ಕುಂದಾಪುರ: ಖಾಸಗಿ ಬಸ್ಸೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್, ಬಸ್ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕುಂದಾಪುರ-ಶಿವಮೊಗ್ಗ ರಾಜ್ಯ ಹೆದ್ದಾರಿ 52ರ ಹುಲಿಕಲ್ ಘಾಟ್ನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.ಹುಲಿಕಲ್ ಘಾಟ್ನಲ್ಲಿ ಭೂಕುಸಿತದ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಗರದಿಂದ ಬಂದಿದ್ದ ಬಸ್ನಲ್ಲಿದ್ದ ಪ್ರಯಾಣಿಕರನ್ನು ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ಇಳಿಸಲಾಗಿತ್ತು. ಬಳಿಕ, ಬಾಳೆಬರೆ ಘಾಟ್ ಮೂಲಕ ಉಡುಪಿಗೆ ತೆರಳುತ್ತಿದ್ದ ಮತ್ತೊಂದು ಬಸ್, ತನ್ನ ಪ್ರಯಾಣ ಆರಂಭಿಸಿದ ಕೇವಲ 300 ಮೀಟರ್ ಅಂತರದಲ್ಲಿ ಬೆಂಕಿಗೆ ಆಹುತಿಯಾಗಿದೆ. ಈ ಬಸ್ನಲ್ಲಿ 17 ಮಂದಿ ಪ್ರಯಾಣಿಕರಿದ್ದರು.ಬಸ್ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ತಕ್ಷಣ ಚಾಲಕ ಮತ್ತು ನಿರ್ವಾಹಕರು ಸಮಯಪ್ರಜ್ಞೆ ಮೆರೆದಿದ್ದಾರೆ. ತಕ್ಷಣವೇ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಪ್ರಯಾಣಿಕರು ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬಸ್ನಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, ಬಸ್ ಬೆಂಕಿಗಾಹುತಿಯಾಗಿದೆ.ಈ ಘಟನೆಯಿಂದಾಗಿ ಘಾಟ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಸ್ಥಳೀಯರ ಸಹಾಯದಿಂದ…
Author: main-admin
ಗಂಗಾವತಿ : ಆನ್ಲೈನ್ ಗೇಮ್ ಆಡುವುದನ್ನು ವಿರೋಧಿಸಿ ಬುದ್ಧಿವಾದ ಹೇಳಿದ ಒಂದೇ ಕಾರಣಕ್ಕೆ, ಜನ್ಮ ನೀಡಿದ ತಂದೆ ಮತ್ತು ಒಡಹುಟ್ಟಿದ ಅಕ್ಕನನ್ನೇ ಚಾಕುವಿನಿಂದ ಇರಿದು ಕ್ರೂರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ತಾಯಿಗೂ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಪಾಪಿ ಮಗ, ಬಳಿಕ ತನಗೂ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಘಟನೆಯಲ್ಲಿ ತಂದೆ ವೆಂಕಟನಾಯ್ಡು (45) ಹಾಗೂ ಅಕ್ಕ ಪ್ರಗತಿ (19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ತಾಯಿ ಸೌಜನ್ಯ ಅವರ ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಸದ್ಯ ಆರೋಪಿ ಸಾಯಿವೆಂಕಟ ಮಣಿದೀಪ (18) ಹಾಗೂ ತಾಯಿ ಸೌಜನ್ಯ ಇಬ್ಬರಿಗೂ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮೃತ ವೆಂಕಟನಾಯ್ಡು ಅವರು ಹೊಸ ಅಯೋಧ್ಯೆ ಗ್ರಾಮದಲ್ಲಿ ವಾಸವಾಗಿದ್ದು, ಖಾಸಗಿ ಶಾಲೆಯೊಂದರಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ ಎಂದಿನಂತೆ ವೆಂಕಟನಾಯ್ಡು, ಪತ್ನಿ, ಇಬ್ಬರು ಮಕ್ಕಳು…
ಬಾಗಲಕೋಟೆ: ಧಾರಾಕಾರ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ಬೀಳುವ ಕೆಲವೇ ಕ್ಷಣಗಳ ಮೊದಲು ಸಾಕು ಬೆಕ್ಕಿನ ಕಾರಣದಿಂದ ತಂದೆ ಮತ್ತು ಮಗ ಪ್ರಾಣಾಪಾಯದಿಂದ ಪಾರಾದ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದ್ದು, ಸಾಕು ಪ್ರಾಣಿಯೇ ಕುಟುಂಬದ ಜೀವ ರಕ್ಷಕನಾದಂತಾಗಿದೆ.ಬಾಗಲಕೋಟೆಯ ವಲ್ಲಭಬಾಯಿ ನಗರ ನಿವಾಸಿಗಳಾದ ಶಬ್ಬೀರ್ ಬಾಗವಾನ್ ಹಾಗೂ ಅವರ ಪುತ್ರ ಆರ್ಬಾಜ್ ಬಾಗವಾನ್ ಮನೆಯಲ್ಲಿ ಇದ್ದ ವೇಳೆ ಭಾರೀ ಮಳೆಯಿಂದ ಮನೆಯ ಮೇಲ್ಛಾವಣಿಯಿಂದ ಮಣ್ಣಿನ ತುಂಡುಗಳು ಉದುರಲು ಆರಂಭವಾಗಿತ್ತು. ಇದೇ ವೇಳೆ ಮನೆಯಲ್ಲಿದ್ದ ಸಾಕು ಬೆಕ್ಕು ಭಯಗೊಂಡು ಹೊರಗೆ ಓಡಿದೆ. ಬೆಕ್ಕು ಹೊರಗೆ ಓಡಿದುದನ್ನು ಗಮನಿಸಿದ ಶಬ್ಬೀರ್, ಅದನ್ನು ಹಿಡಿಯಲು ಮನೆಯ ಹೊರಭಾಗಕ್ಕೆ ತೆರಳಿದ್ದಾರೆ. ತಂದೆಯ ಹಿಂದೆ ಪುತ್ರ ಆರ್ಬಾಜ್ ಕೂಡ ಹೊರಗೆ ಬಂದಿದ್ದಾರೆ. ಇಬ್ಬರೂ ಮನೆಯ ಬಾಗಿಲು ದಾಟಿ ಹೊರಬಂದ ಕೆಲವೇ ಕ್ಷಣಗಳಲ್ಲಿ ಮನೆಯ ಸಂಪೂರ್ಣ ಮೇಲ್ಛಾವಣಿ ಕುಸಿದು ಬಿದ್ದಿದೆ.ಘಟನೆಯ ಬಗ್ಗೆ ಮಾತನಾಡಿದ ಆರ್ಬಾಜ್ ಬಾಗವಾನ್, “ಮನೆಯ ಮೇಲ್ಛಾವಣಿಯಿಂದ ಮಣ್ಣು ಬೀಳುತ್ತಿದ್ದಂತೆ ನಮ್ಮ ಬೆಕ್ಕು…
ಉಳ್ಳಾಲ: ತೊಕ್ಕೊಟ್ಟು ಸಮೀಪದ ಕೆ.ಸಿ ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ 2025ರ ಜನವರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಗುಜರಾತ್ ಸೂರತ್ ನಿವಾಸಿ ಧರ್ಮ್ ಬೀರ್ ಬೀರೇಂದ್ರ ಸಿಂಗ್ ಯಾನೆ ಧರ್ಮವೀರ್ ಸಿಂಗ್ ಬಂಧಿತ ಆರೋಪಿ. ಈತ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಈ ತಂಡವು ದೊರೆತ ಖಚಿತ ಮಾಹಿತಿಯಂತೆ ತಲೆಮರೆಸಿಕೊಂಡಿದ್ದ ಧರ್ಮ್ ಬೀರ್ ಬೀರೇಂದ್ರ ಸಿಂಗ್ ಯಾನೆ ಧರ್ಮವೀರ್ ಸಿಂಗ್ ಯಾನೆ ಮನೋಜ್ ಜೀತ್ ಲಾಲ್ ವರ್ಮ ಯಾನೆ ಧರ್ಮ್ ಯಾನೆ ಮಾಸ್ಟರ್ ಯಾನೆ ಕಳ್ಳು, (34) ಎಂಬಾತನನ್ನು ಮೇ 11ರಂದು ಮಹಾರಾಷ್ಟ್ರ ರಾಜ್ಯದ ಮುಂಬೈಯ ಪನ್ವೇಲಿ ರೈಲ್ವೆ ಸ್ಟೇಷನ್ ಬಳಿ ವಶಕ್ಕೆ ಪಡೆದಿತ್ತು.ಆತನನ್ನು ಮೇ 12 ರಂದು ಉಳ್ಳಾಲ ಪೊಲಿಸ್ ಠಾಣೆಗೆ ಕರೆದು ಕಂಡು ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿತ್ತು. ಈ ಆರೋಪಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ…
ಮಂಗಳೂರು: ಜಾಮೀನು ರಹಿತ ವಾರಂಟ್ ಹೊರಡಿಸಿದ್ದರೂ ಪದೇ ಪದೇ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೂರ್ವ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ.ಬಂಧಿತರನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ದಿವಂಗತ ರಂಗಸ್ವಾಮಿ ಅವರ ಪುತ್ರ ಶ್ರೀನಿವಾಸ ಸಿರಾಯನ್ (56), ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ದೊಡ್ಡಗಾವನಹಳ್ಳಿ ಗ್ರಾಮದ ಚಂದ್ರೇಗೌಡ ಅವರ ಪುತ್ರ ಉಪೇಂದ್ರ ಡಿಸಿ ಅಲಿಯಾಸ್ ಅಭಿಷೇಕ್ (28) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಶ್ರೀನಿವಾಸ ಸಿರಾಯನ್ ಮಂಗಳೂರು ಪೂರ್ವ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 152/2017 ರಲ್ಲಿ ಆರೋಪಿಯಾಗಿದ್ದಾನೆ. ಸಂಬಂಧಿತ ಕಾಯ್ದೆಯ ಸೆಕ್ಷನ್ 3(1), 3(22), 4 ಮತ್ತು 9 ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣವು ಪ್ರಸ್ತುತ ಮಂಗಳೂರಿನ 6 ನೇ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ (ಜೆಎಂಎಫ್ಸಿ) ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ ಮತ್ತು ಸಿಸಿ ಸಂಖ್ಯೆ 1108/2025 ಎಂದು ಪಟ್ಟಿ ಮಾಡಲಾಗಿದೆ.ವಿಚಾರಣೆಗೆ ಹಾಜರಾಗದೇ, ದಸ್ತಗಿರಿಗೆ ಸಿಗದೇ ತಲೆಮರೆಸಿಕೊಂಡದ್ದ ಆರೋಪಿಗಳ ವಿರುದ್ಧ ನ್ಯಾಯಾಲಯವು ಹಲವಾರು ಬಾರಿ…
ಉಡುಪಿ : ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆ ನಿವಾಸಿ ಸೌಂದರ್ಯ ಹೆಚ್ ಎ, (20) ಎಂಬ ಯುವತಿಯು ಮೇ 30 ರಂದು ತನ್ನ ಕಾಲೇಜಿನ ಸ್ನೇಹಿತರೊಂದಿಗೆ ಕೊಡಗು ಪ್ರವಾಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋದವರು, ಪ್ರವಾಸಕ್ಕೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿರುತ್ತಾರೆ.ಯುವತಿಯು 4 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈ ಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತಾಡುತ್ತಾರೆ ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂ: 0820-2520444, ಉಡುಪಿ ಕಂಟ್ರೋಲ್ ರೂಂ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಪೊಲೀಸ್ ಉಪ-ನಿರೀಕ್ಷಕರು ಮೊ.ನಂ:9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಖೈರತಾಬಾದ್ನ ಆನಂದ್ ನಗರ ಕಾಲೋನಿಯ ‘ಭವನ ಅಪಾರ್ಟ್ಮೆಂಟ್ಸ್’ನಲ್ಲಿ ಈ ಧಾರುಣ ಘಟನೆ ನಡೆದಿದೆ. ರಾಧಾ (58) ಮೃತಪಟ್ಟ ದುರ್ದೈವಿ. ಅವರ 13 ತಿಂಗಳ ಮೊಮ್ಮಗ ಜೋಯಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ, ರಾಧಾ ಅವರು ತಮ್ಮ ಮೊಮ್ಮಗ ಜೋಯಲ್ನನ್ನು ಎತ್ತಿಕೊಂಡು ಅಪಾರ್ಟ್ಮೆಂಟ್ನ 5ನೇ ಮಹಡಿಯಲ್ಲಿದ್ದರು. ಕೆಳಗೆ ಹೋಗುವ ಉದ್ದೇಶದಿಂದ ಅವರು ಲಿಫ್ಟ್ ಬಟನ್ ಒತ್ತಿದ್ದಾರೆ. ಆದರೆ, ಲಿಫ್ಟ್ನ ಮುಖ್ಯ ಕ್ಯಾಬಿನ್ 5ನೇ ಮಹಡಿಗೆ ತಲುಪುವ ಮೊದಲೇ, ತಾಂತ್ರಿಕ ದೋಷದಿಂದಾಗಿ ಲಿಫ್ಟ್ನ ಹೊರಗಿನ ಬಾಗಿಲುಗಳು ತೆರೆದುಕೊಂಡಿವೆ. ಲಿಫ್ಟ್ ಬಂದಿದೆ ಎಂದೇ ಭಾವಿಸಿದ ರಾಧಾ ಅವರು ಮಗುವಿನೊಂದಿಗೆ ಮುಂದೆ ಹೆಜ್ಜೆ ಇಟ್ಟಿದ್ದಾರೆ.ಕ್ಯಾಬಿನ್ ಇಲ್ಲದೆ ಖಾಲಿ ಇದ್ದ ಲಿಫ್ಟ್ ಕಣಿವೆಯೊಳಗೆ (ಶಾಫ್ಟ್) ಬಿದ್ದ ಇಬ್ಬರೂ 5ನೇ ಮಹಡಿಯಿಂದ ನೇರವಾಗಿ ಮೊದಲ ಮಹಡಿಯ ಮೇಲ್ಭಾಗಕ್ಕೆ ಬಿದ್ದಿದ್ದಾರೆ. ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ ರಾಧಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಆದರೆ, ಅಜ್ಜಿಯ ತೋಳಿನ ಆಸರೆಯಲ್ಲಿದ್ದ ಮಗು ಜೋಯಲ್ ಪವಾಡಸದೃಶವಾಗಿ ಬದುಕುಳಿದಿದ್ದು, ತೀವ್ರವಾಗಿ ಗಾಯಗೊಂಡಿದ್ದಾನೆ.ಘಟನೆಯನ್ನು ಗಮನಿಸಿದ ಅಪಾರ್ಟ್ಮೆಂಟ್…
ಜೂನ್ 1 ರಂದು ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ತೇಲುತ್ತಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಕಾರ್ಯಪ್ರವೃತ್ತರಾಗಿದ್ದ ಶಿರ್ವ ಪೊಲೀಸರು, ಕಾಪು ಪಶು ವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಅಪರಾಧ ಪರಿಶೀಲನಾ ಅಧಿಕಾರಿಗಳ ಸಮಕ್ಷಮದಲ್ಲಿ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಹೊಳೆಯಲ್ಲಿದ್ದ ಜಾನುವಾರಿನ ಮೇಲ್ದವಡೆಯ ಭಾಗ, ಎರಡು ಗೆರಸುಗಳು, ಮಾಂಸ ಹಾಗೂ ಹೊಟ್ಟೆಯ ಒಳಗಿನ ಭಾಗಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಕಾನೂನುಬದ್ಧವಾಗಿ ಪ್ರಕರಣ ದಾಖಲಿಸಲಾಗಿತ್ತು.ಹೊಳೆಗೆ ಜಾನುವಾರು ಅವಶೇಷ ಎಸೆದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಸಂಘ ಪರಿವಾರದ ವಿವಿಧ ಸಂಘಟನೆಗಳು, ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿದ್ದವು. ಅಲ್ಲದೆ, ಪೊಲೀಸರಿಗೆ ಗಡುವು ವಿಧಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದವು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದ ಶಿರ್ವ ಪೊಲೀಸರು, ಜೂನ್ 5 ರಂದು ಶಿರ್ವ ಗ್ರಾಮದ ಪದವು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಅಶೋಕನನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತನಿಂದ ಜಾನುವಾರಿನ ಚರ್ಮ ಹಾಗೂ ಕೃತ್ಯ…
ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಹಾಗೂ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಎರಡು ಪ್ರತ್ಯೇಕ ಗಂಭೀರ ಪ್ರಕರಣಗಳ ವಿಚಾರಣೆ ನಡೆಸಿದ ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ (SCJ & JMFC) ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸುಳ್ಯದ ಅಜ್ಜಾವರ ನಿವಾಸಿ ಎ.ಎಂ. ಅಜೀಜ್ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ.ಅಪರಾಧಿ ಎ.ಎಂ. ಅಜೀಜ್ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ 2006ರಲ್ಲಿ ರಾತ್ರಿ ವೇಳೆ ಮನೆಗನ್ನ ಹಾಕಿ ಕಳ್ಳತನ ನಡೆಸಿದ ಆರೋಪದಡಿ ಅಪರಾಧ ಕ್ರಮಾಂಕ (ಅ.ಕ್ರ) 96/2006, ಐಪಿಸಿ ಕಲಂ 457 ಮತ್ತು 380 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದರೊಂದಿಗೆ, 2018ರಲ್ಲಿ ಈತ ಕಾನೂನುಬದ್ಧ ಪೊಲೀಸ್ ಕಾವಲಿನಿಂದ ತಪ್ಪಿಸಿಕೊಂಡು ಓಡಿಹೋದ ಆರೋಪದ ಮೇಲೆ ಸುಳ್ಯ ಠಾಣೆಯಲ್ಲೇ ಮತ್ತೊಂದು ಪ್ರಕರಣ ಅ.ಕ್ರ 103/2018, ಐಪಿಸಿ ಕಲಂ 224 ರ ಅಡಿಯಲ್ಲಿ ದಾಖಲಾಗಿತ್ತು. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ…
ಸುಳ್ಯ: ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ನಡೆದಿದೆ. ಕೇರಳ ನೋಂದಣಿಯ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ.










