Author: main-admin

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಸಹಿತ ಚಾಲಕ ಮೊಹಮ್ಮದ್‌ ನಿಜಾಂ ಯಾನೇ ನಿಜ್ಜು ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಬೆಳಗ್ಗೆ ಕಣ್ಣೂರು ಕಡೆಯಿಂದ ಬಂದ ವಾಹನವನ್ನು ಪಡೀಲ್‌ ಜಂಕ್ಷನ್‌ ಬಳಿಯ ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿದ್ದ ಪೊಲೀಸರು ತಡೆದು ನಿಲ್ಲಿಸಿದರು. ಪಿಕಪ್‌ನಲ್ಲಿ ಮರಳು ಕಂಡು ಬಂದಿದ್ದು, ಪರವಾನಿಗೆ ಬಗ್ಗೆ ವಿಚಾರಿಸಿದಾಗ ಆತನಲ್ಲಿ ಯಾವುದೇ ಪರವಾನಿಗೆ ಇರಲಿಲ್ಲ. ವಿಚಾರಣೆ ವೇಳೆ ಅರ್ಕುಳ ಮೈದಾನದಿಂದ ತುಂಬಿಸಿಕೊಂಡು ತಂದಿರುವುದಾಗಿ ತಿಳಿಸಿದ್ದಾನೆ. 4 ಲಕ್ಷ ರೂ. ಮೌಲ್ಯದ ಪಿಕಪ್‌ ವಾಹನ ಮತ್ತು 2,500 ರೂ. ಮೌಲ್ಯದ ಮರಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

Read More

ಗುಜರಾತ್ ಜೂನ್ 12: 242 ಪ್ರಯಾಣಿಕರಿದ್ದ ಎರ್ ಇಂಡಿಯಾ ವಿಮಾನ ಗುಜರಾತ್​ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್​ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ​ ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಏರ್ ಇಂಡಿಯಾ ವಿಮಾನ 171, ಬೋಯಿಂಗ್ 787 ಡ್ರೀಮ್‌ಲೈನರ್, ರನ್‌ವೇಯಿಂದ ಹೊರಬಂದ ಕೆಲವೇ ನಿಮಿಷಗಳ ನಂತರ ನಗರದ ಮೇಘಾನಿ ಪ್ರದೇಶದಲ್ಲಿ ಅಪಘಾತಕ್ಕೆ ಈಡಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ಆಘಾತಕಾರಿ ಚಿತ್ರಗಳು ಮಧ್ಯಾಹ್ನದ ವೇಳೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತದ ಸ್ಥಳದಿಂದ ಹೊರಹೊಮ್ಮುತ್ತಿರುವ ದೊಡ್ಡ ಹೊಗೆಯನ್ನು ತೋರಿಸಿವೆ. ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು.…

Read More

ಕುಂದಾಪುರ, ಜೂ. 12 : ಕುಂದಾಪುರದ ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್(32) ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇದುವರೆಗೂ ಅವರ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ. ಪೊಲೀಸರು ಹೀನಾ ಕೌಸರ್ ಪತ್ತೆಗಾಗಿ ಎಲ್ಲ ಆಯಾಮಗಳಿಂದಲೂ ಹುಡುಕಾಟ ನಡೆಸುತ್ತಿದ್ದು, ಆದರೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆಕೆಯ ಮೊಬೈಲ್ ಸಹ ಸ್ವಿಚ್‌ಆಫ್ ಆಗಿದೆ. ಪತ್ನಿ ನಾಪತ್ತೆ ವಿಚಾರ ತಿಳಿಯುತ್ತಿದ್ದಂತೆ ವಿದೇಶದಲ್ಲಿ ಉದ್ಯೋಗದಲ್ಲಿದ್ದ ಪತಿ ಮಹಮ್ಮದ್ ಇಕ್ಬಾಲ್ ಊರಿಗೆ ಮರಳಿದ್ದಾರೆ.ಜೆಎಲ್‌ಬಿ ರಸ್ತೆಯ ಮನೆಯಲ್ಲಿ ತಾಯಿ ಹಾಗೂ ತನ್ನಿಬ್ಬರು ಮಕ್ಕಳೊಂದಿಗೆ ವಾಸವಿದ್ದ ಹೀನಾ ಕೌಸರ್ ಜೂ. 9ರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟಿದ್ದಾರೆ. ಸ್ಕೂಟಿಯನ್ನು ಕೋಡಿಯ ಸೇತುವೆ ಬಳಿ ಇಟ್ಟು, ಅದರಲ್ಲಿ ಡೆತ್ ನೋಟ್ ಕೂಡ ಬರೆದು ಚಪ್ಪಲಿ ಸಹ ಅಲ್ಲಿಯೇ ಬಿಟ್ಟು, ಪಂಚಗಂಗಾವಳಿ ನದಿಗೆ ಹಾರಿರಬಹುದು ಎಂದು ಬಿಂಬಿಸುವಂತೆ ಕಥೆ ಹೆಣೆದಿರುವುದಾಗಿ ಎನ್ನಲಾಗಿದೆ.ಆಕೆಯ ಪತ್ತೆಗಾಗಿ ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ದಿನವಿಡೀ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಆದರೆ…

Read More

ತೀರ್ಥಹಳ್ಳಿ ಜೂನ್ 12: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಕಾಂತಾರ ಚಾಪ್ಟರ್ 1 ಸಿನೆಮಾಕ್ಕೆ ವಿಘ್ನಗಳೇ ಹೆಚ್ಚಾಗಿವೆ. ಚಿತ್ರ ಹಲವು ವಿವಾದಗಳಿಂದಾಗಿ ಸುದ್ದಿಯಾಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ ಇಬ್ಬರು ಕಲಾವಿದರು ಈ ಹಿಂದೆ ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಂತಾರ ಚಾಪ್ಟರ್ 1 ಸಿನಿಮಾ ಕಲಾವಿದ ಹೃದಯಾಘಾತದಿಂದ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು ಅವರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ ಕೆ ಎಂದು ಗುರುತಿಸಲಾಗಿದೆ. ಅವರು ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲು ಆಗುಂಬೆ ಹೋಂ ಸ್ಟೇಯಲ್ಲಿ ಕಳೆದ ರಾತ್ರಿ ತಂಗಿದ್ದ ವೇಳೆ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಕೂಡಲೇ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾಂತಾರ ಚಾಪ್ಟರ್ 1 ಸಿನಿಮಾ ಚಿತ್ರೀಕರಣ ಆರಂಭವಾದ ನಂತರ ಇದು ಮೂರನೇ ಸಾವಾಗಿದೆ. ಕಾಮಿಡಿ ಕಿಲಾಡಿಗಳು ಸೀಸನ್‌ 3′ ವಿನ್ನರ್…

Read More

ಬಂಟ್ವಾಳ: ಪಾಣೆಮಂಗಳೂರು ಸೇತುವೆ ಮೇಲೆ ಸಂಚಾರ ನಿಷೇಧ ಹೇರಿ ಹಾಕಲಾದ ಕಬ್ಬಿಣದ ತಡೆಯನ್ನು ಮುರಿದು ಸರಕಾರಕ್ಕೆ ಸಾವಿರಾರು ರೂ ನಷ್ಟ ಉಂಟು ಮಾಡಿದ ವಾಹನ ಚಾಲಕನ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ನಝೀರ್ ಅಹಮದ್ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.ಬಂಟ್ವಾಳ ತಾಲೂಕು ಬಿ ಮೂಡಾ ಗ್ರಾಮದ ಹಳೇ ರಾಷ್ಟ್ರೀಯ ಹೆದ್ದಾರಿ ಎನ್. ಹೆಚ್. 48 ರ ಸೇತುವೆಯನ್ನು 2004-05 ರಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ನಿರ್ವಹಣೆ ಮತ್ತು ದುರಸ್ಥಿ ಬಗ್ಗೆ ಪುರಸಭೆಗೆ ಹಸ್ತಾಂತರಿಸಿರುತ್ತಾರೆ. ಇದು ಸ್ವಾತಂತ್ರ್ಯ ಪೂರ್ವ ಕಾಲದ ಸೇತುವೆಯಾಗಿದ್ದು, ಈ ಹಳೆಯ ಸೇತುವೆಯಲ್ಲಿ ಪ್ರಸ್ತುತ ಸರಕಾರ ಘನ ವಾಹನ ಸಂಚಾರವನ್ನು ನಿರ್ಬಂಧಿಸಿ ರಸ್ತೆಯ 2 ಬದಿಗಳಲ್ಲಿ ಕಬ್ಬಿಣದ ತಡೆಗಳನ್ನು ಹಾಕಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಿದ್ದು, ಈ ರಸ್ತೆಯಲ್ಲಿ ಸಾವರ್ಜನಿಕ ಲಘು ವಾಹನಗಳು ಮಾತ್ರ ಸಂಚರಿಸುತ್ತಿರುವುದಾಗಿದೆ. ಜೂನ್. 9 ರಂದು ಕೆಎ.19.ಎಇ.5621 ನೇ ವಾಹನವನ್ನು ಅದರ…

Read More

ಮಂಗಳೂರು,: ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್‌ಪೆಕ್ಟರ್‌ ಪ್ರಮೋದ್ ಕುಮಾರ್ ಸುರತ್ಕಲ್ ಠಾಣೆಗೆ , ಚಿಕ್ಕಮಗಳೂರು ಸೆನ್ ಠಾಣೆಯಿಂದ ಗವಿರಾಜು ಆರ್.ಪಿ.ಗ್ರಾಮಾಂತರ ಪೊಲೀಸ್ ಠಾಣೆಗೆ, ಮಂಗಳೂರು ಕರಾವಳಿ ಕಾವಲು ಪಡೆಯಿಂದ ಅನಂತಪದ್ಮನಾಭ ಪೂರ್ವ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗಣೇಶ್ ಕೆ.ಎಲ್.ಅವರನ್ನು ಆದೇಶ ಮಾರ್ಪಡಿಸಿ ಉಡುಪಿ ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ.

Read More

ಮಂಗಳೂರು ಜೂನ್ 11: ನವಮಂಗಳೂರು ಬಂದರು ಪ್ರಾಧಿಕಾರದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಮಾಜಿ ಶಾಸಕ ಮೊಯ್ದೀನ್ ಬಾವಾ ಮತ್ತು ಅವರ ಇಬ್ಬರು ಬೆಂಬಲಿಗರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 10 ರ ಸಂಜೆ NMPA ಕಾರ್ಯದರ್ಶಿ ಸಲ್ಲಿಸಿದ ದೂರಿನ ಪ್ರಕಾರ, ಜೂನ್ 9 ರ ರಾತ್ರಿ 8 ಗಂಟೆ ವೇಳೆಗೆ ಘಟನೆ ನಡೆದಿದ್ದು. ಕೆಲಸದ ಮಸೂದೆಯ ಅನುಮೋದನೆಯ ಕುರಿತು ಚರ್ಚಿಸಲು ಮೊಯ್ದೀನ್ ಬಾವಾ ಇತರ ಇಬ್ಬರ ಜತೆಗೂಡಿ ಕಚೇರಿಗೆ ಬಲವಂತವಾಗಿ ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೂವರೂ ಕೆಲಸಕ್ಕೆ ಸುಮಾರು 15 ನಿಮಿಷಗಳ ಕಾಲ ಅಡ್ಡಿಪಡಿಸಿ, ಅಧಿಕಾರಿಯನ್ನು ಕಚೇರಿಯಿಂದ ಹೊರಹೋಗದಂತೆ ತಡೆದರು ಎಂದು ವರದಿಯಾಗಿದೆ.

Read More

ಬಂಟ್ವಾಳ : ಅಡಿಕೆ ಕೃಷಿಕರಿಂದ ಅಡಿಕೆ ಖರೀದಿ ಮಾಡಿ ಬಳಿಕ ಹಣ ನೀಡದೆ ಅಡಿಕೆ ವ್ಯಾಪಾರಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಅಡಿಕೆ ಕೃಷಿಕರು ಆರೋಪಿ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿ ಎ.ಬಿ. ಸುಪಾರಿ ಎಂಬ ಅಂಗಡಿ ಹೊಂದಿರುವ ನಾವೂರು ಗ್ರಾಮದ ಮೈಂದಾಳ ನಿವಾಸಿ ನೌಫಲ್‌ ಆರೋಪಿಯಾಗಿದ್ದಾನೆ. ಆತನ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಮೇಲೆ ಸುಮರು 50ಕ್ಕೂ ಅಧಿಕ ಅಡಿಕೆ ಬೆಳೆಗಾರರಿಗೆ ಮೋಸ ಮಾಡಿರುವ ಆರೋಪವಿದ್ದು, ಕೊಟ್ಯಾಂತ ರೂಪಾಯಿ ಬಾಕಿ ಇರಿಸಿಕೊಂಡು ಎಸ್ಕೇಪ್ ಆಗಿದ್ದಾನೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಪ್ರಕಾರ ಬಂಟ್ವಾಳ ನಿವಾಸಿ ಪ್ರವೀಣ್‌ ಡಿ ಸೋಜಾ (45)ಎಂಬವರು ತಾವು ಬೆಳೆದ ಅಡಿಕೆಯನ್ನು ಆರೋಪಿತನಾದ ನಾವೂರ ಗ್ರಾಮದ ಮೈಂದಾಳದ ನಿವಾಸಿ ನೌಫಲ್‌ ಮಹಮ್ಮದ್‌ ಎಂಬವರ ಎ. ಬಿ. ಸುಪಾರಿ ಅಂಗಡಿಗೆ ಮಾರಾಟ ಮಾಡಿದ್ದಾರೆ. ಆರೋಪಿ ಪ್ರವೀಣ್ ಅವರಿಗೆ ಅಡಿಕೆ ಮಾರಾಟ ಮಾಡಿದಾಗ ಸ್ವಲ್ಪ…

Read More

ಕಡಬ: ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕೃತ್ಯದಲ್ಲಿ ತೊಡಗಿದ್ದ 8 ಮಂದಿ ಪರಾರಿಯಾಗಿದ್ದು, 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ ನಗದು ಹಣ 3,560 ರೂ ವಶಕ್ಕೆ ಪಡೆದುಕೊಂಡು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Read More

ಮಂಗಳೂರು: ‘ಒಂದು ರಾಷ್ಟ್ರ, ಒಂದು ತುರ್ತು ಸಂಖ್ಯೆ – 112’ ಉಪಕ್ರಮದಡಿಯಲ್ಲಿ ಪರಿಚಯಿಸಲಾದ ಏಕೀಕೃತ ತುರ್ತು ಪ್ರತಿಕ್ರಿಯೆ ಸಂಖ್ಯೆ 112 ಅನ್ನು ನಾಗರಿಕರು ಬಳಸುವಂತೆ ಮಂಗಳೂರು ನಗರ ಪೊಲೀಸರು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಈ ಸಂಯೋಜಿತ ವ್ಯವಸ್ಥೆಯು ತುರ್ತು ಸಂದರ್ಭಗಳಲ್ಲಿ ತ್ವರಿತ ಮತ್ತು ಸಂಘಟಿತ ಪ್ರತಿಕ್ರಿಯೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಹಿಂದೆ, ಸಾರ್ವಜನಿಕರು ಪೊಲೀಸ್, ಅಗ್ನಿಶಾಮಕ ಅಥವಾ ವಿಪತ್ತು ಪ್ರತಿಕ್ರಿಯೆಗಾಗಿ ಪ್ರತ್ಯೇಕ ಸಹಾಯವಾಣಿಗಳನ್ನು ಸಂಪರ್ಕಿಸಬೇಕಾಗಿತ್ತು. ಹೊಸ ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ (ERSS) ನೊಂದಿಗೆ, ಎಲ್ಲಾ ನಿರ್ಣಾಯಕ ಸೇವೆಗಳನ್ನು ಪ್ರವೇಶಿಸಲು 112 ಅನ್ನು ಡಯಲ್ ಮಾಡಿದರೆ ಸಾಕು.ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, ಅಪಘಾತಗಳು, ಕೊಲೆ, ದರೋಡೆ, ಕಳ್ಳತನ, ಗಲಭೆಗಳು ಅನುಮಾನಾಸ್ಪದ ವ್ಯಕ್ತಿಗಳು ಅಥವಾ ವಾಹನಗಳು ಕಂಡುಬಂದರೆ ಯಾವುದೇ ಘಟನೆಗಳಂತಹ ಸಂದರ್ಭಗಳಲ್ಲಿ ನಾಗರಿಕರು 112 ಅನ್ನು ಡಯಲ್ ಮಾಡಬಹುದು. ಈ ವ್ಯವಸ್ಥೆಯು ಕರೆಗೆ ತುರ್ತು ಪ್ರತಿಕ್ರಿಯೆ ನೀಡುತ್ತದೆ ಮತ್ತು ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲು ಹತ್ತಿರದ ಪೊಲೀಸ್ ವಾಹನಗಳನ್ನು…

Read More