ಕಾರ್ಕಳ : ಕುದುರೆಮುಖ ವನ್ಯಜೀವಿ ವಿಭಾಗದ ಕಾರ್ಕಳ ವಲಯದ ನೂರಾಲ್ಬೆಟ್ಟು ಗ್ರಾಮದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಲಯದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತರಿಂದ 1 ಬಂದೂಕು, 21 ಕಾಡತೂಸು, 1 ಸರ್ಚ್ಲೈಟ್ 2 ಮೊಬೈಲ್ ಫೋನ್ , ಆರೋಪಿಗಳು ಬಳಸಿದ್ದ ಕಾರು ಮತ್ತು 1 ಆಟೋರಿಕ್ಷಾ ವಶಕ್ಕೆ ಪಡೆಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ ಎಂದು ಗುರುತಿಸಲಾಗಿದೆ. ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳದ ಉಪಅರಣ್ಯ ಸಂರಕ್ಷಣಾಧಿಕಾರಿ ಶಿವರಾಮು ಬಾಬು ಅವರ ನಿರ್ದೇಶನದಂತೆ, ಕುದುರೆಮುಖ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.
