದು ಕುಂದಾಪುರದ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಟಿ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಬಿ. ತೀರ್ಪು ಪ್ರಕಟಿಸಿದ್ದಾರೆ.

    ಪ್ರಕರಣದಲ್ಲಿ ಕಾರ್ಕಳ ಮೂಲದ ಉಮಾನಾಥ ಪ್ರಭು (59) ಅಪರಾಧಿಯಾಗಿದ್ದು, ಪ್ರಸ್ತುತ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಈ ಕಳವು ಪ್ರಕರಣದಲ್ಲಿ 1 ವರ್ಷ 6 ತಿಂಗಳು ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಲಾಗಿದೆ.

    2025ರ ಮೇ ತಿಂಗಳಿನಲ್ಲಿ ಕೊಲ್ಲೂರು ಠಾಣಾ ವ್ಯಾಪ್ತಿಯ ಇಡೂರು-ಕುಂಜ್ಞಾಡಿ ಗ್ರಾಮದ ಜನತಾ ಕಾಲನಿಯ ಮನೆಯೊಂದರಲ್ಲಿ ರಾತ್ರಿ ಯಾರೂ ಇಲ್ಲದ ವೇಳೆ ಎರಡು ಚಿನ್ನದ ಬಳೆಗಳ ಕಳ್ಳತನ ನಡೆದಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಜಾಡು ಹಿಡಿದ ಪೊಲೀಸರು ಜೂ.17ರಂದು ಅಜೆಕಾರು ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದರು.

    ಅಭಿಯೋಜನೆ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಉದಯ್ ಕುಮಾರ್ ವಾದಿಸಿದ್ದರು. ಆರೋಪಿಯು ರೂಢಿಗತವಾಗಿ ಕಳ್ಳತನ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದು, ಆತನಿಗೆ ಬಿ.ಎನ್.ಎಸ್ ಕಾಯ್ದೆಯಡಿ ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಸಹಾಯಕ ಸರಕಾರಿ ಅಭಿಯೋಜಕರು ಮನವಿ ಮಾಡಿದ್ದರು.

    ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಒಟ್ಟು 20 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ಕಾನೂನು ಸುವ್ಯವಸ್ಥೆ ಪಿಎಸ್‌ಐ ವಿನಯ್ ಎಂ. ಕೊರ್ಲಹಳ್ಳಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    Post Views: 96

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.