Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ!! ಎಸ್ಪಿಗೆ ದೂರು ನೀಡಿದ ತಾಯಿ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ!! ಎಸ್ಪಿಗೆ ದೂರು ನೀಡಿದ ತಾಯಿ

    July 16, 2025
    Share

    ಮಂಗಳೂರು : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣಕ್ಕೆ ಮರು ಜೀವ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕೆಯ ತಾಯಿ ಇಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿಯಾದರು.

    ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು.

    ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢವಾಗಿ ನಾಪತ್ತೆಯಾಗಿದ್ದರು.

    ಧರ್ಮಸ್ಥಳದಲ್ಲಿ ಒತ್ತಡದಿಂದ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದ. ಪತ್ರ ಬರೆದ ಕೆಲವೇ ದಿನಗಳ ಬಳಿಕ ಅದೇ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನೂ ನೀಡಿದ್ದ.

    ಬರುವಾಗ ತನ್ನ ಜೊತೆ ಅಸ್ತಿಪಂಜರವೊಂದನ್ನು ತಂದಿದ್ದು, ಅದನ್ನು ಪೊಲೀಸರು ವಿಧಿ ವಿಜ್ಞಾನ ತನಿಖೆಗೆ ಒಳಪಡಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತ ಬಹಳಷ್ಟು ಕಡೆಗಳಲ್ಲಿ ತಾನು ಶವಗಳನ್ನು ಹೂತು ಹಾಕಿರುವುದಾಗಿಯು, ಪೊಲೀಸರು ತನಿಖೆ ನಡೆಸುವುದಾದರೆ ಆ ಸ್ಥಳಗಳನ್ನು ತೋರಿಸುವುದಾಗಿ ಆ ವ್ಯಕ್ತಿ ತಿಳಿಸಿದ್ದ. ಈಗ ಆ ವ್ಯಕ್ತಿಯನ್ನು ಪ್ರತಿನಿಧಿಸುವ ಇಬ್ಬರು ನ್ಯಾಯವಾದಿಗಳು ಎಸ್ ಐ ಟಿ ರಚನೆ ಬಗ್ಗೆ ಬೇಡಿಕೆ ಮುಂದಿಟ್ಟಿದ್ದಾರೆ.

    ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆಗಳು ಹಾಗು ಅವುಗಳನ್ನು ಒತ್ತಡದಿಂದಾಗಿ ತಾನೇ ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿರುವುದು ಈಗ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿದೆ.

    ಅದೇ ಹೊತ್ತಿಗೆ ಸುಜಾತಾ ಭಟ್ ಅವರು ತಮ್ಮ ಮಗಳೂ ಅಲ್ಲೇ ಕಾಣೆಯಾಗಿದ್ದಾಳೆ ಎಂದು ದೂರು ಸಲ್ಲಿಸಲು ಬಂದಿದ್ದಾರೆ.

    Post Views: 241

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.