Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಥೋಲಿಕ್ ಉದ್ಯಮಿ, ವೃತ್ತಿಪರ, ಕೃಷಿ ಕ್ಷೇತ್ರದ ಸಾಧಕರಿಗೆ ರಚನಾ ಪ್ರಶಸ್ತಿ ಪ್ರದಾನ
    ಇತ್ತೀಚಿನ ಸುದ್ದಿ

    ಕಥೋಲಿಕ್ ಉದ್ಯಮಿ, ವೃತ್ತಿಪರ, ಕೃಷಿ ಕ್ಷೇತ್ರದ ಸಾಧಕರಿಗೆ ರಚನಾ ಪ್ರಶಸ್ತಿ ಪ್ರದಾನ

    October 7, 2025
    Share

    ಮಂಗಳೂರು: ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳೂರಿನ ಮಿಲಾಗ್ರಿಸ್ ಸಭಾಂಗಣದಲ್ಲಿ ಅಕ್ಟೋಬರ್ 5ರಂದು ನೆರವೇರಿತು.


    ಸಮಾರಂಭದಲ್ಲಿ ಐವರು ಸಾಧಕರಾದ ವೃತ್ತಿಪರ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ, ಉದ್ಯಮ ಕ್ಷೇತ್ರದಲ್ಲಿ ಬೆಂಗಳೂರಿನ ಆಸ್ಟಿನ್ ರೋಚ್, ಕೃಷಿ ಕ್ಷೇತ್ರದಲ್ಲಿ ಮಂಗಳೂರಿನ ಡಾ| ಗಾಡ್ವಿನ್ ರೊಡ್ರಿಗಸ್ ಬೆಳ್ವಾಯಿ, ಅನಿವಾಸಿ ಉದ್ಯಮಿ ದುಬೈಯ ಪ್ರತಾಪ್ ಮೆಂಡೋನ್ಸಾ, ಮಹಿಳಾ ಸಾಧಕಿ ಶೋಭಾ ಮೆಂಡೊನ್ಸಾ ಅವರಿಗೆ 2023-25ನೇ ಸಾಲಿನ ರಚನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, “ಸಾಧನೆ ಮಾಡಬೇಕೆಂದು ಅನೇಕರು ಪ್ರಯತ್ನಿಸುತ್ತಾರೆ. ಎಲ್ಲರಿಗೂ ಕೈಗೂಡುವುದಿಲ್ಲ. ಆದರೆ, ಅವರನ್ನು ಗುರುತಿಸಿ ಗೌರವಿಸುವುದು ಮುಖ್ಯವಾಗಿದೆ. ರಚನಾ ಸಂಸ್ಥೆ ಸೂಕ್ತ ಸಾಧಕರನ್ನೇ ಆಯ್ದುಕೊಂಡು ಗೌರವಿಸಿದೆ. ಸೂಕ್ತ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಗೆ ಮತ್ತಷ್ಟು ಗೌರವ ಹೆಚ್ಚಾಗುವ ಜೊತೆಗೆ ಪುರಸ್ಕೃತರ ಜವಾಬ್ದಾರಿ ಹೆಚ್ಚಿದೆ. ದೇಶಕ್ಕೆ ಕೊಂಕಣಿ ಕೆಥೋಲಿಕರ ಕೊಡುಗೆ ಅವಿಸ್ಮರಣೀಯ. ರಾಜಕೀಯದಲ್ಲೂ ಕೊಂಕಣಿ ಕೆಥೋಲಿಕರು ಸಾಕಷ್ಟು ಸೇವೆ ನೀಡಿದ್ದಾರೆ. ಕ್ರೈಸ್ತರ ಉತ್ತಮ ಸೇವೆಯಿಂದಾಗಿ ಸಮುದಾಯವನ್ನು ಗುರುತಿಸುವ ಕೆಲಸವಾಗುತ್ತಿದೆ” ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಧ್ಯಕ್ಷರಾದ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ, ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಅಧ್ಯಕ್ಷ ಜಾನ್ ಬಿ. ಮೊಂತೇರೊ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಉದ್ಯಮಿ ಜಾನ್ ಸುನಿಲ್, ಬೆಂಗಳೂರು ವಿ.ವಿ. ಮಾಜಿ ಕುಲಪತಿ, ಡೀನ್ ಮತ್ತು ನಿರ್ದೇಶಕಿ ಡಾ| ಸಿಂಥಿಯಾ ಮಿನೇಜಸ್, ರಚನಾ ಸಂಸ್ಥೆಯ ಕಾರ್ಯದರ್ಶಿ ವಿಜಯ್ ವಿ. ಲೋಬೋ, ಕೋಶಾಧಿಕಾರಿ ನೆಲ್ಸನ್ ಮೊಂತೇರೊ, ಉಪಾಧ್ಯಕ್ಷ ನವೀನ್ ಲೋಬೋ, ಸಂಘಟಕರಾದ ಯುಲಾಲಿಯಾ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

    Post Views: 122

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.