Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಕ್ರಮ ಕಸಾಯಿಖಾನೆ ಪ್ರಕರಣ: ಆರೋಪಿಯ ಮನೆ ಮುಟ್ಟುಗೋಲು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಕ್ರಮ ಕಸಾಯಿಖಾನೆ ಪ್ರಕರಣ: ಆರೋಪಿಯ ಮನೆ ಮುಟ್ಟುಗೋಲು

    October 3, 2025
    Share

    ಬಂಟ್ವಾಳ: ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ನಡೆದಿದೆ.

    ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿ ಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.

    ಹಸನಬ್ಬ ವಿರುದ್ಧ ಗೋ ಕಳವು, ಗೋವಧೆಯಂತಹ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 123/2025 ಕಲಂ 303 ಬಿ ಎನ್ ಎಸ್ ಕಲಂ 4,7,12 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    ಈತನ ವಿರುದ್ಧ 2017ನೇ ಸಾಲಿನಲ್ಲಿ ಅಪರಾಧ ಕ್ರಮಾಂಕ 65/2017 ಕಲಂ 379 ಐಪಿಸಿ ಮತ್ತು 4,5,11 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆ, 2008ನೇ ಸಾಲಿನಲ್ಲಿ ಅಪರಾಧ ಕ್ರಮಾಂಕ 88/2018 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆಯಂತೆ ಪ್ರಕರಣಗಳು ದಾಖಲಾಗಿವೆ. ಈತನ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳಿಗೆ ಪೊಲೀಸರು ವರದಿ ಸಲ್ಲಿಸಿದ್ದರು.

    ಪೊಲೀಸರ ಮನವಿಯಂತೆ ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರ ಕಲಂ 8(4) 8(5) ಅಡಿಯಲ್ಲಿ ಸೆ. 25ರಂದು ಪ್ರಕರಣ ಸಂಖ್ಯೆ ಎಂ ಎ ಜಿ/ ಎಸ್ ಆರ್ 44/2025 ರಂತೆ ಠಾಣಾ ಅಪರಾಧ ಕ್ರಮಾಂಕ 123/2025ರಂತೆ ಹಸನಬ್ಬನ ವಶದಲ್ಲಿರುವ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಿಪಳ್ಳ ಪಾಡಿ ಎಂಬಲ್ಲಿರುವ ಮನೆ ನಂಬ್ರ 6-54 ಹಾಗೂ 6-54(1) ಗೆ ಒಳಪಟ್ಟ ಮನೆ/ ಅಕ್ರಮ ಕಸಾಯಿ ಕಾಣೆಯನ್ನು ಜಪ್ತು ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.

    ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲು ಎಂದು ಜಿಲ್ಲಾ ಎಸ್ಪಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    Post Views: 164

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.