Author: main-admin

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಡಿ…

Read More

ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿರುವ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ಆರೋಪಿಗಳು 1.ಉಮೇಶ್‌, 2.ಸಿದ್ರಾಮೇಶ,3.ಹನುಮೇಶ, 4.ಮಲ್ಲಿಕಾರ್ಜುನ ಹಡಪದ, 5.ಶಿವಪ್ಪ ಸರದಾರ, 6.ವಿರೂಪಾಕ್ಷ, 7.ಬಸವರಾಜ, 8.ಜಗದೀಶ ಎಂದು ಗುರುತಿಸಲಾಗಿದೆ. ಪೊಲೀಸರು ಬಂಧಿತ ಆರೋಪಿಗಳಿಂದ ಸೊತ್ತುಗಳನ್ನು ವಶಪಡಿಸಿಕೊಂಡು, ವಿಚಾರಣೆ ನಡೆಸಿದ್ದಾರೆ. ದಿನಾಂಕ: 13/11/2025 ರಂದು 17:00 ಗಂಟೆಗೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಹನುಮಾನ್‌ ನಗರ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್‌ ಜುಗಾರಿ ಆಟವನ್ನು ಆಡುತ್ತಿರುವುದಾಗಿ ಖಚಿತ ಮಾಹಿತಿ ಬಂದಿದ್ದು, ಅದರಂತೆ ಅನೀಲ್‌ ಕುಮಾರ್‌ ಡಿ ಪೊಲೀಸ್‌ ಉಪನಿರೀಕ್ಷಕರು ಮಲ್ಪೆ ಪೊಲೀಸ್‌ ಠಾಣೆ ಇವರು ಠಾಣಾ ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ತೆರಳಿ ನೋಡಲಾಗಿ ಅಲ್ಲಿನ ಇರುವ ಸಾರ್ವಜನಿಕ ಖಾಲಿ ಸ್ಥಳದಲ್ಲಿ 7-8 ಜನರು ನ್ಯೂಸ್‌ ಪೇಪರ್‌ ಹಾಸಿಕೊಂಡು ಕುಳಿತುಕೊಂಡಿದ್ದು, ಅಂದರ್ ಬಾಹರ್ ಎಂಬ ಇಸ್ಪೀಟ್ ಆಟ ಆಡುತ್ತಾ…

Read More

ಬಂಟ್ವಾಳ: ಚೆಕ್ ಅಮಾನ್ಯ ಪ್ರಕರಣವೊಂದರಲ್ಲಿ ಪ್ರಾಥಮಿಕ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂಭತ್ತನೇ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ. ಬಂಟ್ವಾಳದ ಕಾವಳಕಟ್ಟೆಯಲ್ಲಿರುವ ಕಲೈ ಚಂದ್ರಮೌಳಿ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಎಸ್. ನಾಯಕ್ ಅವರು ಶಿಕ್ಷೆಗೊಳಗಾದವರು. ಮಂಗಳೂರಿನ ದಿವ್ಯಶ್ರೀ ಡಿ.ಕೆ. ಎಂಬವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಕೊಡಿಯಾಲ್‌ಬೈಲ್ ಶಾಖೆಯಿಂದ ಸಾಲ ಪಡೆದಿದ್ದರು. ಈ ಸಾಲಕ್ಕೆ ಚಂದ್ರಶೇಖರ್ ಎಸ್. ನಾಯಕ್ ಜಾಮೀನುದಾರರಾಗಿದ್ದರು. ದಿವ್ಯಶ್ರೀ ಪಡೆದ ಸಾಲವನ್ನು ಸಕಾಲಕ್ಕೆ ತೀರಿಸದೆ ಸುಸ್ತಿಯಾಗಿತ್ತು. ಈ ಬಗ್ಗೆ ಸಾಲ ವಸೂಲಾತಿಗಾಗಿ ಸಹಕಾರಿ ಕಾಯ್ದೆಯನ್ವಯ ಬ್ಯಾಂಕ್ ಕಾನೂನು ಪ್ರಕ್ರಿಯೆಯನ್ನು ಜರುಗಿಸಲಾಗಿತ್ತು. ಈ ಮಧ್ಯೆ, ಬ್ಯಾಂಕ್‌ನ್ನು ಸಂಪರ್ಕಿಸಿದ ಕಾವಳಕಟ್ಟೆ ಶಾಲೆಯ ಹೆಡ್ ಮಾಸ್ಟರ್ ಚಂದ್ರಶೇಖರ್ ನಾಯಕ್ ಸಾಲದ ಮರುಪಾವತಿಗಾಗಿ ಚೆಕ್ ನೀಡಿದ್ದರು. ಈ ಚೆಕ್ ಅಮಾನ್ಯಗೊಂಡ ಹಿನ್ನೆಲೆಯಲ್ಲಿ ಚಂದ್ರಶೇಖರ್ ನಾಯಕ್ ವಿರುದ್ಧ ಬ್ಯಾಂಕ್ ಕಾನೂನು ಪ್ರಕ್ರಿಯೆ ಆರಂಭಿಸಿತ್ತು. ಬ್ಯಾಂಕ್ ಸೂಕ್ತ ಕಾನೂನು ಪ್ರಕ್ರಿಯೆಯನ್ನು ಪೂರೈಸಿದ ಬಳಿಕ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ…

Read More

ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ತಮ್ಮ ಮಕ್ಕಳೆಂದು ತಮ್ಮ ಪತಿಯೊಂದಿಗೆ ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವೆ 4.5 ಕಿಲೋಮೀಟರ್ ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ ತಿಮ್ಮಕ್ಕ ಅವರು ಈವರೆಗೆ 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಇದನ್ನು ಓದಿದ್ದೀರಾ? ಸಾಲು ಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಸರ್ಕಾರ ಸಾಲುಮರದ ತಿಮ್ಮಕ್ಕ ಅವರಿಗೆ 2019ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಜತೆಗೆ ರಾಷ್ಟ್ರೀಯ ಪೌರ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ಮತ್ತು ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿಗಳೂ ತಿಮ್ಮಕ್ಕ ಅವರಿಗೆ ಲಭಿಸಿದೆ.

Read More

ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ಎಂಬಲ್ಲಿ “ಗುರುಲೀಲಾ” ಎಂಬ ಹೆಸರಿನ ಚಿಕನ್ ಸೆಂಟರ್ ನಡೆಸುತ್ತಿದ್ದ ಶ್ರೀಧರ್ (48) ಎಂಬ ವ್ಯಕ್ತಿ ಕಳೆದ ಹಲವು ವರ್ಷಗಳಿಂದ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಪಿರ್ಯಾದುದಾರರ ಹೇಳಿಕೆಯ ಪ್ರಕಾರ, ಶ್ರೀಧರ್ ಅವರು 2019ರ ಮಾರ್ಚ್ 18ರಂದು ಬೆಳಿಗ್ಗೆ 6.00 ಗಂಟೆಗೆ ಎಂದಿನಂತೆ ತಮ್ಮ ಚಿಕನ್ ಸೆಂಟರ್ ಅಂಗಡಿಗೆ ತೆರಳಿ ವ್ಯಾಪಾರ ಪ್ರಾರಂಭಿಸಿದ್ದರು. ಬೆಳಿಗ್ಗೆ 8.30 ಗಂಟೆ ವೇಳೆಗೆ ಅಂಗಡಿ ಬಾಗಿಲು ಮುಚ್ಚಿಕೊಂಡು ಎಲ್ಲಿಗೋ ತೆರಳಿ, ಬಳಿಕ ಅಂಗಡಿಗೂ ಮನೆಗೂ ಮರಳದೇ, ಅವರ ಮೊಬೈಲ್ ಫೋನ್ ಸಹ ಸ್ವಿಚ್ ಆಫ್ ಆಗಿರುವುದಾಗಿ ತಿಳಿದುಬಂದಿದೆ.ಕಾಣೆಯಾದವರ ವಿವರಗಳು: ಹೆಸರು: ಶ್ರೀಧರ್ ವಯಸ್ಸು: 48 ವರ್ಷ ಎತ್ತರ: ಸುಮಾರು 175 ಸೆ.ಮೀ ಮೈಬಣ್ಣ: ಗೋಧಿ ಬಣ್ಣ ಚಹರೆ: ದುಂಡು ಮುಖ, ಸಾಧಾರಣ ಮೈಕಟ್ಟು ಧರಿಸಿದ ಉಡುಗೆ: ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಬೂದು ಬಣ್ಣದ ಉದ್ದತೋಳಿನ ಶರ್ಟ್ ತಿಳಿದಿರುವ ಭಾಷೆಗಳು: ಕನ್ನಡ, ಹಿಂದಿ, ಮಲಯಾಳಂ, ತುಳು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದು — ಕಾಣೆಯಾದ ಶ್ರೀಧರ್ ಎಂಬವರ ಬಗ್ಗೆ ಯಾವುದೇ ಮಾಹಿತಿ…

Read More

ಮಂಗಳೂರು:ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.ಮೂಡಬಿದಿರೆಯ ಕಾಲೇಜೊಂದರ ಕ್ಯಾಂಟೀನ್‌ನಲ್ಲಿ ಜೊತೆಗೆ ಕೆಲಸ ಮಾಡಿಕೊಂಡಿರುವ ಚೇತನ್ (22) ಮತ್ತು ಚಿದಾನಂದ ಎಂಬವರಿಗೆ ಗೆ ಕ್ಯಾಂಟೀನ್ ನಲ್ಲಿ ಕೆಲಸದ ವಿಚಾರದಲ್ಲಿ ಮತ್ತು ವೈಯುಕ್ತಿಕ ವಿಚಾರದಲ್ಲಿ ಪರಸ್ಪರ ತಕರಾರು ನಡೆದಿತ್ತು. ಆರೋಪಿ ಚಿದಾನಂದ ಪರಶು ನಾಯ್ಕ ಎಂಬಾತನು 2020 ರ ಅ. 10 ರಂದು ಮಧ್ಯರಾತ್ರಿ ಚೇತನ್‌ನನ್ನು ಕೊಲೆ ಮಾಡುವ ಉದ್ದೇಶದಿಂದ ಕಬ್ಬಿಣದ ರಾಡ್‌ ಹಿಡಿದುಕೊಂಡು ಚೇತನ್‌ ವಿಶಾಂತ್ರಿ ಕೊಠಡಿಗೆ ಅಕ್ರಮ ಪ್ರವೇಶ ಮಾಡಿದ್ದನು. ಅಲ್ಲಿ ರಾಜೇಶ್‌ ಪೂಜಾರಿ ಮತ್ತು ಶಂಕ್ರಪ್ಪ ಜತೆ ನಿದ್ರಿಸುತ್ತಿದ್ದ ಚೇತನ್‌ನನ್ನು ಅವಾಚ್ಯ ಶಬ್ದಗಳಿಂದ ಬೈದು ರಾಡ್‌ನಿಂದ ತಲೆಗೆ, ಮುಖಕ್ಕೆ ಹಲ್ಲೆ ಮಾಡಿದ್ದಲ್ಲದೇ ಮೊಬೈಲ್‌ ಫೋನ್‌ ಜಖಂಗೊಳಿಸಿದ್ದ. ಗಂಭೀರ ಗಾಯಗೊಂಡಿದ್ದ ಚೇತನ್‌ ನ. 9 ರಂದು ಮೃತಪಟ್ಟಿದ್ದರು. ಈ…

Read More

ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ಹಲ್ಲೆ ಮಾಡಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಹೋರಾಟಗಾರ ಜಯಂತ್ ಟಿ. ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ, ಮಂಜುನಾಥ ಗೌಡ, ಹಾಗೂ ಗುಣಪಾಲ ಸೇರಿ ತನಗೆ ಬೆದರಿಕೆ ಹಾಕಿದ್ದರು, ಬಳಿಕ ದೂರುದಾರ ಚಿನ್ನಯ್ಯನನ್ನು ಕರೆಸಿ ಆತನ ಮೂಲಕ ತನಗೆ ತೀವ್ರವಾಗಿ ಹಲ್ಲೆ ಮಾಡಿಸಿದರು. ಅದೇ ರೀತಿ ಚಿನ್ನಯ್ಯನ ಮೇಲೆ ಹಲ್ಲೆ ನಡೆಸಿ ತನ್ನನ್ನು ಬೆದರಿಸಿದರು. ಸುಳ್ಳು ಹೇಳಿಕೆ ಪಡೆಯುವ ಪ್ರಯತ್ನ ನಡೆಸಿದರು ಚಿನ್ನಯ್ಯನಿಗೆ‌ ಹೇಳಿ ತನ್ನ ಮೇಲೆ ಅವನ ಮೂಲಕ ಮತ್ತೆ ಹಲ್ಲೆ ನಡೆಸಿ ಸುಳ್ಳು ಹೇಳಿಕೆ ನೀಡುವಂತೆ ಒತ್ತಾಯಿಸಿದರು ಎಂದು ಜಯಂತ ದೂರಿನಲ್ಲಿ ಆರೋಪಿಸಿದ್ದಾರೆ. ಸುಳ್ಳು ಹೇಳಿಕೆ ನೀಡಲು ಒಪ್ಪದಿದ್ದಾಗ ದೊಡ್ಡವರ ವಿರುದ್ಧ ದೂರು ನೀಡುತ್ತಿಯಾ ನಿನ್ನನ್ನು ಹಾಗೂ ನಿನ್ನೊಂದಿಗೆ ಇರುವವರನ್ನು ಜೈಲಿಗೆ ಹಾಕದೆ ಬಿಡುವುದಿಲ್ಲ ಎಂದು ಬೆದರಿಸಿದ್ದಾರೆ. ಅಧಿಕಾರಿಗಳ ಹಲ್ಲೆಯಿಂದ ಗಾಯಗೊಂಡ ತಾನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದಾಗಿ…

Read More

ಬೆಳ್ತಂಗಡಿಯ ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ. ನಾರವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ ಅ.2 ರಿಂದ ಅ.6ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೇಣೂರು ಪೊಲೀಸ್ ಠಾಣೆ ಸಬ್ ಇನ್ಸೆಕ್ಟರ್ ಓಮನ ಮತ್ತು ತಂಡ ನ.11 ರಂದು ರಾತ್ರಿ ವೇಣೂರು ಕುಂಭಶ್ರೀ ಬಳಿ ವಾಹನ ತಪಾಸಣೆ ಮಾಡುವ ವೇಳೆ ಅನುಮಾನಾಸ್ಪದವಾಗಿ ಸ್ಕೂಟರ್‌ನಲ್ಲಿ ಬರುತ್ತಿದ್ದ ಇತ್ತೆ ಬರ್ಪೆ ಅಬೂಬಕರ್‌ನನ್ನು ತಡೆದು ನಿಲ್ಲಿಸಿ ವಾಹನದ ದಾಖಲೆ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿ ಉಡುಪಿ ಜಿಲ್ಲೆಯ…

Read More

ಮೈಸೂರು: ಮುಂಬೈ ಪೊಲೀಸ್ ಎಂದು ಹೇಳಿಕೊಂಡು ಡಿಜಿಟಲ್ ಅರೆಸ್ಟ್ ವಾತಾವರಣ ಸೃಷ್ಟಿಸಿ ಕೇರಳದ ವ್ಯಕ್ತಿಯೊಬ್ಬರಿಂದ 20.50 ಲಕ್ಷ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಮೈಸೂರಿನ 21 ವರ್ಷದ ಯುವತಿಯನ್ನು ಕೇರಳದ ಅಲಪ್ಪುಜ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಅಶೋಕಪುರಂ ನಿವಾಸಿ ಚಂದ್ರಿಕಾ (21) ಬಂಧಿತ ಯುವತಿ. ಅಶೋಕಪುರಂ ಠಾಣೆ ಇನ್ಸ್‌ಪೆಕ್ಟರ್ ಸಿ.ರೋಹಿತ್ ಅವರು ‘ಈಟಿವಿ ಭಾರತ’ಕ್ಕೆ ಪ್ರತಿಕ್ರಿಯೆ ನೀಡಿ, ಅಲಪ್ಪುಜ ಸೈಬರ್ ಅಪರಾಧ ವಿಭಾಗದ ಪೊಲೀಸರು ಆರೋಪಿಯ ನಿವಾಸ ಪತ್ತೆ ಹಚ್ಚಲು ಮತ್ತು ಬಂಧಿಸಲು ನಮ್ಮ ಸಹಕಾರ ಪಡೆದಿದ್ದಾರೆ ಎಂದು ತಿಳಿಸಿದರು. ಉದ್ಯೋಗಿಯನ್ನು ಸಂಪರ್ಕಿಸಿ ಮುಂಬೈ ಪೊಲೀಸ್ ಪ್ರಧಾನ ಕಚೇರಿಯ ನೆಹಶರ್ಮ ಎಂದು ಪರಿಚಯಿಸಿಕೊಂಡಿದ್ದರು. ಬಳಿಕ ನಿಮ್ಮ ಹೆಸರಿನಲ್ಲಿ ಹಲವು ನಕಲಿ ಬ್ಯಾಂಕ್ ಖಾತೆಗಳು ಹಾಗೂ ಮೊಬೈಲ್ ಸಂಖ್ಯೆಗಳನ್ನು ತೆರೆಯಲಾಗಿದೆ. ಅವುಗಳನ್ನು ಕೋಟ್ಯಂತರ ರೂ. ಅಪರಾಧಗಳಿಗೆ ಬಳಸಲಾಗುತ್ತಿದೆ. ನೀವು 25 ಲಕ್ಷ ರೂ. ಕಮಿಷನ್ ಪಡೆದಿದ್ದೀರಿ ಎಂದು ದೂರುದಾರನಿಗೆ ಹೆದರಿಸಿದ್ದರು. ಅಲ್ಲದೆ ನಾವು ಹೇಳಿದಂತೆ ಕೇಳದಿದ್ದರೆ ಬಂಧಿಸುವುದಾಗಿ ಬೆದರಿಕೆ…

Read More

ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್‌ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ. ಸುಮಾ ಅವರು ಸೋಮವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ಕೆಲಸದ ಸ್ಥಳವನ್ನು ತಲುಪಿಲ್ಲ. ಅವರ ಪತಿ ಕುಮಾರ್ ಅವರು ಸುಮಾ ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಂತರ ಸಂಬಂಧಿಕರು ಮತ್ತು ಸ್ನೇಹಿತರ ಬಳಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಕುಮಾರ್ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಸುಮಾ ಅವರು ಸುಮಾರು 5 ಅಡಿ ಎತ್ತರ, ಮಧ್ಯಮ ಮೈಕಟ್ಟು ಮತ್ತು ಗೋಧಿ ಬಣ್ಣದ ಮೈಕಟ್ಟು ಹೋಂದಿದ್ದಾರೆ. ಅವರು ಕೊನೆಯದಾಗಿ ಕಪ್ಪು ಪ್ಯಾಂಟ್ ಮತ್ತು ಕಪ್ಪು ಉದ್ದ ತೋಳಿನ ಶರ್ಟ್ ಧರಿಸಿದ್ದರು. ಅವರು ಕನ್ನಡ, ತುಳು…

Read More