ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ 11 ಮಕ್ಕಳು ಸಾವನ್ನಪ್ಪಿದ ನಂತರ, ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಚಿಕ್ಕ ಮಕ್ಕಳಲ್ಲಿ ಕೆಮ್ಮಿನ ಸಿರಪ್ಸಳ ಬಳಕೆಯ ವಿರುದ್ಧ ಸಲಹಾ ಎಚ್ಚರಿಕೆ ನೀಡಿದೆ.ಮೂತ್ರಪಿಂಡ ವೈಫಲ್ಯದಿಂದ ಕೇವಲ ಹದಿನೈದು ದಿನಗಳಲ್ಲಿ ಒಂಬತ್ತು ಮಕ್ಕಳ ಸಾವಿನಿಂದ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆ ಬೆಚ್ಚಿಬಿದ್ದಿದೆಕೆಲವು ದಿನಗಳ ಹಿಂದೆ ಸಿಕಾರ್ನಲ್ಲಿ ಇದೇ ರೀತಿಯ ಸಾವು ವರದಿಯಾಗಿದ್ದ ಮಧ್ಯಪ್ರದೇಶ ಮತ್ತು ನೆರೆಯ ರಾಜಸ್ಥಾನದ ಆರೋಗ್ಯ ಅಧಿಕಾರಿಗಳು, ಈಗ ಅಂಗಾಂಗ ವೈಫಲ್ಯದ ಪ್ರಕರಣಗಳು ಕಲುಷಿತ ಕೆಮ್ಮಿನ ಸಿರಪ್ಸಳ ಸೇವನೆಗೆ ಸಂಬಂಧಿಸಿವೆ ಎಂದು ಶಂಕಿಸಿದ್ದಾರೆ. ಸಾವನ್ನಪ್ಪಿದ ಒಂಬತ್ತು ಮಕ್ಕಳಲ್ಲಿ, ಕನಿಷ್ಠ ಐದು ಮಕ್ಕಳು ಕೋಲೈಫ್ ತೆಗೆದುಕೊಂಡ ಇತಿಹಾಸವನ್ನು ಹೊಂದಿದ್ದರು ಮತ್ತು ಒಬ್ಬರು ನೆಕ್ಕೋ ಸಿರಪ್ ತೆಗೆದುಕೊಂಡಿದ್ದರು.ಖಾಸಗಿ ವೈದ್ಯರಿಗೆ ಎಚ್ಚರಿಕೆಯಿಂದ ವರ್ತಿಸುವಂತೆ ಸೂಚಿಸಲಾಗಿದೆ ಯಾವುದೇ ವೈರಲ್ ರೋಗಿಗೆ ಖಾಸಗಿಯಾಗಿ ಚಿಕಿತ್ಸೆ ನೀಡಬಾರದು, ಬದಲಿಗೆ ನೇರವಾಗಿ ನಾಗರಿಕ ಆಸ್ಪತ್ರೆಗೆ ಕಳುಹಿಸಬೇಕು. ಸಾವಿಗೆ ಕಾರಣವಾಗಿರುವ ಕೆಮ್ಮಿನ ಸಿರಪ್ಪಳ ಮಾದರಿಗಳಲ್ಲಿ ಯಾವುದೇ ಮಾಲಿನ್ಯ ಕಂಡುಬಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಪರೀಕ್ಷಾ ಫಲಿತಾಂಶಗಳು ಸಿರಪ್…
Author: main-admin
ಉಡುಪಿ : ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇದೀಗ ಕೊಲೆಗೆ ಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿ ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ರಿಧಾ ಶಭನಾ (27) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೈಫುದ್ದೀನ್ ಕೊಲೆ ಪ್ರಕರಣ ಸಂಬಂಧ ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಮಂಗಳೂರು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43) ಎಂಬವರನ್ನು ಪೊಲೀಸರು ಈ ಹಿಂದೆಯೇ ಬಂಧಿಸಿದ್ದರು.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017 & ಕೋಕಾ ಪ್ರಕರಣದ ಅರೋಪಿಯಾದ ಭೂಗತ ಪಾತಕಿ ಕಲಿ ಯೋಗೀಶ್ ನ ಸಹಚರನಾದ ಆರೋಪಿ ಶ್ರೀನಿವಾಸ್ ಎಂಬಾತನು ಕಳೆದ 8 ವರ್ಷಗಳಿಂದ ದಸ್ತಗಿರಿ ಗೆ ಸಿಗದೆ,ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಇತನ ವಿರುದ್ದ ಮಾನ್ಯ ಪ್ರಿನ್ಸಿಪಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೈಸೂರು ರವರು ವಾರೆಂಟ್ ಹಾಗೂ ಉದ್ಘೂಷಣೆಯನ್ನು ಹೊರಡಿಸಿರುತ್ತದೆ . ಅದ್ದುದರಿಂದ ಇತನ ಪತ್ತೆಯ ಬಗ್ಗೆ ಶ್ರೀ ಶ್ರೀಕಾಂತ್ ,ಸಹಾಯಕ ಪೊಲೀಸ್ ಅಯುಕ್ತರ , ಮಂಗಳೂರು ಉತ್ತರ ಉಪ ವಿಭಾಗ, ಪಣಂಬೂರು ರವರ ಮಾರ್ಗದರ್ಶನದಲ್ಲಿ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಮಂಜುನಾಥ ಬಿ ಎಸ್, ಪೊಲೀಸ್ ಉಪ ನಿರೀಕ್ಷಿಕರಾದ ಉಮೇಶ್ ಕುಮಾರ್. M. N ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ.ಎಸ್.ಐ ಸುರೇಶ್ ಕುಂದರ್, ಹೆಡ್ ಕಾನ್ಸ್ಟೇಬಲ್ ಉದಯ ರವರ ಒಂದು ತಂಡವನ್ನು ರಚಿಸಿ ಅತನ ಪತ್ತೆಯ ಬಗ್ಗೆ ಶ್ರಮಿಸಲಾಗಿ ಅತನು…
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 27ರಂದು ನಡೆದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದುವರೆಗೆ ಬಂಧಿತರಾಗಿರುವ 13 ಆರೋಪಿಗಳು ಸೇರಿದಂತೆ ಒಟ್ಟು 14 ಮಂದಿ ಮೇಲೆ ಪೊಲೀಸರು ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (KCOCA Act – ಕೋಕಾ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.ಆರೋಪಿಗಳ ಕಾನೂನುಬಾಹಿರ ಚಟುವಟಿಕೆಗಳು ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣವಾಗಿದ್ದರಿಂದ, ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಪ್ರಕರಣದ ಹಿನ್ನೆಲೆ:ದಿನಾಂಕ 27-05-2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಅಬ್ದುಲ್ ರೆಹಮಾನ್ ಅವರ ಕೊಲೆ ನಡೆದಿತ್ತು. ತನಿಖೆ ವೇಳೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದ 13 ಆರೋಪಿಗಳನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಮುಖ ಆರೋಪಿ ನಾಪತ್ತೆ:ಈ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ, ಭರತ್ ರಾಜ್ ಯಾನೆ ಭರತ್ ಕುಮ್ಡೇಲು ಮರೆಸಿಕೊಂಡಿರುವುದಾಗಿ ತಿಳಿದುಬಂದಿದೆ. ಆತನಿಗಾಗಿ ಪೊಲೀಸರು ಶೋಧ…
ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣತಿದಾರರಾಗಿ ಭಾಗವಹಿಸದೇ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಒಳಕಾಡು ಸರ್ಕಾರಿ ಶಾಲಾ ಸಹ ಶಿಕ್ಷಕಿಯರಾದ ಸುರೇಖ ಮತ್ತು ರತ್ನ ಹಾಗೂ ಉದ್ಯಾವರ ಸರ್ಕಾರಿ ಶಾಲಾ ಸಹ ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಸ್ವರೂಪ ಆದೇಶಿಸಿದ್ದಾರೆ. ಈ ಮೂವರು ಶಿಕ್ಷಕಿಯರು ಕೂಡಾ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದೇ, ನೇಮಕಾತಿ ಆದೇಶವನ್ನು ಸ್ವೀಕರಿಸಿರುವುದಿಲ್ಲ, ಹಲವು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ನೇಮಕಾತಿ ಆದೇಶ ಪ್ರತಿಯನ್ನು ಸ್ವೀಕರಿಸಲು ನಿರಾಕರಿಸಿರುತ್ತಾರೆ. ಹೀಗಾಗಿ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಈವರೆಗೂ ನೋಟಿಸ್ ಗೆ ಸಮಜಾಯಿಷಿ ನೀಡಿರುವುದಿಲ್ಲ. ಈ ಕಾರಣದಿಂದಾಗಿ ಸಮೀಕ್ಷೆದಾರರನ್ನು ಅಮಾನತು ಮಾಡಲಾಗಿದೆ.
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಜನಿಸಿದ ನಂತರ ಮದುವೆಗೆ ನಿರಾಕರಿಸಿದ ಯುವಕ ಕೃಷ್ಣ ರಾವ್ ಮದುವೆಯಾಗಲು ತಪ್ಪಿದ್ದಲ್ಲಿ ಆತನ ಮನೆ ಮುಂದೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು. ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು.
ಉಡುಪಿ: ಹೂಡಿಕೆಯ ಹೆಸರಿನಲ್ಲಿ 4.2 ಲಕ್ಷ ರೂಪಾಯಿಯನ್ನು ವಂಚಿಸಿದ ಕುರಿತು ವರದಿಯಾಗಿದೆ. ನಾಝಿಯಾ (39) ಎನ್ನುವವರು ವಂಚೊನೆಗೊಳಗಾದ ಸಂತ್ರಸ್ಥೆ. ಇನ್ಸ್ಟಾಗ್ರಾಮ್ ನಲ್ಲಿ Afreen Halaal Investment ಎಂಬ ಪ್ರೊಫೈಲ್ ನಲ್ಲಿ ವಿಡಿಯೋವೊಂದರಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭವನ್ನು ಗಳಿಸಬಹುದಾದ ಜಾಹೀರಾತನ್ನು ವೀಕ್ಷಿಸಿದ್ದಾರೆ. ನಂತರ ಪ್ರೋಫೈಲ್ ವ್ಯಕ್ತಿಗೆ ಹೂಡಿಕೆ ಮಾಡುವ ಬಗ್ಗೆ ತಿಳಿಯಲು ಸಂದೇಶವನ್ನು ಕಳುಹಿಸಿದ್ದು, ಆನಂತರ ಆರೋಪಿಯು 9477953918 ನಂಬ್ರದಿಂದ ವಾಟ್ಸಪ್ ಗೆ ಬೇರೆ–ಬೇರೆ ವ್ಯಕ್ತಿಗಳು ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಿದ್ದ ಟ್ರಾನ್ಸಕ್ಷನ್ ಗಳ ಸ್ಟ್ರೀನ್ ಶಾನ್ ಗಳನ್ನು ಹೊಂದಿದ ಸಂದೇಶಗಳನ್ನು ಕಳುಹಿಸಿದ್ದಾರೆ. ಇದನ್ನು ನಂಬಿದ ಸಂತ್ರಸ್ಥೆ ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಆರೋಪಿಯು ನೀಡಿದ ಕ್ಯೂ ಅರ್ ಕೋಡ್ ಗೆ ಅವರು ಮೊದಲ ಬಾರಿಗೆ 2000/- ರೂಪಾಯಿಗಳನ್ನು ವರ್ಗಾವಣೆ ಮಾಡಿದ್ದು, ಇದಾದ ಬಳಿಕ ಆರೋಪಿಯ ಬಳಿ ಲಾಭದ ಹಣವನ್ನು ಕೇಳಿದಾಗ ಆರೋಪಿಯು “ ನೀವು ಮೊದಲ ಬಾರಿ ಹೂಡಿಕೆ ಮಾಡುತ್ತೀದ್ದೀರಿ…
ಕಾರ್ಕಳ: ಪ್ರೀತಿಯ ಕಾರಣಕ್ಕೆ ಮನೆ ಬಿಟ್ಟು ಹೋಗುವುದಾಗಿ ತಿಳಿಸಿದ್ದ ಮಗಳನ್ನು ತಾಯಿಯೇ ಹತ್ಯೆ ಮಾಡಿದ ಭೀಕರ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ಬೆಳಕಿಗೆ ಬಂದಿದೆ. ಮೃತಳನ್ನು ಶೇಖ್ ಮುಸ್ತಫಾ ಅವರ ಮಗಳು ಶಿಫನಾಝ್ (17) ಎಂದು ಗುರುತಿಸಲಾಗಿದೆ. ಆರೋಪಿಯಾದ ತಾಯಿ ಗುಲ್ಝಾರ್ ಬಾನು (45) ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 20ರಂದು ತಾಯಿ-ಮಗಳ ನಡುವೆ ಪ್ರೀತಿಯ ವಿಚಾರವಾಗಿ ವಾಗ್ವಾದ ಉಂಟಾಗಿತ್ತು. ಆ ವೇಳೆ ಶಿಫನಾಝ್ ತನ್ನ ಗೆಳೆಯನೊಂದಿಗೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ್ದಳು. ಇದರಿಂದ ಆಕ್ರೋಶಗೊಂಡ ತಾಯಿ, ಮಗಳ ಬಾಯಿಗೆ ಬಟ್ಟೆ ತುರುಕಿಸಿ, ಕುತ್ತಿಗೆ ಹಿಸುಕಿಕೊಂಡು ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ, ಶಿಫನಾಝ್ನ ತಂದೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಶಿಫನಾಝ್ ಅವರನ್ನು ಕತ್ತು ಹಿಸುಕಿಕೊಂಡು ಕೊಲೆ ಮಾಡಲಾಗಿದೆ ಎಂಬುದು ಬಹಿರಂಗವಾಯಿತು. ಬಳಿಕ ಪೊಲೀಸರು…
ಮಂಗಳೂರು: ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬಿಹಾರದ ಪೂರ್ಣಿಯಾ ಹರಿಪುರ್ ಗ್ರಾಮದ ನಿವಾಸಿ, ಪ್ರಸಕ್ತ ಕೂಳೂರು ರಾಯಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕೃಷ್ಣ ಕುಮಾರ್ (20), ಗದಗ ಜಿಲ್ಲೆ ಶಿರಹಟ್ಟಿ ತಾಲೂಕು ಯಳವತ್ತಿ ಗ್ರಾಮ ನಿವಾಸಿ, ಪಡೀಲ್ ಕೊಡಕ್ಕಲ್ನಲ್ಲಿ ವಾಸವಾಗಿರುವ ಬಸಯ್ಯ ಶಂಕರಯ್ಯ ಮಠಪತಿ (23) ಎಂದು ತಿಳಿದು ಬಂದಿದೆ.ಬಂಧಿತ ಆರೋಪಿಗಳಿಂದ ಅಂದಾಜು 20,200 ರೂ. ಮೌಲ್ಯದ 1 ಕೆ.ಜಿ. 364 ಗ್ರಾಂ. ಗಾಂಜಾ, ಎರಡು ಮೊಬೈಲ್, 13 ಖಾಲಿ ಜಿಪ್ ಕವರನ್ನು ಮಂಗಳೂರು: ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಮೂರು ಕ್ರಾಸ್ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44) ಮೃತ ದುರ್ದೈವಿ. ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್ನ ಮುಂಭಾಗದಲ್ಲಿ ರಸ್ತೆ ದಾಟುವ ವೇಳೆ ಅತಿವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆ ಮೃತಪಟ್ಟ ಬಗ್ಗೆ ಪೋಲಿಸ್ ಇಲಾಖೆ ಮಾಹಿತಿ ನೀಡಿದೆ.ರಿಕ್ಷಾದಲ್ಲಿ ಚಾಲಕನ ಪತ್ನಿ ಮಕ್ಕಳು ಹಾಗೂ ಮಾವ ಪ್ರಯಾಣಿಸುತ್ತಿದ್ದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಲೋಕೇಶ್ ಅವರು ಪತ್ನಿ ಹಾಗೂ ಎರಡು ಮಕ್ಕಳ ಸಹಿತ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.










