ಮಂಗಳೂರು: ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್ಐಆರ್ ದಾಖಲಾಗಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಈ ವೇಳೆ ಶ್ವೇತಾ ಪೂಜಾರಿ ಅವರು ಫೇಸ್ಬುಕ್ ಪೋಸ್ಟ್ ನಲ್ಲಿ “ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಯಾಕೆ ಮಾತಾಡುತ್ತಿಲ್ಲ?” ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಸದಸ್ಯೆಯೋರ್ವರು ಪೊಲೀಸರಿಗೆ ದೂರು ನೀಡಿದ್ದು ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಶ್ವೇತಾ ಪೂಜಾರಿ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಇದು…
Author: main-admin
ಉಡುಪಿ: ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ವಕೀಲನೋರ್ವ ಧಮ್ಕಿ ಹಾಕಿ, ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಉಡುಪಿಯ ಕರಾವಳಿ ಜಂಕ್ಷನ್ ಫ್ಲೈ ಓವರ್ ಬಳಿ ನಡೆದಿದೆ. ಫ್ಲೈ ಓವರ್ ಬಳಿ ಯಾವಾಗಲೂ ವಾಹನ ಸಂಚಾರ ದಟ್ಟಣೆಯಿರುವುದರಿಂದ ಉಡುಪಿ ಸಂಚಾರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ದುಂಡಪ್ಪ ಮಾದವ ಎಂಬವರು ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಬನ್ನಂಜೆ ಕಡೆಯಿಂದ ಅತ್ತ ಬರುತ್ತಿದ್ದ ವಾಹನವನ್ನು ಹ್ಯಾಂಡ್ ಸಿಗ್ನಲ್ ಮಾಡಿ ನಿಲ್ಲಿಸುತ್ತಿದ್ದರು. ಆ ಸಂದರ್ಭ ಸ್ಕೂಟರ್ ಸವಾರ ಕೆ. ರಾಜೇಂದ್ರ ಎಂಬಾತ ಯಾಕೆ ವಾಹನವನ್ನು ತಡೆದ್ರಿ. ನಾನು ಅಡ್ವೋಕೇಟ್. ನೀನು ಎಲ್ಲಿಂದಲೋ ಬಂದು ಇಲ್ಲಿ ಕರ್ತವ್ಯ ನಿರ್ವಹಿಸೋ ಅವಶ್ಯಕತೆಯಿಲ್ಲ. ನಮ್ಮ ಜಿಲ್ಲೆಯನ್ನು ನಾವೇ ನೋಡಿಕೊಳ್ಳುತ್ತೇವೆ ಎಂದು ಏಕವಚನದಲ್ಲಿ ಬೈದಿದ್ದಾರೆ. ಅಲ್ಲದೆ ಹಲ್ಲೆ ಕೂಡ ಮಾಡಿದ್ದಾರೆ. ಈ ಬಗ್ಗೆ ದುಂಡಪ್ಪ ಅವರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಕಾಸರಗೋಡು: ರಾಜಾಪುರ ಎಣ್ಣಪ್ಪಾರದ ವಿದ್ಯಾರ್ಥಿನಿ ಎಂ. ಸಿ ರೇಷ್ಮಾ (17) ಎಂಬಾಕೆಯನ್ನು ಕೊಲೆಗೈದು ನದಿಗೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಹದಿನೈದು ವರ್ಷಗಳ ಬಳಿಕ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಾಣತ್ತೂರಿನ ಬಿಜು ಪೌಲೋಸ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಈತನನ್ನು ಬಂಧಿಸಲಾಗಿದೆ. ಕಾಞಾಂಗಾಡ್ನ ಟಿ.ಟಿ.ಸಿ ತರಬೇತಿ ಕೇಂದ್ರಕ್ಕೆ ತೆರಳುತ್ತಿದ್ದ ರೇಷ್ಮಾ, 2010 ರ ಜೂನ್ 6 ರಂದು ನಾಪತ್ತೆಯಾಗಿದ್ದಳು. ಈ ಬಗ್ಗೆ ಮನೆಯವರು ಅಂಬಲತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗಲಿಲ್ಲ. ಈ ಹಿನ್ನಲೆಯಲ್ಲಿ ಮನೆಯವರು ಹೈಕೋರ್ಟಿಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ಹೈಕೋರ್ಟ್ ತನಿಖೆಯನ್ನು ಕ್ರೈಂ ಬ್ರಾಂಚ್ ಗೆ ಒಪ್ಪಿಸಿ ಆದೇಶ ನೀಡಿತ್ತು. ಕ್ರೈಂ ಬ್ರಾಂಚ್ ಪೊಲೀಸರು ಬಿಜು ಪೌಲೋಸ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನು ರೇಷ್ಮಾಳನ್ನು ಕೊಲೆಗೈದು ನದಿಗೆ ಎಸೆದಿರುವುದಾಗಿ ತಿಳಿಸಿದ್ದನು. ಈ ಹಿನ್ನಲೆಯಲ್ಲಿ ಹೊಳೆಯಲ್ಲಿ ಶೋಧ ನಡೆಸಿದರೂ ಮೃತದೇಹ ಪತ್ತೆಯಾಗಲಿಲ್ಲ. ಈ ನಡುವೆ ಹೊಳೆಯಿಂದ…
ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆ ಹಾಸನ ಜಿಲ್ಲೆಯಲ್ಲಿ ಓಡಾಡುವ ಪ್ರಮುಖ ರೈಲುಗಳ ಸಂಚಾರವನ್ನು ರದ್ದು ಮಾಡಿ ರೈಲ್ವೆ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರ ಸಂಚರಿಸುವ ಯಶವಂತಪುರ-ಮಂಗಳೂರು ಎಕ್ಸ್ಪ್ರೆಸ್ ಸಂಚಾರವನ್ನು (ರೈಲು ಸಂಖ್ಯೆ 16539) ರದ್ದು ಮಾಡಲಾಗಿದೆ. ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರ ಮಂಗಳೂರು-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540), ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ಮತ್ತು ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ ಕೂಡ ತುರ್ತು ಕಾಮಗಾರಿಗಾಗಿ (ರೈಲು ಸಂಖ್ಯೆ 16576) ರದ್ದು ಮಾಡಲಾಗಿದೆ. ಜೂನ್ 2…
ಉಡುಪಿ: ಶೌಚಾಲಯಕ್ಕೆ ಹೋಗಬೇಕೆಂದು ಕೇಳಿ ಮನೆಯೊಳಗೆ ನುಗ್ಗಿದ ಅಪರಿಚಿತ ಬುರ್ಖಾಧಾರಿ ಮಹಿಳೆಯೊಬ್ಬರು ಮಗುವಿನ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿಯ ಬೆಳಪು ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ನಡೆದಿದೆ. ಮಗುವಿನ ತಾಯಿಯ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತವೊಂದು ತಪ್ಪಿದೆ. ತಾಯಿ ಮಗುವನ್ನು ಬಚಾವ್ ಮಾಡಲು ಓಡಿದಾಗ ಅವರಿಗೆ ಚೂರಿ ಇರಿದು ಮಹಿಳೆಯರು ಎಸ್ಕೇಪ್ ಆಗಿದ್ದಾರೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು ಉಡುಪಿಯ ಜನತೆ ಘಟನೆಯಿಂದ ಆತಂಕಕ್ಕೊಳಗಾಗಿದ್ದಾರೆ. ಮೊಹಮ್ಮದ್ ಅಲಿ ಎಂಬವರ ಮನೆಗೆ ಬುರ್ಖಾಧಾರಿ ಮಹಿಳೆಯರು ಟಾಯ್ಲೆಟ್ ಗೆ ಹೋಗಬೇಕು ಎಂದು ಕೇಳಿ ಮನೆಯೊಳಗೆ ನುಗ್ಗಿ ತೊಟ್ಟಿಲಲ್ಲಿದ್ದ ಮಗುವನ್ನು ಎತ್ತಿಕೊಂಡು ಹೋಗಲು ಯತ್ನಿಸಿದ್ದಾರೆ. ಆಗ ಮಗುವಿನ ತಾಯಿ ತಾಬುರಿಸ್ ತಡೆದು ಬೊಬ್ಬೆ ಇಟ್ಟಿದ್ದಾರೆ. ಆಗ ಚೂರಿ ಇರಿದು ಮಹಿಳೆಯರು ಪರಾರಿಯಾಗಿದ್ದಾರೆ. ಅನುಮಾನಸ್ಪದ ರೀತಿಯಲ್ಲಿ ನಡೆದಾಡುವ ಈ ಮಹಿಳೆಯರು ಕಂಡುಬಂದಲ್ಲಿ ತಕ್ಷಣ ಶಿರ್ವ ಠಾಣೆ 9480805450ಗೆ ತಿಳಿಸಲು ಮನವಿ ಮಾಡಲಾಗಿದೆ.
ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಆಫ್ರಿಕಾ ಪ್ರಜೆಯ ಬಳಿಯಿದ್ದ ಸುಮಾರು ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದು ಆಫ್ರಿಕಾ ಪ್ರಜೆಯನ್ನು ಇದೀಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರು ಹೊರವಲಯದ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ಮನೆ ಮಾಡಿಕೊಂಡು ಡ್ರಗ್ ಡೀಲ್ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್ ಡೇನಿಯಲ್ ಎಂಬುವವನ್ನು ಬಂಧಿಸಿ ಬರೋಬ್ಬರಿ ನಾಲ್ಕು ಕೋಟಿ ರೂ. ಮೌಲ್ಯದ 2.5 ಕೆಜಿ ಎಂಡಿಎಂಎ ಕ್ರಿಸ್ಟೆಲ್ ಸೀಜ್ ಮಾಡಿದ್ದಾರೆ. ಆರೋಪಿಯು 2023 ರ ಡಿಸೆಂಬರ್ನಲ್ಲಿ ವ್ಯಾಪಾರ ವೀಸಾದ ಮೇಲೆ ಬೆಂಗಳೂರಿಗೆ ಆಗಮಿಸಿ, ಸೋಲದೇವನಹಳ್ಳಿಯಲ್ಲಿ ತನ್ನ ಸ್ನೇಹಿತನೊಂದಿಗೆ ಬಾಡಿಗೆ ಫ್ಲಾಟ್ನಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ ಪೊಲೀಸರು 1.48 ಕೆಜಿ ಬಿಳಿ ಬಣ್ಣದ ಎಂಡಿಎಂಎ ಡ್ರಗ್ಸ್ ಮತ್ತು 1.1 ಕೆಜಿ ಕಂದು ಬಣ್ಣದ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 4…
ಮಂಗಳೂರು : ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸ ಕೈಗೊಂಡಿದ್ದು, ಮಂಗಳೂರಿನ ಉರ್ವದಲ್ಲಿ ನೂತನವಾಗಿ ನಿರ್ಮಿಸಿರುವ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಶುಕ್ರವಾರ ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಂಗಳೂರಿನ ಉರ್ವದಲ್ಲಿ ನೂತನವಾಗಿ ನಿರ್ಮಿಸಿರುವ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಶುಕ್ರವಾರ ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದೆ.ಕರಾವಳಿ ಭಾಗದ ಯುವಜನರು ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಂಡು, ರಾಷ್ಟ್ರೀಯ – ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಈ ಕ್ರೀಡಾಂಗಣ ನೆರವಾಗಲಿದೆ ಎನ್ನುವ ನಂಬಿಕೆ ನನ್ನದು ಎಂದು ತಿಳಿಸಿದ್ದಾರೆ.
ಬಂಟ್ವಾಳ : ನಾಲ್ಕು ಮಂದಿಯ ತಂಡವೊಂದು ಯುವಕನೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ಗುರುತಿಸಲಾಗಿದೆ. ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ
ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಮನೋಹರ ಪಿ.ಸಿ ರವರು ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಮುಂಬಡ್ತಿಗೊಂದು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ. ಮನೋಹರ ಪಿ ಸಿ ರವರು ಮೂಲತಃ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ನಿವಾಸಿಯಾಗಿದ್ದು, ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಮುಂಬಡ್ತಿಗೊಂಡು ಪುಂಜಾಲಕಟ್ಟೆ ಪೊಲೀಸ್ ಠಾಣೆಯಿಂದ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ. ಈ ಹಿಂದೆ ಇವರು ಉಪ್ಪಿನಂಗಡಿ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಹಲವು ಪ್ರಮುಖ ಅಪರಾಧ ಪತ್ತೆ ಕಾರ್ಯದಲ್ಲಿ ಅಧಿಕಾರಿಗಳೊಂದಿಗೆ ಸಹಕರಿಸಿದ್ದರು
ತಾಯಿಯ ಬಳಿಯಿದ್ದ ಚಿನ್ನಾಭರಣ ಮತ್ತು 2 ಲಕ್ಷಕ್ಕೂ ಅಧಿಕ ಹಣವನ್ನು ತಂದು, ಸ್ವಂತ ಬ್ಯೂಟಿಷಿಯನ್ ಆರಂಭಿಸಲು ಬೆಂಗಳೂರಿಗೆ ಬಂದಂತಹ ಮಹಿಳೆಯ ಬಳಿಯಿದ್ದ ಹಣ ಚಿನ್ನಾಭರಣ ದರೋಡೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ನೆಲಮಂಗಲ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಹಣ ಮತ್ತು ಚಿನ್ನಾಭರಣ ದರೋಡೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನೆಲಮಂಗಲ ಗ್ರಾಮಂತರ ಠಾಣೆ ಎಚ್ ಸಿ ಗಿರಿಜೇಶ್ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಗೆ ಸಿಂಚನ ಎನ್ನುವವರು ನೀಡಿದ್ದಾರೆ. ಬೆಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡಿಕೊಂಡಿರುವ ಸಿಂಚನ ಮೂಲತಹ ಶಿವಮೊಗ್ಗ ನಿವಾಸಿಯಾಗಿದ್ದಾರೆ. ಸ್ವಂತ ಬ್ಯೂಟಿ ಪಾರ್ಲರ್ ಶಾಪ್ ಆರಂಭಿಸಲು ಸಿಂಚನ ನಿರ್ಧರಿಸಿದ್ದರು. ಶಿವಮೊಗ್ಗದಲ್ಲಿ ತಾಯಿಯ ಬಳಿ ಚುನಾವಣೆ ಹಾಗೂ 2,50,000 ಪಡೆದು ಬೆಂಗಳೂರಿಗೆ ಬಂದಿದ್ದರು. 8ನೇ ಮೈಲಿಬಳಿ ಬಸ್ ಇಳಿದು ಹೋಗುತ್ತಿದ್ದ ವೇಳೆ, ಜಿಎಪ್ ನಲ್ಲಿ ಬಂದಿದ್ದೆ ಹೆಡ್ ಕಾನ್ಸ್ಟೇಬಲ್ ಗಿರಿಜೇಶ್ ಡ್ರಾಪ್ ನೀಡುವುದಾಗಿ ಮಹಿಳೆಯನ್ನು ಹತ್ತಿಸಿಕೊಂಡಿದ್ದಾನೆ. ಈ ವೇಳೆ…