Author: main-admin

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ SIT ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬೆಳವಣಿಗೆಯಿಂದ ಯೂಟ್ಯೂಬರ್‌ಗಳ ಸಂಕಷ್ಟ ಮುಗಿಯುವ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ವಿವಾದಿತ ಯೂಟ್ಯೂಬರ್ ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೋಟಿಸ್ ಹೋಗಿದ್ದು, ಅವರು ಬೆಳ್ತಂಗಡಿ SIT ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. SIT ಅಧಿಕಾರಿಗಳು ಈ ವಿಚಾರಣೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು,ಈ ಬಾರಿ ಯಾವೆಲ್ಲಾ ಪ್ರಶ್ನೆಗಳನ್ನು ಕೇಳಬೇಕು ಎಂಬುದರ ಕುರಿತು ಅಧಿಕಾರಿಗಳು ಪೂರ್ವ ಸಿದ್ಧತೆ ನಡೆಸಿದ್ದಾರೆ. ಈ ಹಿಂದಿನ ತನಿಖೆಯ ಸಂದರ್ಭದಲ್ಲಿ ಆರೋಪಿ ಚಿನ್ನಯ್ಯ ನೀಡಿದ ಹೇಳಿಕೆಗಳನ್ನು ಆಧರಿಸಿ SIT ತನ್ನ ತನಿಖೆಯನ್ನು ಮುಂದುವರಿಸಿದೆ. ಚಿನ್ನಯ್ಯ ನೀಡಿದ ಹೇಳಿಕೆಗಳಲ್ಲಿ ಕೆಲವೊಂದು ವಿಚಾರಗಳ ಬಗ್ಗೆ ಯೂಟ್ಯೂಬರ್‌ಗಳ ಮೂಲಕ ಮರು ಪರಿಶೀಲನೆ ನಡೆಸುವುದು ಮತ್ತು ಪ್ರಶ್ನೆಗಳನ್ನು ಕೇಳುವ ಉದ್ದೇಶದಿಂದ ಅವರನ್ನು ಕರೆಸಿಕೊಳ್ಳಲಾಗುವುದು ಎಂದು ಹೇಳಲಾಗಿದೆ.

Read More

ಬಂಟ್ವಾಳ: ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ನಡೆದಿದೆ. ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿ ಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ. ಹಸನಬ್ಬ ವಿರುದ್ಧ ಗೋ ಕಳವು, ಗೋವಧೆಯಂತಹ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 123/2025 ಕಲಂ 303 ಬಿ ಎನ್ ಎಸ್ ಕಲಂ 4,7,12 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ ವಿರುದ್ಧ 2017ನೇ ಸಾಲಿನಲ್ಲಿ ಅಪರಾಧ ಕ್ರಮಾಂಕ 65/2017 ಕಲಂ 379 ಐಪಿಸಿ ಮತ್ತು 4,5,11 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ…

Read More

ಉಡುಪಿ: ಅಂಬಲಪಾಡಿಯ ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಂಬಲಪಾಡಿಯ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದಲ್ಲಿದ್ದಾಗ ವೃದ್ಧ ಮಹಿಳೆಯೊಬ್ಬರ ಸರವನ್ನು ಕಳ್ಳಿಯರಿಬ್ಬರು ಕದ್ದಿದ್ದಾರೆ. ಸಂಶಯಗೊಂಡು ಮಹಿಳೆಯರನ್ನು ಪರಿಶೀಲಿಸಿದಾಗ ಸರ ಪತ್ತೆಯಾಗಿದೆ. ಈ ಬಗ್ಗೆ ಕೋಪಗೊಂಡ ಸಾರ್ವಜನಿಕ ಮಹಿಳೆಯರು ಆಪಾದಿತ ಮಹಿಳೆಯರಿಗೆ ಹಲ್ಲೆ ನಡೆಸಲು ಮುಂದಾಗಿದ್ದು, ವಿಶುಶೆಟ್ಟಿಯವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಪೆಟ್ಟು ತಿಂದ ಮಹಿಳೆಯರು ಪೋಲಿಸರಿಗೆ ಒಪ್ಪಿಸುವ ಸಂದರ್ಭದಲ್ಲಿ ಅನಾರೋಗ್ಯದ ಬಗ್ಗೆ ತಿಳಿಸಿದ್ದಾರೆ. ತದನಂತರ ವಿಶುಶೆಟ್ಟಿಯವರು ಆಪಾದಿತ ಮಹಿಳೆಯರನ್ನು ತನ್ನ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪೋಲಿಸರಿಗೆ ಒಪ್ಪಿಸಿರುತ್ತಾರೆ. ಆಪಾದಿತ ಮಹಿಳೆಯರು ತಮಿಳುನಾಡು ಮೂಲದವರೆಂಬ ಮಾಹಿತಿ ಇದೆ.

Read More

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರ ವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು. ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು…

Read More

ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿ ರಜಾಕ್ (43) ಬಂಧಿತ ಆರೋಪಿ.ದಿನಾಂಕ ಅಕ್ಟೋಬರ್ 1 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಉಪನಿರೀಕ್ಷಕರಾದ ಅವಿನಾಶ್ ಹೆಚ್ ರವರು ಮತ್ತು ಸಿಬ್ಬಂದಿ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ವಾಹನ ತಪಾಸಣೆ ಮಾಡುವ ಸಮಯ ಸುಮಾರು 4 ಗಂಟೆಗೆ ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಪ್ಪು ಕಾರೊಂದನ್ನು ನಿಲ್ಲಿಸುವಂತೆ ಸೂಚಿಸಿದಾಗ ಅದರ ಚಾಲಕ ನಿಲ್ಲಿಸದೇ ದೂರದಲ್ಲಿ ನಿಲ್ಲಿಸಿ ಚಾಲಕ ಇಳಿದು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದಾನೆ. ಕೂಡಲೇ ಪೊಲೀಸ್ ಉಪನಿರೀಕ್ಷಕರಾದ ಅವಿನಾಶ್ ಮತ್ತು ಸಿಬ್ಬಂದಿ ಓಡಿಹೋಗಿ ಚಾಲಕನನ್ನು ಹಿಡಿದುಕೊಂಡು ವಿಚಾರಿಸಿದಾಗ ಸರಿಯಾಗಿ ಉತ್ತರವನ್ನು ಹೇಳದೆ ಅಸ್ಪಷ್ಟವಾಗಿ, ತೊದಲುತ್ತಾ ಅಮಲು ಪದಾರ್ಥ ಅಥವಾ ಮಾದಕ ವಸ್ತುವನ್ನು ಸೇವನೆ ಮಾಡಿರುವಂತೆ ಮಾತನಾಡುತ್ತಿರುವುದು ಕಂಡು ಆತನ ಬಗ್ಗೆ ಅನುಮಾನಗೊಂಡು ಅವನ ಹೆಸರು ವಿಳಾಸವನ್ನು ಕೇಳಿದ್ದಾರೆ. ಆಗ…

Read More

ಧರ್ಮಸ್ಥಳದಲ್ಲಿ ದೊರೆತ ಮಾನವನ ಮೂಳೆಗಳು ಹಾಗೂ ಬುರುಡೆಗಳ ಕುರಿತು ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಗ್ಲೆ ಗುಡ್ಡದಲ್ಲಿ ಇದುವರೆಗೂ ದೊರೆತ ಬುರುಡೆ ಮತ್ತು ಮೂಳೆಗಳನ್ನು SIT ಅಧಿಕಾರಿಗಳು FSL ಗೆ ಕಳುಹಿಸಿಯೇ ಇಲ್ಲ ಎನ್ನುವುದು ಬಯಲಾಗಿದೆ. ಹೌದು ಬಂಗ್ಲೆ ಗುಡ್ಡದಲ್ಲಿ ಸಿಕ್ಕಿದ್ದ 7 ಬುರುಡೆ ಹಾಗೂ ಹಲವು ಮೂಳೆಗಳನ್ನು ಎಸ್ಐಟಿ ಅಧಿಕಾರಿಗಳು FSL ಗೆ ಕಳುಹಿಸಿಯೇ ಇಲ್ಲ ಎಂದು ತಿಳಿದುಬಂದಿದೆ . ಸೆಪ್ಟೆಂಬರ್ 6 ರಂದು ಬುರುಡೆ ಮತ್ತು ಮೂಳೆಗಳು ಬಂಗ್ಲೆ ಗುಡ್ಡದಲ್ಲಿ ಪತ್ತೆಯಾಗಿದ್ದವು. ಇದುವರೆಗೂ ಪತ್ತೆಯಾದ ಬುರುಡೆ ಮತ್ತು ಮೂಳೆಗಳು ಯಾರದ್ದು ಎಂದು ಕುತೂಹಲ ಮೂಡಿಸಿದ್ದು, ಎಸ್ಐಟಿಗೆ ಸಲ್ಲಿಕೆಯಾದ ಎಫ್ಎಸ್ಎಲ್ ರಿಪೋರ್ಟ್ ಇದೀಗ ಲಭ್ಯವಾಗಿದೆ. ಈ ಒಂದು ವರದಿಯಲ್ಲಿ ಮೂರು ತಲೆ ಬುರುಡೆ ಮತ್ತು ಮೂಳೆಗಳ ಎಫಎಸ್ಎಲ್ ವರದಿ ಲಭ್ಯವಾಗಿದೆ. ಮೊದಲನೆಯದ್ದು ಚಿನ್ನಯ್ಯ ಕೋರ್ಟಿಗೆ ತಂದಿದ್ದ ಬುರುಡೆ ಇದು ಸುಮಾರು 40 ವರ್ಷದ ಗಂಡಸಿನ ತಲೆ ಬುರುಡೆ ಎಂದು ತಿಳಿದುಬಂದಿದೆ. ಇನ್ನು ಸ್ಮಾರ್ಟ್ ನಂಬರ್…

Read More

ಬಂಟ್ವಾಳ: ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ ( 68) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಹೋಗಿ ಕಾಣೆಯಾಗಿದ್ದಾರೆ. ಅದೇ ಚಿಂತೆಯಲ್ಲಿದ್ದವರಿಗೆ ಮಗನ ಚಿಂತೆಯಿಂದ ರಕ್ತದ ಒತ್ತಡ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಮಾನಸಿಕವಾಗಿ ನೊಂದು ಜೀವನದಲ್ಲಿ ಜುಗುಪ್ಸೆ ಹೊಂದಿದ್ದ ಇವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮೃತರ ಕುಟುಂಬವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಇನ್ಮುಂದೆ ಬೈಕ್ ನಂಬರ್ ಪ್ಲೇಟ್  ಮರೆ ಮಾಚಿದ್ರೆ   ಕ್ರಿಮಿನಲ್ ಕೇಸ್ ಬೀಳುತ್ತೆ.ಟ್ರಾಫಿಕ್ ಪೊಲೀಸರು, ಎಐ ಕ್ಯಾಮೆರಾ ಮತ್ತು ಸಿಗ್ನಲ್​​ಗಳ ಕಣ್ತಪ್ಪಿಸಲು ಬೈಕ್ ಸವಾರರು ನಾನಾ ಕಸರತ್ತು ನಡೆಸುತ್ತಾರೆ. ಅದರಲ್ಲೂ ನಂಬರ್ ಪ್ಲೇಟ್​​ಗಳು ಸರಿಯಾಗಿ ಕಾಣಿಸಬಾರದು ಅಂತಾ ಕೊನೆ ನಂಬರ್​​ಗಳಿಗೆ ಬಣ್ಣ ಬಳೆಯುವುದು, ಟೇಪ್ ಹಾಕುವುದು, ಬಟ್ಟೆ ಸುತ್ತುವುದನ್ನು ಮಾಡುತ್ತಾರೆ. ಹೀಗೆ ನಂಬರ್ ಪ್ಲೇಟ್​​ಗಳನ್ನ ತಿದ್ದುವ ಸವಾರರಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಪೊಲೀಸರು ಕ್ರಿಮಿನಲ್ ಕೇಸ್ ದಾಖಲಿಸುತ್ತಿದ್ದಾರೆ.   ಇತ್ತೀಚಿಗೆ ನಗರದಲ್ಲಿ ಪೊಲೀಸರು ವಾಹನ ತಪಾಸಣೆಗೆ ಮುಂದಾಗಿದ್ದು, ಈ ವೇಳೆ ಹಲವು ಬೈಕ್ ಸವಾರರು ತಮ್ಮ ಬೈಕ್​​ ನಂಬರ್ ಪ್ಲೇಟ್​​ ಅನ್ನು ಮರೆಮಾಚಿ ಸಂಚಾರ ಮಾಡುತ್ತಿರುವುದು ಕಂಡು ಬಂದಿದೆ. ಇದರಿಂದ ಎಚ್ಚೆತ್ತ ಪೊಲೀಸರು ಅಂತಹ ಬೈಕ್ ಸವಾರರನ್ನ ಪತ್ತೆ ಹಚ್ಚಿ ಅವರ ಮೇಲೆ ವಂಚನೆ ಪ್ರಕರಣ ದಾಖಲು ಮಾಡುತ್ತಿದ್ದಾರೆ.    

Read More

ಕಾಸರಗೋಡು : ಡಿವೈಎಫ್‌ಐ ನಾಯಕಿ ಮತ್ತು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಅವರು ತಮ್ಮ ಕಚೇರಿಯೊಳಗೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಂಜೆಯಿಂದ ಅವರಿಗೆ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕುಟುಂಬ ಸದಸ್ಯರು ಅವರ ಕಚೇರಿಗೆ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡುಕೊಂಡರು. ಅವರು ಪೊಲೀಸರಿಗೆ ಮಾಹಿತಿ ನೀಡಿದಾಗ, ಅವರು ಬಾಗಿಲು ಒಡೆದು ನೋಡಿದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಂಜಿತಾ ಕುಂಬ್ಳೆಯಲ್ಲಿ ಡಿವೈಎಫ್‌ಐನ ಪ್ರಮುಖ ನಾಯಕಿಯಾಗಿದ್ದರು, ಮಹಿಳಾ ಸಂಘದ ಪ್ರದೇಶ ಸಮಿತಿಯ ಅಧ್ಯಕ್ಷೆ, ಡಿವೈಎಫ್‌ಐ ಬ್ಲಾಕ್ ಘಟಕದ ಖಜಾಂಚಿ ಮತ್ತು ವನಿತಾ ಸೇವಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ಅವರು ಆ ಪ್ರದೇಶದ ಪ್ರಬಲ ಮತ್ತು ಭರವಸೆಯ ಸಿಪಿಐ(ಎಂ) ನಾಯಕಿ ಎಂದೂ ಪರಿಗಣಿಸಲ್ಪಟ್ಟಿದ್ದರು. ಮೃತದೇಹದ ಬಳಿ…

Read More

ಕಾರ್ಕಳ: ಮಹಿಳೆಯೋರ್ವರಿಗೆ ಕತ್ತಿಯಿಂದ ಕಡಿದು ಕೊಲೆಯತ್ನ ನಡೆಸಿದ್ದ ಪ್ರಕರಣದಲ್ಲಿ ಆರೋಪಿಯನ್ನು ಎರಡನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ಸಂಚಾರಿ ಪೀಠ ( ಕಾರ್ಕಳ) ನ್ಯಾಯಧೀಶ ಸಮೀವುಲ್ಲಾ ದೋಷಿ ಎಂದು ಮಂಗಳವಾರ ಆದೇಶಿಸಿದ್ದಾರೆ. ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಬಲರಾಮ ಹೆಗ್ಡೆ ಎಂದು ಗುರುತಿಸಲಾಗಿದೆ. ಪ್ರಕರಣ ಹಿನ್ನಲೆ: 2022 ರ ಮಾ.14 ರಂದು ಹೆಬ್ರಿ ಠಾಣಾ ವ್ಯಾಪ್ತಿಯ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗೇರುಬೀಜ ಕಾರ್ಖಾನೆಯಿಂದ ಮಧ್ಯಾಹ್ನ ಮನೆಗೆ ವಾಪಾಸಾಗುತ್ತಿದ್ದ ಪ್ರಮೋದಾ ಕುಲಾಲ್ ಎಂಬವರನ್ನು ಬಲ್ಲಾಡಿ 5 ಸೆಂಟ್ಸ್ ಈಶ್ವರ ನಗರ ಎಂಬಲ್ಲಿ ಆರೋಪಿ ಬಲರಾಮ ಹೆಗ್ಡೆ ಅಡ್ಡಗಟ್ಟಿ, ಅವ್ಯಾಚ ಶಬ್ದಗಳಿಂದ ನಿಂದಿಸಿ, ಕತ್ತಿಯಿಂದ ಕಡಿದು ಕೊಲೆಗೈಯಲು ಯತ್ನಿಸಿದರು. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಕೊಲೆಯತ್ನ, ಮಹಿಳೆಗೆ ಲೈಂಗಿಕ ದೌರ್ಜನ್ಯ ಸೇರಿದಂತೆ ಇತರ ಕಲಂನಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಆದೇಶಿಸಿದ್ದು, ಆರೋಪಿ ಬಲರಾಮ ಹೆಗ್ಡೆಯನ್ನು ಬಂಧಿಸಿ, ಹಿರಿಯಡ್ಕದ ಕಾರಗೃಹಕ್ಕೆ ಕಳುಹಿಸಲಾಗಿದೆ. ಮಂಗಳವಾರ (ಸೆ.30) ರಂದು ಶಿಕ್ಷೆಯ…

Read More