ಮಂಗಳೂರು: ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮೊಹರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ, ಗಣೇಶ ಚತುರ್ಥಿ, ಈದ್ ಮಿಲಾದ್, ನವರಾತ್ರಿ ಉತ್ಸವ, ದೀಪಾವಳಿ, ಕ್ರಿಸ್ಮಸ್ ಪ್ರಮುಖವಾದವುಗಳಾಗಿವೆ. ಈ ಸಂಬಂಧ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಕೆಲವು ಷರತ್ತುಗಳನ್ನು ಪಾಲಿಸಲು ಮಂಗಳೂರು ನಗರ ಪೊಲೀಸ್ ಇಲಾಖೆ ಸೂಚಿಸಿದೆ. ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಪಡೆಯುವ ಎಲ್ಲಾ ಆಯೋಜಕರು ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಹಬ್ಬದ ಮುಂಚಿತವಾಗಿ ನಿಖರವಾದ ಮಾರ್ಗಸೂಚಿಗಳನ್ನು (ರಸ್ತೆ, ಸಮಯ, ಧ್ವನಿ ನಿಯಂತ್ರಣ) ಹೊರಡಿಸಲಾಗುತ್ತದೆ. ಷರತ್ತುಗಳ ಪಾಲನೆಗಾಗಿ ಆಯೋಜಕರು ತಮ್ಮ ಪ್ರತಿನಿಧಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಈ ವಿವರ ನೀಡದಿರುವ ಆಯೋಜಕರಿಗೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗುವುದಿಲ್ಲ. ಯಾವುದೇ ಷರತ್ತುಗಳ ಉಲ್ಲಂಘನೆಯಾದಲ್ಲಿ ಘಟನೆಯ ಹೊಣೆಗಾರಿಕೆ ಈ ನಿಯೋಜಿತ ವ್ಯಕ್ತಿಗಳ ಮೇಲೆ ಇರಲಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. 1. ಕಡ್ಡಾಯ ಪೊಲೀಸ್…
Author: main-admin
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದತೆ ಮತ್ತು ಶಾಂತಿಯುತ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪಿಸಲಾದ ವಿಶೇಷ ಕಾರ್ಯಪಡೆ (Special Task Force) ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ ಮಹತ್ವದ ತರಬೇತಿಯನ್ನು ನೀಡಲಾಗಿದೆ. ಜುಲೈ 2, 2025 ರಂದು ಮಂಗಳೂರು ನಗರದ ನೆಹರೂ ಮೈದಾನದಲ್ಲಿ ನಡೆದ ಈ ತರಬೇತಿಯಲ್ಲಿ, ಕೋಮು ಗಲಭೆಗಳ ಸಂದರ್ಭದಲ್ಲಿ ಉದ್ರಿಕ್ತ ಜನಸಮೂಹವನ್ನು ಚದುರಿಸಲು ಬಳಸಲಾಗುವ Anti Riots gun ಮತ್ತು Stun Shell ಗಳನ್ನು ಉಪಯೋಗಿಸುವ ಬಗ್ಗೆ ಪ್ರಾಯೋಗಿಕ ತರಬೇತಿ ಮತ್ತು ಪ್ರಾತ್ಯಕ್ಷಿಕೆಗಳನ್ನು ನಡೆಸಲಾಯಿತು. ವಿಶೇಷ ಕಾರ್ಯಪಡೆ ಘಟಕದ ಆಪರೇಷನಲ್ ವಿಭಾಗದ 95 ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ತರಬೇತಿಯಲ್ಲಿ ಭಾಗವಹಿಸಿದ್ದರು. ಇದರ ಜೊತೆಗೆ, ಗುಪ್ತಚರ ವಿಭಾಗದ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಗುಪ್ತಚರ ಮಾಹಿತಿ ಸಂಗ್ರಹಿಸುವ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ದ್ವೇಷ ಭಾಷಣ (Hate Speech) ಮುಂತಾದ ಸೂಕ್ಷ್ಮ ಮಾಹಿತಿಗಳನ್ನು ಪರಿಣಾಮಕಾರಿಯಾಗಿ…
ಬಂಟ್ವಾಳ :ಕೊಲೆಯತ್ನ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಮೂಡ ಗ್ರಾಮದ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ರಲ್ಲಿ ಬಂಟ್ವಾಳ, ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈತ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ . ಈತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಿನಾಂಕ:30-06-2025 ರಂದು ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
ಚೆನ್ನೈ : ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟಗಳ ಪ್ರಮುಖ ಸೂತ್ರಧಾರಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ. ಬಂಧಿತ ಉಗ್ರನು 1995ರಿಂದ ತಲೆ ಮರೆಸಿಕೊಂಡಿದ್ದನು. ಇದೀಗ ಆತನನ್ನು ತacಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತನು ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು ಕೂಡಾ ಪೊಲೀಸರು ಬಂಧಿಸಿದ್ದಾರೆ. ಈತ 1999ರಿಂದ ತಲೆ ಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. ತಮಿಳುನಾಡು, ಕರ್ನಾಟಕ ರಾಜ್ಯಗಳಲ್ಲಿ ನಡೆದ ಹಲವು ಪ್ರಕರಣಗಳಲ್ಲಿ ಸಿದ್ದಿಕ್ ಆರೋಪಿಯಾಗಿದ್ದಾನೆ. 1999ರ ಬೆಂಗಳೂರು ಸ್ಫೋಟ, 2013ರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ, 2011ರಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ನೇತೃತ್ವದ ರಥಯಾತ್ರೆಯ ಮೇಲೆ ಮಧುರೈಯಲ್ಲಿ ನಡೆದ ಪೈಪ್ ಬಾಂಬ್ ದಾಳಿ, 1991ರ ಚೆನ್ನೈ ಹಿಂದೂ ಮುನ್ನಣಿ ಕಾರ್ಯಾಲಯದ ಮೇಲೆ ನಡೆದ ದಾಳಿಯಲ್ಲೂ…
ಉಡುಪಿ: ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಕೋಡಿಕರೆ ನಿವಾಸಿ ಲೋಕೇಶ್ (43) ಹಾಗೂ ಕುಳಾಯಿ ನಿವಾಸಿ ವಿರಾಜ್(29) ಎಂದು ಗುರುತಿಸಲಾಗಿದೆ. ಇವರು ಕಾರ್ಯಕ್ರಮಕ್ಕೆ ತೆರಳಿ ಬೆಳಗ್ಗಿನ ಜಾವ ವಾಪಾಸಾಗುತ್ತಿದ್ದಾಗ, ಈ ಘಟನೆ ನಡೆದಿದೆ. ಮರದ ದಿಮ್ಮಿಗಳನ್ನು ಹೇರಿಕೊಂಡಿದ್ದ ಲಾರಿಯನ್ನು ಹೆಜಮಾಡಿ ಟೋಲ್ ಗೇಟಿನ ಕೆಲವೇ ಮೀಟರ್ ಗಳ ಅಂತರದಲ್ಲಿ ಪಾರ್ಕ್ ಮಾಡಲಾಗಿತ್ತು. ಇದನ್ನು ಗಮನಿಸದ ಕಾರು ಚಾಲಕ ಹಿಂಬದಿಯಿಂದ ಗುದ್ದಿದ್ದಾನೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ವಿರಾಜ್ ರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಟೋಲ್ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಕಾಲ ಶ್ರಮಿಸಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳಿಬ್ಬರನ್ನೂ ಮಂಗಳೂರಿನ ಎಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸಿದ್ದಾರೆ.
ಮಂಗಳೂರು; ಗ್ರಾಹಕರು ಅಡವಿಟ್ಟ ಚಿನ್ನಾಭರಣವನ್ನು ಸಹಕಾರಿ ಬ್ಯಾಂಕ್ ಮ್ಯಾನೇಜರ್ ಕಳ್ಳತನ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿರುವ ಮಂಗಳೂರು ನಗರದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಈ ಘಟನ ನಡೆದಿದೆ. ಸೊಸೈಟಿಯ ಮ್ಯಾನೇಜರ್ 6.5 ಕೆಜಿ ಚಿನ್ನಾಭರಣ ಕಳವು ಮಾಡಿ ಬೇರೆ ಶಕ್ತಿನಗರದ ಸೊಸೈಟಿಯಲ್ಲಿ ಒತ್ತೆ ಇಟ್ಟಿದ್ದ. ಪೊಲೀಸರು 2.2 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮ್ಯಾನೇಜರ್ ಪರವಾಗಿ ಚಿನ್ನ ಒತ್ತೆ ಇಟ್ಟು ಸಾಲ ಪಡೆದಿದ್ದ ಸರಿಪಲ್ಲ ನಿವಾಸಿ ಶೇಕ್ ಮಹಮ್ಮದ್ ಎಂಬುವವನ್ನು ಬಂಧಿಸಲಾಗಿದೆ. ವಂಚನೆ ಪ್ರಕರಣದಲ್ಲಿ ಹಲವು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜೂನ್ 17 ರಂದು ಎಫ್ಐಆರ್ ದಾಖಲಾಗಿದೆ. ವಿದೇಶಕ್ಕೆ ಪರಾರಿಯಾಗಿರುವ ಮ್ಯಾನೇಜರ್ ಕೋರ್ಟ್ಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮಂಗಳೂರು: ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂಬಾತನನ್ನು ಬಂಟ್ವಾಳ ರಾಯಿ ಎಂಬಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 27ರಂದು ಅಬ್ದುಲ್ ರಹ್ಮಾನ್ ಅವರ ಹತ್ಯೆಯಾಗಿತ್ತು.
ಉಜಿರೆ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸರು ಲಾಡ್ಜ್ ಮೇಲೆ ಕ್ರಮ ಕೈಗೊಳ್ಳಲು ಉಜಿರೆ ಗ್ರಾಮ ಪಂಚಾಯತ್ ಗೆ ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ್ದರು. ಈ ಬಗ್ಗೆ ಉಜಿರೆ ಗ್ರಾಮ ಪಂಚಾಯತ್ ಲಾಡ್ಜ್ ಮಾಲೀಕರಿಗೆ ಲಾಡ್ಜ್ ಬಂದ್ ಮಾಡಲು ನೋಟಿಸ್ ಜಾರಿ ಮಾಡಿದೆ. ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದು ಉಜಿರೆ ಶ್ರೀ ದುರ್ಗಾ ಲಾಡ್ಜ್ ನಲ್ಲಿ ಇರಿಸಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಜೂ.14 ರಂದು ರಾತ್ರಿ ಬೆಳ್ತಂಗಡಿ ಪೊಲೀಸರು ದಾಳಿ ಓರ್ವ ಯುವತಿಯನ್ನು ರಕ್ಷಣೆ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೂವರು ವಿರುದ್ಧ ಪ್ರಕರಣ ದಾಖಲಾಗಿತ್ತು. ಉಜಿರೆಯ ಶ್ರೀ ದುರ್ಗಾ ಲಾಡ್ಜ್ ಮೇಲೆ ಕ್ರಮ ಕೈಗೊಳ್ಳಲು ಬೆಳ್ತಂಗಡಿ ಪೊಲೀಸರು ಉಜಿರೆ ಗ್ರಾಮ ಪಂಚಾಯತ್ ಗೆ ಜೂ.25 ರಂದು ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ್ದರು. ವರದಿ ಸಲ್ಲಿಸಿದ ಬೆನ್ನಲ್ಲೇ ಉಜಿರೆ ಗ್ರಾಮ ಪಂಚಾಯತ್ ಅಧಿಕಾರಿಗಳು ಜೂ.26…
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1ರ ಇಂದು ಚಾಲನೆ ನೀಡಲಿದ್ದಾರೆ ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ತಿಳಿಸಿದ್ದಾರೆ. ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1 ರಂದು ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. pic.twitter.com/nVf6rVuG1T — DIPR Karnataka (@KarnatakaVarthe) June 30, 2025 ಗ್ರಾಮೀಣ ಬಸ್ ಪಾಸ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಣೆ ಮಾಡಿದ್ದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸತತ ಸಭೆಗಳು ಆಗಿದ್ದು, ತಾಲೂಕು ಮಟ್ಟದಲ್ಲಿರುವ ಪತ್ರಕರ್ತರಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕ್ರಮ ಕೈಗೊಂಡಿದೆ. ಹಾಗಾಗಿ ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ಕೊಡಿಸಲಾಗುವುದು ಎಂದಿದ್ದರು. ಈ ಬೆನ್ನಲ್ಲೇ ಮಾನ್ಯತೆ ಪಡೆಯದ ಗ್ರಾಮೀಣ ಪತ್ರಕರ್ತರಿಗೆ…
ಬ್ರಹ್ಮಾವರ: ಕುಂಜಾಲಿನ ಜಂಕ್ಷನ್ ನಲ್ಲಿ ಪತ್ತೆಯಾದ ದನದ ಕಳೇಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಬಂಧಿತರನ್ನು ಕೇಶವ, ರಾಮಣ್ಣ, ಪ್ರಸಾದ್, ನವೀನ್ ಮತ್ತು ರಾಜೇಶ್ ಎಂದು ಗುರುತಿಸಲಾಗಿದೆ.ರಾಮ(49), ಪ್ರಸಾದ್(21), ನವೀನ್(35), ಕೇಶವ ನಾಯ್ಕ್(50) ಸಂದೇಶ(35), ರಾಜೇಶ್ (28) ಎಂದು ಗುರುತಿಸಲಾಗಿದೆ ಎಸ್ಪಿ ನೀಡಿರುವ ಮಾಹಿತಿಯ ಪ್ರಕಾರ, ಆರೋಪಿ ಕೇಶವ ತನ್ನ ಮನೆಯಲ್ಲಿದ್ದ ದನವನ್ನು ರಾಮಣ್ಣನವರಿಗೆ ಮಾಂಸ ಮಾಡಲು ನೀಡಿದ್ದು ಅದರಂತೆ ಆರೋಪಿಗಳು ಮಾಂಸ ಮಾಡಿ ಅದರ ತ್ಯಾಜ್ಯವನ್ನು ಎಸೆಯಲು ಸ್ಕೂಟರ್ ನಲ್ಲಿ ರಾತ್ರಿ ತೆರಳುತ್ತಿದ್ದಾಗ ರಸ್ತೆಗೆ ಬಿದ್ದಿದೆ ಎಂದು ವಿವರಿಸಿದ್ದಾರೆ. ಈಗಾಗಲೇ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಊಹೆಯಾಧರಿತ ಪೋಸ್ಟ್ ಗಳನ್ನು ಮಾಡಿ ಕೋಮು ಸೌಹಾರ್ದ ಕೆಡಿಸುವ ಪ್ರಯತ್ನ ಮಾಡಬಾರದೆಂದು ಎಸ್ಪಿ ಎಚ್ಚರಿಸಿದ್ದು ಅಂತಹ ಕೃತ್ಯಗಳನ್ನು ಮಾಡಿದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.









