ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ನಂದಳಿಕೆ ಶ್ರೀ ಮಹಾಮ್ಮಯಿ ದೇವಸ್ಥಾನದಲ್ಲಿ ಜರುಗಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಭೋಜನ ಸೇವಿಸಿ ಹಾಳೆಯ ಪ್ಲೇಟ್ ಎಸೆಯಲು ಮುಂದಾದಾಗ ಟ್ಯಾಂಕ್ ಕುಸಿದು ಬಿದ್ದು ಮಹಿಳೆ ದಾರುಣ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಮಹಿಳೆಯನ್ನು ಬೆಳ್ಮಣ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಲತಾ (50) ಎಂದು ಗುರುತಿಸಲಾಗಿದೆ.
ಮಂಗಳವಾರದಂದು ನಂದಳಿಕೆಯ ಶ್ರೀ ಮಹಾಮ್ಮಯಿ ದೇವಸ್ಥಾನದಲ್ಲಿ ಜರುಗಿದ್ಧ ವಾರ್ಷಿಕ ಮಾರಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭ ನಡೆದ ಈ ಘಟನೆಯಲ್ಲಿ ಶ್ರೀಲತಾ ಮೃತಪಟ್ಟಿದ್ದು, ಅವರ ಮಗಳು ಪೂಜಾ ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.