Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಈಜಲು ತೆರಳಿದ ಏಳನೇ ತರಗತಿ ಬಾಲಕ ಸಾವು
    ಇತ್ತೀಚಿನ ಸುದ್ದಿ

    ಕಾಪು: ಈಜಲು ತೆರಳಿದ ಏಳನೇ ತರಗತಿ ಬಾಲಕ ಸಾವು

    October 6, 2023
    Share

    ಕಾಪು: ತಾಲೂಕಿನ ಬೆಳಪು ಕೆಐಎಡಿಬಿ ಯೋಜನಾ ಪ್ರದೇಶದ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಬೆಳಪು ವಸತಿ ಬಡಾವಣೆಯ ಕಸ್ತೂರಿ ಅವರ ಪುತ್ರ ಇನ್ನಂಜೆ ಎಸ್‌ ಎಸ್ ಆಂಗ್ಲಮಾಧ್ಯಮ ಶಾಲೆ ಏಳನೇ ತರಗತಿ ವಿದ್ಯಾರ್ಥಿ ವಿಶ್ವಾಸ್ ನಾಯಕ್ (11) ಮೃತ ಬಾಲಕ. ಗುರುವಾರ ಸಂಜೆ ಶಾಲೆಯಿಂದ ಬಂದ ವಿಶ್ವಾಸ್ ನೆರೆಮನೆಯ ಶಶಾಂಕ್ ಮತ್ತು ನೌಷಾದ್‌ ಜತೆಗೆ ಮನೆ ಹಿಂಬದಿಯಲ್ಲಿರುವ ಕೆರೆಗೆ ಈಜಲೆಂದು ತೆರಳಿದ್ದನು. ಈಜುತ್ತಿದ್ದ ವಿಶ್ವಾಸ್ ಮುಳುಗಿ ಅಸ್ವಸ್ಥಗೊಂಡಿದ್ದು ಅದನ್ನು ಗಮನಿಸಿದ ಸ್ನೇಹಿತರಿಬ್ಬರು ಮೇಲಕ್ಕೆ ಬಂದು ಮಹಿಳೆಯೊಬ್ಬರಿಗೆ ವಿಷಯ ತಿಳಿಸಿದರು. ಮಕ್ಕಳು ಮತ್ತು ಮಹಿಳೆಯರ ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದು ಬಾಲಕನನ್ನು ಮೇಲಕ್ಕೆತ್ತಿದ್ದರು. ತತ್ ಕ್ಷಣ ಬಾಲಕನನ್ನು ಉಡುಪಿಯ ಆಸ್ಪತ್ರೆಗೆ ಕೊಂಡೊಯ್ಯಲು ಯತ್ನಿಸಲಾಯಿತಾದರೂ ದಾರಿಯಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

    Post Views: 171

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.