Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: 21 ಪೋಕ್ಸೋ ಪ್ರಕರಣಗಳ ಆರೋಪಿ ಪತ್ರಕರ್ತ ಚಂದ್ರ ಕೆ ಹೆಮ್ಮಾಡಿ ವಿರುದ್ಧ ಮತ್ತೆರಡು ಪ್ರಕರಣಗಳು ಸಾಬೀತು
    ಇತ್ತೀಚಿನ ಸುದ್ದಿ

    ಉಡುಪಿ: 21 ಪೋಕ್ಸೋ ಪ್ರಕರಣಗಳ ಆರೋಪಿ ಪತ್ರಕರ್ತ ಚಂದ್ರ ಕೆ ಹೆಮ್ಮಾಡಿ ವಿರುದ್ಧ ಮತ್ತೆರಡು ಪ್ರಕರಣಗಳು ಸಾಬೀತು

    September 3, 2022
    Share

    ಉಡುಪಿ:21 ಫೋಕ್ಸೋ ಪ್ರಕರಣಗಳನ್ನು ಮೈಮೇಲೆ ಎಳೆದುಕೊಂಡಿದ್ದ ಕುಂದಾಪುರದ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿಗೆ ಎರಡು ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸ್ ತ್ವರಿತ ವಿಶೇಷ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿ ಇಂದು ತೀರ್ಪು ನೀಡಿದೆ.

    ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2018 ರ ಜೂನ್ ತಿಂಗಳಲ್ಲಿ 14 ವರ್ಷ ಪ್ರಾಯದ ಬಾಲಕನನ್ನು ಚಂದ್ರ ಕೆ ಹೆಮ್ಮಾಡಿ, ಜಲಪಾತದ ಫೋಟೋ ತೆಗೆಯಲು ಇದೆ ಎಂದು ಹೇಳಿ ಕಾಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಆರೋಪದಲ್ಲಿ ಚಂದ್ರ ಹೆಮ್ಮಾಡಿಯನ್ನು ಬೈಂದೂರು ಪೊಲೀಸರು 2018ರ ನ.28ರಂದು ಬಂಧಿಸಿದ್ದರು.ಆಗಿನ ಬೈಂದೂರು ಪೊಲೀಸ್ ನಿರೀಕ್ಷಕ ಪರಮೇಶ್ವರ್ ಆರ್. ಗುನಗ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಒಟ್ಟು 21 ಸಾಕ್ಷಿಗಳ ಪೈಕಿ 14 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ನೊಂದ ಬಾಲಕರು ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿಗೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ 10 ವರ್ಷಗಳ ಜೈಲು ಶಿಕ್ಷೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದರು.ಇನ್ನೊಂದು ಪ್ರಕರಣದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಕ್ಕೆ ಮೂರು ವರ್ಷ ಕಠಿಣ ಶಿಕ್ಷೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಲಾಗಿದೆ. ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸ್ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದಿಸಿದ್ದರು.ಸುದ್ದಿ ಸಂಬಂಧ ದಾರಿ ತೋರಿಸುವ ನೆಪದಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಕಾಡಿಗೆ ಕರೆದುಕೊಂಡು ಹೋಗುತ್ತಿದ್ದ ಚಂದ್ರ ಹೆಮ್ಮಾಡಿ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಒಟ್ಟು 21 ಬಾಲಕರು ನೀಡಿದ ದೂರಿನಂತೆ ಆರೋಪಿ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ 16, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಕುಂದಾಪುರ ಗ್ರಾಮಾಂತರ ಮತ್ತು ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ಪೋಕ್ಸ್‌ ಕಾಯಿದೆಯಡಿ ದಾಖಲಾಗಿದ್ದವು.ಆರೋಪಿ ಚಂದ್ರ ಹೆಮ್ಮಾಡಿ ವಿರುದ್ಧ ದಾಖಲಾದ ಒಟ್ಟು 21 ಪೋಕ್ಸ್‌ ಪ್ರಕರಣಗಳಲ್ಲಿ ಈವರೆಗೆ 11 ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಎಂಟು ಪ್ರಕರಣಗಳಲ್ಲಿ ಆರೋಪಿ ಸಾಕ್ಷ್ಯಗಳ ಕೊರತೆಯಿಂದ ಖುಲಾಸೆಗೊಂಡಿದ್ದಾನೆ. ಉಳಿದ ಎರಡು ಪ್ರಕರಣಗಳ ತೀರ್ಪನ್ನು ಕೋರ್ಟ್ ನಾಳೆ ನೀಡುವ ಸಾಧ್ಯತೆ ಇದೆ.

    Post Views: 198

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.