ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಅ.ಕ್ರ. 69/2019 ಪ್ರಕರಣದಲ್ಲಿ 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಕೇರಳ ರಾಜ್ಯದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದರಿ ಪ್ರಕರಣವು ಐಪಿಸಿ ಕಲಂ 409, 420, 507 ಹಾಗೂ 34 ಅನ್ವಯ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ದಿನದಿಂದಲೇ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆ, ಮಾನ್ಯ ನ್ಯಾಯಾಲಯವು ಆತನ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು. ಆದರೂ ಆರೋಪಿ ಪತ್ತೆಯಾಗದೆ ತಲೆಮರೆಸಿಕೊಂಡಿದ್ದರಿಂದ, ಈ ಪ್ರಕರಣದಲ್ಲಿ absconding charge sheet ಕೂಡ ಸಲ್ಲಿಸಲಾಗಿತ್ತು.ಇಂದು (03/02/2026) ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು, ದಕ್ಷಿಣ ಉಪವಿಭಾಗ ಹಾಗೂ ಕಂಕನಾಡಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಠಾಣಾ ಸಿಬ್ಬಂದಿಗಳಾದ HC 944 ಬಾಲರಾಜ್ ಮತ್ತು PC 3046 ರವಿಕುಮಾರ್ ರವರು ಕೇರಳ ರಾಜ್ಯದ ಕೊಲ್ಲಂ ನಗರದ ವಟ್ಟಕುಟ್ಟು ಪ್ರದೇಶದ ಲಲಿತ ಮಂದಿರಂ ಎಂಬ ಮನೆಯಲ್ಲಿ ಆರೋಪಿಯನ್ನು ಬಂಧಿಸಿದರು.ಬಂಧಿತ ಆರೋಪಿಯನ್ನು…
Author: main-admin
ಮಂಗಳೂರು: ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹಾವೇರಿ ಜಿಲ್ಲೆಯ ಮಾರುತಿ ಲಮಾಣಿ (36) ಅವರು ತೀವ್ರ ರಕ್ತದೊತ್ತಡದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಮಾರುತಿ ಲಮಾಣಿ ಅವರು ಕಳೆದ ಆರು ವರ್ಷಗಳಿಂದ ಮಂಗಳೂರು ನಗರದ ಸಶಸ್ತ್ರ ನಗರ ಮೀಸಲು ಪಡೆ (ಸಿಎಆರ್)ಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂಚಾರಿ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ಕದ್ರಿ ಠಾಣೆ ಸೇರಿದಂತೆ ನಗರದ ಸಿಎಆರ್ ಕಚೇರಿಯಲ್ಲಿ ಹೆಚ್ಚಿನ ಅವಧಿಗೆ ಕರ್ತವ್ಯ ನಿರ್ವಹಿಸಿದ್ದರು. ಎರಡು ದಿನಗಳ ಹಿಂದೆ ರಾತ್ರಿ ಪಾಳೆಯ ಕರ್ತವ್ಯ ಮುಗಿಸಿ ಬಿಕರ್ನಕಟ್ಟೆಯಲ್ಲಿರುವ ತಮ್ಮ ನಿವಾಸಕ್ಕೆ ವಾಪಸ್ಸಾದ ಅವರು, ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆದಿದ್ದರು. ನಂತರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮನೆಯವರು ತಕ್ಷಣ ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ತೀವ್ರ ರಕ್ತದೊತ್ತಡ ಪತ್ತೆಯಾಗಿದ್ದು, ಕಳೆದ ಎರಡು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. 2016ನೇ ಬ್ಯಾಚ್ನ…
ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ. ದುಬಾರಿ ಟಿಕೆಟ್ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂಬ ಉದ್ದೇಶದಿಂದ ಕೇವಲ 99 ರೂ. ಟಿಕೆಟ್ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ ಒಂದು ಹೊಸ ಸಂಚಲನ ಉಂಟು ಮಾಡಿದೆ. ಸಿಂಗಲ್ ಥಿಯೇಟರ್ಗಿಂತಲೂ ಕಡಿಮೆ ದರದಲ್ಲಿ ಈ ಸಿನಿಮಾವನ್ನು ತುಳು ಪ್ರೇಮಿಗಳು ಮಲ್ಟಿಫ್ಲೆಕ್ಸ್ ಗಳಲ್ಲಿ ನೋಡುವಂತಹ ಅವಕಾಶ ಇದಾಗಿದೆ“ ಎಂದು ಚಿತ್ರದ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ ನಾನ್ವೆಜ್ ಒಂದು ಅತ್ಯುತ್ತಮ ಹಾಗೂ ಭಿನ್ನ ಕಥಾವಸ್ತುವನ್ನು ಹೊಂದಿದೆ. ಸು ಫ್ರಂ ಸೋ ಸಿನಿಮಾದ ಹೆಚ್ಚಿನ ಕಲಾವಿದರು ನಾನ್ವೆಜ್ ಸಿನಿಮಾದಲ್ಲೂ ಇದ್ದಾರೆ.…
ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪೆನಿ, ಕಚೇರಿಗಳು, ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಫೆ 2 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದರು. ರಾಷ್ಟ್ರ್ರೀಯ ಹೆದ್ದಾರಿಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾಷ್ಟ್ರ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದ ಅವರು, ಇಂಗ್ಲಿಷ್ ಮೀಡಿಯಂ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸುತ್ತಿದ್ದರೂ, ಶಾಲೆಯ ನಾಮಫಲಕಗಳಲ್ಲಿ ಕನ್ನಡದಲ್ಲಿಯೂ…
ಮಂಜೇಶ್ವರ: ತನ್ನ 18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ತೂಮಿನಾಡಿನ ಜುಮೈಲಾ ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ಆರೋಪದಲ್ಲಿ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಮರ್ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಪತ್ನಿಯ ಸೋದರಿಯ ಮನೆಯಲ್ಲಿ ವಾಸವಿದ್ದ. ಸೋಮವಾರ ಸಂಜೆ 5:30ರ ಹೊತ್ತಿಗೆ, ಉಮರ್ ಮತ್ತು ಆತನ ಬಾವ (ಪತ್ನಿಯ ಸೋದರಿಯ ಪತಿ) ಶೇಕುಂಞ ಎಂಬವರ ನಡುವೆ ಆಸ್ತಿ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಉಮರ್ ಹರಿತ ಆಯುಧದಿಂದ ಶೇಖುಞ್ಞ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಜೀವ ಉಳಿಸಲಾಗಲಿಲ್ಲ, ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎಂದು…
ಮಂಗಳೂರು: “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ“ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.”ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರು“ ಎಂದು ಮಾಹಿತಿ ನೀಡಿದರು.ಚಿತ್ರದ ನಿರ್ಮಾಪಕಿ ದೀಪ್ತಿ ದಾಮೋದರ್ ಮಾತಾಡಿ, “ಸಿನಿಮಾದಲ್ಲಿ ಎಲ್ಲರೂ ಕಷ್ಟಪಟ್ಟು ನಟಿಸಿದ್ದಾರೆ. ನಾವೆಲ್ಲರೂ ಸಿನಿಮಾ ನೋಡಲು ಉತ್ಸುಕರಾಗಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ” ಎಂದರು.ಚಿತ್ರಕ್ಕೆ ಸಂಭಾಷಣೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಕೆ. ವೆಂಕಟೇಶ್ ಮಾತಾಡಿ, “ಸಿನಿಮಾದಲ್ಲಿ ಒಟ್ಟು 7 ಹಾಡುಗಳಿದ್ದು 6 ಹಾಡುಗಳನ್ನು ನಾನೇ ಬರೆದಿದ್ದೇನೆ. ಎಲ್ಲ ಹಾಡುಗಳು ಕೂಡ ಚೆನ್ನಾಗಿ ಮೂಡಿಬಂದಿದ್ದು 60 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.…
ತುಮಕೂರು: ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ಚುರುಕಿನ ಕಾರ್ಯಾಚರಣೆ ಮುಂದುವರಿದಿದ್ದು, ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಂದು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಕಾರನ್ನು ವಾಪಸ್ ನೀಡುವ ನೆಪದಲ್ಲಿ ಪಿಎಸ್ಐ ಚೇತನ ಕುಮಾರ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಮೊದಲ ಹಂತವಾಗಿ 40 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲೇ ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಅವರನ್ನು ಬಂಧಿಸಿದ್ದಾರೆ. ಲಂಚ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ದಾಳಿ ನಡೆಸಿದ ಲೋಕಾಯುಕ್ತ ತಂಡ, ಪಿಎಸ್ಐ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದೆ. ಸರ್ಕಾರಿ ಕಚೇರಿಯಲ್ಲೇ ಲಂಚ ಸ್ವೀಕಾರ ನಡೆದಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಕೂಡ ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಚೀಟಿ ವ್ಯವಹಾರ ಸಂಬಂಧಿತ ಪ್ರಕರಣದಲ್ಲಿ ವ್ಯಕ್ತಿಯನ್ನು ಕೇಸ್ನಲ್ಲಿ ಸಿಲುಕಿಸುವುದಾಗಿ ಬೆದರಿಸಿ ಒಟ್ಟು 5 ಲಕ್ಷ…
ಮಂಗಳೂರು: ಮೊಬೈಲ್ ಆನ್ಲೈನ್ ಗೇಮ್ ಫ್ರೀ ಫೈರ್ನಲ್ಲಿ ಸೋತ ದ್ವೇಷದಿಂದ ಯುವಕನನ್ನು ಚೂರಿಯಿಂದ ಇರಿದು ಕೊಲ್ಲಲು ಯತ್ನಿಸಿದ ಪ್ರಕರಣದ ಅಪರಾಧಿಗೆ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳೂರು ನಗರದ ಜಪ್ಪು ಬಪ್ಪಾಲ್ ನಿವಾಸಿ ಪ್ರತ್ಯುಶ್ ಸಾಲಿಯಾನ್ ಫ್ರೀ ಫೈರ್ ಮೊಬೈಲ್ ಗೇಮ್ನಲ್ಲಿ ಸಂಜಯ್ ಪೂಜಾರಿ ಎಂಬವನನ್ನು ಸೋಲಿಸಿದ್ದರು. ಈ ಕಾರಣದಿಂದಾಗಿ ಸಂಜಯ್ ಪೂಜಾರಿಗೆ ಪ್ರತ್ಯುಶ್ ಮೇಲೇ ದ್ವೇಷ ಇತ್ತು. 17-05-2023 ರಂದು ಮಧ್ಯಾಹ್ನ 3.40ರ ಸುಮಾರಿಗೆ, ಪ್ರತ್ಯುಶ್ ಸಾಲಿಯಾನ್ ಮನೆಯಿಂದ ನಡೆದುಕೊಂಡು ನಂದಿಗುಡ್ಡೆ ಕಡೆಗೆ ತೆರಳುತ್ತಿದ್ದ ವೇಳೆ ಸಂಜಯ್ ಪೂಜಾರಿ ಅವರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಚೂರಿಯಿಂದ ಇರಿದು ಕೊಲೆಯತ್ನ ನಡೆಸಿ ಜೀವ ಬೆದರಿಕೆ ಹಾಕಿದ್ದ ಕುರಿತು ಕೇಸ್ ದಾಖಲಾಗಿತ್ತು.
ಕೇಂದ್ರ ಸರ್ಕಾರ ರವಿವಾರ ಮಂಡಿಸಿದ ಬಜೆಟ್ ನಲ್ಲಿ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ನಿರ್ಣಾಯಕ ಔಷಧಿಗಳ ಮೇಲಿನ ಸುಂಕ ಕಡಿತವನ್ನು ಘೋಷಿಸಿದ್ದಾರೆ ಮತ್ತು ಹಿಂದಿನ ವರ್ಷಗಳಂತೆ, ʼಸಿನ್ ಗೂಡ್ಸ್ʼ (ಪಾಪದ ಸರಕು) ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದಾರೆ. ಏನು ಅಗ್ಗವಾಗಿದೆ? ► 17 ಕ್ಯಾನ್ಸರ್ ಔಷಧಗಳು ► ಸಮುದ್ರ ಆಹಾರ ► ಚರ್ಮದ ಉತ್ಪನ್ನಗಳು ► ಸ್ಮಾರ್ಟ್ ಫೋನ್ಗಳು ► EV ಬ್ಯಾಟರಿಗಳು ► ಸೋಲಾರ್ ಪ್ಯಾನೆಲ್ಗಳು ► ಮೈಕ್ರೋವೇವ್ ಓವನ್ಗಳು ► ಕ್ರೀಡಾ ಸಾಮಗ್ರಿಗಳು ► 7 ಜೀವ ಉಳಿಸುವ ಔಷಧಗಳು ► ಲೀಥಿಯಂ ಬ್ಯಾಟರಿ ಘಟಕಗಳು ► ಮಧುಮೇಹ ಸಂಬಂಧಿತ ಔಷಧಿಗಳು ► ವಿದೇಶಿ ಪ್ರಯಾಣ ► ನಾಗರಿಕ ತರಬೇತಿಯ ವಿಮಾನಯಾನ ಭಾಗಗಳು ► ವೈಯಕ್ತಿಕ ಬಳಕೆಯ ಎಲೆಕ್ಟ್ರಾನಿಕ್ ಉತ್ಪನ್ನಗಳ ತೆರಿಗೆ ಶೇ 20ರಿಂದ 10ಕ್ಕೆ ಇಳಿಕೆ ತುಟ್ಟಿ ಯಾವುವು? ► ಆಲ್ಕೋಹಾಲ್ ಇನ್ನಷ್ಟು ತುಟ್ಟಿಯಾಗಿದೆ. ► ತಂಬಾಕು ಉತ್ಪನ್ನಗಳಾದ ಸಿಗರೇಟು, ಬೀಡಿ, ಗುಟ್ಕಾ ಮತ್ತು ಪಾನ್ ಮಸಾಲ ►…
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು ಹೇಳಿದೆ. ಅಲ್ಲದೇ 21 ದಿನದೊಳಗೆ ಪ್ರಕರಣದ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯವು ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸೂಚಿಸಿದೆ.










