Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೆತ್ತ ತಾಯಿಗೆ ಅಮಾನವೀಯವಾಗಿ ಹಲ್ಲೆ..!! ಮಗಳ ವಿರುದ್ಧ ಆಕ್ರೋಶ
    ಇತ್ತೀಚಿನ ಸುದ್ದಿ

    ಮಂಗಳೂರು: ಹೆತ್ತ ತಾಯಿಗೆ ಅಮಾನವೀಯವಾಗಿ ಹಲ್ಲೆ..!! ಮಗಳ ವಿರುದ್ಧ ಆಕ್ರೋಶ

    November 29, 2025
    Share

    ಮಂಗಳೂರು: ನಗರ ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ತಾಯಿ ಮತ್ತು ಮಗಳು ವಾಸಿಸುತ್ತಿದ್ದು, ಇವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ತಾಯಿ ಕಾವೂರು ಠಾಣೆಗೆ ತೆರಳಿ ದೂರುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ತಾಯಿ ಮತ್ತು ಮಗಳಿಗೆ ಬುದ್ಧಿ ಹೇಳಿ ಕಳುಹಿಸಿಕೊಡುತ್ತಿದ್ದರು ಎನ್ನಲಾಗಿದೆ.

    ಇತ್ತೀಚೆಗೆ ತಾಯಿಯು ಮೂಡುಶೆಡ್ಡೆ ಗ್ರಾ.ಪಂ.ಗೆ ತೆರಳಿ ಮಗಳ ವಿರುದ್ಧ ದೂರು ನೀಡತೊಡಗಿದ್ದಾರೆ. ಮೂರು ದಿನದ ಹಿಂದೆ ತಾಯಿ ಗ್ರಾ.ಪಂ. ಕಚೇರಿಗೆ ತೆರಳಿ ದೂರು ನೀಡುತ್ತಿದ್ದಾಗ ಮಗಳು ತಾಯಿಯನ್ನು ತಳ್ಳಿದ್ದಾಳೆ. ತಾಯಿ ಕೂಡ ಮಗಳಿಗೆ ತಿರುಗೇಟು ನೀಡಿದ್ದರೂ ಕೂಡ ಆಕ್ರೋಶಗೊಂಡ ಮಗಳು ಚಪ್ಪಲಿಯಿಂದ ತಾಯಿಯ ಮುಖಕ್ಕೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ಕಂಡು ಬಂದಿದೆ. ಇದನ್ನು ಗ್ರಾ.ಪಂ. ಕಚೇರಿಯಲ್ಲಿದ್ದವರು ವೀಡಿಯೋ ಮಾಡಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗಳ ಅಮಾನವೀಯ ಕೃತ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

    ವೀಡಿಯೋದಲ್ಲಿ ಗ್ರಾ.ಪಂ.ನ ಕೆಲವು ಜನಪ್ರತಿನಿಧಿಗಳು, ಸಿಬ್ಬಂದಿಗಳು ಕಂಡು ಬರುತ್ತಿದೆ. ಇವರು ವೀಡಿಯೋ ಮಾಡಿದರೇ ವಿನಃ ತಾಯಿಗೆ ಹಲ್ಲೆ ನಡೆಸದಂತೆ ಮಗಳನ್ನು ತಡೆಯಲಿಲ್ಲ ಮತ್ತು ಪೊಲೀಸರಿಗೂ ದೂರು ನೀಡಲಿಲ್ಲ ಎಂದು ಜನರು ಆರೋಪಿಸಿದ್ದಾರೆ. ಪೊಲೀಸರು ತಾಯಿ ಮತ್ತು ಮಗಳನ್ನು ಕರೆದು ವಿಚಾರಣೆ ನಡೆಸಬೇಕು ಮತ್ತು ಸಾರ್ವಜನಿಕವಾಗಿ ತಾಯಿಗೆ ಹಲ್ಲೆ ನಡೆಸಿದ ಮಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು ಎಂಬ ಮಾತು ಕೇಳಿ ಬಂದಿದೆ.

    ತಾಯಿ-ಮಗಳ ಹೊಡೆದಾಟದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿಲ್ಲ. ವೀಡಿಯೋ ಮಾಡಿ ಅದಕ್ಕೆ ಹೆಚ್ಚು ವೀಕ್ಷಣೆ ಬರುವ ಉದ್ದೇಶದಿಂದ ವೈರಲ್ ಮಾಡಿದ ವ್ಯಕ್ತಿಯ ಬಗ್ಗೆ ಯಾರಾದರೂ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆಂದು ವರದಿಯೊಂದರಲ್ಲಿ‌ ಉಲ್ಲೇಖವಾಗಿದೆ.

    Post Views: 186

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.