Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆಯರಿಗೆ ಮತ್ತೊಂದು ಗುಡ್‌ ನ್ಯೂಸ್! ಸ್ತ್ರೀ ಶಕ್ತಿ ಸಂಘದ ಸಂಪೂರ್ಣ ಸಾಲ ಮನ್ನಾ, ಸಿಎಂ ಮಹತ್ವದ ಹೇಳಿಕೆ
    ಇತ್ತೀಚಿನ ಸುದ್ದಿ

    ಮಹಿಳೆಯರಿಗೆ ಮತ್ತೊಂದು ಗುಡ್‌ ನ್ಯೂಸ್! ಸ್ತ್ರೀ ಶಕ್ತಿ ಸಂಘದ ಸಂಪೂರ್ಣ ಸಾಲ ಮನ್ನಾ, ಸಿಎಂ ಮಹತ್ವದ ಹೇಳಿಕೆ

    June 29, 2023
    Share

    ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಘೋಷಿಸಿದೆ. ಅವುಗಳಲ್ಲಿ ಒಂದು ಈಗಾಗಲೇ ಜಾರಿಗೆ ಬಂದಿದೆ. ಇನ್ನೊಂದು, ಗೃಹಲಕ್ಷ್ಮೀ ಯೋಜನೆಗಳ ಜೊತೆಗೆ ಇನ್ನೊಂದು ಗ್ಯಾರಂಟಿ ನೀಡಿದ್ದಾರೆ. ತಮ್ಮ ಚುನಾವಣಾ ಪ್ರಚಾರದ ಸಮಯದಲ್ಲಿ ಸಿದ್ದರಾಮಯ್ಯನವರು ಮಹಿಳೆಯರ ಶ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಈಗ ಮಹಿಳಾ ಸಂಘಟನೆಗಳು ಈ ವಿಷಯವನ್ನು ಗಟ್ಟಿಯಾಗಿ ಹಿಡಿದುಕೊಂಡಿವೆ. ನಿನ್ನೆ ಕೂಡ ಸಿದ್ದರಾಮಯ್ಯನವರ ನಿವಾಸ ಎದುರು ಕೋಲಾರ ಮತ್ತು ಚಿಕ್ಕಬಳ್ಳಾಪುರದ ಮಹಿಳಾ ಸಂಘ ಸಂಸ್ಥೆಗಳು ಸಾಲ ಮನ್ನಾ ಮಾಡುವಂತೆ ಪ್ರತಿಭಟನೆ ನಡೆಸಿದ್ದವು.ಬುಧವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಸ್ತ್ರೀಶಕ್ತಿ ಸಂಘದ ಸಾಲ ಮನ್ನಾ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬುಧವಾರ ಬೆಳಗ್ಗೆಯಿಂದಲೇ ಸಿಎಂ ಸಿದ್ದರಾಮಯ್ಯ ಅವರ ಮನೆಯ ಎದುರು ಮಹಿಳೆಯರ ದೊಡ್ಡ ದಂಡೇ ಜಮಾಯಿಸಿತ್ತು. ಚುನಾವಣಾ ಸಂದರ್ಭ ಕೊಟ್ಟ ಮಾತಿನಂತೆ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡಬೇಕು ಎಂದು ಮಹಿಳೆಯರು ಆಗ್ರಹಿಸಿ ಪ್ರತಿಭಟನೆ ಮಾಡಿದ್ದಾರೆ. ತಮ್ಮ ಸಂಪುಟ ಸಭೆಯ ಮುಗಿಸಿದ ನಂತರ ಸಿದ್ದರಾಮಯ್ಯನವರು ಪ್ರತಿಭಟನೆ ಮಾಡುತ್ತಿದ್ದ ಮಹಿಳೆಯರ ಬಳಿ ಮಾತನಾಡಿದ್ದಾರೆ.

    ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಹಿಳೆಯರ ಸ್ತ್ರೀ ಶಕ್ತಿ ಸಂಘದ ಸಾಲ ಮನ್ನಾಕ್ಕೆ ವಿಚಾರ ಮಾಡಲಾಗಿದೆ ಆದರೆ ಈ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರಕ್ಕೆ 24,000 ಕೋಟಿ ರೂಪಾಯಿಗಳು ಬೇಕಾಗುತ್ತದೆ. ಈ ವರ್ಷ ಇತರ ಉಚಿತ ಯೋಜನೆಗಳನ್ನು ನೀಡಬೇಕಾದ ಒತ್ತಡ ಮತ್ತು ಅನಿವಾರ್ಯತೆಯ ಸರಕಾರಕ್ಕೆ ಇದೆ. ಹಾಗೆ ಇರುವುದರಿಂದ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ. ಆದರೆ ಮುಂದಿನ ವರ್ಷ ಸಾಲ ಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಹಿಳೆಯರ ಜೊತೆಗೆ ಚರ್ಚಿಸುವುದಾಗಿಯೂ ಕೂಡ ಸಿದ್ದರಾಮಯ್ಯ ಅವರು ಹೇಳಿದರು. ಈ ಮೂಲಕ ಬರುವ ವರ್ಷದಿಂದ ಸ್ತ್ರೀಶಕ್ತಿ ಗುಂಪುಗಳ ಸಾಲ ಮನ್ನಾ ಆಗುವ ಎಲ್ಲಾ ಸಾಧ್ಯತೆಗಳು ಇವೆ. ಇದೇ ರೀತಿಯಲ್ಲಿ ಧರ್ಮಸ್ಥಳ ಶ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಆಗುತ್ತಾ ಆಗಬೇಕು ಎನ್ನುವ ಭರವಸೆಯಲ್ಲಿ ಬಡ ಮಹಿಳೆಯರಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ಸು ಗೃಹಜೋತಿ ಉಚಿತ ವಿದ್ಯುತ್ತು ಮತ್ತು ಗೃಹಲಕ್ಷ್ಮಿ ಯೋಜನೆಯ ಅಡಿ 2000 ಕೊಡುವ ಬೃಹತ್ ಓಲೈಕೆಯ ಪರಿಣಾಮವಾಗಿ ರಾಜ್ಯದಾದ್ಯಂತ ಮಹಿಳಾ ಮತದಾರರು ಕಾಂಗ್ರೆಸ್ ಸರ್ಕಾರದ ಕಡೆಗೆ ತಿರುಗಿದರು. ಇದೀಗ ಶ್ರೀ ಶಕ್ತಿ ಸಂಘಗಳ ಮತ್ತಿತರ ಸಂಘಗಳ ಸಾಲ ಮನ್ನಾ ಮಾಡಿದರೆ ಅದು ಕಾಂಗ್ರೆಸ್ಸಿಗೆ ಬಹುದೊಡ್ಡ ಚುನಾವಣಾ ವೋಟ್ ಬ್ಯಾಂಕ್ ಆಗಿ ಪರಿವರ್ತನೆ ಆಗಲಿದೆ ಎನ್ನಲಾಗಿದೆ.

    Post Views: 276

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.