Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಮನೆ ಕಳ್ಳತನ ಪ್ರಕರಣ- ಇಬ್ಬರು ಅಂತರಾಜ್ಯ ಕಳ್ಳರ ಬಂಧನ..!!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆ ಕಳ್ಳತನ ಪ್ರಕರಣ- ಇಬ್ಬರು ಅಂತರಾಜ್ಯ ಕಳ್ಳರ ಬಂಧನ..!!

    June 9, 2026
    Share

    ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ₹23.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

    ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2026ರ ಏಪ್ರಿಲ್ 5ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ಅಪರಾಧ ಸಂಖ್ಯೆ 38/2026ರ ತನಿಖೆ ವೇಳೆ, ಮೇ 15ರಂದು ಬಂಟ್ವಾಳದ ಕೊಳ್ನಾಡು ಮೂಲದ ಹಾಗೂ ಪ್ರಸ್ತುತ ಕಾಸರಗೋಡಿನಲ್ಲಿ ವಾಸವಿರುವ ಹಮೀದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದರು. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

    ಆರೋಪಿ ಹಮೀದ್ ನೀಡಿದ ಮಾಹಿತಿಯ ಆಧಾರದ ಮೇಲೆ ಜೂನ್ 7ರಂದು ಮತ್ತೋರ್ವ ಆರೋಪಿ ಜಾಬೀರ್ @ ಜಾಬೀ (38), ಬಂಟ್ವಾಳದ ಕೊಳ್ನಾಡು ನಿವಾಸಿ ಹಾಗೂ ಪ್ರಸ್ತುತ ಕಾಸರಗೋಡಿನಲ್ಲಿ ವಾಸವಿರುವಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

    ವಿಚಾರಣೆ ವೇಳೆ ಪುಂಜಾಲಕಟ್ಟೆ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ ನಗದು, ಜೊತೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 28/2025ರ ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

    ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹23,67,000 ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಈ ಎರಡು ಪ್ರಕರಣಗಳ ಹೊರತಾಗಿ ಉಪ್ಪಿನಂಗಡಿ, ಬಂಟ್ವಾಳ ನಗರ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಇನ್ನೂ ಮೂರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

    ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ, ಬೆಳ್ತಂಗಡಿ ಗ್ರಾಮಾಂತರ ಸಿಪಿಐ ರವಿ ಬಿ.ಎಸ್., ಉಪ್ಪಿನಂಗಡಿ ಗ್ರಾಮಾಂತರ ಸಿಪಿಐ ನಾಗರಾಜ್ ಹೆಚ್.ಇ., ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ರಾಜೇಶ್ ಕೆ.ವಿ. ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿದ್ದು, ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿ ಸಹಕಾರ ನೀಡಿದ್ದಾರೆ.

    Post Views: 19

    Related Posts

    ಇಸ್ಪೀಟ್ ಅಡ್ಡೆಗೆ ದಾಳಿ- 7 ಮಂದಿ ಆರೋಪಿಗಳ ಬಂಧನ

    June 9, 2026

    ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನ ಬಂಧನ- ಉದ್ಯಮಿಯಿಂದ 2.77 ಕೋಟಿ ರೂ.ಗೆ ಬ್ಲಾಕ್ ಮೇಲ್

    June 9, 2026

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.