Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬಸ್‌ ಚಾಲಕನ ಮೇಲೆ ಹಲ್ಲೆ- ಆರೋಪಿಗಳ ಸೆರೆ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬಸ್‌ ಚಾಲಕನ ಮೇಲೆ ಹಲ್ಲೆ- ಆರೋಪಿಗಳ ಸೆರೆ

    July 24, 2025
    Share

    ಉಪ್ಪಿನಂಗಡಿ: ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಟ್‌ನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ.

    ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ರಾಜಹಂಸ ಬಸ್ಸಿನ ಚಾಲಕ ರಿಯಾಜ್ ಅಹಮ್ಮದ್ ಎಂಬವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು ಕೊಡುವ ಸಲುವಾಗಿ ಹಾರ್ನ್ ಹಾಕಿದ್ದರು. ಇದರಿಂದ ಕೆರಳಿದ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡಗಟ್ಟಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

    ಇದನ್ನು ಪ್ರಶ್ನಿಸಿ ಹಲ್ಲೆಯನ್ನು ತಡೆಯಲು ಬಂದ ಬಸ್ಸಿನ ಪ್ರಯಾಣಿಕ ಅವಿನಾಶ್ ಮೇಲೂ ಮುಗಿಬಿದ್ದ ಬೈಕ್ ಸವಾರರು ಹೆಲ್ಮಟ್ ನಿಂದ ಅವಿನಾಶ್ ರವರ ತಲೆಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಈ ಬಗ್ಗೆ ಬಸ್ಸಿನ ಚಾಲಕ ಬೈಕ್‌ ಸವಾರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಉಪ್ಪಿನಂಗಡಿ ಠಾಣಾ ಪೊಲೀಸ್ ಸಬ್ ಇನ್‌ಸ್ಪೆಪೆಕ್ಟರ್ ಗುರುನಾಥ್ ಹಾದಿಮನಿ ಮಿಂಚಿನ ಕಾರ್ಯಾಚರಣೆ ನಡೆಸಿ ಒಂದು ಗಂಟೆಯೊಳಗೆ ಆರೋಪಿ ಬೈಕ್ ಸವಾರರಿಬ್ಬರನ್ನೂ ಪತ್ತೆ ಹಚ್ಚಿ ಬಂಧಿಸಿದರು.

    ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿಗಳಾದ ಇಬ್ರಾಹಿಂ ಬ್ಯಾರಿ ಎಂಬವರ ಮಗ ಜುನೈದ್ (24) ಹಾಗೂ ಅಬ್ದುಲ್ ಲತೀಫ್ ಎಂಬವರ ಮಗ ಹಿಷಾಮ್ (18) ಎಂದು ಗುರುತಿಸಲಾಗಿದೆ. ಬಂಧಿತರ ವಿರುದ್ಧ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಸಾರ್ವಜನಿಕ ಶಾಂತಿ ಭಂಗ ಆರೋಪದಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 218

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.