Author: main-admin

ಕರಾವಳಿ ಪ್ರದೇಶದ ಮಹಿಳೆಯರ ಸೊಬಗು, ಪ್ರತಿಭೆ ಮತ್ತು ಸಂಸ್ಕೃತಿಯನ್ನು ವಿಶ್ವದೆಲ್ಲೆಡೆ ಪಸರಿಸಲು ದುಬೈ ನ ಗೋಷೆನ್ ಇವೆಂಟ್ಸ್ ಮೀಡಿಯಾ ಕಂಪನಿ ಹಾಗೂ ಪ್ರಿಯಾ ಫ್ಯಾಶನ್ ವತಿಯಿಂದ ಯು.ಎ.ಇ. ಅಜ್ಮನ್ ತುಂಬೆ ಮೆಡಿಸಿಟಿಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ’ಮಂಗಳೂರು ದಿವಾ-ಮಿಡಲ್ ಈಸ್ಟ್ 2025’ವಿಶೇಷ ಸೌಂದರ್ಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಯನ್ನು ಅ. 30 ರಿಂದ ನ. 1 ರವರೆಗೆ ದುಬೈ ನಲ್ಲಿಆಯೋಜಿಸಲಿದ್ದು, ಇದಕ್ಕೆ ಪೂರ್ವಾಭಾವಿಯಾಗಿ ಆನ್ ಲೈನ್ ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ ಹಾಗೂ ಮಂಗಳೂರಿನಲ್ಲಿ ಅಡಿಷನ್ ಕೂಡಾ ನಡೆಯಲಿದೆ ಎಂದು ಗೋಷೆನ್ ಇವೆಂಟ್ಸ್ ಮೀಡಿಯಾ ದ ಸಂಸ್ಥಾಪಕಿ ಸಬಿತಾ ಕಾರ್ಲೋ ಹೇಳಿದರು. ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಿಸ್ (21-35 ಅವಿವಾಹಿತ) ಮತ್ತು ಮಿಸೆಸ್ (24 ವರ್ಷಕ್ಕಿಂತ ಮೇಲ್ಪಟ್ಟ – ವಿವಾಹಿತ/ವಿಚ್ಛೇದಿತ) ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಮಂಗಳೂರು ಹಾಗೂ ದೇಶದೆಲ್ಲೆಡೆಯಿರುವ ಮಂಗಳೂರು ಮೂಲದ ಮಹಿಳೆಯರು ಪ್ರತಿಷ್ಠಿತ ಅಂತರಾಷ್ಟ್ರೀಯ ವೇದಿಕೆಯಲ್ಲಿ ಮಿಂಚಬೇಕೆನ್ನುವ ದೃಷ್ಠಿಯಿಂದ ಮಂಗಳೂರು, ಬೆಂಗಳೂರು, ಮುಂಬಯಿ ಸೇರಿದಂತೆ ನಾನಾ ನಗರಗಳಲ್ಲಿ ಪ್ರಾದೇಶಿಕ…

Read More

ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್. ಐ.ಎ. ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್ ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗೂ ತಲೆಮರೆಸಿಕೊಂಡಿರುವ ಇತರರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು ಕೂಡ ರಾಜ್ಯ ಗೃಹ ಇಲಾಖೆ ಘೋಷಿಸಿತ್ತು. ಅಬ್ದುಲ್ ರೆಹಮಾನ್ ನಿಷೇಧಿತ ಪಿಎಫೈ ಸಂಘಟನೆಯ ಕಾರ್ಯದರ್ಶಿಯಾಗಿದ್ದ. ರೆಹಮಾನನ್ನು ವಶಕ್ಕೆ ಪಡೆದಿರುವ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ಎನ್ ಐ ಎ ನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಮತ್ತೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಮಂಗಳೂರು: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬರು ತನ್ನ ಮನೆಯಲ್ಲಿ ಶೋಕೇಸ್ ಗಾಜನ್ನು ಒಡೆದು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಳ್ಳಾಲ ಬಳಿಯ ಮಾಡೂರ್ ಸೈಟ್‌ನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಧೂರ್ ಸೈಟ್ ನಿವಾಸಿ ಸತೀಶ್ ನಾಯಕ್ ಅವರ ಪುತ್ರ ನಿತೇಶ್ ನಾಯಕ್ (38) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ನಿತೇಶ್ ತನ್ನ ತಂದೆ ಮತ್ತು ಸಹೋದರನೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ. ಘಟನೆ ನಡೆದ ರಾತ್ರಿ, ಕೋಪದ ಭರದಲ್ಲಿ, ನಿತೇಶ್ ಮನೆಯೊಳಗಿನ ಶೋಕೇಸ್‌ನ ಗಾಜಿಗೆ ಹೊಡೆದಿದ್ದಾನೆ ಎಂದು ವರದಿಯಾಗಿದೆ. ಒಡೆದ ಗಾಜು ಅವನ ಕೈಯಲ್ಲಿನ ಪ್ರಮುಖ ನರವನ್ನು ಚುಚ್ಚಿತು, ಇದರಿಂದಾಗಿ ಅಪಾರ ರಕ್ತಸ್ರಾವವಾಗಿ ಅವನು ಸಾವನ್ನಪ್ಪಿದನು. ನಿತೇಶ್ ಮತ್ತು ಅವರ ಸಹೋದರ ಜಂಟಿಯಾಗಿ ಆಹಾರ ಮಳಿಗೆ ವ್ಯವಹಾರ ನಡೆಸುತ್ತಿದ್ದರು ಮತ್ತು ಕೆಲಸ ಮುಗಿಸಿ ಮನೆಗೆ ಮರಳಿದ್ದಾಗ ಜಗಳ ನಡೆದಿದೆ ಎಂದು ತಿಳಿದುಬಂದಿದೆ. ನಿತೇಶ್ ವಿವಾಹಿತನಾಗಿದ್ದರೂ, ಅವನು ತನ್ನ ಹೆಂಡತಿಯಿಂದ ಬೇರ್ಪಟ್ಟಿದ್ದನು. ಮೃತರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…

Read More

ಉಳ್ಳಾಲ: ಜು. 2 ರಂದು ರಾತ್ರಿ ನಾಪತ್ತೆಯಾದ ಬೀರಿ ನಿವಾಸಿ ಯುವಕನ ಮೃತದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆಯಾಗಿದೆ. ಮೃತಪಟ್ಟ ಯುವಕನನ್ನು ಕೋಟೆಕಾರು ಬೀರಿ ನಿವಾಸಿ, ಮೋಹದಾಸ್ ಅಮೀನ್ ಎಂಬವರ ಪುತ್ರ ತೇಜಸ್(25) ಎಂದು ಗುರುತಿಸಲಾಗಿದೆ. ಜು. 02 ರಂದು ರಾತ್ರಿ ಮಲಗುವ ಕೋಣೆಯಿಂದ ತೇಜಸ್ ನಾಪತ್ತೆಯಾಗಿದ್ದ. ಈ ಕುರಿತು ಆತನ ತಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು(ಜು.04) ಬೆಳಿಗ್ಗೆ ರೈಲ್ವೇ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ತೇಜಸ್ ಮಣಿಪಾಲ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದ್ದು ಘಟನೆಗೆ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ

Read More

ಮಂಗಳೂರಿನ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬ ಸ್ಥಳದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ತಯಾರಿ ನಡೆಸುತ್ತಿರುವ ವೇಳೆಗೆ ದಾಳಿ ಮಾಡಿದ ಪೊಲೀಸರು ಐವರು ಆರೋಪಿಗಳನ್ನು ಜುಲೈ 2 ರಂದು ಬಂಧಿಸಿದ್ದಾರೆ. ಆರೋಪಿಗಳ ವಿವರ ಇಂತಿದೆ.. 1) ತುಷಾರ್ @ ಸೋನು ಪ್ರಾಯ 21 ವರ್ಷ ತಂದೆ: ರಾಜೇಶ್ ತಾರನಾಥ್ ವಾಸ: ಅಡು ಮರೋಳಿ, ಬಿಕರ್ನಕಟ್ಟೆ, ಮಂಗಳೂರು 2) ಧನ್ವಿ ಶೆಟ್ಟಿ ಪ್ರಾಯ 20 ವರ್ಷ ತಂದೆ: ಬಾಲಕೃಷ್ಣ ಶೆಟ್ಟಿ ವಾಸ: ನಾಗುರಿ, ಮಂಗಳೂರು 3) ಸಾಗರ್ ಕರ್ಕೇರಾ ಪ್ರಾಯ 19 ವರ್ಷ ತಂದೆ: ಶೀತಲ್ ಕುಮಾರ್ ವಾಸ: ಜಲ್ಲಿಗುಡ್ಡೆ, ಮಂಗಳೂರು 4) ವಿಕಾಸ್ ಥಾಪ @ ಪುಚ್ಚಿ ಪ್ರಾಯ 23 ವರ್ಷ ತಂದೆ: ರಾಜು ಥಾಪ ವಾಸ: ಶಕ್ತಿನಗರ, ಮಂಗಳೂರು 5) ವಿಘ್ನೇಶ್ ಕಾಮತ್ ಪ್ರಾಯ 24 ವರ್ಷ ತಂದೆ: ದಿ|| ಹರೀಶ್ ಕಾಮತ್ ವಾಸ: ಅಳಕೆ, ಕಂಡೆಟ್ಟು, ಮಂಗಳೂರು ಇನ್ನು ದಾಳಿ ವೇಳೆ ಪ್ರತಿಯೊಬ್ಬರ ಬಳಿ 01 ಕೆ.ಜಿ ಗಿಂತ…

Read More

ಮಂಗಳೂರು: ವಾಟ್ಸಾಪ್ ಲ್ಲಿ ಕೋಮು ಪ್ರಚೋದನಾಕಾರಿ ಸ್ಟೇಟಸ್ ಹಾಕಿದ ಯುವಕನನ್ನು ಅರೆಸ್ಟ್ ಮಾಡಲಾಗಿದೆ.ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್ (25) ಬಂಧಿತ ಆರೋಪಿ. ಸಾಮಾಜಿಕ ಜಾಲತಾಣವಾದ ಇನ್ ಸ್ಟಾ ಗ್ರಾಂ ನಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕು “ ಎಂಬುದಾಗಿ ಸ್ಟೇಟಸ್ ಹಾಕಿದ್ದು, ಈ ದಿನ ದಿನಾಂಕ: 03-07-2025 ರಂದು ಈತನನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಮಂಗಳೂರು: ಬೆಂಗಳೂರು ಮತ್ತು ಮುಂಬೈನಿಂದ ನಿಷಿದ್ಧ ಮಾದಕ ವಸ್ತು ಎಂಡಿಎಂಎ ತರಿಸಿ, ಅದನ್ನು ನಗರದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ (36) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹1.20 ಲಕ್ಷ ಮೌಲ್ಯದ 12.05 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಮಾರಾಟಕ್ಕೆ ಬಳಸುತ್ತಿದ್ದ ಸ್ವಿಫ್ಟ್ ಕಾರು ಸೇರಿ ಒಟ್ಟು ₹4,31,250 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಮಂಗಳೂರು ಸಿಸಿಬಿ ಪೊಲೀಸರು, ಜುಲೈ 3, 2025ರಂದು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯ ಬಳಿ ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕಬೀರ್‌ನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಾರಿವಾಳ ಕಬೀರ್ ಮೇಲೆ ಹತ್ತಾರು ದನಕಳ್ಳತನ ಪ್ರಕರಣಗಳು!ಬಂಧಿತ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ ಮಂಗಳೂರು ನಗರದ ಪಣಂಬೂರು, ಮಂಗಳೂರು…

Read More

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆ ಆಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ. ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ ಮಾಡಿ ವಂಚಿಸಿದ್ದಾರೆ. ಅಷ್ಟೇ ಅಲ್ಲದೆ ಉದ್ದಿಮೆದಾರರಿಂದ ಹಣ ಸಂಗ್ರಹಿಸಿ ಪಾಲಿಕೆಗೆ ಕಟ್ಟದೆ ಕೆಲ ಏಜೆಂಟರು ದೋಖಾ ಮಾಡಿದ್ದಾರೆ. ಸದ್ಯ ಪಾಲಿಕೆಯಿಂದ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ನಕಲಿ ಸರ್ಟಿಫಿಕೇಟ್ ಮೇಲ್ನೋಟಕ್ಕೆ ನೋಡಿದರೆ ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಆದರೆ ಕೆಲ‌ ಸರ್ಟಿಫಿಕೇಟ್ನಲ್ಲಿ ಯಾರದ್ದೋ ಕ್ಯೂ ಆರ್ ಕೋಡ್ ಬಳಕೆ ಮಾಡಲಾಗಿದ್ದು, ಸ್ಕ್ಯಾನ್ ಮಾಡಿದಾಗ ಬೇರೆ ಉದ್ದಿಮೆದಾರರ ಪರವಾನಗಿ ಪತ್ರ ಲಭ್ಯವಾಗುತ್ತಿದೆ. ಉದ್ದಿಮೆದಾರರು ಇದೇ ಮೂಲ ಪ್ರತಿ ಎಂದು ನಂಬಿದ್ದಾರೆ. ಇನ್ನು ಕೆಲ‌ ಸರ್ಟಿಫಿಕೇಟ್ಗಳಲ್ಲಿ ಪರವಾನಗಿ ನವೀಕರಣದ ದಿನಾಂಕಗಳಷ್ಟೇ ಬದಲಾವಣೆ ಮಾಡಲಾಗಿದೆ. ಸುಮಾರು 4,500 ಉದ್ದಿಮೆ ಪರವಾನಗಿಯನ್ನು ನಕಲಿ ಮಾಡಿರುವ ಸಂಶಯ ವ್ಯಕ್ತವಾಗಿದೆ. ಹೀಗಾಗಿ ನಕಲಿ ಸರ್ಟಿಫಿಕೇಟ್ ನೀಡಿ ವಂಚಿಸಿರುವ…

Read More

ಪುತ್ತೂರು: SDPI ಪುತ್ತೂರು ವಿಧಾನಸಭಾ ಕ್ಷೇತ್ರ ಪುತ್ತೂರು ವತಿಯಿಂದ ಕಿಲ್ಲೆ ಮೈದಾನದ ಬಳಿ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನಲೆ ಪ್ರಕರಣ ದಾಖಲಾಗಿದೆ. ದಿನಾಂಕ 2.07.2025 ರಂದು ಸಂಜೆ ಕಿಲ್ಲೆ ಮೈದಾನದ ಬಳಿ ಅಧ್ಯಕ್ಷ ಅಶ್ರಫ್ ಬಾವು ಎಂಬವರು ಹಾಗೂ ಇತರೆ ಸುಮಾರು 30 ಜನರು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಕ್ರಮ ಗುಂಪು ಸೇರಿ ಧ್ವನಿವರ್ಧಕವನ್ನು ಬಳಸಿ ಪ್ರತಿಭಟನೆ ನಡೆಸಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಆರೋಪಿತರುಗಳ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 53-2025 ಕಲಂ 189(ಸಿ), ಬಿ.ಎನ್.ಎಸ್ ಮತ್ತು ಕಲಂ 109 ಕರ್ನಾಟಕ ಪೊಲೀಸ್ ಕಾಯ್ದೆ 1963 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು.

Read More

ಮಂಗಳೂರು: ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮೊಹರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ, ಗಣೇಶ ಚತುರ್ಥಿ, ಈದ್ ಮಿಲಾದ್‌, ನವರಾತ್ರಿ ಉತ್ಸವ, ದೀಪಾವಳಿ, ಕ್ರಿಸ್ಮಸ್ ಪ್ರಮುಖವಾದವುಗಳಾಗಿವೆ. ಈ ಸಂಬಂಧ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಕೆಲವು ಷರತ್ತುಗಳನ್ನು ಪಾಲಿಸಲು ಮಂಗಳೂರು ನಗರ ಪೊಲೀಸ್ ಇಲಾಖೆ ಸೂಚಿಸಿದೆ. ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಪಡೆಯುವ ಎಲ್ಲಾ ಆಯೋಜಕರು ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಹಬ್ಬದ ಮುಂಚಿತವಾಗಿ ನಿಖರವಾದ ಮಾರ್ಗಸೂಚಿಗಳನ್ನು (ರಸ್ತೆ, ಸಮಯ, ಧ್ವನಿ ನಿಯಂತ್ರಣ) ಹೊರಡಿಸಲಾಗುತ್ತದೆ. ಷರತ್ತುಗಳ ಪಾಲನೆಗಾಗಿ ಆಯೋಜಕರು ತಮ್ಮ ಪ್ರತಿನಿಧಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಈ ವಿವರ ನೀಡದಿರುವ ಆಯೋಜಕರಿಗೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗುವುದಿಲ್ಲ. ಯಾವುದೇ ಷರತ್ತುಗಳ ಉಲ್ಲಂಘನೆಯಾದಲ್ಲಿ ಘಟನೆಯ ಹೊಣೆಗಾರಿಕೆ ಈ ನಿಯೋಜಿತ ವ್ಯಕ್ತಿಗಳ ಮೇಲೆ ಇರಲಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. 1. ಕಡ್ಡಾಯ ಪೊಲೀಸ್…

Read More