Facebook Twitter Instagram
    Saturday, June 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಂತ್ಯಕ್ರಿಯೆ ಮುಗಿದ ಬಳಿಕ ಜೀವಂತವಾಗಿ ‘ಪುನರ್ಜನ್ಮ’ದಂತೆ ಮನೆಗೆ ಮರಳಿದ ವ್ಯಕ್ತಿ
    ಇತ್ತೀಚಿನ ಸುದ್ದಿ

    ಅಂತ್ಯಕ್ರಿಯೆ ಮುಗಿದ ಬಳಿಕ ಜೀವಂತವಾಗಿ ‘ಪುನರ್ಜನ್ಮ’ದಂತೆ ಮನೆಗೆ ಮರಳಿದ ವ್ಯಕ್ತಿ

    June 27, 2026
    Share

    ಗಾಜಿಯಾಬಾದ್: ಮೃತಪಟ್ಟಿದ್ದಾರೆ ಎಂದು ಭಾವಿಸಿ , ಅಂತಿಮ ವಿಧಿವಿಧಾನಗಳನ್ನು ಪೂರೈಸಿದ ಮರುದಿನ ಬೆಳಿಗ್ಗೆಯೇ ವ್ಯಕ್ತಿಯೊಬ್ಬರು ಮನೆಗೆ ಮರಳಿದ ಪ್ರಸಂಗ ಗಾಜಿಯಾಬಾದ್ ನಲ್ಲಿ ನಡೆದಿದೆ.

    ಮೇ 16ರಂದು ಶಾಂತಿಭಂಗ ಮಾಡಿದ ಆರೋಪದಲ್ಲಿ ಗಿರಿಧರ್ ಸಿಂಗ್ ಬಿಷ್ಟ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಮೇ 21ರಂದು ಅವರು ಬಿಡುಗಡೆ ಹೊಂದಿದರು. ಬಿಡುಗಡೆ ಬಳಿಕ ಅವರು ಮನೆಗೆ ಮರಳದ ಕಾರಣ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ ಗುರುತು ಸಿಕ್ಕದ ಮೃತದೇಹವೊಂದು ಪತ್ತೆಯಾಗಿತ್ತು. ಅದು ಬಿಷ್ಟ್ ಅವರದ್ದೇ ದೇಹ ಎಂದು ಕುಟುಂಬದವರೂ ಖಚಿತಪಡಿಸಿದರು. ಬಳಿಕ, ಇದೊಂದು ಕೊಲೆ ಎಂಬ ಶಂಕೆ ಆಧರಿಸಿ, ಆರು ಜನರ ಮೇಲೆ ಪೊಲೀಸರು ಪ್ರಕರಣವನ್ನೂ ದಾಖಲಿಸಿಕೊಂಡಿದ್ದಾರೆ.

    ಕುಟುಂಬಸ್ಥರು ಜೂನ್ 13ರಂದು ಬಿಷ್ಟ್ ಅವರ ಅಂತ್ಯಸಂಸ್ಕಾರ, ಮೃತರಾದ ಬಳಿಕ 13ನೇ ದಿನ ನಡೆಸುವ ‘ತೇರಾವಿ’ ಕಾರ್ಯವನ್ನೂ ಪೂರ್ಣಗೊಳಿಸಿದ್ದಾರೆ. ಜೂನ್ 25ರಂದು ಬೆಳಿಗ್ಗೆ 5 ಗಂಟೆಗೆ ಬಿಷ್ಟ್ ಅವರು ಮನೆಗೆ ವಾಪಸಾಗಿ ಅಚ್ಚರಿ ಮೂಡಿಸಿದ್ದಾರೆ.

    ‘ಬಿಷ್ಟ್ ಅವರು ಮನೆಗೆ ವಾಪಸಾಗಿರುವುದರಿಂದ, ಈ ಹಿಂದೆ ಪತ್ತೆಯಾದ ಮೃತದೇಹ ಯಾರದ್ದು ಎಂಬ ಪ್ರಶ್ನೆ ಹಾಗೇ ಉಳಿದಿದೆ. ಈ ಸಂಬಂಧ ತನಿಖೆಯನ್ನು ಮರು ಆರಂಭಿಸಲಾಗಿದ್ದು, ಆರು ಜನರ ಮೇಲೆ ದಾಖಲಾದ ಪ್ರಕರಣವನ್ನೂ ಪರಿಶೀಲನೆ ಮಾಡಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿ ಅಭಿಷೇಕ್ ಶ್ರೀವಾಸ್ತವ ತಿಳಿಸಿದ್ದಾರೆ.

    Post Views: 19

    CrimeNews PoliceInvestigation

    Related Posts

    ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಹೃದಯಾಘಾತ: ಆಸ್ಪತ್ರೆಗೆ ಬಂದ ಕೆಲವೇ ಕ್ಷಣಗಳಲ್ಲಿ ಸಾವು

    June 27, 2026

    ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ

    June 27, 2026

    ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಭೀಕರ ಅಪಘಾತ; ಮಂತ್ರಾಲಯಕ್ಕೆ ತೆರಳುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು

    June 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಹೃದಯಾಘಾತ: ಆಸ್ಪತ್ರೆಗೆ ಬಂದ ಕೆಲವೇ ಕ್ಷಣಗಳಲ್ಲಿ ಸಾವು

    June 27, 2026

    ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ

    June 27, 2026

    ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಭೀಕರ ಅಪಘಾತ; ಮಂತ್ರಾಲಯಕ್ಕೆ ತೆರಳುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು

    June 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.