ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ತಿಯಾಜ್ , ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಕ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ ರೂ.5000 ಮೌಲ್ಯದ 2.99 ಗ್ರಾಂ ತೂಕದ ಎಂ.ಡಿ.ಎಂ.ಸೊತ್ತು ಹಾಗೂ ಖಾಲಿ 5 ಪ್ಲಾಸ್ಟಿಕ್ ಕವರ್, ರೂ.30 ಲಕ್ಷ ಮೌಲ್ಯದ ಕಾರು, ಆರೋಪಿಗಳ ಕೈಯಲ್ಲಿದ್ದ ರೂ.45 ಸಾವಿರ ಮೌಲ್ಯದ 4 ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ರೌಂಡ್ಸ್ ನಲ್ಲಿದ್ದ ವೇಳೆ ಸಂಶಯದ ಮೇಲೆ ವಿಚಾರಿಸಿದಾಗ ಇವರು ಮಾದಕ ವಸ್ತು ಸೇವನೆ ಮತ್ತು ಮಾರಾಟ ಮಾಡುವ ವಿಚಾರ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. ನಂದಾವರದ ಗೌಸಿಯಾ ಎಂಬಲ್ಲಿ ರಸ್ತೆ ಬದಿಯಲ್ಲಿ…
Author: main-admin
ಸುಳ್ಯ: ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಅಪ್ತಾಪ್ತೆಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಬಂಧಿತ ಆರೋಪಿ. ಪುತ್ತೂರಿನಿಂದ ಸುಳ್ಯ ಮೂಲಕ ಮಡಿಕೇರಿಗೆ ತೆರಳುವ ಬಸ್ಸಿನಲ್ಲಿ ಮಡಿಕೇರಿಗೆ ತೆರಳಲು ಮನೆಯವರೊಂದಿಗೆ ಅಪ್ತಾಪ್ತರ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪಕ್ಕದಲ್ಲಿ ನಿಂತಿದ್ದ ಆರೋಪಿ ಅಬ್ದುಲ್ಲಾ ಅಪ್ರಾಪ್ತ ಬಾಲಕಿಯ ಮೈಗೆ ಕೈ ಹಾಕಿ, ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್ನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಇಂದು CM ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ನೂತನ ಕಚೇರಿಯಲ್ಲಿ ಸುಮಾರು 23 ಇಲಾಖೆಗಳ ಕಾರ್ಯಾಚರಣೆ ಆರಂಭವಾಗಲಿದೆ. ಆಧುನಿಕ ವ್ಯವಸ್ಥೆಯೊಂದಿಗೆ ತುಳುನಾಡಿನ ಪಾರಂಪರಿಕ ಶೈಲಿಯಲ್ಲಿ ಕಟ್ಟಡ ನಿರ್ಮಾವಾಗಿದೆ. ‘ದ.ಕ. ಜಿಲ್ಲಾಧಿಕಾರಿ ನೂತನ ಸಂಕೀರ್ಣ 75 ಕೋಟಿರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ.ಮೂರು ಮಹಡಿಗಳ ಸಂಕೀರ್ಣವು ಒಟ್ಟು 253159.67 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ.
ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದೆ. ಏ.24 ರಂದು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲೆಂಜಾಲು ಎಂಬಲ್ಲಿ ವಾಸವಿರುವ ವರ್ಗೀಸ್ ಥಾಮಸ್ ಎಂಬವರ ಮನೆಯಲ್ಲಿ ವನ್ಯ ಪ್ರಾಣಿಯ ಮಾಂಸದ ತುಂಡುಗಳನ್ನು ದಾಸ್ತಾನಿಟ್ಟಿರುವ ಕುರಿತು ಮಾಹಿತಿ ಬಂದಿದ್ದು, ಪಂಜ ವಲಯದ ಕಡಬ ಅರಣ್ಯಾಧಿಕಾರಿಗಳು ಆರೋಪಿ ಮನೆಗೆ ದಾಳಿ ನಡೆಸಿದಾಗ ಮನೆಯ ರೆಫ್ರಿಜರೇಟರ್ ಒಳಗಡೆ ಹಸಿ ಮಾಂಸ ಪತ್ತೆಯಾಗಿ ಬಳಿಕ ಆರೋಪಿ ಪರಾರಿಯಾಗಿರುವುದಾಗಿ ಆರೂಪಿಸಿ, ತದನಂತರ ಕೃತ್ಯಕ್ಕೆ ಉಪಯೋಗಿಸಿದೆ ಎನ್ನಲಾದ ಕೋವಿ, ವಾಹನವನ್ನು ಮತ್ತು ಹಸಿ ಮಾಂಸವನ್ನು ವಶಕ್ಕೆ ಪಡೆದುಕೊಂಡು, ಆರೋಪಿ ವರ್ಗಿಸ್ ಥಾಮಸ್ ವಿರುದ್ಧ ಭಾರತೀಯ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರನ್ವಯ ಮೊಕದ್ದಮೆ ದಾಖಲಿಸಿ, ಪುತ್ತೂರು ನ್ಯಾಯಾಲಯಕ್ಕೆ ಅರಣ್ಯ ಅಧಿಕಾರಿಗಳು ವರದಿಯನ್ನು ನೀಡಿದ್ದರು. ಪ್ರಕರಣದ ಆರೋಪಿ ವರ್ಗೀಸ್ ಥಾಮಸ್ ರವರು, ತಾನು ನಿರಪರಾಧಿ, ಈ ಪ್ರಕರಣಕ್ಕೂ…
ಮಂಗಳೂರು: ಮಂಗಳೂರಿನಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಸರ್ವೆ ಇಲಾಖೆಯ ಅಧಿಕಾರಿಯೊಬ್ಬರ ಮನೆ ಮತ್ತು ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಕಳೆದ ಒಂದು ಗಂಟೆಯಿಂದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಮೂರು ಕಾರುಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳ ತಂಡವು, ಮಂಗಳೂರಿನ ಬಿಜೈ 8ನೇ ಕ್ರಾಸ್ನಲ್ಲಿರುವ ಸರ್ವೆ ಅಧಿಕಾರಿ ಮಂಜುನಾಥ್ ಅವರ ಮನೆಗೆ ನುಗ್ಗಿ ಪರಿಶೀಲನೆ ನಡೆಸುತ್ತಿದೆ. ಮೂರು ಅಂತಸ್ತಿನ ಈ ಮನೆಯಲ್ಲಿ ಮಂಜುನಾಥ್ ಅವರ ಕುಟುಂಬ ವಾಸಿಸುತ್ತಿದೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಅವರು ಸದ್ಯ ಸರ್ವೆ ಇಲಾಖೆಯಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತುಮಕೂರು ಮೂಲದವರಾದ ಮಂಜುನಾಥ್ ಅವರ ಕುರಿತು ಲೋಕಾಯುಕ್ತಕ್ಕೆ ನಿರ್ದಿಷ್ಟ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಯ ಕುರಿತು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯನ್ನು ಮುಂದುವರಿಸಿದ್ದಾರೆ.
ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಇಪ್ಪತ್ತೆರಡು ವರ್ಷದ ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ ಸಾವನ್ನಪ್ಪಿದ ಮೃತ ದುರ್ದೈವಿ. ಈತ ರಜೆಯಲ್ಲಿದ್ದ ಕಾರಣ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗಿದ್ದು ಬಿಸಿರೋಡಿನಿಂದ ಮನೆ ಕಡೆಗೆ ಸಂಚರಿಸುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅಲಿಯಾಸ್ ಚೊಟ್ಟೆ ನೌಷದ್(39) ಬಂಧಿತರು. ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿದ್ದವು. ಈತ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ ಕೊಲೆಗೆ ಸಹಕರಿಸಿದ್ದಾನೆ. ಆರೋಪಿಗಳು ಕೊಲೆ ಮಾಡಿದ ನಂತರ ಕಾರಿನಲ್ಲಿ ಪರಾರಿಯಾಗಲು ಆರೋಪಿ ಅಬ್ದುಲ್ ಖಾದರ್ ಸಹಕರಿಸಿದ್ದನು. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ನೌಷದ್ ವಿರುದ್ಧ ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್…
ಮಂಗಳೂರು: “ಮೇ 16ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದು ಈ ವೇಳೆ ದೇಶದಲ್ಲೇ ಅತ್ಯಂತ ದೊಡ್ಡದಾದ ಹಾಗೂ ವಿವಿಧ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ ಒಳಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಲೋಕಾರ್ಪಣೆಗೊಳ್ಳಲಿದೆ” ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಸಿದ್ದರಾಮಯ್ಯ ಅವರು ಪಾಲ್ಗೊಳ್ಳುವ ಕಾರ್ಯಕ್ರಮವನ್ನು ಅವಿಸ್ಮರಣೀಯಗೊಳಿಸಬೇಕು ಎಂಬ ನಿಟ್ಟಿನಲ್ಲಿ ಅಂದು 8000 ಮಂದಿ ಫಲಾನುಭವಿಗಳಿಗೆ ಮನೆಯ ಆರ್ ಟಿಸಿ ವಿತರಣೆ, ಅಲ್ಪಸಂಖ್ಯಾತ ನಿಗಮ, ಅಂಬೇಡ್ಕರ್ ನಿಗಮ ಸಹಿತ ಮೂರು ನಿಗಮಗಳ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ“ ಎಂದರು. ”ಅದೇ ದಿನ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಕ್ರೀಡಾಂಗಣ ಉದ್ಘಾಟನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ 8 ವರ್ಷಗಳ ಹಿಂದೆಯೇ ಶಿಲಾನ್ಯಾಸ ನೆರವೇರಿತ್ತಾದರೂ ಅದು ಸಂಪೂರ್ಣಗೊಂಡಿರಲಿಲ್ಲ. ನಾನು, ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭಾ ಅಧ್ಯಕ್ಷರು ಸೇರಿ…
ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ವಿಶೇಷ ಅಂದರೆ ಈ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಕೇವಲ 4 ಮಂದಿ ಮಾತ್ರ ಸ್ಪೀಕರ್ ಗಳಿದ್ದು, ಕರ್ನಾಟಕ ಮತ್ತು ಅದರಲ್ಲೂ ಮಂಗಳೂರು (ಉಳ್ಳಾಲ) ಕ್ಷೇತ್ರದ ಜನತೆಗೆ ಇದೊಂದು ಹೆಮ್ಮೆ ಮತ್ತು ಸಂತೋಷದ ಸುದ್ದಿಯಾಗಿದೆ. ಮಹಾಠಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸೇರಿದಂತೆ ಈ ಮೂವರು ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದಾರೆ. ಕರ್ನಾಟಕ ವಿಧಾನಸಭೆಗೆ ಚುರುಕು ಮುಟ್ಟಿಸಿ ಅಮೂಲಾಗ್ರ ಬದಲಾವಣೆ ತಂದಿರುವ ಯು.ಟಿ.ಖಾದರ್ ಅವರಿಗೆ ಈ ಸ್ಥಾನ ಅರ್ಹವಾಗಿಯೇ ಸಂದಿವೆ.
ಮಂಗಳೂರು: ಭಕ್ತರು ತಮ್ಮ ಕಾಣಿಕೆಗಳನ್ನು ಡಿಜಿಟಲ್ ವಿಧಾನದ ಮೂಲಕ ಪಾವತಿಸಲು ಅನುಕೂಲ ವಾಗುವಂತೆ, ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಕೆ. ಮಜುಂದಾರ್ ಅವರು ಮಂಗಳೂರಿನ ಮಹತೋಭಾರ ಶ್ರೀ ಮಂಗಳಾ ದೇವಿ ದೇವಸ್ಥಾನದಲ್ಲಿ ಡಿಜಿಟಲ್ ಇ-ಹುಂಡಿಯನ್ನು ಉದ್ಘಾಟಿಸಲು ಭೇಟಿ ನೀಡಿದ್ದಾರೆ. ಈ ಇ-ಹುಂಡಿಯ ಪ್ರಮುಖ ಲಕ್ಷಣವೆಂದರೆ ಭಕ್ತರು ದರ್ಶನ ನಿಧಿ, ಪೂಜಾ ನಿಧಿ, ಕಟ್ಟಡ ನಿಧಿ, ಅನ್ನ ಪ್ರಸಾದ ನಿಧಿ ಇತ್ಯಾದಿ ದೇಣಿಗೆಯ ಉದ್ದೇಶವನ್ನು ಆನ್ಲೈನ್ನಲ್ಲಿ ಆಯ್ಕೆ ಮಾಡಬಹುದು ಮತ್ತು ಅದಕ್ಕೆ ರಶೀದಿಯನ್ನು ತಕ್ಷಣವೇ ನೀಡುವ ವ್ಯವಸ್ಥೆ ಇದೆ. ಭಕ್ತರು ತಮ್ಮ ಕಾಣಿಕೆಯನ್ನು ಪಾವತಿಸುವುದು ಈಗ ತುಂಬಾ ಸುಲಭವಾಗಲಿದೆ ಎಂದು ದೇವಾಲಯದ ಟ್ರಸ್ಟಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಿಳಿಸಿದ್ದಾರೆ. ಕೆನರಾ ಬ್ಯಾಂಕ್ ಡಿಜಿಟಲ್ ಕ್ರಮವನ್ನು ಪ್ರವರ್ತಿಸಲಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕ ಎಸ್.ಕೆ. ಮಜುಂದಾರ್ ಹೇಳಿದರು ಮತ್ತು ಸ್ಥಾಪಕ ವಲಯಕ್ಕೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಟ್ರಸ್ಟಿ ಅರುಣ್ ಜಿ, ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ಮಂಜುನಾಥ್ ಬಿ ಸಿಂಗೈ, ಡಿಜಿಎಂ…