ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಎಂಬಲ್ಲಿನ ದೀಪಕ್ ಬಾರ್ ಮುಂಭಾಗ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಗಾಯಗೊಂಡವರು. ಆರೋಪಿಗಳನ್ನು ಬಜರಂಗದಳ ಕಾರ್ಯಕರ್ತ ಸುರತ್ಕಲ್ ಠಾಣೆಯ ರೌಡಿಶೀಟರ್ ಗುರುರಾಜ್, ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ನಿಝಮ್ ಮತ್ತು ಮುರ್ಷಿದ್ ಇತರ ಸ್ನೇಹಿತರೊಂದಿಗೆ ದೀಪಕ್ ಬಾರ್ ಗೆ ಮದ್ಯ ಖರೀದಿಸಲು ಹೋಗಿದ್ದು ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರ ತಂಡ ಚೂರಿಯಿಂದ ಇರಿದಿದೆ. ನಿಝಾಮ್ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು ಆತನನ್ನು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಸನ್ ಮುರ್ಷಿದ್…
Author: main-admin
ನವದೆಹಲಿ : ಈ ವಾರ ದೆಹಲಿ-ದಿಮಾಪುರ ಇಂಡಿಗೋ ವಿಮಾನದಲ್ಲಿ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ವಿಮಾನದಲ್ಲಿ ಪವರ್ ಬ್ಯಾಂಕ್’ಗಳ ಬಳಕೆಯ ಮೇಲೆ ಕಠಿಣ ನಿಯಂತ್ರಣವನ್ನ ಜಾರಿಗೆ ತರಲು ಯೋಜಿಸುತ್ತಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ನಿರ್ಗಮನಕ್ಕಾಗಿ ಟ್ಯಾಕ್ಸಿ ಮಾಡುವಾಗ ದೆಹಲಿ-ದಿಮಾಪುರ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರ ಪವರ್ ಬ್ಯಾಂಕ್ ಬೆಂಕಿಗೆ ಆಹುತಿಯಾದ ಘಟನೆಯ ನಂತರ ಈ ಬೆಳವಣಿಗೆ ಸಂಭವಿಸಿದೆ. ಆದಾಗ್ಯೂ, ಕ್ಯಾಬಿನ್ ಸಿಬ್ಬಂದಿ ತಕ್ಷಣ ಬೆಂಕಿಯನ್ನು ನಂದಿಸಿದ್ದರಿಂದ ಯಾವುದೇ ಗಾಯಗಳಾಗಿಲ್ಲ. ವಿಮಾನಗಳಲ್ಲಿ ಪವರ್ ಬ್ಯಾಂಕ್ಗಳ ಬಳಕೆಯ ಬಗ್ಗೆ ಹೆಚ್ಚುತ್ತಿರುವ ಕಳವಳ.!ಇಂಡಿಗೋ ವಿಮಾನದಲ್ಲಿ ದಿಮಾಪುರಕ್ಕೆ ಪ್ರಯಾಣಿಸುವಾಗ ಪ್ರಯಾಣಿಕರ ಪವರ್ ಬ್ಯಾಂಕ್ ಬೆಂಕಿಗೆ ಆಹುತಿಯಾದ ನಂತರ ಲಿಥಿಯಂ ಬ್ಯಾಟರಿ ಚಾಲಿತ ಸಾಧನಗಳ ಬಗ್ಗೆ ಸುರಕ್ಷತಾ ಕಾಳಜಿ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ, ಪ್ರಯಾಣಿಕರು ಮತ್ತು ವಿಮಾನಯಾನ ಸಂಸ್ಥೆಗಳು ವಿಮಾನಗಳಲ್ಲಿ ಪವರ್ ಬ್ಯಾಂಕ್ಗಳನ್ನು ಹೇಗೆ ನಿರ್ವಹಿಸುತ್ತವೆ ಎಂಬುದರ ಕುರಿತು ಡಿಜಿಸಿಎ ಸಮಗ್ರ ಪರಿಶೀಲನೆಯನ್ನು ಪ್ರಾರಂಭಿಸಿದೆ.…
ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅಕ್ಟೋಬರ್ 28 ರಂದು ಪಿ-ಕ್ಯಾಪ್ ವಿತರಣೆಗೆ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ದಿನಾಂಕ 28-10-2025 ರಂದು ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರಿಂದ ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆದುದರಿಂದ, ಎಲ್ಲಾ ಕಮೀಷನರೇಟ್ ಹಾಗೂ ಜಿಲ್ಲೆಗಳಿಂದ ತಲಾ ಒಬ್ಬರು ಪಿಸಿ ಅಥವಾ ಹೆಚ್ಸಿ ಗಳನ್ನು ಸದರಿ ಕಾರ್ಯಕ್ರಮಕ್ಕೆ ನಿಯೋಜಿಸಿ, ಸದರಿಯವರು ದಿನಾಂಕ 27-10-2025 ರಂದು ಬೆಳಿಗ್ಗೆ 9.00 ಘಂಟೆಗೆ ಡಿ.ಸಿ.ಪಿ., ವಿಧಾನ ಸೌಧ ಸೆಕ್ಯೂರಿಟಿ, ಬೆಂಗಳೂರು ಇವರ ಮುಂದೆ ವಿಧಾನ ಸೌಧ, ಬ್ಯಾಂಕ್ವೆಟ್ ಹಾಲ್ನಲ್ಲಿ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿ ಕಳುಹಿಸಲು ಸೂಚಿಸಲಾಗಿದೆ. ಸದರಿ ಕಾರ್ಯಕ್ರಮಕ್ಕೆ ನಿಯೋಜಿಸುವ ಪಿಸಿ ಅಥವಾ ಹೆಚ್ಸಿ ರವರ ಪಿ-ಕ್ಯಾಪ್ ಅಳತೆಯ ವಿವರವನ್ನು ದಿನಾಂಕ 23-10-2025 ರಂದು ಸಂಜೆ 4.00 ಘಂಟೆಯೊಳಗೆ ಐ.ಜಿ.ಪಿ., ಕೇಂದ್ರಸ್ಥಾನ, ಪೊಲೀಸ್ ಪ್ರಧಾನ…
ಮಂಗಳೂರು: ಫೇಸ್ಬುಕ್ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಹಂಚಿದ ಆರೋಪದ ಮೇರೆಗೆ ಕಂಕನಾಡಿ ನಗರ ಠಾಣೆಯಲ್ಲಿ ನಝೀರ್ ಮಂಗಳೂರು ಮತ್ತು Gandhian Nehruvian Magar ಎಂಬ ಎರಡು ಫೇಸ್ಬುಕ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅ.21ರಂದು ಅಪರಾಹ್ನ 3 ಗಂಟೆಗೆ ತಾನು ಸಾಮಾಜಿಕ ಜಾಲತಾಣಾ ಮಾನಿಟರಿಂಗ್ ನಿಗಾವಣೆ ಕರ್ತವ್ಯದ ಮೇರೆಗೆ ಫೇಸ್ಬುಕ್ ವೀಕ್ಷಿಸುತ್ತಿರುವಾಗ ನಝೀರ್ ಮಂಗಳೂರ್ ಎಂಬ ಫೇಸ್ಬುಕ್ ಖಾತೆಯಿಂದ Mumthas Abdul Nelyadka ಮತ್ತು Mahesh Vikram Hegde ಎಂಬ ಫೇಸ್ಬುಕ್ ಖಾತೆಗಳಿಗೆ ಟ್ಯಾಗ್ ಮಾಡಿರುವ Gandhian Nehruvian Magar ಎಂಬ ಫೇಸ್ಬುಕ್ ಖಾತೆಯ ಮೂಲಕ Ai video but funny ಎಂಬ ಶೀರ್ಷೀಕೆ ಇರುವ 10 ಸೆಕೆಂಡ್ಗಳ ವಿಡಿಯೋ ತುಣುಕನ್ನು ಶೇರ್ ಮಾಡಿ ಸಮಾಜದ ವಿವಿಧ ಧರ್ಮ ಹಾಗೂ ವರ್ಗಗಳ ಜನರಲ್ಲಿ ದ್ವೇಷದ ಭಾವನೆ ಹುಟ್ಟು ಹಾಕಿ ಅಪರಾಧ ಕೃತ್ಯ ಎಸಗುವಂತೆ ಮಾಡಲಾಗಿದೆ. ಹಾಗಾಗಿ ನಝೀರ್ ಮಂಗಳೂರ್ ಮತ್ತು Gandhian Nehruvian Magar ಎಂಬ ಫೇಸ್ಬುಕ್ ಖಾತೆದಾರರ ವಿರುದ್ಧ ಕಾನೂನು ಕ್ರಮ…
ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ ಮಹಿಳೆಯಿಂದ 42 ಲಕ್ಷ ಸುಲಿಗೆ ಮಾಡಿದ ಪ್ರಕರಣವೊಂದು ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆ ಅಪರಿಚಿತರು ಕರೆ ಮಾಡಿ 42 ಲಕ್ಷ ರೂ. ಆನ್ಲೈನ್ ಮೂಲಕ ವಂಚಿಸಿದ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ.ಅ.7ರಂದು ತನ್ನ ಮೊಬೈಲ್ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಮುಂಬೈಯ ಕೊಲಾಬ ಪೊಲೀಸ್ ಠಾಣೆಯಿಂದ ತಾನು ಮಾತನಾಡುತ್ತಿರುವೆ. ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಲಾಗಿದೆ. ಬಳಿಕ ತನ್ನನ್ನು ಮುಂಬೈಗೆ ಬರುವಂತೆ ಹೇಳಿದ್ದಾನೆ. ನನಗೆ ಮುಂಬೈಗೆ ಬರಲು ಆಗುವುದಿಲ್ಲ ಎಂದಾಗ ಅಪರಿಚಿತ ವ್ಯಕ್ತಿಯು ತನ್ನಿಂದ ಪತ್ರ ಬರೆಯಿಸಿಕೊಂಡು ವಾಟ್ಸ್ಆ್ಯಪ್ಗೆ ಕಳುಹಿಸುವಂತೆ ಹೇಳಿದ್ದ. ಹಾಗೇ ವಾಟ್ಸ್ಆ್ಯಪ್ ವಿಡಿಯೋ ಕರೆ ಮಾಡಿ ಸಿಬಿಐ ಅಧಿಕಾರಿ, ಆರ್ಬಿಐ ಮತ್ತು ಸುಪ್ರಿಂ ಕೋರ್ಟ್ ನ್ಯಾಯಾಧೀಶರ ಬಗ್ಗೆ ಉಲ್ಲೇಖಿಸಿ ತನ್ನ ವೈಯಕ್ತಿಕ ಹಾಗೂ ಬ್ಯಾಂಕ್ ವಿವರಗಳನ್ನು ಕೇಳಿ ಪಡೆದುಕೊಂಡಿದ್ದ. ನಂತರ ನಾನು ಅ.8ರಿಂದ 17ರ ಮಧ್ಯೆ ಆರೋಪಿಯ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 42,00,150 ರೂ.ವನ್ನು ವರ್ಗಾವಣೆ…
ಎಮ್.ಸಿ.ಸಿ.ಬ್ಯಾಂಕಿನ ಆಡಳಿತ ಕಛೇರಿ ಮಂಗಳೂರಿನಲ್ಲಿ ಅಕ್ಟೋಬರ್ 21, 2025ರಂದು ಸಂಭ್ರಮದಿ0ದ ದೀಪಾವಳಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಮ್ಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಸಮಾರಂಭದಲ್ಲಿ ಗೌರವಾನ್ವಿತ ಮುಖ್ಯ ಅತಿಥಿಗಳಾದ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶ್ರೀ ಪ್ರತಾಪ್ ಸಿಂಗ್ ಥೋರಟ್ ಮತ್ತು ಮಂಗಳೂರು ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ನಜ್ಮಾ ಫಾರೂಕ್ ಅವರು ಉಪಸ್ಥಿತರಿದ್ದರು. ಕತ್ತಲೆಯ ಮೇಲೆ ಬೆಳಕಿನ ಗೆಲುವು ಮತ್ತು ಒಳ್ಳೆಯತನದ ವಿಜಯವನ್ನು ಸಂಕೇತಿಸುವ ದೀಪ ಬೆಳಗಿಸುವಿಕೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮುಖ್ಯ ಅತಿಥಿ ನಜ್ಮಾ ಫಾರೂಕ್ ಮತ್ತು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಅವರು ದೀಪಾವಳಿ ಆಚರಣೆಯ ಶುಭ ಆರಂಭವನ್ನು ಸೂಚಿಸುವ ಮೂಲಕ ದೀಪವನ್ನು ಬೆಳಗಿಸಿದರು. ಆಚರಣೆಯ ಭಾಗವಾಗಿ, ಶಾಖೆಯಲ್ಲಿನ ಗ್ರಾಹಕರು ಬೆಳಕು ಮತ್ತು ಸಕಾರಾತ್ಮಕತೆಯ ಹರಡುವಿಕೆಯನ್ನು ಸಂಕೇತಿಸುವ ಮುಖ್ಯ ವಿಧ್ಯುಕ್ತ ದೀಪದಿಂದ ದೀಪಗಳನ್ನು ಬೆಳಗಿಸಿದರು.ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಎಮ್ಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ…
ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ. ಆರೋಪಿ ಅಬ್ದುಲ್ಲಾ (40) ಎಂಬಾತ ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದ್ದು ಈ ವೇಳೆ ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ. ಒಂದು ಗುಂಡು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು. ಆರೋಪಿಯನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಈ ಬಗ್ಗೆ…
ಉಡುಪಿ: ಕಾರ್ಕಳದ ಬೆಳ್ಮಣ್ನ ಲಾಡ್ಜ್ನಲ್ಲಿ ಇತ್ತೀಚೆಗೆ ನಡೆದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತನ ಮೊಬೈಲ್ ಫೋನ್ ಅನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. “ತನಿಖಾ ತಂಡವು ಫೋನ್ ದತ್ತಾಂಶ, ಬ್ಯಾಂಕ್ ವಹಿವಾಟುಗಳು ಮತ್ತು ಚಾಟ್ ದಾಖಲೆಗಳ ಆಧಾರದ ಮೇಲೆ ಆರೋಪಿಯನ್ನು ಪ್ರಶ್ನಿಸಿದೆ. ಆರೋಪಿಯ ಡಿಜಿಟಲ್ ಸಾಧನಗಳನ್ನು ಸಹ ಪರಿಶೀಲಿಸಲಾಗಿದೆ. ಇದರ ಜೊತೆಗೆ, ಮೃತನ ಸ್ನೇಹಿತರು, ಸಂಬಂಧಿಕರು ಮತ್ತು ಆಪ್ತರನ್ನೂ ವಿಚಾರಣೆ ನಡೆಸಲಾಗಿದೆ” ಎಂದು ಎಸ್ಪಿ ಹೇಳಿದ್ದಾರೆ. “ಇಲ್ಲಿಯವರೆಗೆ, ತನಿಖೆಯಲ್ಲಿ ಯಾವುದೇ ಹನಿಟ್ರ್ಯಾಪ್ನ ಸುಳಿವು ಸಿಕ್ಕಿಲ್ಲ. ಆರೋಪಿ ಮಹಿಳೆಯ ಫೋನ್ನಲ್ಲಿ ಯಾವುದೇ ಅಶ್ಲೀಲ ಫೋಟೋಗಳು ಅಥವಾ ವೀಡಿಯೊಗಳು ಕಂಡುಬಂದಿಲ್ಲ, ಹಾಗೆಯೇ ಅವರು ಅಂತಹ ಯಾವುದೇ ವೀಡಿಯೊಗಳನ್ನು ಯಾರಿಗೂ ಕಳುಹಿಸಿರುವುದು ಕಂಡುಬಂದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಸೆಪ್ಟೆಂಬರ್ನಲ್ಲಿ ಅಭಿಷೇಕ್ ಅವರು ಆರೋಪಿ ಮಹಿಳೆಗೆ ವರ್ಗಾಯಿಸಿದ್ದ ಹಣವನ್ನು ಅದೇ ದಿನ ಅವರಿಗೆ ಹಿಂತಿರುಗಿಸಲಾಗಿದೆ. ಸಾವಿಗೂ ಮುನ್ನ, ಅಭಿಷೇಕ್ ಆರೋಪಿ ಮಹಿಳೆಯ…
ಬೆಳ್ತಂಗಡಿ : ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕಳೆಂಜ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನುಅನುರಾಜ್ (43) ಎಂದು ಗುರುತಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಬಾಬು ಎಂಬವರ ತಮ್ಮ ಅನುರಾಜ್ರವರು ಬಾಬು ಅವರ ಮನೆಯ ಬಳಿ ತನ್ನ ತಾಯಿ ಮತ್ತು ಹೆಂಡತಿ ಮಕ್ಕಳೊಂದಿಗೆ ವಾಸವಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ವಿಪರೀತ ಮದ್ಯ ಸೇವನೆ ಮಾಡುವ ಅಭ್ಯಾಸವನ್ನು ಹೊಂದಿದ್ದರು. ಅ.17ರಂದು ಎಂದಿನಂತೆ ಸಂಜೆ ಸಮಯದಲ್ಲಿ ಕಾಯರ್ತಡ್ಕ ಅಂಗಡಿಗೆ ಹೋಗಿ ಸಂಜೆ 6-00 ಗಂಟೆ ಸುಮಾರಿಗೆ ವಾಪಾಸ್ಸು ಮನೆಗೆ ಬಂದು ಮನೆಯಲ್ಲಿದ್ದರು. ರಾತ್ರಿ 8-00 ಗಂಟೆಯ ಸುಮಾರಿಗೆ ತನ್ನ ಮನೆಯಲ್ಲಿ ಯಾವುದೋ ವಿಷ ಪದಾರ್ಥವನ್ನು ಸೇವನೆ ಮಾಡಿ ಬಾಯಿಯಿಂದ ನೊರೆ ಬರುತ್ತಾ ಮಾತನಾಡಲು ಆಗದ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಉಜಿರೆ ಬೆನಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಯ ವೈಧ್ಯರು ಪ್ರಥಮ ಚಿಕಿತ್ಸೆ ನೀಡಿ, ಅದೇ ದಿನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಹಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅ.18-10-2025 ರಂದು…
ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು. ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ…







