Author: main-admin

ಸುರತ್ಕಲ್‌: ಎಂಆರ್‌ಪಿಎಲ್‌ ಸ್ಥಾವರದಲ್ಲಿ ಶನಿವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿರುವ ಕಾರ್ಮಿಕ ದೀಪ್‌ಚಂದ್ರ ಬಾರ್ತಿಯ ಅವರ ಪತ್ನಿ ನೀಡಿದ ದೂರಿನ ಮೇರೆಗೆ ಎಂಆರ್‌ಪಿಎಲ್‌ನ 6 ಮಂದಿ ಆಧಿಕಾರಿಗಳ ವಿರುದ್ಧ ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನಿಲ ಸೋರಿಕೆ ಕುರಿತಂತೆ ಪರಿಶೀಲಿಸಲು ತೆರಳಿದ್ದಾಗ ದೀಪ್‌ಚಂದ್ರ ಬಾರ್ತಿಯ ಹಾಗೂ ಇಜಿಲ್‌ ಪ್ರಸಾದ್‌ ಗ್ಯಾಸ್‌ನ ಘಾಟು ವಾಸನೆಗೆ ಉಸಿರುಗಟ್ಟಿ ಮೃತಪಟ್ಟಿದ್ದರು. ಸುರತ್ಕಲ್‌ ಉಪತಹಶೀಲ್ದಾರರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದು ಜಿಲ್ಲಾಧಿಕಾರಿಗಳಿಗೆ ಪ್ರಥಮ ಮಾಹಿತಿ ನೀಡಿದ್ದಾರೆ. ಮೃತ ಕಾರ್ಮಿಕ ದೀಪ್‌ಚಂದ್ರ ಬಾರ್ತಿಯ ಅವರ ಮೃತದೇಹವನ್ನು ಅವರ ಊರಾದ ಉತ್ತರಪ್ರದೇಶದ ಪ್ರಯಾಗ್‌ ರಾಜ್‌ ಗೆ ತೆಗೆದುಕೊಂಡು ಹೋದ ಸಹೋದ್ಯೋಗಿಗಳಿಗೆ ಮೃತನ ಸಂಬಂಧಿಕರು ದಿಗ್ಬಂಧನ ವಿಧಿಸಿದ್ದಾರೆ. ಸಾವಿಗೆ ಸಂಬಂಧಪಟ್ಟಂತೆ ಎಂಆರ್‌ಪಿಎಲ್‌ ಹಿರಿಯ ಅಧಿಕಾರಿಗಳು ಮಾಹಿತಿ ನೀಡಬೇಕು. ಪರಿಹಾರದ ಬೇಡಿಕೆಯನ್ನು ಈಡೇರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ

Read More

ವಿಟ್ಲ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಬಂಧಿತ ಆರೋಪಿ. 2015ನೇ ನವೆಂಬರ್ 4ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅತ್ಯಾಚಾರ ಪ್ರಕರಣ ನಡೆದಿತ್ತು. ಪ್ರಕರಣದಲ್ಲಿ ಆರೋಪಿಯಾಗಿದ್ದ ಬಿಹಾರ ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬಾತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ವಿಟ್ಲ ಠಾಣಾ ಪೊಲೀಸರು ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ ಅಲ್ಲಿನ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು ಜು.13 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

Read More

ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ. ಈ ವೇಳೆ ಗಾಯಗೊಂಡ ಉಡುಪಿ ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ರಿತೇಶ್ ಹಾಗೂ ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡಿರುವ ಉತ್ತರ ಪ್ರದೇಶ ಮೂಲದ ಮಣಿಪಾಲ ವಿ.ಪಿ.ನಗರದ ನಿವಾಸಿ ಮುಹಮ್ಮದ್ ದಾನೀಶ್(29) ಎಂಬವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಯಡಿ ದಾಖಲಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.12ರಂದು ಆರೋಪಿ ಮುಹಮ್ಮದ್ ದಾನೀಶ್ನನ್ನು ದಸ್ತಗಿರಿ ಮಾಡಿದ್ದು, ಈತನನ್ನು ತನಿಖೆಗೆ ಒಳಪಡಿಸಿ ಜು.13ರಂದು ತನಿಖೆಯ ಬಗ್ಗೆ ಮಣಿಪಾಲ ತಾಂಗೋಡು 2ನೇ ಕ್ರಾಸ್ ಹಾಡಿ ಬಳಿ ಕೃತ್ಯವೆಸಗಿದ ಸ್ಥಳವನ್ನು ಪಂಚನಾಮೆಯನ್ನು ಮಾಡುವ ಕರೆದುಕೊಂಡು ಹೋಗಲಾಗಿತ್ತು. ಈ ಸಮಯದಲ್ಲಿ ಆರೋಪಿ ಆತನಿಗೆ ಕೈಕೊಳ ಹಿಡಿದುಕೊಂಡಿದ್ದ ಸಿಬ್ಬಂದಿ ರಿತೇಶ್ರವರ ಎದೆಗೆ ಎರಡೂ ಕೈಗಳಿಂದ ಗುದ್ದಿ ದೂಡಿ ನೆಲಕ್ಕೆ ಬೀಳಿಸಿ ಅಲ್ಲಿಯೇ ಇದ್ದ ಕಲ್ಲನ್ನು ಎತ್ತಿಹಾಕಲು ಬಂದಿದ್ದನು.…

Read More

ಬೆಳ್ತಂಗಡಿ: ಸೌಜನ್ಯ ಹೋರಾಟಗಾರರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಮೊದಲೇ ಪ್ರಕರಣದಲ್ಲಿ ಕಡಬ ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ (46) ಎಂಬವರು ನೀಡಿದ ದೂರಿನಂತೆ ದಿನಾಂಕ:11-07-2025 ರಂದು ಪ್ರವೀಣ್‌ ಲೊಬೋ ಎಂಬ ಪೇಸ್ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇನ್ನೊಂದು ಪ್ರಕರಣದಲ್ಲಿ ಧರ್ಮಸ್ಥಳ ಗ್ರಾಮದ ನಿವಾಸಿ ಚೇತನ್‌ ಎನ್‌ (28) ಎಂಬವರ ದೂರಿನಂತೆ ದಿನಾಂಕ: 11-07-2025 ರಂದು ಮೊಬೈಲ್ ನಲ್ಲಿ ತನ್ನ ಫೇಸ್ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಡಾಕ್ಟರ್ ವರ್ಮಾ ಎಂಬ ಪೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದ ಧಾರ್ಮಿಕ ಶ್ರಧ್ದಾಕೆಂದ್ರಕ್ಕೆ ಸಂಬಂಧಿಸಿದ…

Read More

ಬೆಳ್ತಂಗಡಿ: ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರಿನ ದರ್ಖಾಸ್‌ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಮೃತಪಟ್ಟವರು. ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.ರಮ್ಯಾ ಎರಡು ವರ್ಷಗಳ ಹಿಂದೆ ಕೊಯ್ಯೂರಿನ ಪದಡ್ಕ ನಿವಾಸಿ ಲತೀಶ್ ಅವರನ್ನು ವಿವಾಹವಾಗಿದ್ದರು. ಅವರು ಬೆಳ್ತಂಗಡಿಯ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.ರಮ್ಯಾ ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ತಮ್ಮ ತಾಯಿಯ ಮನೆಗೆ ಬಂದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ. . ಅವರ ಆರೋಗ್ಯ ಸ್ಥಿತಿಯ ಬಗ್ಗೆ ಚಿಂತೆಗೀಡಾಗಿ ಅವರು ಈ ಕ್ರಮ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.ಕಂದಾಯ ನಿರೀಕ್ಷಕ ಪ್ರತೀಶ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದರು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Read More

ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಇರುವೈಲ್ ಗ್ರಾಮದಲ್ಲಿ ಕಾರ್ಯಚರಿಸುತ್ತಿದ್ದ ಇಸ್ಪೀಟ್ ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಜು. 12 ರಂದು ರಾತ್ರಿ 23.15 ಗಂಟೆಗೆ ಈ ಕಾರ್ಯಚರಣೆ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ರವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮೂಡಬಿದ್ರೆ ತಾಲೂಕು ಇರುವೈಲ್ ಗ್ರಾಮದ ಕೋರಿಬೆಟ್ಟು ಬಳಿ ಗುಡ್ಡೆಯಲ್ಲಿ ಕೆಲವು ವ್ಯಕ್ತಿಗಳು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜುಗಾರಿ ನಡೆಸುತ್ತಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ದೊರೆತ್ತಿತ್ತು.ಅಕ್ಟರ್, ಸಂತೋಷ್, ಪ್ರಶಾಂತ್, ಮಹಾಬಲ ಪೂಜಾರಿ, ಪ್ರಜ್ವಲ್, ಗಿರೀಶ್, ರಾಜೇಶ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡುಕೊಂಡಿದ್ದಾರೆ.  ಗಣೇಶ, ಶ್ರೀನಾಥ್, ದಿನೇಶ್ ಕೆಂಪುಗುಡ್ಡೆ, ಕೇಶವ ಯಾನೆ ಅಪ್ಪು, ಹಾಗೂ ಇನ್ನಿತರರು ಅದೇ ಸಂದರ್ಭದಲ್ಲಿ‌ ಘಟನಾ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾರೆ.ಆಪಾಧಿತರ ವಶದಲ್ಲಿದ್ದ ನಗದು ಹಣ 10,100-, 52 ಇಸ್ಪೀಟ್ ಎಲೆಗಳು, 2 ಮೇಣದ ಬತ್ತಿ ಹಾಗೂ KA-09-EP-8948 ಮತ್ತು KA-19-EZ-1077 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಆಪಾಧಿತರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲಾಯಿತು.ಪೊಲೀಸ್…

Read More

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಪಿಕ್‌ಅಪ್ ಚಾಲಕ ಕೊಳತ್ತಮಜಲಿನ ಅಬ್ದುಲ್ ರಹಿಮಾನ್  ಹ*ತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹ*ಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ಪುದು ಗ್ರಾಮದ ನಿವಾಸಿ ಪ್ರದೀಪ್ (34) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 9 ಮಂದಿಯನ್ನು ಬಂಧಿಸಲಾಗಿದೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Read More

ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೋಯ್ದು ಈ ಕೃತ್ಯ ಎಸಗಲಾಗಿದೆ. ಸದ್ಯ ಸಂತ್ರಸ್ತೆಯ ತಾಯಿಯ ದೂರು ಆಧರಿಸಿ ಇದೀಗ ಆರೋಪಿ ವಿಡಿಯೋ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಎರಡು ತಿಂಗಳಿಂದ ಬಾಲಕಿಯನ್ನು ಶಾಲೆಗೆ ಉದ್ಯಮಿ ತನ್ನ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಬಾಲಕಿಯನ್ನು ಉದ್ಯಮಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ.ಈ ವೇಳೆ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿರುವ ಮುಲ್ಕಿ ಪೊಲೀಸರು ತನಿಖೆ ನಡೆಸಿ 68 ವರ್ಷದ ಉದ್ಯಮಿಯನ್ನು ಇದೀಗ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಅಧಿಕ ರಕ್ತದ ತೊಡಕ್ಕೆ ಒಳಗಾಗಿ ಆರೋಪಿಯನ್ನು ಮುಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಮಂಗಳೂರು:ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12 ರಂದು ಘೋಷಣೆ ಮಾಡಿತು. ಈ ಬಹು ನಿರೀಕ್ಷಿತ ಕಾರ್ಯಕ್ರಮವು, ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಮತ್ತು ಸಿನಿಮಾ ಜಗತ್ತಿನ ತಾರೆಗಳು ಭಾಗವಹಿಸಿದ್ದರು. ಈ ಘೋಷಣೆ ವಿಶೇಷ ಏಕೆಂದರೆ – ಇದು ಕರ್ನಾಟಕದಲ್ಲಿ ಮೊದಲ ಬಾರಿಗೆ ಶಾರೂಖ್‌ ಖಾನ್ ಅವರು ಯಾವುದೇ ಬ್ರಾಂಡ್‌ಗೆ ಅಂಬಾಸಿಡರ್ ಆಗಿರುವುದು. ಈ ಮೂಲಕ ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಸಮಾರಂಭದ ಪ್ರಮುಖ ಆಕರ್ಷಣೆ ಎಂದರೆ, ಬೃಹತ್ ಪರದೆಯ ಮೇಲೆ ಪ್ರದರ್ಶಿಸಲಾದ ಅಧಿಕೃತ ಬ್ರಾಂಡ್ ಅಂಬಾಸಿಡರ್ ವಿಡಿಯೋ (AV).ಈ ವಿಡಿಯೋದಲ್ಲಿ ರೋಹನ್ ಕಾರ್ಪೊರೇಷನ್‌ನ ಸ್ಫೂರ್ತಿದಾಯಕ ಪಯಣ ಮತ್ತು ಶಾರೂಖ್‌ ಖಾನ್ ಅವರ ಶ್ರಮ ಮತ್ತು ವ್ಯಕ್ತಿತ್ವ…

Read More

ಶಿವಮೊಗ್ಗ : ಜಿಲ್ಲೆಯ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆಯಾಗಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಈ ಒಂದು ಘಟನೆ ನಡೆದಿದ್ದು, ಕೈದಿ ದೌಲತ್ ಅಲಿಯಾಸ್ ಗುಂಡನ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಹೊಟ್ಟೆ ನೋವು ಎಂದಾಗ ಕೈದಿಯನ್ನು ಮೆಗನ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೋಯ್ಯಲಾಯಿತು. ಈ ವೇಳೆ ಒಂದು ಇಂಚು ಅಗಲದ 3 ಇಂಚು ಉದ್ದದ ಮೊಬೈಲ್ ಹೊಟ್ಟೆಯಲ್ಲಿ ಪತ್ತೆಯಾಗಿದೆ. ಶಸ್ತ್ರ ಚಿಕಿತ್ಸೆಗು ಮುನ್ನ ಕೈದಿಯನ್ನು ಕೇಳಿದಾಗ ಕಲ್ಲು ನುಂಗಿದ್ದೇನೆ ಎಂದು ಹೇಳಿದ್ದಾನೆ. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಮೊಬೈಲ್ ಪತ್ತೆ ಆಗಿರುವುದು ಬೆಳಕಿಗೆ ಬಂದಿದೆ. ಬಳಿಕ ಆಸ್ಪತ್ರೆ ವೈದ್ಯರು ಸರ್ಜರಿ ಮೂಲಕ ಮೊಬೈಲ್ ಅನ್ನು ಹೊರಗಡೆ ತೆಗೆದಿದ್ದಾರೆ.

Read More