Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಬಸವರಾಜ ಕೊಲೆ ಪ್ರಕರಣ- ಆರೋಪಿ ಧರ್ಮರಾಜ್ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು : ಬಸವರಾಜ ಕೊಲೆ ಪ್ರಕರಣ- ಆರೋಪಿ ಧರ್ಮರಾಜ್ ಬಂಧನ

    September 27, 2024
    Share

    ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟಾಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ  ಮುತ್ತು ಬಸವರಾಜ ವದ್ಧರ್‌ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ತೋಟ ಬೆಂಗ್ರೆಯ ಧರ್ಮರಾಜ್ ಸುವರ್ಣ(50) ಬಂಧಿತ ಆರೋಪಿಯಾಗಿದ್ದಾನೆ. ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯ ಚೂಂಪಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಕಾರ್ಯಾಚರಣೆ ನಡೆಸಿ ಪಣಂಬೂರು ಪೊಲೀಸರು ಆರೋಪಿಯನ್ರಿನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿಸಿದ್ದಾರೆ. ಸೆಪ್ಟೆಂಬರ್ 21 ರಂದು ಈ ಕೊಲೆ ನಡೆದಿತ್ತು. ಬಂಧಿತ ಆರೋಪಿ ಧರ್ಮರಾಜ್  ಮೀನುಗಾರಿಕಾ ಕೆಲಸ ಮಾಡಿಕೊಂಡಿದ್ದು, ತೋಟಾ ಬೆಂಗ್ರೆಯಲ್ಲಿ ವಾಸಮಾಡಿಕೊಂಡಿದ್ದ. ಆರೋಪಿ ಧರ್ಮರಾಜ್ ಸುವರ್ಣ ಮತ್ತು ಮೃತ ಮುತ್ತು ಬಸವರಾಜ ವಡ್ಡರ್ @ ಮುದುಕಪ್ಪ ಕಳೆದ ಕೆಲವು ಸಮಯದಿಂದ ಒಬ್ಬರಿಗೊಬ್ಬರು ಪರಿಚಯದವರಾಗಿದ್ದು, ಇತ್ತೀಚೆಗೆ ಆರೋಪಿಯ ಧರ್ಮರಾಜ್ ಸುವರ್ಣ ಹೊಸ ಮೊಬೈಲ್ ಖರೀದಿಸಿದ್ದು, ಆ ಮೊಬೈಲ್ ನ್ನು ಮೃತ ಮುತ್ತು ಬಸವಾರಾಜ್ ತೆಗೆದುಕೊಂಡು ವಾಪಾಸ್ ನೀಡದೆ ಮೊಬೈಲ್ ಹಾಳು ಮಾಡಿದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಈ ಸಂದರ್ಭ ಆರೋಪಿ ಧರ್ಮರಾಜ್  ಮುತ್ತು ಬಸವರಾಜ ವಡ್ಡರ್ @ ಮುದುಕಪ್ಪನನ್ನು ಮರದ ಸೋಂಟೆಯಿಂದ ಹೊಡೆದು ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದ. ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಐ.ಪಿ.ಎಸ್. ರವರ ಮಾರ್ಗದರ್ಶನದಂತೆ,  ಸಿದ್ದಾರ್ಥ ಗೋಯಲ್, ಐ.ಪಿ.ಎಸ್. ಡಿ.ಸಿ.ಪಿ (ಕಾನೂನು ಮತ್ತು ಸುವ್ಯವಸ್ಥೆ),  ಬಿ.ಪಿ ದಿನೇಶ್ ಕುಮಾರ್ ಡಿ.ಸಿ.ಪಿ. (ಅಪರಾಧ ಮತ್ತು ಸಂಚಾರ ವಿಭಾಗ), ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ  ಶ್ರೀಕಾಂತ.ಕೆ.ರವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ  ಮೊಹಮ್ಮದ್ ಸಲೀಂ ಅಬ್ಬಾಸ್, ಪಣಂಬೂರು ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗದ ಉಪ ನಿರೀಕ್ಷಕರುಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ, ಶ್ರೀ ಜ್ಞಾನಶೇಖರ ಹಾಗೂ ಎ.ಎಸ್.ಐ.ರವರುಗಳಾದ ಕೃಷ್ಣ. ಬಿ.ಕೆ. ಶ್ರೀಮತಿ ನಯನಾ ಹಾಗೂ ಸಿಬ್ಬಂದಿಗಳಾದ ಸಿ. ಹೆಚ್.ಸಿ.ಗಳಾದ ಸತೀಶ್ ಎಮ್ ಆರ್, ಸಯ್ಯದ್ ಇಂತಿಯಾಜ್, ಪ್ರೇಮಾನಂದ, ನವೀನ್ ಚಂದ್ರ, ಜೇಮ್ಸ್,ಪಿ.ಜೆ, ಸಿಪಿಸಿ ಗಳಾದ ಶಶಿಕುಮಾರ್, ರಾಕೇಶ್, ಮಾಣಿಕ್, ಸೋಮ್ಹಾ ನಾಯ್ಕ ಹಾಗೂ ಚಾಲಕ ಅಂಬಣ್ಣರವರುಗಳು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

    Post Views: 257

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.