Author: main-admin

ರಾಯಚೂರು: ಜಿಲ್ಲೆಯ ಅರಕೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೋಹರಂ ಬಂದೋಬಸ್ತ್‌ಗಾಗಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್, ಎದೆನೋವು ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ತಲುಪಿದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ಪೊಲೀಸ್‌ ಕಾನ್ಸ್‌ಟೇಬಲ್‌ರನ್ನು ರೇಣುಕಾರಾಜ್ (38) ಎಂದು ಗುರುತಿಸಲಾಗಿದೆ. ಅವರು ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೇಬಲ್ ಆಗಿದ್ದು, ದೇವದುರ್ಗ ಸಿಪಿಐ ಅವರ ವಾಹನ ಚಾಲಕರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹರಂ ಹಬ್ಬದ ಭದ್ರತೆ ಹಿನ್ನೆಲೆಯಲ್ಲಿ ಮದರಕಲ್ ಪ್ರದೇಶದಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ವೇಳೆ ರೇಣುಕಾರಾಜ್ ಅವರಿಗೆ ಜೀಪ್ ಚಾಲನೆ ಮಾಡುತ್ತಿದ್ದಾಗಲೇ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಹೋದ್ಯೋಗಿಗಳು ಕೂಡಲೇ ಖಾಸಗಿ ಕಾರಿನಲ್ಲಿ ಅರಕೇರಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ರಾತ್ರಿ ಸುಮಾರು 10.30 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆತರಲಾಯಿತಾದರೂ, ಪ್ರಾಥಮಿಕ ಚಿಕಿತ್ಸೆ ನೀಡುವ ಪ್ರಯತ್ನ ನಡೆಯುವಷ್ಟರಲ್ಲಿ ರೇಣುಕಾರಾಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಆಸ್ಪತ್ರೆಯಲ್ಲಿ…

Read More

ಬೆಳ್ತಂಗಡಿ: ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ. ಪಠ್ಯ ಅಧ್ಯಯನ, ಸೂಕ್ತ ಮಾರ್ಗದರ್ಶನ, ಅವೆಲ್ಲಕ್ಕಿಂತ ಮಿಗಿಲಾಗಿ ಸಂಶೋಧನಾತ್ಮಕ ಅಭ್ಯಾಸ ಅತ್ಯಗತ್ಯವಾಗಿದೆ ಎಂದು ಯುವ ಲೆಕ್ಕ ಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಅಭಿಪ್ರಾಯ ಪಟ್ಟರು. ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜೂ.25 ರಂದು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಲ್ಲರೂ ಸಿಎ ಪರೀಕ್ಷೆ ಅತ್ಯಂತ ಕ್ಲಿಷ್ಟಕರ ಎಂಬ ಮಾತು ಹೇಳುತ್ತಾರೆ. ಆದರೆ ನಾನು ಕಂಡುಕೊಂಡಂತೆ ಸಿಎ ಪರೀಕ್ಷೆ ಕುರಿತು ಸುಧೀರ್ಘ ತಯಾರಿ ನಡೆಸಿದಲ್ಲಿ ಭವಿಷ್ಯದಲ್ಲಿ ನೀವು ಅಂದುಕೊಂಡ ಹಾದಿ ಸುಗಮವಾಗಿಸಬಹುದು. ಈ ನೆಲೆಯಲ್ಲಿ ನಮ್ಮ ಸುತ್ತಮುತ್ತ ಸೂಕ್ತ ಮನಸ್ಥಿತಿ, ಸಮರ್ಪಕ ಸಿದ್ಧತೆ ಹಾಗೂ ಸರಿಯಾದ ವ್ಯಕ್ತಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷರಾದ…

Read More

ಕೊಪ್ಪಳ: ಕುಕನೂರು ತಾಲೂಕಿನ ಭಾನಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಮೃತಪಟ್ಟ ದುರ್ದೈವಿಗಳು. ಇವರೆಲ್ಲರೂ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ಓಮಿನಿ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಂತ್ರಾಲಯಕ್ಕೆ ಭಾನಾಪುರ ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ಪಕ್ಕದ ರಸ್ತೆಯಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ದಾಟಿದ ಲಾರಿ, ಎದುರು ದಿಕ್ಕಿನಿಂದ ಬರುತ್ತಿದ್ದ ಓಮಿನಿ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಗೆ ಓಮಿನಿ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಭೀಕರತೆ ಕಂಡು ಸ್ಥಳೀಯರು ಕಂಗಾಲಾಗಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ…

Read More

ಗಾಜಿಯಾಬಾದ್: ಮೃತಪಟ್ಟಿದ್ದಾರೆ ಎಂದು ಭಾವಿಸಿ , ಅಂತಿಮ ವಿಧಿವಿಧಾನಗಳನ್ನು ಪೂರೈಸಿದ ಮರುದಿನ ಬೆಳಿಗ್ಗೆಯೇ ವ್ಯಕ್ತಿಯೊಬ್ಬರು ಮನೆಗೆ ಮರಳಿದ ಪ್ರಸಂಗ ಗಾಜಿಯಾಬಾದ್ ನಲ್ಲಿ ನಡೆದಿದೆ. ಮೇ 16ರಂದು ಶಾಂತಿಭಂಗ ಮಾಡಿದ ಆರೋಪದಲ್ಲಿ ಗಿರಿಧರ್ ಸಿಂಗ್ ಬಿಷ್ಟ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಮೇ 21ರಂದು ಅವರು ಬಿಡುಗಡೆ ಹೊಂದಿದರು. ಬಿಡುಗಡೆ ಬಳಿಕ ಅವರು ಮನೆಗೆ ಮರಳದ ಕಾರಣ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ ಗುರುತು ಸಿಕ್ಕದ ಮೃತದೇಹವೊಂದು ಪತ್ತೆಯಾಗಿತ್ತು. ಅದು ಬಿಷ್ಟ್ ಅವರದ್ದೇ ದೇಹ ಎಂದು ಕುಟುಂಬದವರೂ ಖಚಿತಪಡಿಸಿದರು. ಬಳಿಕ, ಇದೊಂದು ಕೊಲೆ ಎಂಬ ಶಂಕೆ ಆಧರಿಸಿ, ಆರು ಜನರ ಮೇಲೆ ಪೊಲೀಸರು ಪ್ರಕರಣವನ್ನೂ ದಾಖಲಿಸಿಕೊಂಡಿದ್ದಾರೆ. ಕುಟುಂಬಸ್ಥರು ಜೂನ್ 13ರಂದು ಬಿಷ್ಟ್ ಅವರ ಅಂತ್ಯಸಂಸ್ಕಾರ, ಮೃತರಾದ ಬಳಿಕ 13ನೇ ದಿನ ನಡೆಸುವ ‘ತೇರಾವಿ’ ಕಾರ್ಯವನ್ನೂ ಪೂರ್ಣಗೊಳಿಸಿದ್ದಾರೆ. ಜೂನ್ 25ರಂದು ಬೆಳಿಗ್ಗೆ 5 ಗಂಟೆಗೆ ಬಿಷ್ಟ್ ಅವರು ಮನೆಗೆ ವಾಪಸಾಗಿ ಅಚ್ಚರಿ ಮೂಡಿಸಿದ್ದಾರೆ. ‘ಬಿಷ್ಟ್ ಅವರು ಮನೆಗೆ ವಾಪಸಾಗಿರುವುದರಿಂದ, ಈ ಹಿಂದೆ…

Read More

ಬೆಂಗಳೂರು: ರಾಜಧಾನಿಯ ಕೆ.ಆರ್. ಪುರಂನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಂದೆ, ತಾಯಿ ಹಾಗೂ ಸಹೋದರಿಯ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಶ್ವೇತಾಳ ಪ್ರಿಯಕರ ಕೆನತ್‌ನನ್ನು ವೈಟ್‌ಫೀಲ್ಡ್ ಉಪವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.ನಾಲ್ಕು ದಿನಗಳ ಕಾಲ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡಿದ್ದ ಆರೋಪಿಯನ್ನು ತೀವ್ರ ಹುಡುಕಾಟದ ನಂತರ ಕೊನೆಗೂ ವಶಕ್ಕೆ ಪಡೆಯಲಾಗಿದೆ. ಆತನ ಪ್ರೇಯಸಿ ಶ್ವೇತಾಳನ್ನು ಬಂಧಿಸಿದ್ದ ಪುದುಚೇರಿಯಲ್ಲೇ ಈತನನ್ನೂ ದಸ್ತಗಿರಿ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೀಚ್ ಗುಡಿಸಲೇ ಆಶ್ರಯ ತಾಣ! ಬೆಂಗಳೂರಿನಿಂದ ಪರಾರಿಯಾದ ನಂತರ ಹೋಟೆಲ್‌ಗಳಲ್ಲಿ ಉಳಿದುಕೊಂಡರೆ ಗುರುತಿನ ಚೀಟಿ (ID Card) ಕೇಳಬಹುದು ಮತ್ತು ಪೊಲೀಸರಿಗೆ ಸುಳಿವು ಸಿಗಬಹುದು ಎಂಬ ಭಯ ಕೆನತ್‌ಗೆ ಇತ್ತು. ಹೀಗಾಗಿ ಆತ ಪುದುಚೇರಿಯ ಕಡಲತೀರದ (Beach) ಸಣ್ಣ ಸಣ್ಣ ಗುಡಿಸಲುಗಳಲ್ಲಿ ಯಾರಿಗೂ ಸಂಶಯ ಬಾರದಂತೆ ಆಶ್ರಯ ಪಡೆದಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಸಿಸಿಟಿವಿ ದೃಶ್ಯ, 300 ಕಿ.ಮೀ ಬೈಕ್ ಜರ್ನಿ! ಜೂನ್ 22ರಂದು ರಾತ್ರಿ ತಂದೆ ಸೋಮಸುಂದರ್, ತಾಯಿ…

Read More

ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನೊಬ್ಬನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬ್ರಹ್ಮಾವರದ ಆಕಾಶವಾಣಿ ಸಮೀಪದ ಸ್ವರ್ಣ ರೆಸಿಡೆನ್ಸಿಯಲ್ಲಿ ವಾಸಿಸುತ್ತಿದ್ದ, ಮೂಲತಃ ಶಿರೂರಿನ ಮುಸ್ಲಿಂ ಮೊಹಲ್ಲಾದ ಜೆ.ಎಂ. ಕ್ರಾಸ್ ರೋಡ್ ನಿವಾಸಿ ಸೈಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ.ಉಡುಪಿ ಉಪ ವಿಭಾಗದ ಪೊಲೀಸ್ ಅಧಿಕಾರಿ ಬೆಳ್ಳಿಯಪ್ಪ ಕೆ.ಯು. ಮತ್ತು ಮಲ್ಪೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದ ಪೊಲೀಸ್ ತಂಡವು, ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಸಾರ್ವಜನಿಕ ಸ್ಥಳವೊಂದರಲ್ಲಿ ಈ ಕಾರ್ಯಾಚರಣೆಯನ್ನು ನಡೆಸಿದೆ.ಕಾರ್ಯಾಚರಣೆಯ ವೇಳೆ ಪೊಲೀಸರು 1.03 ಗ್ರಾಂ ಎಂಡಿಎಂಎ, ಮಾದಕ ದ್ರವ್ಯ ಸಾಗಾಟಕ್ಕೆ ಬಳಸುತ್ತಿದ್ದ ಸ್ಕೂಟರ್ ಮತ್ತು ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಲಾದ ಒಟ್ಟು ಸೊತ್ತಿನ ಮೌಲ್ಯ ಸುಮಾರು 1.52 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.ಆರೋಪಿಯು ಕಾಪು, ಬ್ರಹ್ಮಾವರ, ಉಡುಪಿ ಮತ್ತು ಮಣಿಪಾಲ ಭಾಗದ ಕಾಲೇಜು…

Read More

ಮಂಗಳೂರು: ನಗರದಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ ಓರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು , ಸುರತ್ಕಲ್ ನಿವಾಸಿಯಾಗಿದ್ದು, ಹಾಲಿ ವಾಸ , ಕುಳಾಯಿಗುಡ್ಡೆ ಅಣ್ಣಪ್ಪ ಸ್ವಾಮಿ ಅಲಿಯಾಸ್‌ ಮನು( 26 ) ಎಂದು ಗುರುತಿಸಲಾಗಿದೆ. ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಜೂನ್‌ 25 ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಳಿಕ ಬಂಧಿತ ಆರೋಪಿಯಿಂದ ಸುಮಾರು 1,50,000 ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,10,500 ರೂ ಅಂದಾಜಿಸಲಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಣ್ಣಪ್ಪ ಸ್ವಾಮಿ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ. ಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ…

Read More

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಅದರಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸುಲ್ಕೇರಿ ಗ್ರಾಮದ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅತ್ಯಂತ ವೇಗವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಭೀಕರತೆಗೆ ಕಾಂಕ್ರೀಟ್‌ನ ವಿದ್ಯುತ್ ಕಂಬವು ತಳಭಾಗದಿಂದಲೇ ಮುರಿದು ಕಾರಿನ ಮುಂಭಾಗದ ಮೇಲೆಯೇ ಬಿದ್ದಿದೆ. ಪರಿಣಾಮವಾಗಿ ಕಾರಿನ ಬಾನೆಟ್, ಬಂಪರ್ ಹಾಗೂ ಇಂಜಿನ್ ಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗದ ಸ್ಥಿತಿಯನ್ನು ನೋಡಿದರೆ ಒಳಗಿದ್ದವರು ಬದುಕುಳಿದಿದ್ದೇ ದೊಡ್ಡ ಪವಾಡ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದುಬಿದ್ದಿದ್ದರಿಂದ ಹೈ-ವೋಲ್ಟೇಜ್ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯ ಮೇಲೆ ಬಿದ್ದಿದ್ದವು. ಇದರಿಂದಾಗಿ ಇಡೀ ಭಾಗದಲ್ಲಿ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೆಸ್ಕಾಂ (MESCOM) ಸಿಬ್ಬಂದಿ ಕಾರಿನ ಮೇಲೆ ಬಿದ್ದಿದ್ದ…

Read More

ದಾವಣಗೆರೆ: ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ಕಂಠಪೂರ್ತಿ ಕುಡಿದು ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ  ನಡೆದಿದೆ. ಓವರ್ ಡ್ರಿಂಕ್ ಮಾಡಿ ಯುವತಿ ಥಾರ್ ಕಾರನ್ನು ಅಡ್ಡಾದಿಡ್ಡಿ ಚಲಾಯಿಸುತ್ತಿದ್ದಳು. ಈ ವೇಳೆ ಡ್ರಿಂಕ್ & ಡ್ರೈವ್ ತಪಾಸಣೆ ಮಾಡುತ್ತಿದ್ದ ಪೊಲೀಸರು, ಕಾರನ್ನು ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವತಿ, ಮಹಿಳಾ ಪಿಎಸ್‌ಐಗೆ ಕಾಲಿನಿಂದ ಒದ್ದು, ಹಲ್ಲೆ ಮಾಡಿದ್ದಾಳೆ. ಆರೋಪಿಯು ದಾವಣಗೆರೆಯ ಪ್ರತಿಷ್ಠಿತ ವ್ಯಕ್ತಿಯ ಪುತ್ರಿ ಎಂದು ಹೇಳಲಾಗಿದ್ದು, ಸದ್ಯ ಆಕೆಯ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Read More

ಕಾಸರಗೋಡು: ಹಾಡುಹಗಲೇ ಮಹಿಳೆಯೊಬ್ಬರಿಗೆ ಅಡ್ಡಗಟ್ಟಿ, ಅವರ ಕುತ್ತಿಗೆಯಲ್ಲಿದ್ದ ಎರಡು ಪವನ್ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ಕುಂಬ್ಳೆಯ ಬಂಬ್ರಾಣ ನಿವಾಸಿ ಎ. ಸಂದೀಪ್ (31) ಎಂದು ಗುರುತಿಸಲಾಗಿದೆ. ಈ ಘಟನೆಯು ಸೋಮವಾರ ಸಂಜೆ ಹೊಸಂಗಡಿ ಸಮೀಪ ನಡೆದಿತ್ತು. ಘಟನೆಯ ವಿವರ:ಪೈವಳಿಕೆಯ ಬಾಯಿಕಟ್ಟೆ ನಿವಾಸಿ ನಯನಾ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ, ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ದಾರಿ ಕೇಳುವ ನೆಪದಲ್ಲಿ ಅವರ ಬಳಿ ಬಂದಿದ್ದಾರೆ. ಮಾತನಾಡುವ ನೆಪದಲ್ಲಿ ನಯನಾ ಅವರ ಕುತ್ತಿಗೆಯಲ್ಲಿದ್ದ ಎರಡು ಪವನ್ ಚಿನ್ನದ ಸರವನ್ನು ಕಿತ್ತುಕೊಂಡು ಆರೋಪಿಗಳು ಸ್ಕೂಟರ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದರು.ನಯನಾ ಅವರು ನೀಡಿದ ದೂರಿನ ಮೇರೆಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಲ್ಲಿ ಓರ್ವನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More