Author: main-admin

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ. ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿ ನಾಗರಾಜ ಹಾಗೂ ರೂಪಾ ದಂಪತಿಯ ಪುತ್ರಿಯರು ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವೆ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು, ಇಂದು ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇನ್ನೊಬ್ಬಳು ಅವಳ ಸಹೋದರಿಯಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ. ಇವರಿಬ್ಬರು ಇಂದು ಬೆಳಗ್ಗೆ ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ ಹತ್ತಿದ್ದು, ರೇಷ್ಮೆ ರೋಡ್ ಎಂಬಲ್ಲಿ ತಲುಪಿದಾಗ ಏಕಾಏಕಿ ಬಸ್ಸಿನ ಬಾಗಿಲಿನ ತೆರೆಯಲ್ಪಟ್ಟಿದೆ. ಈ ವೇಳೆ ಇವರಿಬ್ಬರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿರುವ ಅವರಿಬ್ಬರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾರ್ಥಕ್ ಎಂಬಾತ ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿರುವ ತನ್ನ ಗೆಳೆಯನನ್ನು ಭೇಟಿಯಾಗಲು ಬಂದಿದ್ದಾನೆ. ಕಟ್ಟಡದ ಭದ್ರತಾ ಸಿಬ್ಬಂದಿಯ ಬಳಿ ಸಹಿ ಮಾಡಿ 12ನೇ ಮಹಡಿಗೆ ತೆರಳಿದ್ದಾನೆ ಎನ್ನಲಾಗಿದೆ. ಅಲ್ಲಿಗೆ ತೆರಳಿದ ನಂತರ ತನ್ನ ಮೊಬೈಲ್ ಫೋನ್ ಅನ್ನು ಕೆಳಗೆ ಇಟ್ಟು, ಮೇಲ್ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ

Read More

ಕಾರ್ಕಳ : ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಕಾರು ಹರಿಸಲು ಯತ್ನಿಸಿ ಕೊಲೆ ಯತ್ನ ನಡೆಸಿದ ಹಾಗೂ ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಡೂರು ನಿವಾಸಿ ಸುದರ್ಶನ ಶೆಟ್ಟಿ (29), ಕೃತವ್ಯ ಶೆಟ್ಟಿ (27), ಅರುಣ್ ಶೆಟ್ಟಿ (29), ತೇಜಸ್ (28) ಮತ್ತು ಪ್ರಜ್ವಲ್ ಶೆಟ್ಟಿ (29) ಬಂಧಿತರು. ಕಾರ್ಕಳದ ಹಂಚಿಕಟ್ಟೆ ಬಳಿ ತಪಾಸಣೆ ನಡೆಸುತ್ತಿದ್ದ ಪಿಎಸ್‌ಐ ಪ್ರಸನ್ನ ಎಂ.ಎಸ್. ಅವರ ತಂಡ ಕಪ್ಪು ಬಣ್ಣದ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿ ಪರಾರಿಯಾಗಿದ್ದರು. ಇದೇ ವಾಹನ ವನ್ನು ಶಿರ್ವ ಗ್ರಾಮದ ಪದವು ಬಳಿ ತಡೆದ ಪಿಎಸ್‌ಐ ಮಂಜುನಾಥ ಮರಬಾಡ ಅವರ ಮೇಲೂ ಚಾಲಕ ಕಾರು ಹತ್ತಿಸಲು ಯತ್ನಿಸಿದ್ದಾನೆ. ಅಂತಿಮವಾಗಿ ಶಿರ್ವ ಪಟ್ಟಣದಲ್ಲಿ ಪೊಲೀಸರು ಹರಸಾಹಸ ಪಟ್ಟು ವಾಹನವನ್ನು ತಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ವಿಚಾರಣೆ ನಡೆಸಿದಾಗ ಇವರು ದೊಡ್ಡ ಮಟ್ಟದ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿರುವುದು…

Read More

ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಈ ಪಾದಯಾತ್ರೆಯು ಕ್ರೈಸ್ತ ಧರ್ಮದ ‘ಪವಿತ್ರ ವಾರ’ಕ್ಕೆ ಭವ್ಯ ಚಾಲನೆ ನೀಡಿತು. ಸಾವಿರಾರು ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡ ಈ ಯಾತ್ರೆಯು ಕೇವಲ ಒಂದು ಸಂಪ್ರದಾಯವಾಗಿರದೆ, ವಿಶ್ವಶಾಂತಿಯ ಆಶಯದೊಂದಿಗೆ ನಡೆದ ಒಂದು ಶಕ್ತಿಯುತ ಪ್ರಾರ್ಥನಾ ಸಭೆಯಾಗಿತ್ತು. ಸಂಜೆ 5:00 ಗಂಟೆಗೆ ಪುಣ್ಯಕ್ಷೇತ್ರದ ಆವರಣದಿಂದ ಆರಂಭವಾದ ಈ ಯಾತ್ರೆಯಲ್ಲಿ ಸಾವಿರಾರು ಕ್ರೈಸ್ತ ಭಕ್ತಾದಿಗಳು ಪಾಲ್ಗೊಂಡು, ಸುಮಾರು ಎರಡು ಗಂಟೆಗಳ ಕಾಲ ಪ್ರಾರ್ಥನಾಪೂರ್ವಕವಾಗಿ ಸಾಗಿ ಮರೋಳಿಯ ಹೋಲಿ ಹಿಲ್ ತಲುಪಿದರು. ಈ ಭವ್ಯ ಮೆರವಣಿಗೆಯ ಉದ್ದಕ್ಕೂ ಭಕ್ತರು ಯೇಸುಕ್ರಿಸ್ತರ ಬಂಧನದಿಂದ ಮರಣದವರೆಗಿನ ಅಂತಿಮ ಕ್ಷಣಗಳನ್ನು ನೆನಪಿಸುವ ಶಿಲುಬೆಯ ಹಾದಿಯನ್ನು ಭಕ್ತಿಯಿಂದ ನೆರವೇರಿಸಿದರು. ಭಕ್ತಿ ಮತ್ತು ಏಕತೆಯ ಸಂಕೇತವಾಗಿ ಒಂದು ಬೃಹತ್ ಶಿಲುಬೆಯನ್ನು ಹೊತ್ತು ಸಾಗಿದ ಭಕ್ತರು, ಜಪಸರವನ್ನು ಪಠಿಸುತ್ತಾ ವಿಶೇಷವಾಗಿ ಮಧ್ಯಪ್ರಾಚ್ಯದ ಸಂಘರ್ಷದ ಪರಿಸ್ಥಿತಿಯಲ್ಲಿ ವಿಶ್ವಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಮಂಗಳೂರು ನಗರದ ಮುಖ್ಯ ರಸ್ತೆಯಲ್ಲಿ ಇಂತಹ ಸಾರ್ವಜನಿಕ ಪಾದಯಾತ್ರೆ ನಡೆದಿದ್ದು ಇದೇ ಮೊದಲು ಎಂದು…

Read More

ಬೆಳ್ತಂಗಡಿ: ಕಳೆದ ತಿಂಗಳಷ್ಟೇ ಹಸೆಮಣೆ ಏರಿದ್ದ ಯುವ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ಮೂಲದ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದ ಬಿ. ಸುದೀಪ್ ರೈ (36) ಎಂದು ಗುರುತಿಸಲಾಗಿದೆ.ಮಾರ್ಚ್ 17 ರಂದು ಸುದೀಪ್ ರೈ ಅವರು ಪತ್ನಿಯ ಮನೆಯಲ್ಲಿ ಆಹಾರದ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವರು, ಭಾನುವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.ಸುದೀಪ್ ರೈ ಅವರು ಪುತ್ತೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಕಳ ತಾಲೂಕಿನ ಕಾಜೆ ನಿವಾಸಿಯನ್ನ ಫೆಬ್ರವರಿ 17 ರಂದು ಕುಟುಂಬದವರಿಗೆ ತಿಳಿಸದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು ಎನ್ನಲಾಗಿದೆ.

Read More

ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನ ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. “ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು ಘಟನೆಗಳ ಸರಣಿಯನ್ನು ಮರುನಿರ್ಮಾಣ ಮಾಡಿದ್ದು, ಈ ವೇಳೆ ಪ್ರಕರಣದಲ್ಲಿ ಇನ್ನೂ ಕೆಲವು ವ್ಯಕ್ತಿಗಳು ಭಾಗಿಯಾಗಿರುವುದನ್ನು ಪತ್ತೆಹಚ್ಚಿವೆ. ಅಪರಾಧ ಎಸಗಲು ಅಥವಾ ಆರೋಪಿಗಳು ತಪ್ಪಿಸಿಕೊಳ್ಳಲು ಮತ್ತು ಅಡಗಿಕೊಳ್ಳಲು ಸಹಾಯ ಮಾಡಿದ ಶಂಕೆಯಿರುವ ವ್ಯಕ್ತಿಗಳನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ. ಅವರ ಪಾತ್ರ ದೃಢಪಟ್ಟಲ್ಲಿ, ಅವರನ್ನೂ ಸಹ ಬಂಧಿಸಲಾಗುವುದು” ಎಂದು ತಿಳಿಸಿದರು.”ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವವರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 249(a) ಅಡಿಯಲ್ಲಿ ಶಿಕ್ಷೆಗೆ ಅರ್ಹರಾಗಿರುತ್ತಾರೆ. ಈ ಹಿಂದಿನಂತೆಯೇ, ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ…

Read More

ಕಾರ್ಕಳ: ಜಾನುವಾರು ಕಳವು ಪ್ರಕರಣದಲ್ಲಿ ಸಂಘಟಿತ ಕೃತ್ಯ ಎಸಗಿರುವ ನಾಲ್ವರು ಆರೋಪಿಗಳ ವಿರುದ್ಧ ಕೋಕಾ ಕಾಯಿದೆ ಹಾಕಿ ಅವರನ್ನು ಮರು ಬಂಧನಕ್ಕೆ ಒಳ ಪಡಿಸಲಾಗಿದೆ. ಕಾರ್ಕಳದ ನಲ್ಲೂರು ಗ್ರಾಮದ ಯೂನಿಸ್ (31), ಮೂಡಬಿದಿರೆ ಪುತ್ತಿಗೆ ಗ್ರಾಮದ ಮಿಜಾರು ನಿವಾಸಿ ಇಕ್ಬಾಲ್ (29), ಕಲ್ಲಬೆಟ್ಟು ಗ್ರಾಮದ ನಾಸೀರ್ (28) ಮತ್ತು ಶೌಕತ್ ಅಲಿ (34) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು 2025ರ ಸಪ್ಟೆಂಬರ್ 29ರಂದು ತಡ ರಾತ್ರಿ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿಯ ಜಯಶ್ರೀ ಪೂಜಾರಿ ಎಂಬವರ ಮನೆಯ ಹಟ್ಟಿಗೆ ನುಗ್ಗಿ ಜಾನುವಾರುಗಳನ್ನು ಕಳ್ಳತನ ಮಾಡಲು ಹೋಗಿದ್ದು, ಆಗ ಎಚ್ಚರಗೊಂಡು ಬಂದ ಜಯಶ್ರೀ ಪೂಜಾರಿ ಅವರಿಗೆ ಆರೋಪಿಗಳು ತಲವಾರು ತೋರಿಸಿ ಬೆದರಿಸಿ ಹಟ್ಟಿಯಲ್ಲಿದ್ದ 35,000 ರೂಪಾಯಿ ಮೌಲ್ಯದ ಮೂರು ಜಾನುವಾರುಗಳನ್ನು ವಾಹನದಲ್ಲಿ ತುಂಬಿಸಿಕೊಂಡು ಹೋಗಿ ವಧೆ ಮಾಡಿರುವುದಾಗಿ ದೂರಲಾಗಿತ್ತು. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ…

Read More

ಉಡುಪಿ : ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯ ASI ಚಂದ್ರ ಶೆಟ್ಟಿ ಅವರು ತಮ್ಮ ಸೇವೆಗೆ ಈ ಗೌರವ ಪಡೆದಿದ್ದಾರೆ. ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ AHC ಸಂತೋಷ್ ಶೆಟ್ಟಿ ಅವರು ಕರಾವಳಿ ಕಾವಲು ವಿಭಾಗದಲ್ಲಿ ನೀಡಿದ ವಿಶಿಷ್ಠ ಸೇವೆಗಾಗಿ ಚಿನ್ನದ ಪದಕ ಪಡೆದಿದ್ದಾರೆ.ಇದೇ ರೀತಿ ನಕ್ಸಲ್ ನಿಗ್ರಹ ಪಡೆ, ಕಾರ್ಕಳದಲ್ಲಿ ಸೇವೆ ಸಲ್ಲಿಸುತ್ತಿರುವ RSI ಮಂಜುನಾಥ ದೇವರಮನೆ ಅವರು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೋರಿದ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದಕ ಪುರಸ್ಕೃತರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹಾಗೂ ಕರಾವಳಿ ಕಾವಲು ಪಡೆ ಮತ್ತು ನಕ್ಸಲ್ ನಿಗ್ರಹ ಪಡೆಯ ಪ್ರಭಾರ ಎಸ್ಪಿ ಹರಿರಾಮ್ ಶಂಕರ್ ಅವರು ಅಭಿನಂದಿಸಿದ್ದಾರೆ.

Read More

ಮಂಗಳೂರು: ಕೊಲೆ ಸೇರಿದಂತೆ ಹಲವು ಘೋರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎಂಟು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯ ಅಜ್ಜಾವರ ನಿವಾಸಿ ಎನ್.ಎಂ. ಅಝೀಝ್ ಎಂಬಾತನೇ ಪತ್ತೆಯಾದ ಆರೋಪಿ. ಈತ ಸದ್ಯ ಆಂಧ್ರಪ್ರದೇಶದ ಚಿತ್ತೂರು ಜೈಲಿನಲ್ಲಿರುವುದು ದೃಢಪಟ್ಟಿದೆ. ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಈತ ತಲೆಮರೆಸಿಕೊಂಡಿದ್ದನು. 2018ರಲ್ಲಿ ಕೇರಳ ಪೊಲೀಸರು ಈತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತರುತ್ತಿದ್ದ ಸಂದರ್ಭದಲ್ಲಿ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಈತ ಪರಾರಿಯಾಗಿದ್ದನು. ಪೊಲೀಸರಿಂದ ತಪ್ಪಿಸಿಕೊಂಡ ನಂತರ ಆರೋಪಿ ಅಝೀಝ್ ತನ್ನ ಗುರುತನ್ನೇ ಬದಲಿಸಿಕೊಂಡಿದ್ದನು. ಕಲಬುರಗಿ ಜಿಲ್ಲೆಯ ಜೇವರ್ಗಿ ನಿವಾಸಿ ‘ಬಸವರಾಜು’ ಎಂಬ ಹೆಸರಿನಲ್ಲಿ ನಕಲಿ ಗುರುತು ಸೃಷ್ಟಿಸಿಕೊಂಡು ಆಂಧ್ರಪ್ರದೇಶದಲ್ಲಿ ವಾಸವಿದ್ದನು. ಈತನ ಪತ್ತೆಗಾಗಿ ಪೊಲೀಸರು ಸತತ ಕಾರ್ಯಾಚರಣೆ ನಡೆಸುತ್ತಿದ್ದರು. ತನಿಖೆಯ ವೇಳೆ ಆರೋಪಿಯು ಸದ್ಯ…

Read More

ಮಂಗಳೂರು: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ದೈವ ನರ್ತಕ ರವೀಶ್ ಪಡುಮಲೆಯವರಿಗೆ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿಂದು ಜರುಗಿತು. ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕುಲಸಚಿವ ಪ್ರೊ.ದೇವೇಂದ್ರಪ್ಪ (ಪರೀಕ್ಷಾಂಗ )ಗಣೇಶ್ ಸಂಜೀವ (ಪ್ರಭಾರ), ಹಣಕಾಸು ಅಧಿಕಾರಿ ಡಾ.ವೈ.ಸಂಗಪ್ಪ ಮೊದಲಾದವರು ಉಪಸ್ಥಿತರಿದ್ದರು.

Read More