ಕರ್ನಾಟಕದ DrDevansAcademy.org ಸಂಸ್ಥೆಯು ವೈದ್ಯಕೀಯ ಶಿಕ್ಷಣದ ಕಲಿಕಾ ವಿಧಾನವನ್ನು ಸಂಪೂರ್ಣವಾಗಿ ಮರು ವ್ಯಾಖ್ಯಾನಿಸಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸ್ವಯಂಚಾಲಿತ ಮತ್ತು ಸಂವಾದಾತ್ಮಕ ಕಲಿಕಾ ವೇದಿಕೆಯನ್ನು 2026ರ ಏಪ್ರಿಲ್ನಲ್ಲಿ ಹೆಮ್ಮೆಯಿಂದ ಬಿಡುಗಡೆ ಮಾಡಿದೆ. ದೃಢವಾದ ಕ್ಲೌಡ್-ಆಧಾರಿತ ತಂತ್ರಜ್ಞಾನದ ಮೇಲೆ ನಿರ್ಮಿಸಲಾದ ಈ ವೇದಿಕೆಯು ವಿದ್ಯಾರ್ಥಿಗಳ ಮೊಬೈಲ್ ಸಾಧನಗಳೊಂದಿಗೆ ಸುಗಮವಾಗಿ ಸಂಯೋಜನೆಗೊಳ್ಳುವ ಮೂಲಕ, ಯಾವುದೇ ಸಮಯದಲ್ಲಿ ಮತ್ತು ಎಲ್ಲಿಯಾದರೂ ವೈಯಕ್ತಿಕಗೊಳಿಸಿದ ಕಲಿಕೆಯ ಅನುಭವವನ್ನು ನೈಜ ಸಮಯದಲ್ಲಿ ನೀಡುತ್ತದೆ. ಸಾಂಪ್ರದಾಯಿಕ ಬೋಧನಾ ಮಾದರಿಗಳಿಗಿಂತ ಭಿನ್ನವಾಗಿರುವ ಈ ವ್ಯವಸ್ಥೆಯು ಕ್ರಿಯಾತ್ಮಕ ಸಂವಹನದ ಮೂಲಕ ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದಲ್ಲದೆ, ವೈದ್ಯಕೀಯ ಜ್ಞಾನವು ಮನಸ್ಸಿನಲ್ಲಿ ದೀರ್ಘಕಾಲ ಅಚ್ಚೊತ್ತುವಂತೆ (Eidetic Retention) ಮಾಡುತ್ತದೆ. ಈ ಅದ್ಭುತ ನಾವೀನ್ಯತೆಯ ರೂವಾರಿ ತಲೆ ಮತ್ತು ಕುತ್ತಿಗೆ ಶಸ್ತ್ರಚಿಕಿತ್ಸೆಯ ಹೆಸರಾಂತ ಪ್ರಾಧ್ಯಾಪಕರಾದ ಡಾ. ದೇವನ್ ಅವರು. ವೈದ್ಯಕೀಯ ಮತ್ತು ಶೈಕ್ಷಣಿಕ ಪರಿಣತಿಯ ಜೊತೆಗೆ ಕಂಪ್ಯೂಟರ್ ಅಪ್ಲಿಕೇಶನ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ನಲ್ಲಿ ಅವರು ಹೊಂದಿರುವ ತಾಂತ್ರಿಕ ಜ್ಞಾನವು ಕ್ಲಿನಿಕಲ್ ಆಳವನ್ನು ತಾಂತ್ರಿಕ ಅತ್ಯಾಧುನಿಕತೆಯೊಂದಿಗೆ ಬೆಸೆಯುವ ವ್ಯವಸ್ಥೆಯನ್ನು ರೂಪಿಸಲು ನೆರವಾಗಿದೆ.…
Author: main-admin
ಬೆಂಗಳೂರು: ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಉದ್ಯಮಿಯೊಬ್ಬರಿಂದ 1.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಇನ್ಸ್ಟಾಗ್ರಾಮ್ ಇನ್ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಲೆಬ್ರಿಟಿ ಮೇಕಪ್ ಕ್ಲಿನಿಕ್ ಮತ್ತು ಆಸ್ಪತ್ರೆಗಳ ಮಾಲೀಕ ಕಾರ್ತಿಕ್ ಪುತಾ (32) ಎಂಬುವವರು ಈ ದೂರು ನೀಡಿದ್ದಾರೆ. ಬೆಂಗಳೂರು ಮತ್ತು ಹೈದರಾಬಾದ್ನಲ್ಲಿ ವ್ಯವಹಾರ ಹೊಂದಿರುವ ಕಾರ್ತಿಕ್ ಅವರಿಗೆ ತಮ್ಮ ಕ್ಲಿನಿಕ್ ಪ್ರಮೋಷನ್ ಸಲುವಾಗಿ 2024ರಲ್ಲಿ ಸಾಧನಾ ಶೆಟ್ಟಿ ಪರಿಚಯವಾಗಿದ್ದರು. ಈ ಪರಿಚಯ ಆತ್ಮೀಯತೆಗೆ ತಿರುಗಿ ಹಲವು ಬಾರಿ ಭೇಟಿಯಾಗಿದ್ದರು. ದೂರಿನ ಪ್ರಕಾರ, ಜೊತೆಗಿದ್ದ ಸಮಯದ ಖಾಸಗಿ ಫೋಟೋಗಳು, ವಿಡಿಯೋಗಳು ಮತ್ತು ಸಂಭಾಷಣೆಯನ್ನು ರೆಕಾರ್ಡ್ ಮಾಡಿಕೊಂಡಿದ್ದ ಸಾಧನಾ ಶೆಟ್ಟಿ, ಅವುಗಳನ್ನು ಕಾರ್ತಿಕ್ ಅವರ ಪತ್ನಿ ಮತ್ತು ಕುಟುಂಬಸ್ಥರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಲಾರಂಭಿಸಿದ್ದರು. ಅಲ್ಲದೆ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಬಾರದೆಂದರೆ 1.5 ಕೋಟಿ ರೂ. ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.ಮರ್ಯಾದೆಗೆ ಹೆದರಿದ ಕಾರ್ತಿಕ್ ಅವರು ಹಂತ ಹಂತವಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಮತದಾನದ ಹೊತ್ತಲ್ಲೇ ಕೆಲ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದೆ. ದಾಳಿಯಲ್ಲಿ ಹಲವರು ಗಾಯಗೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನು ಕಚ್ಚಾ ಬಾಂಬ್ ದಾಳಿಯ ಬಳಿಕ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಉತ್ತರ ಬಂಗಾಳದ ಮುರ್ಶಿದಾಬಾದ್, ಜರ್ಗಾಮ್, ಮೇದಿನಿಪುರೆ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್ಬುಮ್ ಸೇರಿದಂತೆ 16 ಜಿಲ್ಲೆಗಳ 152 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಈ 152 ಕ್ಷೇತ್ರಗಳಲ್ಲಿ 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಚುನಾವಣೆಗೆ ಹೆಚ್ಚುವರಿ 4,660 ಸಹಾಯಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು ಮತಗಟ್ಟೆಗಳ ಪೈಕಿ 8,000ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.
ನವದೆಹಲಿ: ಪಂಜಾಬ್ ರಾಜ್ಯದ ‘ಡಿಯರ್ ಬೈಸಾಖಿ ಬಂಪರ್’ ಲಾಟರಿಯಲ್ಲಿ ಬರೋಬ್ಬರಿ 6 ಕೋಟಿ ರೂಪಾಯಿಗಳ ಪ್ರಥಮ ಬಹುಮಾನ ದೆಹಲಿಯ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ ಓಂ ಪ್ರಕಾಶ್ ಗೆದ್ದಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ದೆಹಲಿಯ ಪಶ್ಚಿಮ ವಿಹಾರ್ ನಿವಾಸಿಯಾದ ಓಂ ಪ್ರಕಾಶ್ ಅವರು ಇತ್ತೀಚೆಗೆ ಪಂಜಾಬ್ನ ಲುಧಿಯಾನದಲ್ಲಿರುವ ತಮ್ಮ ಅತ್ತಿಗೆಯ ಮನೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಏಪ್ರಿಲ್ 1ರಂದು ಲುಧಿಯಾನದ ಘಂಟಾ ಘರ್ ಬಳಿಯಿರುವ ಪ್ರಸಿದ್ಧ ‘ಗಾಂಧಿ ಬ್ರದರ್ಸ್ ಲಾಟರಿ ಏಜೆನ್ಸಿ’ಯಿಂದ 500 ರೂಪಾಯಿ ನೀಡಿ ಲಾಟರಿ ಟಿಕೆಟ್ ಖರೀದಿಸಿದ್ದರು. ಏಪ್ರಿಲ್ 19ರಂದು ಪಂಜಾಬ್ ರಾಜ್ಯ ಲಾಟರಿ ನಿರ್ದೇಶನಾಲಯವು ನಡೆಸಿದ ಅಧಿಕೃತ ಲಕ್ಕಿ ಡ್ರಾದಲ್ಲಿ ಅವರು ಹೊಂದಿದ್ದ ಬಿ 520729 (B 520729) ಸಂಖ್ಯೆಯ ಟಿಕೆಟ್ಗೆ ಬಂಪರ್ ಬಹುಮಾನ ಲಭಿಸಿರುವುದು ಅಧಿಕೃತವಾಗಿ ದೃಢಪಟ್ಟಿದೆ. ಓಂ ಪ್ರಕಾಶ್ ಅವರು ಕಳೆದ 30 ವರ್ಷಗಳಿಂದ ನಿರಂತರವಾಗಿ ಲಾಟರಿ ಟಿಕೆಟ್ಗಳನ್ನು ಖರೀದಿಸುತ್ತಾ ಬಂದಿದ್ದರು. ಲುಧಿಯಾನಕ್ಕೆ ಹೋದಾಗಲೆಲ್ಲಾ ತಪ್ಪದೇ ಅದೃಷ್ಟ ಪರೀಕ್ಷೆ ನಡೆಸುತ್ತಿದ್ದ ಅವರು,…
ಬೆಳ್ತಂಗಡಿ: ಎರಡು ದಿನಗಳ ಹಿಂದೆ ತಾಲೂಕಿನ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ. ಎ.20 ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕ್ ನ್ನು ಚಲಾಯಿಸಿಕೊಂಡು ಬಂದು ಬಳ್ಳಮಂಜ ಕಡೆಯಿಂದ ಮಡಂತ್ಯಾರು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.ಈ ಸಂದರ್ಭದಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ , ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಹಾಗೂ ಪೇದೆ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್ ಬಿಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.70 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಂಚದ ಬೇಡಿಕೆ ಬಗ್ಗೆ ಮುತ್ತಪ್ಪ ನಾಯ್ಕರ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಫೋನ್ ಕರೆ ರೆಕಾರ್ಡಿಂಗ್ ಆಧಾರದ ಮೇಲೆ ದಾಳಿ ಮಾಡಿ ಇಬ್ಬರನ್ನು ಲೋಕಾಯುಕ್ತ ಬಂಧಿಸಿದ್ದು, ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಲೋಕಾಯುಕ್ತ ಎಸ್.ಪಿ ಮಹಾಲಿಂಗ್ ನಂದಗಾಂವಿ ಮಾರ್ಗದರ್ಶನದಲ್ಲಿ, ಲೋಕಾ ಡಿವೈಎಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
ಮುಲ್ಕಿ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಓರ್ವ ವಾರಂಟ್ ಆಸಾಮಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ತಿಮ್ಮಪುರ ನಿವಾಸಿ ಜಗ್ಗು ಯಾನೆ ಜಗದೀಶ್ (34) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ನಡೆದಿದ್ದ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಕಳೆದ 4ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೂಡಬಿದ್ರೆ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಆದೇಶದಂತೆ ಪಣಂಬೂರು ಎಸಿಪಿ ಶ್ರೀಕಾಂತ್ ಅವರ ನಿರ್ದೇಶನದಲ್ಲಿ ಮುಲ್ಕಿ ಪೋಲೀಸ್ ಠಾಣೆಯ ಪೋಲೀಸ್ ನಿರೀಕ್ಷಕರಾದ ಮಂಜುನಾಥ ಬಿ.ಎಸ್ ರವರ ಮಾರ್ಗದರ್ಶನದಂತೆ ಠಾಣಾ ಪಿಎಸ್ಸೈ ರಾಘವೇಂದ್ರ ನಾಯ್ಕ್ ಅವರ ಮಾರ್ಗದರ್ಶನದಂತೆ ಎಚ್.ಸಿ. ಉದಯ್ ಹಾಗೂ ಸಿ.ಪಿ.ಸಿ ಅರುಣ್ ಕುಮಾರ್ ಅವರು ಬಾದಾಮಿ ತಾಲೂಕಿನ ಚಿಂಚನಹಳ್ಳಿ ಎಂಬಲ್ಲಿ ಆರೋಪಿಯನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ತುಮಕೂರು: ಕಬಡ್ಡಿ ಪಂದ್ಯಾವಳಿಯ ವೇಳೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ ನೀಡಿದೆ. ಇತ್ತೀಚೆಗೆ ನಡೆದ ಕಬಡ್ಡಿ ಟೂರ್ನಿಯೊಂದರಲ್ಲಿ ಭಾಗವಹಿಸಿದ್ದ ಗೃಹ ಸಚಿವರು, ಆಟದ ಭರದಲ್ಲಿ 500 ರೂಪಾಯಿ ಬೆಟ್ಟಿಂಗ್ ಕಟ್ಟುವುದಾಗಿ ಹೇಳಿಕೆ ನೀಡಿದ್ದರು. ಸಾರ್ವಜನಿಕವಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಬೆಟ್ಟಿಂಗ್ ಪ್ರೋತ್ಸಾಹಿಸುವುದು ಅಥವಾ ಅದರಲ್ಲಿ ಭಾಗಿಯಾಗುವುದು ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿ ಹೆಚ್.ಆರ್. ನಾಗಭೂಷಣ್ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ದೂರನ್ನು ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ (ACJM) ನ್ಯಾಯಮೂರ್ತಿ ಕೆ.ಎನ್. ಶಿವಕುಮಾರ್ ಅವರು, ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆದೇಶಿಸಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತುಮಕೂರಿನ ಕೂಡಿಗೇಹಳ್ಳಿ ಪೊಲೀಸ್ ಠಾಣೆಗೆ ನ್ಯಾಯಾಲಯ ಸೂಚನೆ ನೀಡಿದೆ
ಉಡುಪಿ: ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ. ಮೃತ ಸಾತ್ವಿ ತನ್ನ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾಳೆ.ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ನಾಳೆ ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಾಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ. ದೂರವಷ್ಟೇ ಬಾಕಿ ಇತ್ತು. ಸ್ಕೂಟಿ ಸವಾರ ನಿತ್ಯಾನಂದ ಶೆಟ್ಟಿ ಅವರಿಗೂ ಗಾಯಗಳಾಗಿವೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು: ಪ್ರಾರ್ಥನಾ ಕ್ರಿಯೇಷನ್ಸ್ ಮಂಗಳೂರು ಲಾಂಛನದಲ್ಲಿ ಬಹುಭಾಷೆಯಲ್ಲಿ ಡಾ| ಆರ್. ಧನರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ “ಕೊರಗ್ಲಾ ತನಿಯಾ” (ಕೊರಗಜ್ಜ) ಮತ್ತು “ಕನ” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಎಪ್ರಿಲ್ 23 ಗುರುವಾರ ಬೆಳಿಗ್ಗೆ 9 ಗಂಟೆಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.ವಜ್ರದೇಹಿ ಮಠದ ಸ್ವಾಮೀಜಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. “ಕೊರಗ್ಲಾ ತನಿಯಾ” ಸಿನಿಮಾಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರಂಭ ಫಲಕ ತೋರಿಸಲಿದ್ದಾರೆ. ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಕ್ಯಾಮರ ಚಾಲನೆಗೈಯಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.”ಕನ” ತುಳು ಸಿನಿಮಾಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಆರಂಭ ಫಲಕ ತೋರಿಸಲಿದ್ದಾರೆ. ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ಮತ್ತು ಬಹುಭಾಷಾ ನಟ ಸುಮನ್ ತಲ್ವಾರ್ ದೀಪ ಬೆಳಗಿಸಲಿದ್ದಾರೆ. ಶಾಸಕರಾದ ಸಿ.ಬಿ. ಸುರೇಶ್ ಬಾಬು ಕ್ಯಾಮರ ಚಾಲನೆಗೈಯಲಿದ್ದಾರೆ.ಸಂಸದರು, ಶಾಸಕರು…










