Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 1995ರಲ್ಲಿ ನಡೆದ ಕೊಲೆ, ಹಲ್ಲೆ ಪ್ರಕರಣ : 30 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿ ಸಿಸಿಬಿ ಬಲೆಗೆ…!!
    ಇತ್ತೀಚಿನ ಸುದ್ದಿ

    ಮಂಗಳೂರು: 1995ರಲ್ಲಿ ನಡೆದ ಕೊಲೆ, ಹಲ್ಲೆ ಪ್ರಕರಣ : 30 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿ ಸಿಸಿಬಿ ಬಲೆಗೆ…!!

    October 27, 2024
    Share

    ಮಂಗಳೂರು : ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸತತ ಕಾರ್ಯಾಚರಣೆ ಬಳಿಕ ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು  ಯಶಸ್ವಿಯಾಗಿದ್ದಾರೆ.

    ಕೇರಳದ ಕೊಟ್ಟಾರಕ್ಕರ ಕೊಲ್ಲಂ, ಕೈತಕೋಡ್ ನ ಕುರುವ ಮೂಲ ಹೌಸ್ ನಿವಾಸಿ ಜೋಸ್ ಕುಟ್ಟಿ ಪಾಪಚ್ಚನ್(55) ಬಂಧಿತ ಆರೋಪಿ.

    ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ಎಂಆರ್ ಪಿಎಲ್ ಟೌನ್ ಶಿಪ್ ಸೈಟ್ ಪರಿಸರದಲ್ಲಿ 1995ರ ಮಾರ್ಚ್ 12ರಂದು ರಾತ್ರಿ 10:30 ಗಂಟೆ ಸುಮಾರಿಗೆ ಈ ಸೈಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ನಾರಾಯಣ ಅವರ ಜೊತೆ 2 ಮಂದಿ ಜಗಳ ಮಾಡಿ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ನಾರಾಯಣ ಅವರು ಕೊಲೆಯಾಗಿದ್ದರು.

    ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು 1995 ಮಾರ್ಚ್ 12ರಂದು ರಾತ್ರಿ ಮೇಲ್ಕಂಡ ಪ್ರಕರಣದ ಆರೋಪಿಗಳ ಪೈಕಿ ಅಚ್ಚನ್ ಕುಂಞ ಮತ್ತು ಜೋಸ್ ಕುಟ್ಟಿ ಎಂಬವರು ತೋಮಸ್ ಎಂಬವರಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆಯೂ ಅಚ್ಚನ್ ಕುಂಞ ಮತ್ತು ಜೋಸ್ ಕುಟ್ಟಿ ರವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಗಳು ನಂತರ ತಲೆಮರೆಸಿಕೊಂಡಿದ್ದರು.

    ಆರೋಪಿಗಳು ಕೇರಳಕ್ಕೆ ಹೋಗಿ ವಿವಿಧ ಕಡೆಗಳಲ್ಲಿ ಹಾಗೂ ಗುಜರಾತ್, ರಾಜಸ್ಥಾನ, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದರು. ಆರೋಪಿಗಳ ವಿರುದ್ಧ ಎಲ್‌ಪಿಸಿ ವಾರಂಟ್ ಜಾರಿಯಲ್ಲಿತ್ತು. ಆರೋಪಿಗಳ ಪೈಕಿ ಅಚ್ಚನ್ ಕುಂಞ ಎಂಬಾತನು ಸುಮಾರು 8 ವರ್ಷದ ಹಿಂದೆ ಮೃತಪಟ್ಟಿದ್ದಾರೆ. ಇನ್ನೋರ್ವ ಆರೋಪಿ ಜೋಸ್ ಕುಟ್ಟಿ ಎಂಬಾತನ ಬಗ್ಗೆ ಸುಮಾರು 4 ತಿಂಗಳಿ0ದ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಅ. 23ರಂದು ಕೇರಳ ರಾಜ್ಯದ ಎರ್ನಾಕುಳಂ ಜಿಲ್ಲೆಯ ತ್ರಿಪ್ಪುಳಿತ್ತುರಂ ಎಂಬಲ್ಲಿ0ದ ದಸ್ತಗಿರಿ ಮಾಡಿ ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

    Post Views: 147

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.