Author: main-admin

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಈ ಕಛೇರಿಯ ಉಲ್ಲೇಖಿತ ಪತ್ರವನ್ನು ಗಮನಿಸಲು ಕೋರಲಾಗಿದೆ. ಸದರಿ ಪತ್ರದಲ್ಲಿ 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ (275 ಕಲ್ಯಾಣ ಕರ್ನಾಟಕ ಮತ್ತು 1375 ಕಲ್ಯಾಣ ಕರ್ನಾಟಕೇತರ ಹುದ್ದೆಗಳು) ಸಂಬಂಧಪಟ್ಟ ಘಟಕಗಳಿಂದ ವರ್ಗಿಕರಣವನ್ನು ಪಡೆದು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು ಹಾಗೂ ಘಟಕವಾರು ಹುದ್ದೆಗಳ ಹಂಚಿಕೆಯ ವಿವರವನ್ನು ಅನುಬಂಧ ಆ ರಲ್ಲಿ ಒದಗಿಸಲಾಗಿತ್ತು. ಸದರಿ 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಆಡಳಿತಾತ್ಮಕ ಕಾರಣಗಳಿಂದ ಮರು ಹಂಚಿಕೆಮಾಡಲಾಗಿದ್ದು, ಘಟಕವಾರು ಹುದ್ದೆಗಳ ಮರು ಹಂಚಿಕೆಯ ವಿವರವನ್ನು ಅನುಬಂಧ-ಅರಲ್ಲಿ ಲಗತ್ತಿಸಿದೆ. ಹಾಗೂ ಸದರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಘಟಕಗಳಿಂದ ವರ್ಗಿಕರಣವನ್ನು ಪಡೆದು ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳವಂತೆ ಕೋರಲಾಗಿದೆ.

Read More

ಜಾನಪದ ಕ್ರೀಡೆ ಕಂಬಳ ನಡೆಸಲು ಬಜೆಟ್‌ನಲ್ಲಿ 2 ಕೋಟಿ ರೂಪಾಯಿ ಅನುದಾನ ಮೀಸಲಿರಿಸುವಂತೆ ರಾಜ್ಯ ಕಂಬಳ ಅಸೋಸಿಯೇಷನ್ ಮುಖ್ಯಮಂತ್ರಿಗೆ ಮನವಿ ಮಾಡಿದೆ ಎಂದು ಕಂಬಳ ಅಸೋಸಿಯೇಷನ್ ಅಧ್ಯಕ್ಷ ಡಾ.ಐಕಳಬಾವ ದೇವೀಪ್ರಸಾದ್ ಶೆಟ್ಟಿ ಹೇಳಿದ್ದಾರೆ.  ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್‌ನಲ್ಲಿ ಈ ಮೊತ್ತ ಮೀಸಲಿರಿಸಿ ಕಂಬಳ ಆಯೋಜಕರಿಗೆ ಒದಗಿಸಿದರೆ ಕಂಬಳಕ್ಕೆ ಪೂರಕ ಯೋಜನೆ ರೂಪಿಸಲು ಅನುಕೂಲವಾಗಲಿದೆ. ಈ ಹಿಂದೆ ಒಂದು ಕಂಬಳ ನಡೆಸಲು 5 ಲಕ್ಷ ರೂಪಾಯಿ ನೀಡಲಾಗಿತ್ತು. ಈ ಬಾರಿ 2 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿದೆ. 2 ಕೋಟಿ ರೂಪಾಯಿ ಮೀಸಲಿರಿಸಿದರೆ ಒಂದು ಕಂಬಳಕ್ಕೆ ತಲಾ 8 ಲಕ್ಷ ರೂಪಾಯಿಯಂತೆ ಒಟ್ಟು 25 ಕಂಬಳಗಳಿಗೆ ಅನುದಾನ ನೀಡಲು ಸಾಧ್ಯವಾಗಲಿದೆ. ಈ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಮತ್ತೊಮ್ಮೆ ಸರ್ಕಾರಕ್ಕೆ, ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.  ರಾಜ್ಯ ಸರಕಾರ ಯುವಜನ ಸಬಲೀಕರಣ ಮತ್ತು ಕ್ರೀಡಾ ಪ್ರಾಧಿಕಾರದಿಂದ ರಾಜ್ಯ ಕಂಬಳ ಅಸೋಸಿಯೇಶನ್‌ಗೆ ಅಧಿಕೃತ ಮಾನ್ಯತೆ ನೀಡಲಾಗಿದೆ. ರಾಜ್ಯ ಕಂಬಳ…

Read More

ಉಡುಪಿ: ಕಳೆದ 14ವರ್ಷಗಳ ಹಿಂದೆ ದತ್ತು ಕೇಂದ್ರದಿಂದ ನಾಪತ್ತೆಯಾಗಿದ್ದ ವಿಶೇಷ ಚೇತನ ಬಾಲಕನನ್ನು ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿದೆ. ಉಡುಪಿ ಸಂತೆಕಟ್ಟೆಯಲ್ಲಿರುವ ಶ್ರೀಕೃಷ್ಣಾನುಗ್ರಹ ದತ್ತು ಸ್ವಿಕಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದ ಸಂತೋಷ (12) ಎಂಬ ಬುದ್ದಿ ಮಾಂದ್ಯ ಬಾಲಕ 2011ರ ಫೆ.23ರಂದು ರಾತ್ರಿ ಸಂಸ್ಥೆಯಿಂದ ನಾಪತ್ತೆಯಾಗಿದ್ದನು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ತನಿಖೆಯ ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ಈ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಪ್ರಸ್ತುತ ಕಾರ್ಕಳದ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿ 2018ರಿಂದ ಆಶ್ರಯ ಪಡೆದಿರುವ ಬಿಪಿನ್ ಎಂಬ ಹೆಸರಿನ ಹುಡುಗ, ನಾಪತ್ತೆಯಾಗಿದ್ದ ಸಂತೋಷನಿಗೆ ಹೋಲಿಕೆಯಾಗುತ್ತಿರುವುದು ಕಂಡುಬಂತು. ಈ ಬಗ್ಗೆ ಅವನ ಮುಖ ಚಹರೆ, ಈಗಿನ ಅಂದಾಜು ಪ್ರಾಯ, ಕುಳಿತುಕೊಳ್ಳುವ ಭಂಗಿ, ಸಂಪೂರ್ಣ ಚಲನವಲನದ ಬಗ್ಗೆ ಖಚಿತಪಡೆಸಿಕೊಂಡು, ದೂರುದಾರೆ ಮೆರಿನಾ ಎಲಿಜಬೆತ್ ಹಾಗೂ ಸಂತೋಷ ಕಾಣೆಯಾದ ಸಮಯದಲ್ಲಿ ಆ ಸಂಸ್ಥೆನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ…

Read More

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಮಂಗಳೂರಿನ ಕಾವೂರು ಬಳಿ ನಡೆದಿದೆ.  ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಕಾರು ಬೆಂಕಿಗಾಹುತಿಯಾಗಿದೆ. ಕದ್ರಿ ಅಗ್ನಿಶಾಮಕದಳದವರು ಆಗಮಿಸಿ, ಬೆಂಕಿ ನಂದಿಸಿದ್ದಾರೆ.

Read More

ಮಂಗಳೂರು: ಇನ್‌ಸ್ಟ್ರಾಗ್ರಾಮ್‌ನಲ್ಲಿ PRAKARA TV ಎಂಬ ಹೆಸರಿನ ಅಕೌಂಟ್‌ನಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆ ತಾಲೂಕಿನ ಸೀತಂಗೋಳಿ ಎಂಬಲ್ಲಿ ಯುವಕರ ನಡುವೆ ನಡೆದ ಹಲ್ಲೆಯ ವಿಡಿಯೋದ ಮೇಲೆ “ಮಂಗಳೂರು: ನಡುರಸ್ತೆಯಲ್ಲೇ ಗ್ಯಾಂಗ್‌ವಾರ್, ಯುವಕನ ಕುತ್ತಿಗೆಯಲ್ಲೇ ಉಳಿದುಕೊಂಡ ಡ್ರ್ಯಾಗರ್‌” ಎಂಬುದಾಗಿ ಬರೆದು ಪ್ರಸಾರ ಮಾಡಿದ ಆರೋಪದ ಮೇಲೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕದ್ರಿ ಠಾಣೆಯಲ್ಲಿ ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ಕರ್ತವ್ಯವನ್ನು ನಿರ್ವಹಿಸಿಕೊಂಡಿರುವ ನಾಗರಾಜ್ ಅ.9ರಂದು ಮಧ್ಯಾಹ್ನ 1ಕ್ಕೆ ಕದ್ರಿ ಪಾರ್ಕ್‌ನಲ್ಲಿ ಕರ್ತವ್ಯದಲ್ಲಿರುವ ವೇಳೆ ಇನ್‌ಸ್ಟ್ರಾಗ್ರಾಮ್ ಪರಿಶೀಲಿಸುತ್ತಿರುವಾಗ ಸಿತಾಂಗೋಳಿಯಲ್ಲಿ ನಡೆದ ಕೃತ್ಯವು ಮಂಗಳೂರಿನಲ್ಲಿ ನಡೆದಿದೆ ಎಂಬಂತೆ ಬಿಂಬಿಸುವಂತೆ ಸುಳ್ಳು ಸುದ್ದಿಯ ವಿಡಿಯೋವನ್ನು ಪೋಸ್ಟ್ ಮಾಡಿರುವುದನ್ನು ಕಂಡಿದ್ದಾರೆ

Read More

ನಿಷೇಧಿತ ಸಂಘಟನೆ ಪಿಎಫ್‌ಐ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಲ್ಲದೆ, ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಪ್ರಚಾರ ಮಾಡುತ್ತಿದ್ದ ಉಪ್ಪಿನಂಗಡಿ ಮೂಲದ ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಿಎಫ್‌ಐ ಕಾನೂನು ಬಾಹಿರ ಸಂಘಟನೆಯೆಂದು 28-09-2022 ರಂದು ಭಾರತ ಸರ್ಕಾರ ಘೋಷಣೆ ಮಾಡಿತ್ತು. ಇದರ ಅರಿವಿದ್ದರೂ, ಹಳೆಯ ಪಿಎಫ್‌ಐ ಪ್ರಮುಖರ ಜೊತೆಗೆ ಸಂಪರ್ಕದಲ್ಲಿದ್ದುಕೊಂಡು ಅ.9ರಂದು ಆರೋಪಿ ಸೈಯ್ಯದ್ ಇಬ್ರಾಹಿಂ ತಂಙಳ್ (55) ಸಾಮಾಜಿಕ ಜಾಲತಾಣ ವಾಟ್ಸ್ ಆಪ್ ಗ್ರೂಪ್ ನಲ್ಲಿ ಕೇಂದ್ರ ಸರಕಾರದಿಂದ ನಿಷೇಧಕ್ಕೊಳಗಾದ ಪಿಎಫ್ಐ ಸಂಘಟನೆಯ ಪರವಾಗಿ ಪೋಸ್ಟ್ ಪ್ರಕಟಿಸಿದ್ದ. ಅಲ್ಲದೇ ಈ ಬಗ್ಗೆ ಸ್ವಯಂ ಪ್ರೇರಿತನಾಗಿ ಪ್ರಚಾರ ಮಾಡಿದ್ದ. ಸೈಯದ್ ಇಬ್ರಾಹಿಂ ನಿಷೇಧಿತ ಸಂಘಟನೆ ಪರವಾಗಿ ಕೃತ್ಯವೆಸಗಿದ್ದರಿಂದ, ಸ್ವಯಂ ದೂರನ್ನು ಪಡೆದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 113/2025 U/s 10 (a), (i), 13, 18 UAPA Act ರಂತೆ ದಾಖಲಾಗಿದೆ. ಆರೋಪಿಯನ್ನು ಮಂಗಳೂರು ನಗರದ ಉರ್ವ ಸ್ಟೋರ್ ಬಳಿಯಿಂದ ವಶಕ್ಕೆ ಪಡೆದು…

Read More

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ನ್ಯಾಯಾಲಯವು ಆರೋಪಿಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 2025ರ ಮೇ 27ರಂದು ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಬಳಿಕ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದ. ಅಲ್ಲದೆ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿಯೂ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈತನ ವಿರುದ್ಧ ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಪುತ್ತೂರು ನಗರ ಠಾಣೆ ಸಹಿತ 15 ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತರ ಮತ್ತು ಸಂಚು ರೂಪಿಸಿದ ಆರೋಪದ ಹಿನ್ನೆಲೆಯಲ್ಲಿ, ಮಹೇಶ ಶೆಟ್ಟಿ, ತಿಮರೋಡಿ, ಎಂ ಡಿ ಸಮೀರ್ ಗಿರೀಶ್ ಮಟ್ಟಣ್ಣನವರ್ ಟಿ. ಜಯಂತ್, ಅಜಯ್ ಅಂಜನ್ ವಿರುದ್ಧ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು. ಎಸ್ಐಟಿ, ಆದಾಯ ತೆರಿಗೆ ಇಲಾಖೆ ಮತ್ತು ಇಡಿ ಇಂದ ತನಿಖೆಗೆ ಮನವಿ ಮಾಡಲಾಗಿದೆ. ತೇಜಸ್ ಗೌಡ, ಧನ ಕೀರ್ತಿ ಅರಿಗ ಇತರರಿಂದ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಈ ಹಿನ್ನೆಲೆ ಇದೀಗ ಗೃಹ ಇಲಾಖೆ, ಎಸ್ಐಟಿ, ಇಡಿ ಮತ್ತು ಐಟಿ ಇಲಾಖೆಗೆ ಹೈ ಕೋರ್ಟ್ ನೋಟಿಸ್ ನೀಡಿದೆ. ಬಳಿಕ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ನಿಗದಿಪಡಿಸಿತು. ಧರ್ಮಸ್ಥಳದ ವಿರುದ್ಧ ಆಧಾರ ರಹಿತ ಸುಳ್ಳು ಆರೋಪ ಮಾಡಿದ್ದಾರೆ. ಕೋಟ್ಯಾಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ದೂರು ನೀಡಿದರೂ ಪ್ರತಿವಾದಿಗಳು ತನಿಖೆ ನಡೆಸಿಲ್ಲ. ಹೀಗಾಗಿ ಸಮಗ್ರ ತನಿಖೆಗೆ ನಿರ್ದೇಶನ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

Read More

ಚಿತ್ರದುರ್ಗ: ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್​​ ಸಹ ಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್ವೆಲ್ಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ಪ್ರಶ್ನಸಿ ಶರಣ್ ಪಂಪ್ವೆಲ್ ಹೈಕೋರ್ಟ್ ಮೊರೆ ಹೋಗಿದ್ದರು. ಕೆಲ ಷರತ್ತು ವಿಧಿಸಿ ಜಿಲ್ಲಾಡಳಿತದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿತ್ತು. ಸೆಪ್ಟೆಂಬರ್​ 13 ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆ ಬೆಳಗ್ಗೆ 10:30ರಿಂದ 12:30ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಶರಣ್ ಪಂಪ್​​ವೆಲ್​​ ಅಂದಿನ ದಿನ 12:30ರ ಬದಲು 12:45ರವರೆಗೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದು, ಜೊತೆಗೆ ಶೋಭಾಯಾತ್ರೆಯಲ್ಲಿ ಭಾಷಣ ಕೂಡ ಮಾಡಿದ್ದರು. ಈ ಬಗ್ಗೆ ಪೊಲೀಸರು ಹೈಕೋರ್ಟ್ ಗಮನಕ್ಕೆ ತಂದಿದ್ದರು. ಹೀಗಾಗಿ ಆದೇಶ ಉಲ್ಲಂಘಿಸಿದ್ದಕ್ಕೆ ಇದೀಗ ಹೈಕೋರ್ಟ್…

Read More

ಮಂಗಳೂರು: ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾದಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು.ಬಂಧಿತರಿಂದ 88,700 ರೂ. ಮೌಲ್ಯದ 8.790 ಕಿಲೋ ಗ್ರಾಂ ಗಾಂಜಾ, 1,00,000 ರೂ. ಮೌಲ್ಯದ ಬೈಕ್ ಸೇರಿದಂತೆ ಒಟ್ಟು 2,17,460 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ ಬಂಟ್ವಾಳ ಪಿಎಸ್‌ಐ ಸಂದೀಪ್‌ ಕುಮಾ‌ರ್ ಶೆಟ್ಟಿ ಠಾಣಾ ವ್ಯಾಪ್ತಿಯಲ್ಲಿ ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಗೂಡಿನಬಳಿ ಸಮೀಪ ಪಾಣೆಮಂಗಳೂರು ಕಡೆಯಿಂದ ಬಿ.ಸಿ.ರೋಡು ಕಡೆಗೆ ಬೈಕ್‌ನಲ್ಲಿ ಹೆಲೈಟ್ ಧರಿಸದೆ ಬರುತ್ತಿದ್ದ ಇಬ್ಬರನ್ನು ನಿಲ್ಲಿಸಲು ಸೂಚಿಸಿದಾಗ, ಅವರು ಬೈಕನ್ನು ನಿಲ್ಲಿಸದೆ ಪರಾರಿಯಾದರು. ಈ ವೇಳೆ ಅವರನ್ನು ಬೆನ್ನಟ್ಟಿದ ಪೊಲೀಸರು ಕೈಕುಂಜೆ ರೈಲ್ವೆ ಸ್ಟೇಷನ್ ಬಳಿ ಬೈಕನ್ನು ಸುತ್ತುವರಿದು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಅವರು ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಈ ಹಿಂದೆ ಪಿಕಪ್ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ವೇಳೆ…

Read More