Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿವಧೂತ ಗುಳಿಗನ ಅವಮಾನಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಕರಾವಳಿಗರ ಆಕ್ರೋಶ
    ಇತ್ತೀಚಿನ ಸುದ್ದಿ

    ಶಿವಧೂತ ಗುಳಿಗನ ಅವಮಾನಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಕರಾವಳಿಗರ ಆಕ್ರೋಶ

    March 16, 2023
    Share

    ಮಂಗಳೂರು : ಕಾರ್ಯಕ್ರಮವೊಂದರಲ್ಲಿ ಶಿವಧೂತ ಗುಳಿಗ ನಾಟಕದ ಬಗ್ಗೆ ಅವಹೇಳನ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇದೀಗ ಕರಾವಳಿ ಜನ ಸಿಡಿದೆದ್ದಿದ್ದು ಭಾರೀ ಆಕ್ರೋಶ ಕೇಳಿ ಬಂದಿದೆ.

    ಮಾರ್ಚ್ 15 ರಂದು ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ವಿಜಯ ಕುಮಾರ್ ಕೊಡಿಯಾಲಬೈಲ್ ರಚಿಸಿ ನಿರ್ದೇಶಿಸಿದ ‘ಶಿವದೂತೆ ಗುಳಿಗ’ ನಾಟಕ ಪ್ರದರ್ಶನ ಕಂಡಿದೆ. ಅಲ್ಲದೇ ಪ್ರಚಾರಕ್ಕೆ ಬ್ಯಾನರ್ ಗಳು ಮತ್ತು ಪೋಸ್ಟರ್ ಗಳನ್ನು ಅಂಟಿಸಲಾಗಿತ್ತು.
    ಮರುದಿನ ಬಿಜೆಪಿಯಿಂದ ನಡೆದ ರೈತ ಸಮಾವೇಶದಲ್ಲಿ ಭಾಗವಹಿಸಿದ ಆರಗ ಜ್ಞಾನೇಂದ್ರ, ಕಿಮ್ಮನೆ ರತ್ನಾಕರ್ ಸಂಘಟಿಸಿದ ನಾಟಕಕ್ಕೆ ಹತ್ತು ಸಾವಿರಕ್ಕೂ ಹೆಚ್ಚು ಜನರು ಸೇರಿರುವುದು ತಿಳಿಯುತ್ತಲೇ ಸ್ವಲ್ಪ ವಿಚಲಿತರಾಗಿದ್ದಾರೆ. ಮಾತ್ರವಲ್ಲ ಅಸಹನೆಯಿಂದ ಸಭೆಯಲ್ಲಿ ತುಳುನಾಡಿನ ಜನರ ಆರಾಧ್ಯ ದೈವ ಗುಳಿಗನ ಬಗ್ಗೆ ಅಪಹಾಸ್ಯ ಮಾಡಿ ಮಾತನಾಡಿದ್ದು ದೈವಾರಾಧಕರು ಮತ್ತು ನಾಟಕ ಪ್ರಿಯರು ಆಕ್ರೋಶಗೊಳ್ಳುವಂತೆ ಮಾಡಿದೆ.

    ಆರಗ ಹೇಳಿದ್ದೇನು..?: ಯಾವುದೋ ಗುಳಿಗೆ ಕೊಡ್ತಾರಂತೆ, ಜಪಾಲ್ ಗುಳಿಗೆ ಕೊಟ್ರು ಕೊಡಬಹುದು. ಹೊಸ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ನಿಂದಿಸಿರುವುದು ತೀರ್ಥಹಳ್ಳಿಯಲ್ಲಿ ನೆಲೆಸಿರುವ ದ.ಕ ಮೂಲದ ಜನರನ್ನು ಕೆರಳಿಸಿದೆ. ಗುಳಿಗ ದ.ಕ ಜಿಲ್ಲೆಯ ಜನರ ಆರಾಧ್ಯ ದೈವ. ಜನ ಶ್ರದ್ಧಾ ಭಕ್ತಿಯಿಂದ ನಡೆದುಕೊಳ್ಳುತ್ತಾರೆ. ಆ ದೈವದ ಬಗ್ಗೆ ವ್ಯಂಗ್ಯವಾಗಿ, ಅಸಹನೆಯಿಂದ, ಅಪಹಾಸ್ಯ ಮಾಡಿ ಗೃಹ ಸಚಿವರು ಮಾತನಾಡಿರುವುದು ಸರಿಯಲ್ಲ ಜನ ರೊಚ್ಚಿಗೆದ್ದಿದ್ದಾರೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.