Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಹಿಳೆಯ ಕೊಲೆ ಪ್ರಕರಣ – ದಂಪತಿ ಸಹಿತ ಮೂವರ ಮೇಲಿನ ಕೊಲೆ ಆರೋಪ ಸಾಬೀತು
    ಇತ್ತೀಚಿನ ಸುದ್ದಿ

    ಮಂಗಳೂರು: ಮಹಿಳೆಯ ಕೊಲೆ ಪ್ರಕರಣ – ದಂಪತಿ ಸಹಿತ ಮೂವರ ಮೇಲಿನ ಕೊಲೆ ಆರೋಪ ಸಾಬೀತು

    September 14, 2024
    Share

    ಮಂಗಳೂರು: ಐದು ವರ್ಷಗಳ ಹಿಂದೆ ನಗರದಲ್ಲಿ ಶ್ರೀಮತಿ ಶೆಟ್ಟಿ ಎಂಬವರನ್ನು ಕೊಲೆಗೈದು ಮೃತದೇಹವನ್ನು 29ತುಂಡುಗಳನ್ನಾಗಿ ಬೇರ್ಪಡಿಸಿ ಬೇರೆಬೇರೆ ಕಡೆಗಳಲ್ಲಿ ಎಸೆದ ಪ್ರಕರಣದಲ್ಲಿ ಮೂವರ ಮೇಲಿನ ಆರೋಪ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ‌‌. ಆದರೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಲಾಗಿದೆ. ನಗರದ ವೆಲೆನ್ಸಿಯಾ ಸಮೀಪದ ಸೂಟರ್‌ಪೇಟೆಯ ಜೋನಸ್ ಸ್ಯಾಟ್ಸನ್(40), ವಿಕ್ಟೋರಿಯಾ ಮಥಾಯಿಸ್ (47) ಹಾಗೂ ಮರಕಡ ತಾರಿಪಾಡಿ ಗುಡ್ಡೆಯ ರಾಜು (34) ಶಿಕ್ಷೆಗೊಳಗಾದ ಆರೋಪಿಗಳು. ಈ ಪೈಕಿ ಜೋನಸ್ ಮತ್ತು ವಿಕ್ಟೋರಿಯಾ ಜೈಲಿನಲ್ಲೇ ಶಿಕ್ಷೆ ಅನುಭವಿಸುತ್ತಿದ್ದಾರೆ. ರಾಜು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು, ಆತನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ(42) ಶ್ರೀ ಪೊಳಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ಇಟ್ಟುಕೊಂಡಿದ್ದರು. ಜೊತೆಗೆ ಕುರಿ ಚಿಟ್‌ಫಂಡ್ ವ್ಯವಹಾರ ನಡೆಸುತ್ತಿದ್ದರು. ಈ ಕುರಿಫಂಡ್‌ನಲ್ಲಿ ಜೋನಸ್ 2ಸದಸ್ಯತ್ವ ಹೊಂದಿದ್ದ. ಆದರೆ ಮಾಸಿಕ ಕಂತು ಪಾವತಿಸಲು ವಿಫಲನಾಗಿದ್ದ. ಮಾಸಿಕ ಕಂತುಗಳ ಹಣ ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ.‌ 2019ರ ಮೇ 11ರಂದು ಬೆಳಗ್ಗೆ 9:15ಕ್ಕೆ ಹಣ ಕೇಳುವುದಕ್ಕಾಗಿ ಶ್ರೀಮತಿ ಶೆಟ್ಟಿ ಆರೋಪಿ ಜೋನಸ್‌ನ ಮನೆಗೆ ತೆರಳಿದ್ದರು. ಅಲ್ಲಿ ಮಾತಿಗೆ ಮಾತು ಬೆಳೆದು ಜೋನಸ್ ಮರದ ತುಂಡಿನಿಂದ ಶ್ರೀಮತಿ ಶೆಟ್ಟಿಯ ತಲೆಗೆ ಹೊಡೆದಿದ್ದ. ಪ್ರಜ್ಞಾಹೀನರಾಗಿದ್ದ ಅವರನ್ನು ಜೋನಸ್ ಮತ್ತಾತನ ಪತ್ನಿ ವಿಕ್ಟೋರಿಯಾ ಬಚ್ಚಲು ಕೋಣೆಗೆ ಎಳೆದುಕೊಂಡು ಹೋಗಿ ಚಿನ್ನಾಭರಣಗಳನ್ನು ಸುಲಿಗೆಗೈದು ಕುತ್ತಿಗೆ ಕೊಯ್ದು ರುಂಡ, ಕೈ, ಕಾಲು ಹಾಗೂ ಇತರ ಭಾಗಗಳನ್ನು 29 ತುಂಡುಗಳಾಗಿ ಮಾಡಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿ ನಗರದ ಹಲವೆಡೆ ಎಸೆದಿದ್ದರು. ವ್ಯಾನಿಟಿ ಬ್ಯಾಗ್, ಚಪ್ಪಲಿಯನ್ನು ಮನೆಯಲ್ಲಿ ಸುಟ್ಟು ಹಾಕಿದ್ದರು. ಮೂರು ದಿನದ ಬಳಿಕ ಕದ್ರಿ ಬಳಿಯ ಅಂಗಡಿಯೊಂದರ ಬಳಿ ರುಂಡ ಪತ್ತೆಯಾದ ಬಳಿಕ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ನಂದಿಗುಡ್ಡೆಯಲ್ಲಿ ದೇಹದ ತುಂಡುಗಳು ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ರಾಜು ಕೂಡ ಸಹಕರಿಸಿದ್ದ. ಕದ್ರಿ ಠಾಣೆಯ ನಿರೀಕ್ಷಕ ಮಹೇಶ್ ಎಂ. ತನಿಖೆ ಕೈಗೊಂಡಿದ್ದರು. ಇನ್ಸ್‌ಪೆಕ್ಟ‌ರ್ ಶಾಂತಾರಾಂ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿಯವರು 48 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿ, 141 ದಾಖಲೆಗಳನ್ನು ಗುರುತಿಸಿ ಮೂವರ ಮೇಲಿನ ಕೊಲೆ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಸೆ.17ಕ್ಕೆ ಘೋಷಿಸುವುದಾಗಿ ತಿಳಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಲಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು.

    Post Views: 267

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.