ಮಂಗಳೂರು: ಮಹಿಳೆಯೊಬ್ಬರಿಗೆ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕೋಟಿ ಕೋಟಿ ಹಣ ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಹಿಳೆಗೆ ಕರೆ ಮಾಡಿರುವ ವಂಚಕರು ಡಿಜಿಟಲ್ ಅರೆಸ್ಟ್ ಎಂದು ಹೇಳಿ ಹಂತ ಹಂತವಾಗಿ 3.15ಕೋಟಿ ಹಣವನ್ನು ದೋಚಿದ್ದಾರೆ. ಜೂನ್ 6ರಂದು ಬೆಳಿಗ್ಗೆ 10.25ರ ಸುಮಾರಿಗೆ ಮಹಿಳೆಗೆ ಕರೆ ಮಾಡಿರುವ ವಂಚಕರು, ತಾನು ಇನ್ಸ್ ಪೆಕ್ಟರ್ ಅನು ಶರ್ಮಾ ಎಂದು ಪರಿಚಯಿಸಿಕೊಂಡಿದ್ದಾರೆ. ನ್ಯಾಷನಲ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಮಹಿಳೆಯ ಗಂಡನಿಂದ ಹೊಸ ಸಿಮ್ ಖರೀದಿಸಲಾಗಿದ್ದು, ಆ ಸಿಮ್ ನಿಂದ ವಂಚನೆ ಕರೆಗಳು ಮತ್ತು ಲಿಂಕ್ ಗಳನ್ನು ಸಾರ್ವಜನಿಕರಿಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಕರೆಯನ್ನು ಸುಹಾಸ್ ಪೊಲೀಸ್ ಠಾನೆಗೆ ವರ್ಗಾಯಿಸಲಾಗಿದೆ ಎಂದು ಹೇಳಿ ಸಬ್ ಇನ್ಸ್ ಪೆಕ್ಟರ್ ಮೋಹನ್ ಕುಮಾರ್ ಎಂಬಾತ ಮಾತನಾಡುತ್ತಿದ್ದಾನೆ ಎಂದು ಹೇಳಿ ಕರೆ ಕಟ್ ಮಾಡದಂತೆ ಹೇಳಿದ್ದಾರೆ. ಬಳಿಕ ಪಬ್ಲಿಕ್ ಪ್ರಾಸಿಕ್ಯೂಟರ್ ದೀಪಕ್ ವೆಂಕಟರಮಣ ಎಂಬಾತನಿಗೆ ಕರೆ ವರ್ಗಾಯಿಸಿ, ಮಹಿಳೆ ಹಾಗೂ…
Author: main-admin
ಮಂಗಳೂರು: “ಧಾರ್ಮಿಕ ಸೇವಾ ಚಟುವಟಿಕೆಗಳ ಮೂಲಕ ಕರಾವಳಿಯಲ್ಲಿ ಸಂಚಲನ ಮೂಡಿಸಿರುವ ಹಿಂದೂ ಯುವ ಸೇನೆಯ ಪದವು ಶಾಖೆಯು ಕಳೆದ ಎರಡೂವರೆ ದಶಕಗಳ ಪೂರ್ವದಲ್ಲಿ ಮಂಗಳೂರಿನ ಕುಲಶೇಖರ ಪದವು ಮೇಗಿನ ಮನೆ ಪರಿಸರದಲ್ಲಿ ನಿರ್ಮಿಸಿದ್ದ ಶ್ರೀ ಶನೈಶ್ಚರ ಮಂದಿರವನ್ನು ದೇವಸ್ಥಾನ ಸ್ವರೂಪದಲ್ಲಿ ಪುನರ್ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ದೇವಸ್ಥಾನ ನಿರ್ಮಾಣ ಶಿಲಾನ್ಯಾಸ ನೆರವೇರಿಸಲಾಗಿದೆ. ಶ್ರೀ ದುರ್ಗಾ ದೇವಿ ಹಾಗೂ ಮಹಾಗಣಪತಿ ಗುಡಿ ಸಹಿತ ಶ್ರೀ ಶನಿ ದೇವರ ದೇವಸ್ಥಾನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ನವೆಂಬರ್ 2025ರಲ್ಲಿ ಪ್ರತಿಷ್ಠೆ ಬ್ರಹ್ಮಕಲಶ ನಡೆಸಲಾಗುವುದು“ ಎಂದು ಅಧ್ಯಕ್ಷ ಕದ್ರಿ ನವನೀತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಈಗಾಗಲೇ ಮಂದಿರದ ಸಮೀಪ 8 ಸೆಂಟ್ಸ್ ಸ್ಥಳವನ್ನು ಖರೀದಿ ಮಾಡಲಾಗಿದ್ದು ಇನ್ನೂ ಹೆಚ್ಚುವರಿ 10 ಸೆಂಟ್ಸ್ ಜಮೀನು ಖರೀದಿ ಮಾಡುವ ಯೋಜನೆ ಇದೆ. ಈ ಯೋಜನೆಗೆ ಒಟ್ಟು ಮೂರು ಕೋಟಿ ರೂಪಾಯಿ ವೆಚ್ಚ ತಗಲಲಿದೆ. ದೇವಸ್ಥಾನದ ನಿರ್ಮಾಣ ಕಾರ್ಯವು ಊರ ಪರವೂರ ಭಕ್ತರ ಸಹಾಯದಿಂದ ಭರದಿಂದ ಸಾಗುತ್ತಿದ್ದು ಮುಂದಿನ ಕೆಲಸ…
ಬೆಂಗಳೂರು : ಆನ್ಲೈನ್ ಬೆಟ್ಟಿಂಗ್ಗೆ ಬ್ರೇಕ್ ಹಾಕಲು ಇದೀಗ ರಾಜ್ಯ ಸರ್ಕಾರ ಹೊಸ ಕಾನೂನು ಸಿದ್ದಪಡಿಸಿಕೊಂಡಿದೆ. ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಈ ಒಂದು ಮಸೂದೆಯನ್ನು ಮಂಡನೆ ಮಾಡಲಿದೆ. ಕರ್ನಾಟಕ ಪೊಲೀಸ್ ತಿದ್ದುಪಡಿ-1965 ವಿಧೇಯಕ ಅಂಗಿಕಾರಕ್ಕೆ ಸರ್ಕಾರ ನಿರ್ಧರಿಸಿದ್ದು, ಹೊಸ ಕಾಯ್ದೆಯ ಆನ್ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಪ್ರಾಧಿಕಾರ ರಚನೆ ಮಾಡಲಿದೆ. ಅಲ್ಲದೇ ಅದೃಷ್ಟದ ಆಟ (ಲಕ್ ಗೇಮ್) ಗಳಿಗೂ ಕೂಡ ಬ್ರೇಕ್ ಬೀಳಲಿದೆ. ಪ್ರಾಧಿಕಾರದಿಂದ ದೃಢೀಕರಿಸಿದ ಕೇವಲ ಕೌಶಲ್ಯ ಆಟಗಳಿಗೆ ಮಾತ್ರ ಅನುಮತಿ ನೀಡಲಾಗಿರುತ್ತದೆ. ಆನ್ಲೈನ್ ಬೆಟ್ಟಿಂಗ್ ನಲ್ಲಿ ಭಾಗಿಯಾದವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ದಂಡ ಬೀಳುತ್ತದೆ. ಅಲ್ಲದೇ ಬೆಟ್ಟಿಂಗ್ ಪ್ರೋತ್ಸಾಹಿಸುವವರಿಗೆ ಆರು ತಿಂಗಳ ಶಿಕ್ಷೆ ಹಾಗೂ 10,000 ದಂಡ ಬೀಳಲಿದೆ ಎಂದು ಹೇಳಲಾಗಿದೆ. ಹೌದು ಆನ್ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ. ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಿರುವ ರಾಜ್ಯ ಸರ್ಕಾರ…
ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡುವುದಾಗಿ ಆಮಿಷವೊಡ್ಡಿ 289 ಮಂದಿಯಿಂದ ಕೋಟ್ಯಂತರ ರೂ. ವಂಚಿಸಿದ ಮುಂಬೈ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಂಬೈಯ ದಿಲ್ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಮತ್ತು ಸಾಹುಕಾರಿ ಕಿಶೋರ್ ಕುಮಾರ್ ಯಾನೆ ಅನಿಲ್ ಪಾಟೀಲ್ (34)ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಪೊಲೀಸರು ಮುಂಬೈ ಮೂಲದ ಮಸೀವುಲ್ಲಾ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಆತನೀಗ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. *ಪ್ರಕರಣದ ವಿವರ: ನಗರ ಬೆಂದೂರ್ ವೆಲ್ ಎಂಬಲ್ಲಿ ಕಚೇರಿಯೊಂದನ್ನು ತೆರೆದಿದ್ದ ಆರೋಪಿಗಳು ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿಸಿ ಬಳಿಕ 289 ಮಂದಿಯಿಂದ ಒಟ್ಟು 4.50 ಕೋಟಿ ರೂ. ಪಡೆದು ವೀಸಾ ಕೊಡದೆ ವಂಚಿಸಿದ್ದರು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಲಾಡ್ಜ್ ವೊಂದರಲ್ಲಿ ನಡೆದಿದೆ. ದಾವಣಗೆರೆ ಬಡಾವಣೆಯ ಠಾಣೆಯ ಪಿಎಸ್ ಐ ತುಮಕೂರಿನ ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 35 ವರ್ಷದ ನಾಗರಾಜು ಆತ್ಮಹತ್ಯೆಗೆ ಶರಣಾದ ಪಿಎಸ್ ಐ ಆಗಿದ್ದು, ಜುಲೈ 1ರಂದು ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿದ್ದರು. ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಿದ್ದು, ಸಿಬ್ಬಂದಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ : ಫರಂಗಿಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಫರಂಗಿಪೇಟೆ ನಿವಾಸಿ ಜಾಕೀರ್ ಯಾನೆ ಜಾಕೀರ್ ಹುಸೈನ್ ಎಂದು ತಿಳಿದು ಬಂದಿದೆ. ಅರುಣ ಚೌವ್ಹಾಣ ಅವರು ಫರಂಗಿಪೇಟೆ ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಜೂ. 28ರ ತಡರಾತ್ರಿ 11.30ರ ಸುಮಾರಿಗೆ ತೆರೆದಿದ್ದ ಅಂಗಡಿ, ಹೊಟೇಲ್ಗಳನ್ನು ಬಂದ್ ಮಾಡಿಸುತ್ತಿದ್ದ ಸಂದರ್ಭ ಆರೋಪಿಯು ಮದ್ಯ ಸೇವನೆ ಮಾಡುತ್ತಿರುವುದನ್ನು ಪ್ರಶ್ನಿಸಿದಾಗ ಹಲ್ಲೆ ನಡೆಸಿ ಸಿಬ್ಬಂದಿಯ ಸಮವಸ್ತ್ರವನ್ನು ಹರಿದು ಹಾಕಿದ್ದಾನೆ ಎಂದು ಪೊಲೀಸ್ ಸಿಬ್ಬಂದಿ ದೂರಿನಲ್ಲಿ ವಿವರಿಸಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಾಸರಗೋಡು: ಮನೆಯವರು ಮಲಗಿದ್ದ ಸಂದರ್ಭದಲ್ಲಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳನೋರ್ವ ಕಳವಿಗೆ ಯತ್ನಿಸಿದ ಘಟನೆ ಶನಿವಾರ ಮುಂಜಾನೆ ಉಪ್ಪಳ ಸಮೀಪದ ಜೋಡುಕಲ್ ಎಂಬಲ್ಲಿ ನಡೆದಿದ್ದು, ಗಂಟೆಗಳ ಅವಧಿಯಲ್ಲಿ ಕಳ್ಳನನ್ನು ಬಂಧಿಸುವಲ್ಲಿ ಮಂಜೇಶ್ವರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಜೋಡುಕಲ್ಲು ಶಾಂತಿಯೋಡಿನ ಕಲಂದರ್ ಶಾಫಿ (34) ಎಂದು ಗುರುತಿಸಲಾಗಿದೆ. ಬೇಕೂರು ಕನ್ನಾಟಿಪಾರೆಯ ಹರೀಶ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ ಮೂರು ಗಂಟೆ ಸುಮಾರಿಗೆ ಬಾಗಿಲು ಮುರಿದು ಒಳನುಗ್ಗಿದ್ದು, ಶಬ್ದ ಕೇಳಿ ಮನೆಯವರು ಎಚ್ಚೆತ್ತು ಬೊಬ್ಬೆ ಹಾಕಿದಾಗ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ. ಬಳಿಕ ಆರೋಪಿಯು ಆಟೋ ರಿಕ್ಷಾವೊಂದರಲ್ಲಿ ತೆರಳುವುದನ್ನು ಮನೆಯವರು ಗಮನಿಸಿದ್ದಾರೆ. ಮಂಜೇಶ್ವರ ಪೊಲೀಸರಿಗೆ ನೀಡಿದ ದೂರಿನಂತೆ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದು, ಪರಿಸರದ ಸಿಸಿ ಟಿವಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಯ ಗುರುತನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತನು 2021 ರಲ್ಲಿ ಐದು ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಸೊಸೈಟಿ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ 18 ಕೆ.ಜಿ 360.302 ಗ್ರಾಂ ಚಿನ್ನಾಭರಣ ಮತ್ತು ನಗದು (ಮೌಲ್ಯ ರೂ 13 ಕೋಟಿ 50 ಲಕ್ಷ) ಗಳನ್ನು ಬ್ಯಾಂಕ್ಗೆ ನೀಡುವಂತೆ ನ್ಯಾಯಾಲಯವು ಆದೇಶಿಸಿದೆ. ದಿನಾಂಕ: 17-01-2025 ರಂದು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಸೊಸೈಟಿ ಶಾಖೆಯಲ್ಲಿ ಡಕಾಯಿತಿ ಕೃತ್ಯ ನಡೆದ ಬಗ್ಗೆ ಸೊಸೈಟಿಯ ಮ್ಯಾನೇಜರ್ ಶ್ರೀಮತಿ ವಾಣಿ ಎಲ್ ರವರು ನೀಡಿದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೋ, ನಂಬ್ರ : 07/2025 ಕಲಂ: 126(2),127(7).309(2),309(4), 310(2).351(2),324(1), ಜೊತೆಗೆ 3(5) ಬಿ.ಎನ್.ಎಸ್-2023 ಮತ್ತು ಕಲಂ3(1),4.25 (1B)(b),27 Indian Arms Act 1959 ಪ್ರಕರಣ ದಾಖಲಾಗಿ ಆರೋಪಿಗಳಾದ ತಮಿಳುನಾಡು ರಾಜ್ಯದ ವಾಸಿಗಳಾದ ಮುರುಗಂಡಿ ತೇವರ್ @ ಕುಮಾರ್.. ಯೋಸ್ವಾ ರಾಜೇಂದ್ರನ್ @ ಜೋಶ್ವ ರಾಜೇಂದ್ರನ್ @ ಜೇಶ್ವ ರಾಜೇಂದ್ರನ್, ಕಣ್ಣನ್ ಮಣಿ. ಎಂ.ಷಣ್ಣುಗಸುಂದರಂ. ಹಾಗೂ ಸ್ಥಳಿಯ ನಿವಾಸಿಗಳಾದ ಶಶಿ ತೇವರ್ @…
ಮಂಗಳೂರು: ತನ್ನ ಪ್ರೇಯಸಿಯನ್ನು ಗರ್ಭಿಣಿ ಯಾಗಿಸಿ ಬಳಿಕ ಮದುವೆಗೆ ನಿರಾಕರಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ. ರಾವ್ ಎಂಬಾತನನ್ನು ಪೊಲೀಸರು ಮೈಸೂರು ಜಿಲ್ಲೆಯ ತಿ.ನರಸೀಪುರ ಎಂಬಲ್ಲಿಂದ ವಶಕ್ಕೆ ಪಡೆದಿದ್ದಾರೆ. ಕೃಷ್ಣ ಜೆ.ರಾವ್ ತನ್ನ ಪ್ರೌಢಶಾಲಾ ದಿನಗಳಿಂದಲೇ ಪರಿಚಯವಾಗಿದ್ದ ಸಹಪಾಠಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಬಳಿಕ ಯುವತಿಯನ್ನು ಮನೆಗೆ ಕರೆಸಿ ದೈಹಿಕ ಸಂಪರ್ಕ ಬೆಳೆಸಿದ್ದು, ಪರಿಣಾಮ ಯುವತಿ ಗರ್ಭಿಣಿಯಾಗಿದ್ದಳು. ಈ ಬಗ್ಗೆ ಯುವತಿ ಮನೆಯವರು ಯುವಕನ ಮನೆಯವರಲ್ಲಿ ಹೇಳಿದ್ದು, ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಿದ್ದರು. ಬಳಿಕ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಯುವಕನ ಮನೆಯವರು ಮದುವೆ ಒಪ್ಪಿದ್ದರು ಎನ್ನಲಾಗಿದೆ. ಆದರೆ ಯುವತಿ ತುಂಬು ಗರ್ಭಿಣಿಯಾಗುತ್ತಿದ್ದಂತೆ ಯುವಕನ ಮನೆಯವರು ಮದುವೆಗೆ ನಿರಾಕರಿಸಿದ್ದರು ಎನ್ನಲಾಗಿದೆ. ಈ ನಡುವೆ ಆರೋಪಿ ಕೃಷ್ಣ ಜೆ.ರಾವ್ ಪರಾರಿಯಾಗಿದ್ದು, ಯುವತಿ ಮಗುವಿಗೆ ಜನ್ಮ ನೀಡಿದ್ದಳು. ಪ್ರಕರಣ ಪುತ್ತೂರಿನಾದ್ಯಂತ ತೀವ್ರ ತಲ್ಲಣ ಸೃಷ್ಟಿಸಿತ್ತು. ಇದೀಗ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ತಾನು ರಹಸ್ಯವಾಗಿ ಹಲವು ಮೃತದೇಹಗಳನ್ನು ವಿಲೇವಾರಿ ಮಾಡಿದ್ದೆ ಎಂದು ವ್ಯಕ್ತಿಯೊಬ್ಬರು ವಕೀಲರ ಮೂಲಕ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವಬೆದರಿಕೆ ಒಡ್ಡಿ, ಸದ್ರಿ ಅಪರಾದ ಕೃತ್ಯಗಳ ಮೃತದೇಹಗಳನ್ನು ದೂರುದಾರರ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ಹಿನ್ನೆಲೆ ಹಲವಾರು ಮೃತದೇಹಗಳನ್ನು ದೂರುದಾರರು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ ಪಾಪಪ್ರಜ್ಞೆ ಕಾಡುತ್ತಿರುವುದರಿಂದ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ, ಈ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ಸಿದ್ದವಿರುವುದಾಗಿ ಜುಲೈ 3ರಂದು ಪೊಲೀಸ್ ಅಧೀಕ್ಷಕರ ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು…










