Author: main-admin

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಹಿಳಾ ಘಟಕವು, ಸಂಸ್ಥೆಯ ಇನ್ನೋವೇಶನ್ ಕೌನ್ಸಿಲ್ (IIC) ಸಹಯೋಗದೊಂದಿಗೆ, 2026ರ ಮಾರ್ಚ್ 17ರಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ‘ಮಹಿಳಾ ಸಬಲೀಕರಣ’ ಕುರಿತು ಚಿಂತನಶೀಲ ಉಪನ್ಯಾಸವನ್ನು ಆಯೋಜಿಸಿತ್ತು. ಭಾರತೀಯ ರಕ್ಷಣಾ ಇಂಜಿನಿಯರಿಂಗ್ ಸೇವೆಯ (IDSE) ಪ್ರತಿಷ್ಠಿತ ಅಧಿಕಾರಿ ಶ್ರೀಮತಿ ನಾಜ್ನೀನ್ ಬಾನು ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ವಿಶ್ವವಿದ್ಯಾಲಯದ ಹಿರಿಯ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀಮತಿ ನಾಜ್ನೀನ್ ಬಾನು ಅವರು, ತಮ್ಮ ವೈಯಕ್ತಿಕ ಮತ್ತು ವೃತ್ತಿಜೀವನದ ಸ್ಪೂರ್ತಿದಾಯಕ ಪಯಣವನ್ನು ಹಂಚಿಕೊಂಡರು. ಇದೇ ವೇಳೆ, ಐ.ಡಿ.ಎಸ್.ಇ (IDSE) ಕ್ಷೇತ್ರದಲ್ಲಿ ಮಹಿಳೆಯರ ಪ್ರಾತಿನಿಧ್ಯ ಬಹಳ ಕಡಿಮೆ ಇರುವುದರ ಬಗ್ಗೆ ಅವರು ಗಮನ ಸೆಳೆದರು. ಮಹಿಳೆಯರು ಕೆಲಸದ ಸ್ಥಳದಲ್ಲಿ ಮಾತ್ರವಲ್ಲದೆ, ಕುಟುಂಬ ಮತ್ತು ಸಮಾಜದಲ್ಲಿ ಎದುರಿಸುತ್ತಿರುವ ಸಾಮಾಜಿಕ ಮತ್ತು ರಚನಾತ್ಮಕ ಅಡೆತಡೆಗಳನ್ನು ಅವರು ಎತ್ತಿ ತೋರಿಸಿದರು. ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸುತ್ತಾ, ಬಿಹಾರದ ಛಾಪ್ರಾ ಜಿಲ್ಲೆಯ ಅತ್ಯಂತ ಸಂಪ್ರದಾಯಬದ್ಧ ಗ್ರಾಮೀಣ ಪ್ರದೇಶದಲ್ಲಿ ತಾವು ಬೆಳೆದ ರೀತಿಯನ್ನು…

Read More

ಉಡುಪಿ : ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಚ್ಚಿಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರರಿದ್ದ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರರ ದೋಣಿ ಮಗುಚಿ ಇಬ್ಬರು ಮೀನುಗಾರರು ನೀರಿಗೆ ಬಿದ್ದಿದ್ದು, ಒಬ್ಬನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೀನುಗಾರ ನಾಪತ್ತೆಯಾದ ಘಟನೆ ನಡೆದಿದೆ. ಏನಿದು ಘಟನೆ? ಕಳೆದ ಕೆಲವು ದಿನಗಳಿಂದ ತಮಿಳುನಾಡು ಮೂಲದ ಮೀನುಗಾರರು ಅಕ್ರಮ ಪಚ್ಚಿಲೆ ಮೀನುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರು ಸಣ್ಣ ದೋಣಿಯಲ್ಲಿ ತೆರಳಿ ತಮಿಳುನಾಡು ಮೂಲದ ಮೀನುಗಾರರ ಜೊತೆ ಮೀನುಗಾರಿಕೆ ಮಾಡದಂತೆ ಮನವಿ ಮಾಡಲು ಮುಂದಾಗಿದ್ದರು. ಈ ವೇಳೆ ತಮಿಳುನಾಡಿನ ದೊಡ್ಡ ದೋಣಿಯನ್ನು ಸ್ಥಳೀಯ ಮೀನುಗಾರರ ಸಣ್ಣ ದೋಣಿಗೆ ಉದ್ದೇಶಪೂರ್ವಕವಾಗಿ ಡಿ*ಕ್ಕಿ ಹೊಡೆಸಿದ್ದಾರೆ. ಈ ವೇಳೆ ಕಾಪು ಮೂಲದ ದೋಣಿ ಮಗುಚಿ ಬಿ*ದ್ದು ಇಬ್ಬರು ಮೀನುಗರಾರು ನೀರಿಗೆ ಬಿ(ದ್ದಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೀನುಗಾರ ನಾಪತ್ತೆಯಾಗಿದ್ದಾನೆ. ಘಟನೆ ಬಳಿಕ ತಮಿಳುನಾಡು ಮೂಲದ ಮೀನುಗಾರರು ಮಲ್ಪೆಯತ್ತ ಪಲಾಯನ ಮಾಡಿದ್ದಾಗಿ ಸ್ಥಳೀಯರು ದೂರಿದ್ದಾರೆ.

Read More

ಸುಳ್ಯ: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಬೈಕ್ ಸವಾರ ಲೋಕನಾಥ (35) ಎಂಬವರು ಮೃತಪಟ್ಟ ವ್ಯಕ್ತಿ. ಸುಳ್ಯದಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು . ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ. ಸುಳ್ಯ ಮೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದರು.

Read More

ಬೆಂಗಳೂರು : “ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಚುನಾಯಿತ ಶಾಸಕರಿಗಿಂತ ಪರಾಜಿತ ಅಭ್ಯರ್ಥಿಗಳ ಪತ್ರಕ್ಕೇ ಹೆಚ್ಚಿನ ಬೆಲೆ ಸಿಗುತ್ತಿದೆ,” ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ರಾಜೇಶ್ ನಾಯ್ಕ್ , “ಮಾಜಿ ಸಚಿವ ರಮಾನಾಥ್ ರೈ ಅವರನ್ನು ಅಧಿಕಾರಿಗಳು ಇಂದಿಗೂ ಸಚಿವ ಎಂದೇ ಭಾವಿಸಿದಂತಿದೆ. ಕಾಮಗಾರಿಗಳ ಏಜೆನ್ಸಿಗಳನ್ನು ಗುರುತಿಸಲು ಮಾಜಿ ಶಾಸಕರಿಗೆ ಅಧಿಕಾರಿಗಳು ಪತ್ರ ಬರೆಯುತ್ತಿದ್ದಾರೆ. ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪರಾಜಿತ ಅಭ್ಯರ್ಥಿಗಳ ಶಿಫಾರಸಿನ ಮೇಲೆ ಹಣ ಬಿಡುಗಡೆ ಮಾಡುತ್ತಿರುವುದು ಶಾಸಕರ ಹಕ್ಕುಚ್ಯುತಿಯಲ್ಲವೇ?” ಎಂದು ಪ್ರಶ್ನಿಸಿದರು. ರಾಜೇಶ್ ನಾಯ್ಕ್ ಅವರ ಈ ಗಂಭೀರ ಆರೋಪಕ್ಕೆ ಬಿಜೆಪಿ ಶಾಸಕರು ದನಿಗೂಡಿಸಿದರು. ಎಲ್ಲಾ ಕ್ಷೇತ್ರಗಳಲ್ಲೂ ಪರಾಜಿತ ಅಭ್ಯರ್ಥಿಗಳ ಹಸ್ತಕ್ಷೇಪ ಹೆಚ್ಚಾಗುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ದೂರಿದರು. ಈ ಸಂದರ್ಭದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು.…

Read More

ಉಡುಪಿ: ಟಿಪ್ಪರ್‌ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ದುರ್ಘಟನೆ ಮಾ. 24ರಂದು ಬೆಳಿಗ್ಗೆ ಮಾಳ ಮುಳ್ಳೂರಿನಲ್ಲಿ ನಡೆದಿದೆ. ನವೀನ್‌ ಬಜಗೋಳಿ (45) ಮೃತ ದುರ್ದೈವಿ. ನವೀನ್‌ ವೆಲ್ಡಿಂಗ್‌ ಕೆಲಸ ನಿರ್ವಹಿಸುತ್ತಿದ್ದು, ಹಾವು ಹಿಡಿಯುವ ಕೆಲಸವನ್ನು ಮಾಡುತ್ತಿದ್ದರು. ಇಂದು ಬೆಳಿಗ್ಗೆ ಎಲ್ಲಿಯೋ ಹಾವು ಹಿಡಿದು ಕಾಡಿಗೆ ಬಿಡಲೆಂದು ಹೋಗುತ್ತಿರುವಾಗ ಅವಘಡ ಸಂಭವಿಸಿದೆ. ಪರಿಣಾಮವಾಗಿ ನವೀನ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಕೂಟಿಯ ಸಹಸವಾರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ವಿಟ್ಲ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ  ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಜೇಶ್ವರ ನಿವಾಸಿ ಮೊಹಮ್ಮದ್ ಫಯಾಜ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. 2019ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಫಯಾಜ್ ವಿರುದ್ಧ ಐಪಿಸಿ ಕಲಂ 323, 507, 353 ಹಾಗೂ 504 ರಡಿ (ಅ.ಕ್ರ ನಂ: 181/2019) ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದರೂ, ಆರೋಪಿಯು ಸುದೀರ್ಘ ಕಾಲದಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಆರೋಪಿಯು ಕೇರಳ ರಾಜ್ಯದ ಮಂಜೇಶ್ವರದ ಬಾಯಾರು ಪದವು ಎಂಬಲ್ಲಿ ಅಡಗಿರುವ ಬಗ್ಗೆ ವಿಟ್ಲ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ವಿಟ್ಲ ಠಾಣೆಯ ಪೊಲೀಸರ ತಂಡವು ಮಂಜೇಶ್ವರಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದಿದೆ. ಈ ಕಾರ್ಯಾಚರಣೆಯಲ್ಲಿ ಎಎಸ್‌ಐ ಜಯರಾಮ ಅವರಿಗೆ ಠಾಣಾ ಸಿಬ್ಬಂದಿಗಳಾದ ಶ್ರೀಕುಮಾರ್, ಗೋಪಾಲಕೃಷ್ಣ, ಮಾಯಪ್ಪ ಮತ್ತು ವೆಂಕಪ್ಪ ಅವರು ಸಾಥ್ ನೀಡಿದ್ದಾರೆ.…

Read More

ನವದೆಹಲಿ: ಬೇರೆ ಧರ್ಮಕ್ಕೆ ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿಯ (ಎಸ್‌ಸಿ) ಸ್ಥಾನಮಾನ ಅನ್ವಯವಾಗುವುದಿಲ್ಲ ಎಂಬ ಐತಿಹಾಸಿಕ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ನೀಡಿದೆ. ಹಿಂದೂ, ಸಿಖ್‌ ಅಥವಾ ಬೌದ್ಧ ಧರ್ಮದವರು ಎಸ್‌ಸಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಆದರೆ ಕ್ರೈಸ್ತ ಸೇರಿದಂತೆ ಬೇರೆ ಯಾವುದೇ ಧರ್ಮಕ್ಕೆ ಮತಾಂತರವಾದರೆ ಅವರು ಎಸ್‌ಸಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ಭಾರಿ ಮಹತ್ವದ ತೀರ್ಪಿನಲ್ಲಿ ಹೇಳಲಾಗಿದೆ. ನ್ಯಾ. ಪಿ.ಕೆ.ಮಿಶ್ರಾ ಮತ್ತು ನ್ಯಾ.ಎನ್‌.ವಿ.ಅಂಜಾರಿಯ ಅವರನ್ನೊಳಗೊಂಡ ನ್ಯಾಯಪೀಠ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಪರಿಶಿಷ್ಟ ಜಾತಿಯವರ ಸೌಲಭ್ಯಗಳನ್ನು ನೀಡಲು ಸಾಧ್ಯವಿಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಆಂಧ್ರ ಪ್ರದೇಶದ ಹೈಕೋರ್ಟ್‌ ಕಳೆದ ವರ್ಷ ಮೇ ತಿಂಗಳಲ್ಲಿ ನೀಡಿದ ತೀರ್ಪಿನ ವಿರುದ್ಧ ಪಾದ್ರಿ ಚಿಂತಾಡ ಆನಂದ್‌ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆಗೊಳಪಡಿಸಿ ನ್ಯಾಯಪೀಠ ಈ ತೀರ್ಪು ನೀಡಿದೆ. ಜಾತಿ ಆಧಾರಿತ ತಾರತಮ್ಯ ಮತ್ತು ನಿಂದನೆಯನ್ನು ಸಮಾಜದಲ್ಲಿ ಎದುರಿಸುತ್ತಿದ್ದೇನೆ ಎಂದು ಪಾದ್ರಿ ಚಿಂತಾಡ ಆನಂದ್‌ ಅರ್ಜಿಯಲ್ಲಿ ವಾದಿಸಿದ್ದರು. ಒಬ್ಬ ವ್ಯಕ್ತಿ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡು ಆ ಧರ್ಮದ ಆಚಾರ…

Read More

ಬಂಟ್ವಾಳ : ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ತಲೆಮೊಗರು ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಮಾರಾಮಾರಿ ನಡೆದಿದ್ದು, ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಹೊಡೆದಾಟದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಮೊದಲ ಪ್ರಕರಣದಲ್ಲಿ ಸಜಿಪಪಡು ನಿವಾಸಿ ಅಬ್ದುಲ್ ನವಾಝ್ (42) ಎಂಬವರು ನೀಡಿದ ದೂರಿನಂತೆ ಮಾರ್ಚ್ 22ರಂದು ಬೆಳಗ್ಗೆ ಇವರು ಮತ್ತು ಅವರ ಸಂಬಂಧಿ ದಾವೂದ್ ಜೊತೆಯಲ್ಲಿ ತಲೆಮೊಗರು ಮಸೀದಿಯಿಂದ ಬರುತ್ತಿರುವಾಗ ಮಸೀದಿಗೆ ಸಂಬಂಧಿಸಿದ ಕಟ್ಟಡದಲ್ಲಿರುವ ಶೌಕತ್ ಎಂಬಾತನ ಅಂಗಡಿಯ ಬಳಿ ಆರೋಪಿಗಳಾದ ಶೌಕತ್, ಇಸಾಕ್, ಶಫೀಕ್, ಯಾಕೂಬ್, ಮಹಮ್ಮದ್ ಮುಸ್ತಫಾ, ನಾಸಿರ್ ಹಾಗೂ ನಿಝಾಲ್ ಎಂಬವರು ಗುಂಪು ಕಟ್ಟಿಕೊಂಡು ನಿಂತಿದ್ದು, ನವಾಝ್ ಹಾಗೂ ದಾವೂದ್ ಸ್ಥಳಕ್ಕೆ ಬಂದಾಗ ಆರೋಪಿಗಳು ಮಸೀದಿಯ ವಿಚಾರದಲ್ಲಿ ತಕರಾರು ತೆಗೆದು ಅವಾಚ್ಯವಾಗಿ ನಿಂದಿಸಿ, ಕತ್ತಿ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ. ಹಲ್ಲೆಯಿಂದ ಗಾಯಗೊಂಡ ನವಾಝ್…

Read More

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :117/2019 ಹಾಗೂ ಅ.ಕ್ರ :111/2020 ಪ್ರಕರಣಗಳಿಗೆ ಸಂಬಂಧಿಸಿದಂತೆ, ಬಂಟ್ವಾಳ ACJ & JMFC ನ್ಯಾಯಾಲಯಕ್ಕೆ ಹಲವು ಬಾರಿ ಹಾಜರಾಗದೇ ತಪ್ಪಿಸಿಕೊಂಡಿದ್ದ ಬಂಟ್ವಾಳ ವೀರಕಂಬ ನಿವಾಸಿ ಮಹಮ್ಮದ್ ಅಶ್ರಫ್ (38) ಅವರನ್ನು ಬಂಧಿಸಲಾಗಿದೆ. ಆರೋಪಿತನ ವಿರುದ್ಧ ಈಗಾಗಲೇ 10ಕ್ಕೂ ಹೆಚ್ಚು ಬಾರಿ ವಾರಂಟ್ ಜಾರಿಯಾಗಿದ್ದರೂ, ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಹಾಗೂ CHC 665 ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Read More

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ತಿರುಚಿದ ವಿಡಿಯೋ ಹಂಚಿದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. 2025ರ ಅಕ್ಟೋಬರ್ ತಿಂಗಳಲ್ಲಿ “ನಝೀರ ಮಂಗಳೂರು” ಎಂಬ ಫೇಸ್‌ಬುಕ್ ಖಾತೆಯಿಂದ AI ತಂತ್ರಜ್ಞಾನದ ಸಹಾಯದಿಂದ ತಿರುಚಿದ ವಿಡಿಯೋವನ್ನು ಶೇರ್ ಮಾಡಲಾಗಿತ್ತು. ಈ ವಿಡಿಯೋ ಮೂಲಕ ಸಮಾಜದಲ್ಲಿ ಕೋಮು ದ್ವೇಷ ಹುಟ್ಟುಹಾಕಲು ಪ್ರಚೋದನೆ ನೀಡಲಾಗಿದೆ ಎಂಬ ಆರೋಪದ ಮೇಲೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 196, 353(1), 351(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ತನಿಖೆ ವೇಳೆ “ನಝೀರ ಮಂಗಳೂರು” ಖಾತೆಯನ್ನು ಬಳಸುತ್ತಿದ್ದ ವ್ಯಕ್ತಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಆತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಆರೋಪಿಯನ್ನು ಮಾರ್ಚ್ 22, 2026ರಂದು ಬೆಂಗಳೂರುನಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಮತ್ತು…

Read More