ರಾಂಚಿ: ಬಿಹಾರ ಪೊಲೀಸರು ಅಪಘಾತಕ್ಕೀಡಾದ ವ್ಯಕ್ತಿಯ ಶವವನ್ನು ಮುಜಾಫರ್ಪುರದಲ್ಲಿ ಕಾಲುವೆಗೆ ಎಸೆಯುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ವೈರಲ್ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾಜಿಪುರ-ಮುಜಾಫರ್ಪುರ ಎನ್ಎಚ್-22ರಲ್ಲಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಬದಲು ಫಕುಲಿಯ ಕಾಲುವೆಗೆ ಎಸೆದಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಮೃತರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಫಕುಲಿ ಒಪಿ ಮುಖ್ಯಸ್ಥ ಮೋಹನ್ ಕುಮಾರ್ ತಿಳಿಸಿದ್ದಾರೆ. “ಅವರ ದೇಹದ ಕೆಲವು ಭಾಗಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಸ್ಕೆಎಂಸಿಎಚ್ಗೆ ಕಳುಹಿಸಲಾಗಿದ್ದು, ರಸ್ತೆಗೆ ಅಂಟಿಕೊಂಡಿದ್ದ ಭಾಗವನ್ನು ಕಾಲುವೆಗೆ ಎಸೆಯಲಾಗಿದೆ” ಎಂದು ಕುಮಾರ್ ಹೇಳಿದ್ದಾರೆ.