Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ- ಆರೋಪಿ ಆಯಿಷಾ ಸಹಿತ 3 ಮಂದಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು : ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ- ಆರೋಪಿ ಆಯಿಷಾ ಸಹಿತ 3 ಮಂದಿಯ ಬಂಧನ

    October 8, 2024
    Share

    ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎ ಒನ್ ಆರೋಪಿ ಆಗಿರುವ ರೆಹಮದ್ ಅಲಿಯಾಸ್ ಆಯೇಷಳನ್ನು ಪೊಲೀಸರು ಬಂಧಿಸಿದ್ದಾರೆ.

    ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವ ಸೋದರ, ಹೆಸರಾಂತ ಉದ್ಯಮಿ ಮುಮ್ತಾಜ್ ಆಲಿ ನಿಗೂಢ ಸಾವಿಗೆ ಬ್ಲಾಕ್ಮೇಲ್ ಮತ್ತು ಹನಿಟ್ರ್ಯಾಪ್ ಜಾಲವೇ ಕಾರಣ ಎನ್ನಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಸೂತ್ರಧಾರೆ ಎನ್ನಲಾದ ಮಹಿಳೆ, ಆಕೆಯ ಪತಿ ಮತ್ತು ಇನ್ನೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಮುಮ್ತಾಜ್ ಸಾವಿಗೆ ಆರು ಮಂದಿಯ ತಂಡ ನಡೆಸಿದ ಬ್ಲಾಕ್ಮೇಲ್ ಕಾರಣ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಸೇರಿದಂತೆ ಎರಡು ವಿಶೇಷ ತಂಡ ತನಿಖೆ ಆರಂಭಿಸಿದ್ದಾರೆ. ಪ್ರಕರಣ ಸಂಬಂಧಿಸಿ ಪೊಲೀಸರು ಆಯೆಷಾ ರೆಹ್ಮತ್ ಮತ್ತು ಆಕೆಯ ಪತಿ ಶೋಯಿಬ್ ಹಾಗೂ ಸಿರಾಜ್ ಎಂಬವರನ್ನು ಕಲ್ಲಡ್ಕದಲ್ಲಿ ಬಂಧಿಸಿದ್ದಾಗಿ ತಿಳಿದುಬಂದಿದೆ. ಇದೇ ವೇಳೆ, ಅಬ್ದುಲ್ ಸತ್ತಾರ್ ಮತ್ತು ಶಾಫಿ ನಂದಾವರ ಸೇರಿದಂತೆ ಇತರ ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಆಯೆಷಾ ರೆಹ್ಮತ್, ಮುಮ್ತಾಜ್ ಆಲಿಯವರು ನಡೆಸುತ್ತಿದ್ದ ಕಾಲೇಜಿನಲ್ಲಿ ಕೆಲಸಕ್ಕಿದ್ದ ಮಹಿಳೆ. ಈ ವೇಳೆ, ಮುಮ್ತಾಜ್ ಆಲಿಯವರ ಜೊತೆಗೆ ಹತ್ತಿರದ ಒಡನಾಟ ಇರಿಸಿಕೊಂಡಿದ್ದರು ಎನ್ನಲಾಗಿದೆ. ಇದೇ ನೆಪದಲ್ಲಿ ಆರೋಪಿ ಮಹಿಳೆ, ಮುಮ್ತಾಜ್ ಆಲಿಯವರನ್ನು ಬ್ಲಾಕ್ಮೇಲ್ ಮಾಡಲು ಮುಂದಾಗಿದ್ದು ಇದಕ್ಕೆ ಆಕೆಯ ಪತಿ ಶೋಯಿಬ್ ಸಹಕಾರ ನೀಡಿದ್ದ. ಅಲ್ಲದೆ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಸತ್ತಾರ್ ಮತ್ತು ಮರಳು ದಂಧೆಕೋರ ಶಾಫಿ ನಂದಾವರ ಸೇರಿಕೊಂಡು ಮುಮ್ತಾಜ್ ಆಲಿಯವರನ್ನು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಲು ತೊಡಗಿದ್ದರು. ಕಳೆದ 3-4 ತಿಂಗಳಿನಿಂದ 50 ಲಕ್ಷಕ್ಕೂ ಹೆಚ್ಚು ದುಡ್ಡನ್ನು ಪೀಕಿಸಿಕೊಂಡಿರುವ ಈ ತಂಡವು, ಎರಡು ಕೋಟಿ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿತ್ತು.

    ಇದಲ್ಲದೆ, ಮುಮ್ತಾಜ್ ಆಲಿ ತನ್ನ ಮಗುವಿನ ಜೊತೆಗೆ ಆಟವಾಡುತ್ತಿದ್ದ ವಿಡಿಯೋವನ್ನು ಮಾಡಿ, ಆರೋಪಿಗಳು ಆಲಿಯವರ ಕುಟುಂಬಸ್ಥರಿಗೆ ಕಳಿಸತೊಡಗಿದ್ದರು. ಈ ವಿಡಿಯೋ ಕಾರಣದಿಂದ ಮುಮ್ತಾಜ್ ಆಲಿ ತನ್ನ ಕುಟುಂಬಸ್ಥರ ನಡುವೆ ನಿಂದನೆಗೆ ಒಳಗಾಗಿದ್ದರು. ಇದೇ ಹಿಂಸೆಯಿಂದಾಗಿ ಮುಮ್ತಾಜ್ ಆಲಿ ಸಾಯಲು ಮುಂದಾಗಿದ್ದು ಮೊನ್ನೆ ನಡುರಾತ್ರಿಯೇ ಮನೆ ಬಿಟ್ಟು ಬಂದಿದ್ದರು. ಇದೇ ಹಿಂಸೆಯಿಂದ ನಸುಕಿನ ಹೊತ್ತಿಗೆ ಕಾರನ್ನು ಕುಳೂರಿನ ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿ ದುರಂತ ಸಾವಿಗೀಡಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯಕ್ಕೆ ಆರು ಮಂದಿ ಬ್ಲಾಕ್ಮೇಲರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಉಳಿದವರ ಪತ್ತೆಗಾಗಿ ಬಲೆ ಬೀಸಿದ್ದಾರೆ

    Post Views: 301

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.