Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»“ಆಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಪರಿಶೀಲಿಸಿ ಮಾಲೀಕರಿಗೆ ವಾಪಸ್ ನೀಡಬೇಕು”
    ಇತ್ತೀಚಿನ ಸುದ್ದಿ

    “ಆಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಪರಿಶೀಲಿಸಿ ಮಾಲೀಕರಿಗೆ ವಾಪಸ್ ನೀಡಬೇಕು”

    December 8, 2022
    Share

    ಬೆಂಗಳೂರು: ಅಪಘಾತವಾಗಿರುವ ವಾಹನಗಳನ್ನ‌ ಇನ್ನು ಮುಂದೆ ಸಂಚಾರಿ ಪೊಲೀಸ್ ಠಾಣೆಗಳ ಮುಂದೆ ತಿಂಗಳುಗಟ್ಟಲೇ ಇರಿಸಿಕೊಳ್ಳುವಂತಿಲ್ಲ. ತಪಾಸಣೆ ನೆಪದಲ್ಲಿ ಠಾಣೆಗಳ ಮುಂದೆ ವಾಹನ ಇರಿಸಿಕೊಳ್ಳುವುದು ಸರಿಯಲ್ಲ. ಆಯಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮಾಲೀಕರಿಗೆ ಹಿಂತಿರುಗಿಸಲಾಗುವುದು ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ.ಸಲೀಂ ತಿಳಿಸಿದ್ದಾರೆ‌.‌

    ಅಪಘಾತ ಪ್ರಕರಣಗಳಲ್ಲಿ ವಾಹನಗಳನ್ನ ವಶಪಡಿಸಿಕೊಂಡು ಠಾಣೆಗಳ‌ ಮುಂದೆ ನಿಲ್ಲಿಸಲಾಗುತ್ತಿದೆ‌. ಠಾಣೆಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ನಿಲ್ಲಿಸಲಾಗುತ್ತಿದ್ದು ಇದರಿಂದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ‌. ಹೀಗಾಗಿ ಆಕ್ಸಿಡೆಂಟ್ ಆಗಿರುವ ಅಥವಾ ಅಪಘಾತ ಮಾಡಿರುವ ವಾಹನಗಳನ್ನ ಆರ್ ಟಿಓ‌ ಅಧಿಕಾರಿಗಳಿಂದ ತ್ವರಿತವಾಗಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು.. ತಾಂತ್ರಿಕವಾಗಿ ವಾಹನಗಳಲ್ಲಿ ದೋಷವಿದೆಯಾ ಎಂಬುದನ್ನು ಪತ್ತೆ ಹಚ್ಚಿ ಅಧಿಕಾರಿಗಳು ವರದಿ ತರಿಸಿ ಬಳಿಕ‌ ಸಂಬಂಧಪಟ್ಟ ಮಾಲೀಕರನ್ನ ಕರೆಯಿಸಿ ಅವರಿಂದ ಮುಚ್ಚಳಿಕೆ ಬರೆಯಿಸಿ ಹಿಂತಿರುಗಿಸಲಾಗುವುದು ಎಂದಿದ್ದಾರೆ.

    ನಗರದಲ್ಲಿ ಹಂಪ್ ಗಳಿಂದ ಆಯಕ್ಸಿಡೆಂಟ್ ಜಾಸ್ತಿ ಆಗ್ತಿತ್ತು.. ಹೀಗಾಗಿ ಎಲ್ಲೆಲ್ಲಿ ಅವೈಜ್ಞಾನಿಕ ಹಂಪ್‌ಗಳು ಹಾಗೂ ಅನಾವಶ್ಯಕ ಹಂಪ್ ಗಳಿದ್ದರೆ ತೆಗೆಯುವುದಕ್ಕೆ ಹೇಳಲಾಗಿದೆ. ಜೊತೆಗೆ ಸಿಗ್ನಲ್ ಗಳ ಬಳಿ ಇರುವ ಹಂಪ್ ಗಳನ್ನ ತೆಗೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅವಶ್ಯಕತೆ ಇರುವ ಕಡೆ ರಬ್ಬರ್ ಹಂಪ್ ಹಾಕಲು ಸೂಚಿಸಲಾಗಿದೆ. ಸವಾರರ ಸುರಕ್ಷತೆ ದೃಷ್ಟಿಯಿಂದ ಈ ರೀತಿ ಮಾಡಲಾಗುತ್ತಿದೆ. ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚಿಸಿದ್ದು ಕೆಲಸ ಶುರು ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

    Post Views: 203

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.