Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 6ಕೋಟಿಯ ಎಂಡಿಎಂಎನೊಂದಿಗೆ ನೈಜೀರಿಯಾ ಪ್ರಜೆ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 6ಕೋಟಿಯ ಎಂಡಿಎಂಎನೊಂದಿಗೆ ನೈಜೀರಿಯಾ ಪ್ರಜೆ ಸೆರೆ

    October 7, 2024
    Share

    ಮಂಗಳೂರು: ಮಂಗಳೂರು ನಗರ ಸೇರಿದಂತೆ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕದ್ರವ್ಯ ಪೂರೈಕೆ ಮಾಡುತ್ತಿದ್ದ ನೈಜಿರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಬೆಂಗಳೂರಿನ ದೊಮ್ಮಸಂದ್ರದ ವಿವೇಕಾನಂದ ನಗರದಲ್ಲಿ ವಾಸವಿರುವ ಪೀಟರ್ ಇಕೆಡಿ ಬೆಲೊನ್ವು(38) ಎಂಬ ನೈಜೀರಿಯಾ ಪ್ರಜೆ ಬಂಧಿತ ಆರೋಪಿ ಸೆಪ್ಟೆಂಬರ್ 29ರಂದು ನಗರದ ಪಂಪ್‌ವೆಲ್ ಬಳಿ ಎಂಡಿಎಂಎ ಮಾದಕದ್ರವ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ತೊಕ್ಕೊಟ್ಟು, ಪರ್ಮನ್ಬೂರು ನಿವಾಸಿ ಹೈದರ್ ಅಲಿ(51) ಎಂಬಾತನನ್ನು ಬಂಧಿಸಿ 75,000ರೂ. ಮೌಲ್ಯದ 15ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು. ಸಿಸಿಬಿ ಪೊಲೀಸರು ಮಾದಕದ್ರವ್ಯ ಪೂರೈಕೆ ಮಾಡುವ ಡ್ರಗ್ಸ್ ಪೆಡ್ಲರ್‌ಗಳ ಹಿಂದೆ ಬಿದ್ದು ತನಿಖೆ ಕೈಗೊಂಡಿದ್ದರು. ಆಗ ಮಾದಕದ್ರವ್ಯ ಪೂರೈಕೆ ಮಾಡುವ ವ್ಯಕ್ತಿ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆ ಎಂದು ತಿಳಿದುಬಂದಿದೆ. ಅದರಂತೆ ಸಿಸಿಬಿ ಪೊಲೀಸರು ಬೆಂಗಳೂರು ನಗರದ ದೊಮ್ಮಸಂದ್ರ ವಿವೇಕಾನಂದ ನಗರದ ಬಾಡಿಗೆ ಮನೆಗೆ ದಾಳಿ ನಡೆಸಿ ಮಾದಕವಸ್ತು ಹೊಂದಿದ್ದ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಈ ವೇಳೆ ಆತನ ಮನೆಯಲ್ಲಿ ದಾಸ್ತಾನು ಇರಿಸಿದ್ದ ಒಟ್ಟು 6 ಕೋಟಿ ರೂ. ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್ ಗಳು, 17 ಇನ್ ಆ್ಯಕ್ಟಿವ್ ಸಿಮ್‌ಕಾರ್ಡ್‌ಗಳು, 10 ವಿವಿಧ ಬ್ಯಾಂಕ್‌ಗಳ ಅಕೌಂಟ್ ಬುಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 6,00,63,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    Post Views: 209

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.