ನವದೆಹಲಿ: ಕಳೆದ ವರ್ಷ ನ. 10 ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಗುರುವಾರ 7,500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ. ಆರೋಪಪಟ್ಟಿಯಲ್ಲಿ 588 ಸಾಕ್ಷಿಗಳ ಹೇಳಿಕೆಗಳು, 395 ಕ್ಕೂ ಹೆಚ್ಚು ದಾಖಲೆಗಳು ಮತ್ತು 200 ಕ್ಕೂ ಹೆಚ್ಚು ವಶಪಡಿಸಿಕೊಂಡ ವಸ್ತುಗಳನ್ನ ಮಾಹಿತಿಯನ್ನು ದಾಖಲಿಸಲಾಗಿದೆ. ಒಟ್ಟು 11 ಜನರನ್ನ ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಎನ್ಐಎ ಶೋಧ ಕಾರ್ಯ ಮುಂದುವರಿಸಿದೆ ಎಂದು ಚಾರ್ಜ್ಶೀಟ್ ನಲ್ಲಿ ತಿಳಿಸಲಾಗಿದೆ.2025 ರ ನವೆಂಬರ್ 10 ರಂದು ಸಂಜೆ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡು 11 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಸುತ್ತಮುತ್ತಲಿನ ಹಲವಾರು ವಾಹನಗಳು ಹಾನಿಗೊಳಗಾಗಿದ್ದವು.ಈ ಪ್ರಕರಣದ ತನಿಖೆ ನಡೆಸಿದ ಎನ್ಐಎ ಗುರುವಾರ ಪಟಿಯಾಲ ಹೌಸ್ ಕೋರ್ಟ್ನಲ್ಲಿರುವ ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ ಆರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆ, ಸ್ಫೋಟಕ ವಸ್ತುಗಳ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು…
Author: main-admin
ಬುರ್ಖಾ ಧರಿಸಿ ಗ್ರಾಹಕಿಯಂತೆ ಚಿನ್ನದ ಅಂಗಡಿಗೆ ನುಗ್ಗಿದ ಮಹಿಳೆಯೊಬ್ಬಳು, ಮಾಲೀಕ ಮತ್ತು ಸಿಬ್ಬಂದಿಯ ಕಣ್ಣಿಗೆ ಖಾರಪುಡಿ ಎರಚಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆಭರಣಗಳನ್ನು ನೋಡುವ ನೆಪದಲ್ಲಿ ಹೊಂಚು ಹಾಕಿದ್ದ ಈ ಕಿರಾತಕಿ, ತನ್ನ ಬಳಿಯಿದ್ದ ಖಾರದಪುಡಿಯನ್ನು ಅವರ ಕಣ್ಣಿಗೆ ಎಸೆದು ಆಭರಣಗಳನ್ನು ಎಗರಿಸಲು ಯತ್ನಿಸಿದ್ದಾಳೆ. ಈ ಇಡೀ ದರೋಡೆ ಯತ್ನದ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಸಿಸಿಟಿವಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ
ಬೆಂಗಳೂರು: ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯದ ರಾಜಧಾನಿಯಲ್ಲಿ ಭಾರಿ ಪ್ರಮಾಣದ ನಕಲಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸುಮಾರು 2,384 ಕೋಟಿ ರೂ. ಮೊತ್ತದ ಈ ನಕಲಿ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ಅತ್ಯಂತ ಚಾಣಾಕ್ಷತನದಿಂದ ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಗಳು ನಕಲಿ ಕಂಪನಿಗಳನ್ನು ಸೃಷ್ಟಿಸಿ, ಯಾವುದೇ ಸರಕು ಅಥವಾ ಸೇವೆಗಳ ಪೂರೈಕೆ ಮಾಡದೆಯೇ ಬಿಲ್ಗಳನ್ನು ಸೃಷ್ಟಿಸುವ ಮೂಲಕ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದರು. ನಕಲಿ ಐಟಿಸಿ ಹಗರಣಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯು ಈ ವರ್ಷ ತನಿಖೆಯನ್ನು ತೀವ್ರಗೊಳಿಸಿದ್ದು, ಈ ಇಬ್ಬರ ಬಂಧನದೊಂದಿಗೆ ಈ ವರ್ಷ ಒಟ್ಟು ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು…
ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೈಕ್ ಬಾಕ್ಸ್ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ ಎಂಬುವವರು ಕೆನರಾ ಬ್ಯಾಂಕ್ನಿಂದ ಹಣ ಡ್ರಾ ಮಾಡಿ ಬೈಕ್ ಬಾಕ್ಸ್ನಲ್ಲಿ ಇರಿಸಿದ್ದರು. ಬೈಕ್ ನಿಲ್ಲಿಸಿ ರಮೇಶ್ ಅಂಗಡಿಯೊಂದಕ್ಕೆ ಹೋದ ಸಂದರ್ಭದಲ್ಲಿ ಹೊಂಚು ಹಾಕಿದ್ದ ಕಳ್ಳರು ಹಣವನ್ನು ದೋಚಿದ್ದಾರೆ. ಅಚ್ಚರಿಯ ವಿಷಯವೆಂದರೆ ಈ ಕೃತ್ಯ ಬೇತಮಂಗಲ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ. ಕಳ್ಳರು ಹಣದೊಂದಿಗೆ ಪರಾರಿಯಾಗುತ್ತಿದ್ದಂತೆ ರಮೇಶ್ ಅವರ ಮಗ ಜೋರಾಗಿ ಕೂಗಿಕೊಂಡಿದ್ದಾರೆ. ತಕ್ಷಣ ಎಚ್ಚೆತ್ತ ಸ್ಥಳೀಯರು ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಪೊಲೀಸ್ ಠಾಣೆ ಎದುರೇ ಇಂತಹ ಘಟನೆ ನಡೆದಿದ್ದರೂ ಪೊಲೀಸರು ತಕ್ಷಣ ಸ್ಪಂದಿಸದ ಬಗ್ಗೆ ಸ್ಥಳೀಯರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರವರೆಗೆ ಸಂಪೂರ್ಣ ನಿಷೇಧ ಹೇರಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಈ ಆದೇಶ ಹೊರಡಿಸಿದೆ. ಈ ನಿಷೇಧವು ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ, ಮತ್ತು ಸಂಸ್ಕರಿಸಿದ ಸಕ್ಕರೆ ಸೇರಿದಂತೆ ಎಲ್ಲಾ ರೀತಿಯ ಸಕ್ಕರೆ ರಫ್ತುಗಳಿಗೂ ಅನ್ವಯವಾಗುತ್ತದೆ.ಸಕ್ಕರೆ ರಫ್ತು ನೀತಿಯನ್ನು ಈ ಹಿಂದೆ ಇದ್ದ ನಿರ್ಬಂಧಿತ ವರ್ಗದಿಂದ ನಿಷೇಧಿತ ವರ್ಗಕ್ಕೆ ಬದಲಾವಣೆ ಮಾಡಲಾಗಿದೆ. ಇನ್ನು ನಿಗದಿತ ಕೋಟಾದಡಿ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕ ದೇಶಗಳಿಗೆ ಮಾಡುವ ಸಕ್ಕರೆ ರಫ್ತುಗಳಿಗೆ ಈ ನಿಷೇಧ ಅನ್ವಯಿಸುವುದಿಲ್ಲ. ಭಾರತ ಸರ್ಕಾರದಿಂದ ವಿಶೇಷವಾಗಿ ಅನುಮೋದಿಸಲ್ಪಟ್ಟ ರಫ್ತು ಸರಕುಗಳು ಮತ್ತು ಈಗಾಗಲೇ ಸಾಗಣೆಯಲ್ಲಿರುವ ಆರ್ಡರ್ಗಳಿಗೆ ವಿನಾಯಿತಿ ನೀಡಲಾಗಿದೆ.
ಮಂಗಳೂರು : ಅಮೆರಿಕದ ಪ್ರತಿಷ್ಠಿತ ‘ಪ್ರಿನ್ಸೆಸ್ ಕ್ರೂಸ್ ಲೈನ್ಸ್’ ಹಡಗಿನಲ್ಲಿ ಬಾರ್ಟೆಂಡರ್ ಕೆಲಸ ಕೊಡಿಸುವುದಾಗಿ ನಂಬಿಸಿ ನಗರದ 21 ವರ್ಷದ ಯುವತಿಯೊಬ್ಬರಿಗೆ ಸೈಬರ್ ಚೋರರು ಬರೋಬ್ಬರಿ ₹4,12,850 ವಂಚಿಸಿದ್ದಾರೆ. ಪಿರ್ಯಾದಿದಾರ ಯುವತಿಯು ಏಪ್ರಿಲ್ 13ರಂದು ಇನ್ಸ್ಟಾಗ್ರಾಮ್ ವೀಕ್ಷಿಸುತ್ತಿದ್ದಾಗ ‘Recruiting Agency’ ಹೆಸರಿನ ಜಾಹೀರಾತೊಂದು ಕಾಣಿಸಿಕೊಂಡಿದೆ. ಅದನ್ನು ಕ್ಲಿಕ್ ಮಾಡಿದ ಕೂಡಲೇ ಅಪರಿಚಿತ ವಾಟ್ಸಾಪ್ ನಂಬರ್ನಿಂದ ಸಂದೇಶ ಬಂದಿದೆ. ತನ್ನನ್ನು ಕ್ಯಾಲಿಫೋರ್ನಿಯಾದ ಹೈರಿಂಗ್ ಮ್ಯಾನೇಜರ್ ‘ಜಾನಿ ಫೆವೆಲೆನ್’ ಎಂದು ಪರಿಚಯಿಸಿಕೊಂಡ ವ್ಯಕ್ತಿ, ಹಡಗಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದಾನೆ. ಹಂತ ಹಂತವಾಗಿ ಹಣ ವಸೂಲಿ: ನಂತರ ನೋಂದಣಿ ಶುಲ್ಕ, ವರ್ಕ್ ಪರ್ಮಿಟ್, ಐಇಎಲ್ಟಿಎಸ್ (IELTS) ಪರೀಕ್ಷೆ ಮತ್ತು ವೀಸಾ ಪ್ರಕ್ರಿಯೆಯ ನೆಪವೊಡ್ಡಿ ಯುವತಿಯಿಂದ ಹಂತ ಹಂತವಾಗಿ ಹಣ ಪೀಕಲಾಗಿದೆ. ಏಪ್ರಿಲ್ 14 ರಿಂದ ಮೇ 8 ರವರೆಗೆ ವಿವಿಧ ಬ್ಯಾಂಕ್ ಖಾತೆಗಳು ಹಾಗೂ ಕ್ಯೂಆರ್ ಕೋಡ್ಗಳ (QR Code) ಮೂಲಕ ಒಟ್ಟು ₹4,12,850 ಹಣವನ್ನು ವರ್ಗಾವಣೆ ಮಾಡಿಸಿಕೊಳ್ಳಲಾಗಿದೆ. ವೀಸಾ ಪ್ರಕ್ರಿಯೆ ಹೆಸರಿನಲ್ಲಿ ಮೇಲ್ ಮತ್ತು…
ದುಡ್ಡು ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ, ದುಡ್ಡಿನ ಮಹಿಮೆಯೇ ಅಂತಹದ್ದು. ಕೆಲವರು ಹಣ ಮಾಡಲು ಕಳ್ಳ ದಾರಿಯನ್ನು ಹಿಡಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಅಧಿಕೃತ ದರಕ್ಕಿಂತ ಕಡಿಮೆ ದರಕ್ಕೆ ಟಿಕೆಟ್ ಮಾರುತ್ತಿದ್ದ ವೇಳೆ ಟಿಟಿಇ ಸಿಕ್ಕಿ ಬಿದ್ದಿದ್ದಾನೆ. ತಕ್ಷಣವೇ ಕ್ರಮ ಕೈಗೊಂಡ ರೈಲ್ವೆ ಇಲಾಖೆಯೂ ಟಿಟಿಇಯನ್ನು ಕೆಲಸದಿಂದ ಅಮಾನತುಗೊಳಿಸಿದೆ. ಘರ್ ಕೆ ಕಲೇಷ್ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ, ಟಿಟಿಇ ಹಾಗೂ ಪ್ರಯಾಣಿಕರ ನಡುವಿನ ಸಂಭಾಷಣೆ ನೀವು ಗಮನಿಸಬಹುದು. 700 ರೂಪಾಯಿ ವಂದೇ ಭಾರತ್ ಟಿಕೆಟ್ ನ್ನು ಕೇವಲ 380 ರೂಪಾಯಿಗಳಿಗೆ ಕೊಡುವುದಾಗಿ ಟಿಟಿಇ ಹೇಳುತ್ತಿರುವುದನ್ನು ಕಾಣಬಹುದು. ಟಿಟಿಇ ಇದು ನಿಯಮಕ್ಕೆ ವಿರುದ್ಧ ಎಂದು ಹೇಳುತ್ತಲೇ, ಕಡಿಮೆ ಹಣಕ್ಕೆ ಪ್ರಯಾಣದ ವ್ಯವಸ್ಥೆ ಮಾಡುವುದಾಗಿ ಹೇಳುತ್ತಿರುವುದನ್ನು ನೀವು ಕಾಣಬಹುದು. ವಿಡಿಯೋ ವೈರಲ್ ಆಗುತ್ತಿದ್ದಂತೆ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ದಾನಾಪುರ ವಿಭಾಗದ ರೈಲ್ವೆ ವ್ಯವಸ್ಥಾಪಕರು, ಸಂಬಂಧಿತ…
ಮಂಗಳೂರು: ಸ್ಪೀಕರ್ ಯು.ಟಿ.ಖಾದರ್ ಗೆ ಘೆರಾವ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಭದ್ರತಾ ಸಿಬ್ಬಂದಿ ದೂರಿನ ಹಿನ್ನಲೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಕುತ್ತಾರಿನಲ್ಲಿ ನಿರ್ಮಿಸಲು ಉದ್ಧೇಶಿಸಿರುವ ವೃತ್ತಕ್ಕೆ ಕೊರಗಜ್ಕನ ಹೆಸರು ಇಡಬಾರದೆಂದು ಒತ್ತಾಯಿಸಿ ಗುಂಪೊಂದು ಸ್ಪೀಕರ್ ಗೆ ಉಳ್ಳಾಲದಲ್ಲಿ ಘೇರಾವ್ ಹಾಕಿತ್ತು. ಘಟನೆ ಬಗ್ಗೆ ಪೊಲೀಸ್ ದೂರು ನೀಡಿದ್ದ ಸ್ಪೀಕರ್ ಭದ್ರತಾ ಸಿಬ್ಬಂದಿ ಮೊಹಮ್ಮದ್ ಯಾಸಿನ್ ಇನಾಮದಾರ ಉಳ್ಳಾಲ ಪೋಲೀಸ್ ಠಾಣೆಗೆ ದೂರು ನೀಡಿದ ಹಿನ್ನಲೆ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮದನಿನಗರ ನಿವಾಸಿ ಜುನೈದ್ ಸೇರಿದಂತೆ 10 ಜನರ ಪ್ರಕರಣ ದಾಕಲಾಗಿದ್ದು,ಪೋಲೀಸರು ತನಿಖೆ ಆರಂಭಿಸಿದ್ದಾರೆ.
ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಯುದ್ಧ ಪರಿಸ್ಥಿತಿ ಹಾಗೂ ಜಾಗತಿಕ ಆರ್ಥಿಕ ಅನಿಶ್ಚಿತತೆಗಳ ನಡುವೆ ದೇಶದ ಜನತೆಗೆ ಚಿನ್ನ ಖರೀದಿ ಕಡಿಮೆ ಮಾಡಲು ಮತ್ತು ಇಂಧನ ಮಿತವಾಗಿ ಬಳಸಲು ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಇದೀಗ ತಮ್ಮದೇ ಭದ್ರತಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಆರಂಭಿಸಿದ್ದಾರೆ. ಪ್ರಧಾನಿ ಕಚೇರಿ ಎಸ್ಪಿಜಿ ಭದ್ರತಾ ಪಡೆಯ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಶೇ.50 ರಷ್ಟು ಕಡಿತಗೊಳಿಸಲು ಸೂಚನೆ ನೀಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಇದರ ಜೊತೆಗೆ, ಪೆಟ್ರೋಲ್ ಮತ್ತು ಡೀಸೆಲ್ ಚಾಲಿತ ವಾಹನಗಳ ಬದಲಿಗೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ.ಭಾರತವು ಕಚ್ಚಾ ತೈಲ, ಚಿನ್ನ ಹಾಗೂ ಅಡುಗೆ ಎಣ್ಣೆ ಸೇರಿದಂತೆ ಹಲವು ಅಗತ್ಯ ವಸ್ತುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಇದರಿಂದ ದೇಶದ ವಿದೇಶಿ ವಿನಿಮಯ ಸಂಗ್ರಹದ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ ಎಂದು ಪ್ರಧಾನಿ ಮೋದಿ ಇತ್ತೀಚೆಗೆ ಜನತೆಗೆ ನೀಡಿದ ಸಂದೇಶದಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆ, ಜನರು ಅನಗತ್ಯ ಖರೀದಿ ಹಾಗೂ ಇಂಧನ ಬಳಕೆಯನ್ನು…
ಕಾಸರಗೋಡು: ದಿಢೀರ್ ಬೀಸಿದ ಬೇಸಿಗೆಯ ಅಕಾಲಿಕ ಗಾಳಿ ಮಳೆಗೆ ಮರವೊಂದು ಮುರಿದು ವಿದ್ಯುತ್ ಕಂಬ ಸಹಿತ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ಪೆರ್ಲದ ವೈದ್ಯರೋರ್ವರು ಅದೃಷ್ಠವಶಾತ್ ಭಾರೀ ಅಪಾಯದಿಂದ ಪಾರಾದ ಘಟನೆ ಮಂಗಳವಾರ ಸಂಜೆ ಬಾಡೂರು-ಪೆರ್ಲ ರಸ್ತೆಯ ಮಣಿಯಂಪಾರೆ ಮಸೀದಿ ಬಳಿ ಸಂಭವಿಸಿದೆ. ಸಂತ್ರಸ್ತ ವೈದ್ಯರು ಸೀತಾಂಗೋಳಿ ಹಾಗೂ ಬಾಡೂರುಪದವಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಮಂಗಳವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವರು ತಮ್ಮ ಕ್ಲಿನಿಕ್ ಅನ್ನು ಬೇಗನೇ ಮುಚ್ಚಿ ಮನೆಗೆ ಮರಳುತ್ತಿದ್ದರು. ಅವರು ಬಾಡೂರು-ಪೆರ್ಲ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ಭೀಕರ ಗಾಳಿಗೆ ಬೃಹತ್ ಮರವೊಂದು ಬೇರು ಸಮೇತ ಅವರ ಕಾರಿನ ಮೇಲೆ ಉರುಳಿ ಬಿದ್ದಿದೆ. ಮರದ ಜೊತೆಗೆ ಪಕ್ಕದಲ್ಲಿದ್ದ ವಿದ್ಯುತ್ ಕಂಬವೂ ಕಾರಿನ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ವೈದ್ಯರು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಮರ ಮತ್ತು ಕಂಬ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು. ಇದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಅಪಾಯಕಾರಿ…










