ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ (KGF) ನಗರದಲ್ಲಿ ಸಿನಿಮೀಯ ಶೈಲಿಯ ಪೊಲೀಸ್ ಕಾರ್ಯಾಚರಣೆಯೊಂದು ನಡೆದಿದೆ. ಮಗಳ ಮದುವೆ ಖರ್ಚಿಗಾಗಿ ಉದ್ಯಮಿಯೊಬ್ಬರಿಗೆ ಹೆದರಿಸಿ, ಬೆದರಿಕೆ ಹಾಕಿ ಹಪ್ತಾ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ, ಈಗಾಗಲೇ ಗಡಿಪಾರಾಗಿದ್ದ ರೌಡಿಶೀಟರ್ನನ್ನು ಪೊಲೀಸರು ಮದುವೆ ಮಂಟಪದಿಂದಲೇ ವಶಕ್ಕೆ ಪಡೆದಿದ್ದಾರೆ. ಕೆಜಿಎಫ್ ನಗರದ ಸುಸೈಪಾಳ್ಯಂ ಏರಿಯಾದ ನಿವಾಸಿ, ಕುಖ್ಯಾತ ರೌಡಿಶೀಟರ್ ಸ್ಟಾನ್ಲಿ ಬಂಧಿತ ಆರೋಪಿಯಾಗಿದ್ದಾನೆ. ಚರ್ಚ್ನಲ್ಲಿ ಮಗಳ ಮದುವೆ ಸಂಭ್ರಮದಲ್ಲಿದ್ದ ರೌಡಿಯನ್ನು ಪೊಲೀಸರು ಏಕಾಏಕಿ ಕಾರ್ಯಾಚರಣೆ ನಡೆಸಿ ಹೊತ್ತೊಯ್ದಿರುವ ದೃಶ್ಯ ಈಗ ವೈರಲ್ ಆಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮಗಳ ಮದುವೆಗೆ ಪೆಂಡಾಲ್ ಹಾಗೂ ಡೆಕೋರೇಷನ್ ಕೆಲಸ ಮಾಡಿಕೊಡುತ್ತಿದ್ದ ಅಂಗಡಿ ಮಾಲೀಕ ಮೊಹಮ್ಮದ್ ಸಕ್ಲೇನ್ ಎಂಬುವರಿಗೆ ರೌಡಿಶೀಟರ್ ಸ್ಟಾನ್ಲಿ ಭೀತಿ ಹುಟ್ಟಿಸಿದ್ದ. ತನಗೆ ಹೆದರಿಸಿ, ಬೆದರಿಕೆ ಹಾಕಿ ತನ್ನ ಮಗಳ ಮದುವೆಗೆ ಹಣ ನೀಡುವಂತೆ ಪೀಡಿಸುತ್ತಿದ್ದಾನೆ ಎಂದು ಸಂತ್ರಸ್ತ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದರು. ಈಗಾಗಲೇ ನಗರದಿಂದ ಗಡಿಪಾರಾಗಿದ್ದರೂ ಕಾನೂನು ಉಲ್ಲಂಘಿಸಿ ನಗರದೊಳಗೆ ಪ್ರವೇಶಿಸಿದ್ದಲ್ಲದೆ, ಸಾರ್ವಜನಿಕರಿಗೆ ಹಪ್ತಾ ವಸೂಲಿಗಾಗಿ ಕಿರುಕುಳ…
Author: main-admin
ನವದೆಹಲಿ: ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಮತ್ತು ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಕರಾಳ ಮಿಷನ್ ಕೊನೆಗೂ ವಿಫಲಗೊಂಡಿದೆ. ಆದರೆ, ಆತನ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯಲ್ಲ, ಬದಲಿಗೆ ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು. ಮಿಷನ್ ಬಿಟ್ಟು ಕೂದಲು ಕಸಿಗೆ ಮುಂದಾದ ಉಗ್ರ ಉಸ್ಮಾನ್ ಜಟ್ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಕ್ಕೆ ಸ್ಲೀಪರ್ ಸೆಲ್ ಸ್ಥಾಪಿಸುವ ದೊಡ್ಡ ಜವಾಬ್ದಾರಿಯೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಲಷ್ಕರ್ ಉಗ್ರ ಉಸ್ಮಾನ್ ಜಟ್ ಅಲಿಯಾಸ್ ಚೈನೀಸ್ ಯಶಸ್ವಿಯಾಗಿ ನುಸುಳಿದ್ದ. ಭಾರತದ ದೈನಂದಿನ ಶಾಂತಿಯುತ ಜೀವನವನ್ನು ಕಂಡ ತಕ್ಷಣ ಆತನ ಉತ್ಸಾಹ ಕುಸಿದುಹೋಗಿತ್ತು. ಇದೇ ಸಮಯದಲ್ಲಿ ಆತನಿಗೆ ತನ್ನ ತಲೆಯ ಕೂದಲು ಉದುರುತ್ತಿರುವುದು ದೊಡ್ಡ ಚಿಂತೆಯಾಗಿ ಕಾಡಲಾರಂಭಿಸಿತು. ಕೂದಲು ಉದುರುವಿಕೆಯಿಂದ ತನ್ನ ವೈಯಕ್ತಿಕ ಆತ್ಮವಿಶ್ವಾಸ ಮತ್ತು ಸ್ವಾಭಿಮಾನಕ್ಕೆ ತೀವ್ರ ಹಾನಿಯಾಗಿದೆ ಎಂದು ಒಪ್ಪಿಕೊಂಡ ಆತ, ತನಗೆ ಒಪ್ಪಿಸಿದ್ದ ದೇಶದ್ರೋಹದ ಮಹಾ ಮಿಷನ್ ಅನ್ನೇ ಬದಿಗಿಟ್ಟು,…
ಮಂಗಳೂರು : ನಗರದ ದೆರೆಬೈಲ್ ಗ್ರಾಮದ ಕೊಂಚಾಡಿ ಜಂಕ್ಷನ್ನಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿಯ ಮೇಲೆ ಮೂವರು ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ಬೈದು, ತಳ್ಳಾಡಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸ್ ಸಿಬ್ಬಂದಿಯ ಎಡಗೈನ ಮಣಿಗಂಟು ಮುರಿತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಪ್ರಸಾದ್, ಉದಯ ಮತ್ತು ಪ್ರಶಾಂತ್ ಎಂಬ ಮೂವರು ಆರೋಪಿಗಳ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ. ಮೇ 17 ರಂದು ರಾತ್ರಿ ಕೊಂಚಾಡಿ ಜಂಕ್ಷನ್ನಲ್ಲಿರುವ ಬಾರ್ ಮತ್ತು ರೆಸ್ಟೊರೆಂಟ್ನಲ್ಲಿ ಗಲಾಟೆ ನಡೆಯುತ್ತಿರುವ ಬಗ್ಗೆ ಹೊಯ್ಸಳ ನಿಯಂತ್ರಣ ಕೊಠಡಿಗೆ ದೂರು ಕರೆ ಬಂದಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಹೊಯ್ಸಳ ಸಿಬ್ಬಂದಿ ಸಿಪಿಸಿ ಅಪ್ಪಣ್ಣ ಶೇಡಬಾಳ ಹಾಗೂ ಎಹೆಚ್ಸಿ ಭೀಮಾಶಂಕರ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಬಾರ್ನಿಂದ ಹೊರಬಂದಿದ್ದ ಮೂವರು ಆರೋಪಿಗಳನ್ನು ಸೆಕ್ಯೂರಿಟಿ ಸಿಬ್ಬಂದಿ ಗುರುತಿಸಿಕೊಟ್ಟಿದ್ದಾರೆ. ಪೊಲೀಸರು ಅವರನ್ನು ವಿಚಾರಿಸಲು ಹೋದಾಗ ಉಡಾಫೆ ಉತ್ತರ ನೀಡಿದ್ದಾರೆ.
ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನದ ಸರಣಿಯಲ್ಲಿ ಭಾಗಿಯಾಗಿದ್ದಾನೆಂದು ಶಂಕಿಸಲಾಗಿರುವ ಕೇರಳದ ಕುಖ್ಯಾತ ಶಂಕಿತನ ಬಗ್ಗೆ ಮಾಹಿತಿ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.ಶಂಕಿತನನ್ನು ಕೇರಳದ ಕಣ್ಣೂರಿನ ತಳಿಪರಂಬು ನಿವಾಸಿ ತಂಗಚ್ಚ, ಅಲಿಯಾಸ್ ಮ್ಯಾಧ್ಯೂ ಅಲಿಯಾಸ್ ಬಶೀರ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಶಂಕಿತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾರಿಯಲ್ಲಿದೆ.ಕಳೆದ 48 ಗಂಟೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದರಿಂದ, ಪೊಲೀಸರು ಆತನ ಕೈವಾಡದ ಬಗ್ಗೆ ಬಲವಾಗಿ ಅನುಮಾನ ವ್ಯಕ್ತಪಡಿಸಿದ್ದು, ಆತನ ಚಲನವಲನಗಳನ್ನು ಗಮನಿಸುತ್ತಿದ್ದು, ಶಂಕಿತನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಈ ಕೆಳಗಿನ ಸಂಖ್ಯೆಗಳಿಗೆ ತಕ್ಷಣ ಸಂಪರ್ಕಿಸಲು ಪೊಲೀಸರು ವಿನಂತಿಸಿದ್ದಾರೆ:ಉಪ್ಪಿನಂಗಡಿ ಪೊಲೀಸ್ ಠಾಣೆ: 08251-251055, 9480805362ಬೆಳ್ತಂಗಡಿ ಪೊಲೀಸ್ ಠಾಣೆ: 08256-232093, 9480805370ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು: 08251-230555, 9480805361ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ: 9480805300 / 0824…
ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೆಲ್ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ ಸರಿಯಾಗಿ ಸ್ಪಂದಿಸದ ಕಾರಣ ಹೋಟೆಲ್ ಮ್ಯಾನೇಜರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ನಡೆದಿದ್ದೇನು?ಕಳೆದ ಏಪ್ರಿಲ್ 27ರಂದು ರಾತ್ರಿ ಆರೋಪಿ ಅರ್ಮಾನ್ ಮುತಾಹರ್ ಯುವತಿಯೊಬ್ಬಳ ಜೊತೆ ಬಂದು ಜಯಮಹಲ್ ಪ್ಯಾಲೇಸ್ ಹೋಟೆಲ್ನಲ್ಲಿ ರೂಂ ಒಂದನ್ನು ಬುಕ್ ಮಾಡಿದ್ದ. ಆತನೊಂದಿಗೆ ಓರ್ವ ಯುವತಿಯೂ ಅದೇ ರೂಮ್ನಲ್ಲಿ ತಂಗಿದ್ದಳು ಎಂದು ಲಾಡ್ಜ್ನ ಮ್ಯಾನೇಜರ್ ತಿಳಿಸಿದ್ದಾರೆ. ಗುರುತಿನ ಚೀಟಿಗಾಗಿ ತನ್ನ ಪಾಸ್ಪೋರ್ಟ್ ನೀಡಿದ್ದ ಆತ, ಮರುದಿನ (ಏಪ್ರಿಲ್ 28) ಬೆಳಗ್ಗೆ ಕೊಠಡಿಯಿಂದ ಚೆಕ್-ಔಟ್ ಆಗಿದ್ದ.“ಬುಲೆಟ್ ಇಟ್ಟಿದ್ದೀನಿ, ಎತ್ತಿಡಿ” ಎಂದು ಕರೆ ಮಾಡಿದ ಆರೋಪಿಹೋಟೆಲ್ನಿಂದ ಹೋದ ಸ್ವಲ್ಪ ಹೊತ್ತಿನ ಬಳಿಕ ರಿಸೆಪ್ಷನ್ಗೆ…
ಬೆಳ್ತಂಗಡಿ : ರಾತ್ರೋರಾತ್ರಿ ಸುಮಾರು ಹತ್ತು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ಮೇ 18 ರಂದು ರಾತ್ರಿ ನಡೆದಿದೆ.ಕೋರ್ಟ್ ರಸ್ತೆಯ ಧರ್ಮಶ್ರೀ ಬಿಲ್ಡಿಂಗ್ ನ ಸಮೃದ್ಧಿ ಎಂಟರ್ಪ್ರೈಸಸ್ ನಿಂದ ಸುಮಾರು 1.50 ಲಕ್ಷ ನಗದು ಹಾಗೂ ಸಿಸಿ ಕ್ಯಾಮೆರಾ ವನ್ನು ಹಾನಿಗೊಳಿಸಿ ಮೆಮೊರಿ ಕಾರ್ಡ್ ನ್ನು ಪಡೆದು ಪರಾರಿಯಾಗಿದ್ದಾರೆ. ಹಾಗೂ ಅದೇ ಕಟ್ಟಡದ ಮಹಮ್ಮದ್ ಹನೀಫ್ ರವರ ಟಿ.ಎಚ್ ರಿಯಲ್ ಎಸ್ಟೇಟ್ ಕಚೇರಿ, ಕಟ್ಟಡ ಮಾಲಕರ ಕಚೇರಿ ಸೇರಿದಂತೆ ವಕೀಲರುಗಳಾದ ರಾಧಾಕೃಷ್ಣ, ಉಷಾ ಎನ್.ಜಿ, ಯತೀಶ್ ಶೆಟ್ಟಿ ಪಿ ಕಚೇರಿಗಳಿಗೆ ನುಗ್ಗಿದ್ದಾರೆ.ಮೂರು ಮಾರ್ಗದ ಬಳಿ ಇರುವ ಮಾತೃಶ್ರೀ ಹೋಟೆಲ್ ನಿಂದ ಡಬ್ಬಿಯಿಂದ ರೂ.5000 ಹಾಗೂ ಡ್ರಾವರ್ ನಿಂದ 2000ಸಾವಿರ, ಶಬರಿ ಎಂಟರ್ಪ್ರೈಸಸ್ ಸುಮಾರು 2ಸಾವಿರ, ಜಯರಾಮ ಮಣಿಯಾಣಿ ವಕೀಲರ ಕಚೇರಿ, ಮೆ। ಹಿಮಾಲಯ ಫೈನಾನ್ಸ್ ಮತ್ತು ಇನ್ವೆಸ್ಟೆಂಟ್, ಜಿತೇಶ್ ಕೆ ವಕೀಲರ ಕಚೇರಿಗೆ ನುಗ್ಗಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಕಾಸರಗೋಡು: ಬದಿಯಡ್ಕ ಸಮೀಪದ ಮಾರ್ಪನಡ್ಕದಲ್ಲಿ ನಡೆದ ಬ್ಯಾಂಕ್ ಕಾವಲುಗಾರನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಬ್ಡಾಜೆಯ ಕಿರಣ್ (30) ಮತ್ತು ಕರುವತ್ತಡ್ಕದ ಅಖಿಲೇಶ್ (25) ಎಂದು ಗುರುತಿಸಲಾಗಿದೆ.ಮಾರ್ಪನಡ್ಕ ಬೆದ್ರಕೂಡ್ಲುವಿನ ನಿವಾಸಿಯಾಗಿದ್ದ ಸುರೇಶ್ (42) ಅವರು ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಕಾವಲುಗಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಬ್ಯಾಂಕ್ ಆವರಣದಲ್ಲೇ ನಡೆದ ಕ್ರಿಕೆಟ್ ಪಂದ್ಯಾಟದ ವಿಚಾರಕ್ಕೆ ಸಂಬಂಧಿಸಿದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದು ಹಲ್ಲೆಗೆ ತಿರುಗಿದೆ ಎನ್ನಲಾಗಿದೆ.ಘಟನೆಯ ವೇಳೆ ಆರೋಪಿಗಳ ತಂಡ ಸುರೇಶ್ ಅವರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದು, ಬಳಿಕ ಅವರು ಮೃತಪಟ್ಟಿದ್ದರು. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬದಿಯಡ್ಕ ಪೊಲೀಸರು ತಕ್ಷಣ ತನಿಖೆ ಆರಂಭಿಸಿ, ಕೃತ್ಯ ನಡೆದ 24 ಗಂಟೆಯೊಳಗೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಲಾರ: ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿಯನ್ನು ನುಂಗಿದ ಎರಡು ವರ್ಷದ ಮಗು, ಅದು ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಮಾಲೂರು ಪಟ್ಟಣದ ಗಾಂಧಿ ಸರ್ಕಲ್ ಬಳಿ ಸೋಮವಾರ ನಡೆದಿದೆ.ಮಾಲೂರು ನಿವಾಸಿಗಳಾದ ರವಿ ಹಾಗೂ ಮಾಲಾ ದಂಪತಿಯ ಎರಡು ವರ್ಷದ ಪುತ್ರ ವಿಜಯೇಂದ್ರ ಮೃತಪಟ್ಟ ದುರ್ದೈವಿ.ಮಗು ವಿಜಯೇಂದ್ರ ಮನೆಯಲ್ಲಿ ಎಂದಿನಂತೆ ಆಟವಾಡುತ್ತಿದ್ದಾಗ ಅಲ್ಲಿದ್ದ ಬೆಟ್ಟದ ನೆಲ್ಲಿಕಾಯಿಯನ್ನು ಬಾಯಿಗೆ ಹಾಕಿಕೊಂಡಿದ್ದಾನೆ. ಈ ವೇಳೆ ನೆಲ್ಲಿಕಾಯಿ ಆಕಸ್ಮಿಕವಾಗಿ ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಗಾಬರಿಗೊಂಡ ಪೋಷಕರು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ, ಅಷ್ಟರಲ್ಲೇ ಗಂಟಲಿನಲ್ಲಿ ಸಿಲುಕಿದ್ದ ನೆಲ್ಲಿಕಾಯಿಯನ್ನು ಹೊರತೆಗೆಯಲಾಗದೆ ಮಗು ಉಸಿರುಗಟ್ಟಿ ಕೊನೆಯುಸಿರೆಳೆದಿದೆ. ಕಣ್ಣೆದುರೇ ಆಡುತ್ತಿದ್ದ ಪುಟ್ಟ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ವಿಟ್ಲ: ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಘಟನೆ ನಡೆದಿದೆ. ಕಬಕ ನಿವಾಸಿ, ಸೋಫಾ ಹಾಗೂ ವಾಹನಗಳ ಕುಶನ್ ಕೆಲಸ ಮಾಡಿಕೊಂಡಿದ್ದ ಸಲೀಂ (52) ಮೃತಪಟ್ಟ ದುರ್ದೈವಿ. ಸಾಧು ಸ್ವಭಾವದ ಸಲೀಂ ಅವರು ಮಿತ್ತೂರು ದಾರುಲ್ ಇಸ್ಲಾಂ ಶಿಕ್ಷಣ ಸಂಸ್ಥೆಯ ವಾಹನದ ಕೆಲಸವನ್ನು ನೋಡಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.ಕಬಕ ಕಡೆಯಿಂದ ಮಿತ್ತೂರು ಕಡೆಗೆ ಮಿತಿಮೀರಿದ ವೇಗದಲ್ಲಿ ಬಂದ ಮಹಿಂದ್ರಾ ಪಿಕಪ್ ವಾಹನವು ಸಲೀಂ ಅವರ ಆಕ್ಟಿವಾ ಸ್ಕೂಟರ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಸಲೀಂ ಅವರು ಹೆಲ್ಮೆಟ್ ಧರಿಸಿದ್ದರೂ ಅವರ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಹಾಗೂ ದಾರಿಹೋಕರು ಸೇರಿ ಗಾಯಾಳುವನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸ್ಕೂಟರ್ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿದ ಮಹಿಂದ್ರಾ ಪಿಕಪ್…
ಪಾಟ್ನಾ: ಭಾನುವಾರ ಸಂಜೆ ಬಿಹಾರದ ಮುಜಫರ್ಪುರ ಬಳಿ ಮೂರು ಪ್ಯಾಸೆಂಜರ್ ರೈಲುಗಳನ್ನು ಗುರಿಯಾಗಿಸಿಕೊಂಡು ನಡೆದ ಸರಣಿ ಕಲ್ಲು ತೂರಾಟವು ಪ್ರಯಾಣಿಕರಲ್ಲಿ ಭೀತಿ ಮೂಡಿಸಿದ್ದು, ಈ ಪ್ರದೇಶದಲ್ಲಿ ರೈಲ್ವೆ ಭದ್ರತೆಯ ಬಗ್ಗೆ ಭಾರೀ ಕಳವಳವನ್ನು ಹುಟ್ಟುಹಾಕಿದೆ. ಭಾರತೀಯ ರೈಲ್ವೆಯ ಪ್ರೀಮಿಯಂ ಸೆಮಿ-ಹೈ-ಸ್ಪೀಡ್ ಸೇವೆಗಳಲ್ಲಿ ಒಂದಾದ ಪಾಟಲಿಪುತ್ರ-ಗೋರಖ್ಪುರ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಕಲ್ಲು ತೂರಾಟ ನಡೆದಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಈ ಘಟನೆಯ ಸಮಯದಲ್ಲಿ ರೈಲಿನ ಮೂರು ಬೋಗಿಗಳ ಕಿಟಕಿಗಳು ಛಿದ್ರಗೊಂಡಿವೆ. ಮುಜಫರ್ಪುರ ಜಂಕ್ಷನ್ ಮತ್ತು ರಾಮದಯಾಳು ನಗರ ನಿಲ್ದಾಣದ ನಡುವೆ ಈ ಘಟನೆಗಳು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಜೌಲಿಯಾ ಮತ್ತು ಖಬ್ರಾ ಬಳಿ ರೈಲನ್ನು ಟಾರ್ಗೆಟ್ ಮಾಡಲಾಗಿದ್ದು, ಅಲ್ಲಿ ಹಲವಾರು ಬೋಗಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಅಪಘಾತದಲ್ಲಿ 3 ಬೋಗಿಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ವಂದೇ ಭಾರತ್ ರೈಲಿನಲ್ಲಿ ನಡೆದ ಘಟನೆಯ ಸ್ವಲ್ಪ ಸಮಯದ ನಂತರ ಪಾಟ್ನಾ-ಜಯನಗರ ಇಂಟರ್ಸಿಟಿ ಎಕ್ಸ್ಪ್ರೆಸ್ ಮತ್ತು ರೈಲು…










