ಕಾಸರಗೋಡು: ಸೂಕ್ತ ದಾಖಲೆಗಳಿಲ್ಲದೆ ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಮೂಲದ ಜಯಶೀಲ ಪುಟ್ಟಣ್ಣ ಶೆಟ್ಟಿ(52) ಎಂಬಾತನನ್ನು ಬಂಧಿಸಲಾಗಿದೆ. ವಾಹನ ತಪಾಸಣೆ ಮಾಡುತ್ತಿದ್ದ ಅಬಕಾರಿ ಸಿಬ್ಬಂದಿಗಳು ಈತನ ಬ್ಯಾಗನ್ನು ಪರಿಶೀಲಿಸಿದಾಗ ನಗದು ಪತ್ತೆಯಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಹಣ ಸಾಗಾಟ ನಡೆದಿತ್ತು. ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ಈ ಹಣ ಯಾರಿಂದ ಎಲ್ಲಿಗೆ ಸಾಗಾಟವಾಗುತ್ತಿತ್ತು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
Author: main-admin
ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾಗಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆಯನ್ನು ಎಸ್ಐಟಿ ನಡೆಸುತ್ತಿದೆ. ಇಂತಹ ಎಸ್ಐಟಿಗೆ ಪೊಲೀಸ್ ಠಾಣೆ ಎಂಬುದಾಗಿ ಸರ್ಕಾರ ಘೋಷಿಸಿದೆ. ಈ ಮೂಲಕ ಎಸ್ಐಟಿಗೆ ಪೊಲೀಸ್ ಠಾಣೆಯ ಮಾನ್ಯತೆಯನ್ನು ನೀಡಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ಧರ್ಮಸ್ಥಳದಲ್ಲೇ ಬೀಡು ಬಿಟ್ಟಿರುವಂತ ಎಸ್ಐಟಿ ತಂಡವು ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಎಸ್ಐಟಿಗೆ ಪೊಲೀಸ್ ಠಾಣೆ ಘೋಷಿಸಿದೆ. ಅಲ್ಲದೇ ಎಸ್ಐಟಿಗೆ ಪೊಲೀಸ್ ಠಾಣೆಯ ಮಾನ್ಯತೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದಲ್ಲದೇ ವಿಶೇಷ ತನಿಖಾ ತಂಡಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಅಧಿಕಾರವನ್ನು ಬಿಎನ್ಎಸ್ಎಸ್ ಅಡಿಯಲ್ಲಿ ನೀಡಿದೆ.
ಮಂಗಳೂರು: ನಗರದ ಬ್ಯೂಟಿಪಾರ್ಲ್ರನ ಮಾಲಕಿ ತನ್ನ ಮೇಲೆ ಹಲ್ಲೆ ನಡೆಸಿ, ತನ್ನ ಬೆತ್ತಲೆ ವೀಡಿಯೋ ಮಾಡಿ ಬೆದರಿಕೆ ಮಾಡಿರುವುದಾಗಿ ಸಂತ್ರಸ್ತ ಮಹಿಳೆಯೊಬ್ಬರು ಮಾಧ್ಯಮದೆದುರು ಆರೋಪ ಮಾಡಿದ್ದಾರೆ. ನಗರದ ಪ್ರೆಸ್ಕ್ಲಬ್ನಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಈ ಆರೋಪ ಮಾಡಿರುವ ಮಹಿಳೆ, ಕಳೆದ ಒಂದೂವರೆ ತಿಂಗಳ ಹಿಂದೆ ನಗರದ ಹಂಪನಕಟ್ಟೆ ಮತ್ತು ಜ್ಯೋತಿ ಸರ್ಕಲ್ ನಡುವಿನ ಯುನಿಸೆಕ್ಸ್ ಬ್ಯೂಟಿಪಾರ್ಲ್ರನಲ್ಲಿ ಬ್ಯೂಟಿಶಿಯನ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾಗಿ ಹೇಳಿದರು. ಬ್ಯೂಟಿಶಿಯನ್ ಕೋರ್ಸ್ ಮಾಡಿಕೊಂಡಿರುವ ತಾನು ಕೆಲಸಕ್ಕೆ ಸೇರುವ ಸಂದರ್ಭ ಆ ಬ್ಯೂಟಿಪಾರ್ಲ್ರನ ಮಾಲಕರು, ಬರುವ ಗ್ರಾಹಕರೊಂದಿಗೆ ಆತ್ಮೀಯವಾಗಿದ್ದುಕೊಂಡು ಅವರು ಬಯಸುವ ಸೇವೆಯನ್ನು ಒದಗಿಸುವಂತೆ ಮತ್ತು ಅವರಿಂದ 500ರೂ.ನಿಂದ 1000 ರೂ.ವರೆಗೆ ಸೇವಾ ಭತ್ತೆಯಾಗಿ ಪಡೆಯಲು ಅವಕಾಶ ನೀಡಿದ್ದರು. ಕಳೆದ ಸೋಮವಾರ ಪರಿಚಯದ ಪುರುಷ ಗ್ರಾಹಕರೊಬ್ಬರು ಬಂದು ಮಸಾಜ್ ಮಾಡಿಸಿಕೊಂಡ ಸಂದರ್ಭ ಮಾತನಾಡಿದ್ದನ್ನು ವಾಯ್ಸ್ ರೆಕಾರ್ಡ್ ಮಾಡಿಕೊಂಡು ಮಾಲಕರಿಗೆ ನೀಡಿದ್ದಾರೆ. ಆ ಸಂದರ್ಭ ಪಾರ್ಲ್ರನ ಮಾಲಕರ ಪತ್ನಿ ಬಂದು ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ನನ್ನ ಬೆತ್ತಲೆ ವೀಡಿಯೋ…
ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ಮತ್ತಿತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೊರೇಟ್ ಆಫ್ ಎನ್ಫೋರ್ಸ್ಮೆಂಟ್ ಮಂಗಳೂರು ಸಬ್ ರೆನಲ್ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಗರದ 5 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು ಜಾರಿ ಸಂಸ್ಥೆಗಳು ದಾಖಲಿಸಿದ ಅನೇಕ ಎಫ್ಐಆರ್ಗಳ ಆಧಾರದ ಮೇಲೆ ಜಾರಿ ನಿರ್ದೇಶನಾಲಯ (ED) ತನಿಖೆ ಆರಂಭಿಸಿದೆ. ಪ್ರಮುಖ ಆರೋಪಿ ರೋಶನ್ ಸಲ್ದಾನ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾನೆ. ಶೋಧ ಕಾರ್ಯಾಚರಣೆಯ ವೇಳೆ ಈ ಆರೋಪಿಗಳು ಸ್ಟಾಂಪ್ ಡ್ಯೂಟಿ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಹೊಸದಾಗಿ ರಚಿಸಲಾದ ನಕಲಿ ಸಂಸ್ಥೆಗಳ ಮೂಲಕ ಸುಮಾರು 39 ಕೋ.ರೂ.ಗಳನ್ನು ಸಂಗ್ರಹಿಸಿರುವುದು ಕಂಡುಬಂದಿದೆ. ಅದಕ್ಕೆ ಸಂಬಂಧಿಸಿದ ಡೈರಿಗಳು ಮತ್ತು ದಾಖಲೆಗಳು ಲಭ್ಯವಾಗಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.…
ವಿಟ್ಲ : ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರು. ಜಗನ್ನಾಥ ಶೆಟ್ಟಿಗಾರ್ ಅವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರ ದ್ವಿಚಕ್ರ ವಾಹನದ ಟಯರ್ ಪಂಕ್ಚರ್ ಆಗಿತ್ತು. ಆದ್ದರಿಂದ ಅವರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅಲ್ಲೆ ಪಕ್ಕದಲ್ಲಿ ನಿಂತಿದ್ದ ವೇಳೆ ಪುತ್ತೂರು ಭಾಗದಿಂದ ಸಾಲೆತ್ತೂರು ಕಡೆ ತೆರಳುತ್ತಿದ್ದ ಕಾರು ಅವರಿಗೆ ಡಿಕ್ಕಿಯಾಗಿದೆ.ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಜಗನ್ನಾಥ ಶೆಟ್ಟಿಗಾರ್ ರವರನ್ನು ಕೂಡಲೇ ಸ್ಥಳೀಯರು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಗೆ ಸಂಬಂದಿಸಿದ ಹೋರಾಟದಲ್ಲಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಮಾನ್ಯ ಉದಯ ಕುಮಾರ್ ಶೆಟ್ಟಿಯವರು ಪರಶುರಾಮ ಮೂರ್ತಿಯ ಪುನರ್ ನಿರ್ಮಾಣ ಮಾಡಲು ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಬೆಂಬಲ ಸೂಚಿಸಿ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಅಧ್ಯಕ್ಷ ಕೃಷ್ಣ ಶೆಟ್ಟಿ ಹೇಳಿದ್ದಾರೆ. ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ರಾಜಕೀಯೇತರ ಸಮಿತಿಯಾಗಿದ್ದು ಕಾರ್ಕಳ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸುವ ಧಾರ್ಮಿಕ ಶ್ರದ್ದೆಯ ಸದುದ್ದೇಶವನ್ನು ಹೊಂದಿ ಅಸ್ತಿತ್ವಕ್ಕೆ ಬಂದಿರುತ್ತದೆ. ಇದೀಗ ಕಾರ್ಕಳದ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಾನ್ಯ ಉದಯ ಕುಮಾರ್ ಶೆಟ್ಟಿಯವರು ನಮ್ಮ ಸಮಿತಿಯು ಹೊಂದಿದ್ದ ಸದುದ್ದೇಶವನ್ನೇ ಇಟ್ಟುಕೊಂಡು ಉಚ್ಛ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದರಿಂದ ಈ ಸಂಧರ್ಭ ನಮ್ಮ ಸಮಿತಿಯು ಯಾವುದೇ ನಿರ್ಣಯವನ್ನು ಕೈಗೊಂಡರೇ ಕಾನೂನಿನ ತೊಡಕಾಗುವ ಸಾಧ್ಯತೆ ಇದ್ದು ಇದು ಉದಯ ಕುಮಾರ್ ಶೆಟ್ಟಿಯವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ತೊಂದರೆಯಾಗುವ…
ಮಂಗಳೂರು: ನಗರದ ಬಂಗ್ರಕುಳೂರು ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿ ಉದ್ಯಾವರ ಸಂಪಿಗೆ ನಗರ ನಿವಾಸಿ ದೇವರಾಜ್ ಪೂಜಾರಿ (38), ಕಾಪು ಪಿಪಾರ್ ಪುದು ನಿವಾಸಿ ಜೀವನ್ ಅಮೀನ್ (32), ಮಂಗಳೂರು ತಿರುವೈಲು ನಿವಾಸಿ ಇಮ್ರಾನ್ (40), ದಂಬೆಲ್ ನಿವಾಸಿ ಇಮ್ರಾನ್ (40), ದಂಬೆಲ್ ನಿವಾಸಿ ಹನೀಫ್ (56) ಎಂದು ಗುರುತಿಸಲಾಗಿದೆ. ಸೆನ್ ಪೊಲೀಸ್ ಠಾಣೆಗೆ ಬಂದ ಮಾಹಿತಿಯಂತೆ ಪಡುಕೋಡಿ ಗ್ರಾಮದ ಬಂಗ್ರಕುಳೂರು ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಆರೋಪಿಗಳಿಂದ 51 ಗ್ರಾಂ ತೂಕದ ಮಾದಕ ವಸ್ತು ಎಂಡಿಎಂಎ, 7 ಮೊಬೈಲ್ ಫೋನ್ಗಳು, ಎರಡು ಕಾರುಗಳು, ನಗದು 11,990 ರೂ.ವನ್ನು ವಶಪಡಿಸಿಕೊಳ್ಳಲಾಗಿದೆ. ಎಂಡಿಎಂಎಯನ್ನು ಚಿಕ್ಕ ಚಿಕ್ಕ ಪ್ಯಾಕೇಟ್ಗಳ್ಲಲಿ ಪ್ಯಾಕ್ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ತನಿಖೆಯ ವೇಳೆ ತಿಳಿದುಬಂದಿದೆ. ಈ ಬಗ್ಗೆ ಸೆನ್ ಠಾಣೆಯಲ್ಲಿ…
ಬೆಳ್ತಂಗಡಿ ಕಸಬಾ ಗ್ರಾಮದ ಜೆರೋಮ್ ಬರ್ಬೋಝಾ (37) ಅವರ ದೂರಿನ ಮೇರೆಗೆ, ಯೂಟ್ಯೂಬ್ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದೆ. ದೂರಿನ ಪ್ರಕಾರ, ಆಗಸ್ಟ್ 7ರಂದು ಜೆರೋಮ್ ಅವರು ಫೇಸ್ಬುಕ್ನಲ್ಲಿ ಸಂದೇಶಗಳನ್ನು ಪರಿಶೀಲಿಸುತ್ತಿರುವ ವೇಳೆ, ಆರೋಪಿತ ಪುನೀತ್ ಕೆರೆಹಳ್ಳಿ ಅವರು ಯೂಟ್ಯೂಬ್ನಲ್ಲಿ ಅಶ್ಲೀಲ ವಿಷಯ ಒಳಗೊಂಡ ವೀಡಿಯೋವನ್ನು ಹಂಚಿರುವುದು ಗಮನಕ್ಕೆ ಬಂದಿದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 80/2025, 0 296 BNS 2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಉಡುಪಿ : ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟಣೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನಲ್ಲಿ ನಡೆದಿದೆ. ಕೊಡವೂರು ಗ್ರಾಮದ 17 ವರ್ಷ ಪ್ರಾಯದ ಮೇಘಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೇಘಾ ಕಿದಿಯೂರು ಶ್ಯಾಮಿಲಿ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈಕೆಗೆ ಕಳೆದ ಒಂದು ವರ್ಷದಿಂದ ಪೀಡ್ಸ್ ಖಾಯಿಲೆಯಿದ್ದು, ಈ ಬಗ್ಗೆ ಉಡುಪಿ ಮಿತ್ರಾ ಆಸ್ಪತ್ರೆ ಮತ್ತು ದೊಡ್ಡಣಗುಡ್ಡೆ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆಗಸ್ಟ್ 6 ರಂದು ಸಂಜೆ 5:10 ಗಂಟೆಯಿಂದ 5:30 ಗಂಟೆ ನಡುವಿನ ಸಮಯದಲ್ಲಿ ಮನೆಯ ಎದುರು ಇರುವ ಸ್ನಾನಗೃಹದ ತಗಡು ಶೀಟಿನ ಮಾಡಿಗೆ ಅಳವಡಿಸಿದ ಕಬ್ಬಿಣದ ರಾಡ್ಗೆ ಚೂಡಿದಾರ ಶಾಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೆಂಗಳೂರು : ಧರ್ಮಸ್ಥಳದಲ್ಲಿ ನಿನ್ನೆ ದಿನ ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ಯಾಕಾಗಿದೆ, ಯಾರು ಕಾರಣಕರ್ತರು, ಎರಡು ಗುಂಪಿನ ಉದ್ದೇಶ ಏನಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಎಸ್ಐಟಿ ಮಾಡಲು ಒತ್ತಾಯಿಸಿದ್ದರು. ಬಹಳ ಎಚ್ಚರಿಕೆಯಿಂದ ಪರಿಶೀಲನೆ ಮಾಡಿ ಎಸ್ಐಟಿ ರಚಿಸಿದ್ದೇವೆ. ಅನಾಮಿಕ ವ್ಯಕ್ತಿ ಇಲ್ಲಿ ಕೊಲೆಯಾಗಿದೆ, ನಾನೇ ಅನೇಕ ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ. ಆ ವ್ಯಕ್ತಿ, ಮ್ಯಾಜಿಸ್ಟ್ರೇಟರ್ ಮುಂದೆ 164 ಹೇಳಿಕೆ ನೀಡಿದ್ದ. ಆತನ ಹೇಳಿಕೆ ಆಧರಿಸಿ ತನಿಖೆ ಮಾಡಬೇಕು ಎಂದು ಮ್ಯಾಜಿಸ್ಟ್ರೀಯಲ್ ಸೂಚನೆಯೂ ಇತ್ತು. ನಾವು ಕೂಡ ಸಾರ್ವಜನಿಕವಾಗಿ ಗಂಭೀರವಾಗಿ ಪರಿಗಣಿಸಿ ಎಸ್ಐಟಿ ಮಾಡಿದ್ದೇವೆ ಎಂದು ತಿಳಿಸಿದರು. ಧರ್ಮಸ್ಥಳದಲ್ಲಿ 13 ಸ್ಥಳಗಳಲ್ಲಿ ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿಕೆ ಇತ್ತು. ಅದರ ಪ್ರಕಾರ 13 ಸ್ಥಳಗಳನ್ನು ತೆಗೆದಿದ್ದಾರೆ. 6ನೇ ಸ್ಥಳದಲ್ಲಿ ಗಂಡಸಿನ ಅಸ್ಥಿಪಂಜರ ಸಿಕ್ಕಿರುವ ಬಗ್ಗೆ…









