ಮೈಸೂರು : ಎರಡನೇ ತರಗತಿಯ ಶಾಲಾ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಲು ಯತ್ನ ನಡೆಸಿ ವಿಫಲರಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ನಿನ್ನೆ ಶೌಚಾಲಯಕ್ಕೆ ಕೇಳಿದ ವೇಳೆ ಇಬ್ಬರು ಅಪರಿಚಿತರಿಂದ ಈ ಅಪಹರಣ ಘಟನೆ ನಡೆದಿದ್ದು ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ.
ಈ ವೇಳೆ ಬಾಲಕಿ ಜೋರಾಗಿ ಕಿರುಚಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯನ್ನು ಅಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆಶಾಲೆ ಮುಖ್ಯ ಶಿಕ್ಷಕರಿಂದ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದೆ.
ಅಲ್ಲದೆ ಕಳೆದ ತಿಂಗಳು ಬೆಳಗಾವಿಯಲ್ಲಿ ಕೂಡ ಇದೇ ತರಹದ ಘಟನೆ ನಡೆದಿದ್ದು ಫ್ಲೈ ಓವರ್ ಮೇಲೆ ಶಾಲಾ ವಿದ್ಯಾರ್ಥಿನಿ ಒಬ್ಬಳು ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ವ್ಯಕ್ತಿ ಒಬ್ಬ ವಿದ್ಯಾರ್ಥಿಯನ್ನು ಹಗಲ ಮೇಲೆ ಹೊತ್ತುಕೊಂಡು ಅಪರಿಸಿಕೊಂಡು ಹೋಗುತ್ತಿರುವಾಗ ವಿದ್ಯಾರ್ಥಿನಿಯು ಜೋರಾಗಿ ಕಿರುಚಾಡಿದ್ದಾಳೆ. ಈ ವೇಳೆ ಅಲ್ಲಿ ಸುತ್ತಮುತ್ತ ಇದ್ದ ಸ್ಥಳೀಯರು ವಿದ್ಯಾರ್ಥಿನಿಯ ಕಿರುಚಾಟಕ್ಕೆ ಆಗಮಿಸಿದಾಗ ವಿದ್ಯಾರ್ಥಿಯನ್ನು ಬಿಟ್ಟು ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ. ನಂತರ ಪೊಲೀಸರು ಶೋಧ ನಡೆಸಿ ಅಪಹರಣಕಾರಣನ್ನು ಬಂಧಿಸಿದ್ದಾರೆ.