Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ನೇಹಾಲಯ ಹಾಗೂ ಜನಮೈತ್ರಿ ಪೊಲೀಸ್ ಸಂಘಟನೆಯಿಂದ ಉಪ್ಪಳ–ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ ಕಾರ್ಯಕ್ರಮ
    ಇತ್ತೀಚಿನ ಸುದ್ದಿ

    ಸ್ನೇಹಾಲಯ ಹಾಗೂ ಜನಮೈತ್ರಿ ಪೊಲೀಸ್ ಸಂಘಟನೆಯಿಂದ ಉಪ್ಪಳ–ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ ಕಾರ್ಯಕ್ರಮ

    April 18, 2025
    Share

    ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು ಏರ್ಪಡಿಸಲ್ಪಟ್ಟವು.

    ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳು, ಅದರಲ್ಲೂ ವಿಶೇಷವಾಗಿ ಯುವ ಸಮುದಾಯದ ಮೇಲೆ ಬೀರುವ ಪರಿಣಾಮಗಳನ್ನು ಸ್ಪಷ್ಟವಾಗಿ ಸಾರ್ವಜನಿಕರಿಗೆ ಪರಿಚಯಿಸುವುದು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯಶಾಸ್ತ್ರ (MSW) ವಿದ್ಯಾರ್ಥಿಗಳು ಸ್ನೇಹಾಲಯ ತಂಡದೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಕಲಾತ್ಮಕವಾಗಿ ತಮ್ಮ ಸಂದೇಶವನ್ನು ಸಾರ್ವಜನಿಕರ ಮುಂದಿಟ್ಟು ಜನಮನ ಗೆದ್ದರು.

    ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯ ಅತಿಥಿಗಳಲ್ಲಿ ಕಾಸರಗೋಡು ಜಿಲ್ಲೆಯ ಉಪ ಪೊಲೀಸ್ ಅಧೀಕ್ಷಕ (ಎಎಸ್ಪಿ) ಶ್ರೀ ಪಿ. ಬಾಲಕೃಷ್ಣ ನಾಯರ್, ಹೊಸದುರ್ಗ್ ಠಾಣೆಯ ವೃತ್ತ ನಿರೀಕ್ಷಕ (ಸಿ.ಐ) ಅಜಿತ್ ಕುಮಾರ್, ಮಂಜೇಶ್ವರ ಠಾಣೆಯ ಸಿ.ಐ ಶ್ರೀ ಅನುಪ್ ಹಾಗೂ ಸ್ನೇಹಾಲಯ ಡಿ ಅಡಿಕ್ಶನ್ ಕೇಂದ್ರದ ಕಾರ್ಯನಿರ್ವಾಹಕ, ನಿರ್ದೇಶಕ ಶ್ರೀ ಜೋಸೆಫ್ ಕ್ರಾಸ್ತಾ ಅವರು ಪ್ರಮುಖರಾಗಿ ಉಪಸ್ಥಿತರಿದ್ದರು.

    ಸಂಭಾಷಣೆಯ ಸಂದರ್ಭಗಳಲ್ಲಿ ಪೊಲೀಸ್ ಅಧಿಕಾರಿಗಳು, ಕಾಸರಗೋಡು ಜಿಲ್ಲೆಯಲ್ಲಿನ ಮಾದಕವಸ್ತು ಬಳಕೆಯಲ್ಲಿರುವ ಯುವಜನತೆಗೆ ಸೂಕ್ತ ಚಿಕಿತ್ಸೆ ನೀಡಲು ಇರುವ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಚಿಂತೆಯನ್ನು ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಸ್ನೇಹಾಲಯವು ಕಳೆದ 15 ವರ್ಷಗಳಿಂದ ನಿರಂತರವಾಗಿ ನಡೆಸುತ್ತಿರುವ ಅಮೋಘ ಸೇವೆಗಳಿಗೆ ಪ್ರಶಂಶೆ ಅರ್ಪಿಸಿದರು. ಜೊತೆಗೆ, ಇತ್ತೀಚೆಗೆ ಈ ಸಂಸ್ಥೆಯು ಸ್ಥಾಪಿಸಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ ಯುಕ್ತಗೊಂಡಿರುವ ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಕುರಿತು ಅವರು ತಮ್ಮ ಸಂತೋಷ ವ್ಯಕ್ತಪಡಿಸಿದರು.

    ಕಾರ್ಯಕ್ರಮದ ಕೊನೆಯ ಭಾಗದಲ್ಲಿ ಮಾತನಾಡಿದ ಶ್ರೀ ಜೋಸೆಫ್ ಕ್ರಾಸ್ತಾ, ಸ್ನೇಹಾಲಯದಲ್ಲಿ ಲಭ್ಯವಿರುವ ವಿವಿಧ ಚಿಕಿತ್ಸೆ ವಿಧಾನಗಳು, ವೈಯಕ್ತಿಕ ಪುನರ್ವಸತಿ ಕಾರ್ಯಕ್ರಮಗಳು ಹಾಗೂ ಕುಟುಂಬ ಜವಾಬ್ದಾರಿಗಳ ಜತೆಗೆ ಒಡನಾಡಿ ಬೆಳೆಸುವ ದಿಶೆಯ ಸೇವೆಗಳ ಬಗ್ಗೆ ವಿವರಿಸಿದರು. ಮಾದಕವಸ್ತುಗಳ ಮೋಹದಿಂದ ಮುಕ್ತವಾಗಿರುವ ಸಮುದಾಯ ನಿರ್ಮಾಣಕ್ಕೆ ಸ್ನೇಹಾಲಯ ತೊಡಗಿಸಿಕೊಂಡಿರುವ ನಿಷ್ಠೆ ಹಾಗೂ ಸೇವಾಭಾವನೆಗೆ ಅವರು ಬದ್ಧರಾಗಿರುವುದನ್ನು ಸ್ಪಷ್ಟಪಡಿಸಿದರು.

    ಸಮಾರಂಭದ ಅಂತ್ಯದಲ್ಲಿ ಸಾರ್ವಜನಿಕರು, ಉದ್ಯೋಗಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಸ್ನೇಹಾಲಯ ತಂಡದ ಈ ಸಾಮಾಜಿಕ ಜವಾಬ್ದಾರಿಯ ಕಾರ್ಯಕ್ರಮವನ್ನು ಶ್ರದ್ದೆಯಿಂದ ವೀಕ್ಷಿಸಿ ಎಲ್ಲಾ ಕಲಾವಿದರನ್ನು ತುಂಬು ಹ್ರದಯದಿಂದ ಅಭಿನಂದಿಸಿದರು

    Post Views: 232

    Related Posts

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.