ಮಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಪುರುಷ ಮತ್ತು ಮಹಿಳೆ, ಸೇವಾನಿರತ, ಮಿಕ್ಕುಳಿದ ವೃಂದದ ಮತ್ತು ಕಲ್ಯಾಣ ಕರ್ನಾಟಕ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಲ್ಲಿ ಮಂಗಳೂರು ನಗರಕ್ಕೆ 21 ಮಂದಿಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ನೇಮಕಗೊಳಿಸಿ ಆದೇಶ ನೀಡಿದ್ದಾರೆ. ನೇಮಕಗೊಂಡಿರುವ ನೂತನ ಪೊಲೀಸ್ ಉಪನಿರೀಕ್ಷಕರ ವಿವರ ಇಂತಿವೆ:- ಮೋಹನ್ ವಿ (ಮಲ್ಲಸಂದ್ರ, ಕೋಲಾರ), ವಿನೋದ್ ಸುಭಾಷ್ ಬಾಗೋಜಿ (ಮುನ್ಯಾಳ್, ಬೆಳಗಾವಿ) , ಸಂಜಯ್ ವಿಜಯ್ ನಾಯಕ್( ಅಂಕೋಲಾ, ಉತ್ತರ ಕನ್ನಡ), ಪವನ್ ಕುಮಾರ್ ಕೆ.ಎಸ್( ಹೊಸನಗರ, ಶಿವಮೊಗ್ಗ ), ಸುದರ್ಶನ ಗೌಡ ಸಿ.ಎಂ (ಬಂಗಾರಪೇಟೆ, ಕೋಲಾರ) , ಸಿದ್ದು ಕನಾಲ್( ಕನಕನಗರ, ವಿಜಯಪುರ) ಭರತೇಶ್ ಕಡಕೋಲ್( ಜಮಖಂಡಿ, ಬಾಲಕೋಟೆ), ಮಲ್ಲಪ್ಪ ಶಿವೋರ್( ಸಿಂಧಗಿ ,ವಿಜಯಪುರ) , ಸಂತೋಷ್ ಕುಮಾರ್.ಜಿ (ಕೋರಮಂಗಳ, ಬೆಂಗಳೂರು ದಕ್ಷಿಣ ), ಶಿವುಕಾಂತಾ (ಮಾನ್ವಿ , ರಾಯಚೂರು) , ನವೀನ್.ಎಸ್( ಕುರುಬರಹಳ್ಳಿ, ಬೆಂಗಳೂರು ಉತ್ತರ) ಪವನ್ ಬಿ. ಚಕ್ರಸಾಲಿ(ಕುಂಚೂರ್, ಹಾವೇರಿ), ಡಿ.ಮಾನಸಿಂಗ ನಾಯ್ಕ್(ದೋಪದಹಳ್ಳಿ ತಾಂಡ…
Author: main-admin
ಬೆಂಗಳೂರು : ಜೈಲು ವಾರ್ಡನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗುತ್ತಿದ್ದೂ, ತಂಬಾಕು, ಮಾದಕ ವಸ್ತು ಪೂರೈಸುತ್ತಿದ್ದ ವಾರ್ಡನ್ ಕಲ್ಲಪ್ಪ ಎನ್ನುವನನ್ನು ಅರೆಸ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಂದ ಆರೋಪಿ ಕಲ್ಲಪ್ಪನನ್ನ ಅರೆಸ್ಟ್ ಮಾಡಲಾಗಿದೆ.ಆರೋಪಿ ಕಲ್ಲಪ್ಪನನ್ನು ಬಂಧಿಸಿ 100 ಗ್ರಾಂ ಆಶಿಶ್ ಆಯಿಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ಕಲ್ಲಪ್ಪ ಮಾದಕ ವಸ್ತು ಕಾಶೀಶೈಲ್ ತಂಬಾಕು ಯಾರಿಂದ ಪಡೆಯುತ್ತಿದ್ದ ಹಾಗೂ ಜೈಲಿನಲ್ಲಿರುವ ಯಾವ ಕೈದಿಗಳಿಗೆ ಪೂರೈಕೆ ಮಾಡುತ್ತಿದ್ದ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 2018 ರಲ್ಲಿ ಕಾರಾಗೃಹದ ಇಲಾಖೆಗೆ ಸೇರಿದ ಕೆಲತಿಗಳಿಂದ ಸೆಪ್ಟೆಂಬರ್ 7 ರಂದು ಸಂಜೆ ಜೈಲಿನ ಪ್ರವೇಶ ದ್ವಾರದ ಬಳಿ ಕಲ್ಲಪ್ಪನನ್ನು ಪರಿಶೀಲನೆ ಮಾಡಲಾಯಿತು. ಡ್ಯೂಟಿಗೆ ಬರುವ ವೇಳೆ ಸಿಐಎಸ್ಎಫ್ ಸಿಬ್ಬಂದಿಗಳು ಕಳ್ಳಪ್ಪನನ್ನು ಪರಿಶೀಲನೆ ಮಾಡಿದ್ದಾರೆ, ಈ ವೇಳೆ ತಂಬಾಕು ಹಾಗು ಆಶಿಶ್ ಪತ್ತೆಯಾಗಿದೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೊಳಗಾಗಿದ್ದ ಯುಟ್ಯೂಬರ್ಗಳಾದ ಅಭಿಷೇಕ್ ಹಾಗೂ ಮನಾಫ್ ಅವರ ವಿಚಾರಣೆಯನ್ನು ಹಾಗೂ ಹೇಳಿಕೆ ದಾಖಲಿಸುವ ಕಾರ್ಯವನ್ನು ಎಸ್.ಐ.ಟಿ ತಂಡ ಬುಧವಾರ ಪೂರ್ಣಗೊಳಿಸಿದೆ. ಯುಟ್ಯೂಬರ್ ಅಭಿಷೇಕ್ ಅವರನ್ನು ಕಳೆದ ಒಂದು ವಾರದಿಂದ ಎಸ್.ಐ.ಟಿ ತಂಡ ವಿಚಾರಣೆ ನಡೆಸಿತ್ತು. ಇವರಿಂದ ಮೊಬೈಲನ್ನು ವಶಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಬಂಗ್ಲೆ ಗುಡ್ಡದಿಂದ ತಲೆ ಬುರುಡೆ ತೆಗೆಯುವ ವಿಡಿಯೋವನ್ನು ಇವರು ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಈತನ ವಿಚಾರಣೆ ನಡೆಸಿ ಹೇಳಿಕೆ ಪಡೆಯುವ ಕಾರ್ಯ ಪೂರ್ಣಗೊಂಡಿದೆ. ಕಳೆದ ಮೂರು ದಿನಗಳಿಂದ ಕೇರಳದ ಯುಟ್ಯೂಬರ್ ಮನಾಫ್ ಅವರ ವಿಚಾರಣೆ ನಡೆಯುತ್ತಿತ್ತು. ಬುಧವಾರ ರಾತ್ರಿಯ ವೇಳೆಗೆ ಅವರ ವಿಚಾರಣೆ ಹಾಗೂ ಹೇಳಿಕೆ ನೀಡುವ ಕಾರ್ಯ ಪೂರ್ಣಗೊಂಡಿದ್ದು, ಅವರು ಹಿಂತಿರುಗಿದ್ದಾರೆ. ವಿಚಾರಣೆ ಮುಗಿಸಿ ಹೊರಬಂದ ಮನಾಫ್ ಮಾತನಾಡಿ, “ಎಸ್.ಐ.ಟಿ ತನಿಖೆ ಅತ್ಯಂತ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ನಮ್ಮಲ್ಲಿ ಕೇಳಿದ ಎಲ್ಲ ಮಾಹಿತಿಗಳನ್ನು ನೀಡಿದ್ದೇವೆ. ವಿಚಾರಣೆ ಹಾಗೂ ಹೇಳಿಕೆ ಪಡೆಯುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ವಿಚಾರಣೆಗೆ ಬರಲು…
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ನೆರವಿಗೆ ಅಕ್ಕ ಪಡೆ ಸಿದ್ಧವಾಗಿದೆ. ಈ ಅಕ್ಕ ಪಡೆಯನ್ನು ಬೆಂಗಳೂರಲ್ಲಿ ನವೆಂಬರ್.19ರಂದು ಚಾಲನೆ ನೀಡಲಾಗುತ್ತದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಸಂಕಷ್ಟದಲ್ಲಿ ಇರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗಲು ʼಅಕ್ಕ ಪಡೆʼಗಳನ್ನು ಸ್ಥಾಪಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ನವೆಂಬರ್ 19 ರಂದು ಚಾಲನೆ ನೀಡಲಾಗುವುದು. ಮೈಸೂರು, ಉಡುಪಿ ಮತ್ತು ಬೆಳಗಾವಿಯಲ್ಲೂ ಅಕ್ಕ ಪಡೆಗಳು ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ ಎಂದಿದ್ದಾರೆ. 10 ರಿಂದ 15 ಜನರ ತಂಡ ಇರಲಿದ್ದು, ಎನ್ಸಿಸಿ ಹಿರಿಯ ಕೆಡೆಟ್ಗಳು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಗಳನ್ನು ಒಳಗೊಂಡಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಮಂಗಳೂರು: ನಗರದ ಕೈಗಾರಿಕಾ ವಲಯ ಬೈಕಂಪಾಡಿಯಲ್ಲಿರುವ ಪರ್ಫ್ಯೂಮ್(ಸುಗಂಧ ದ್ರವ್ಯ) ಕಂಪೆನಿ AROMAZEN ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ದುರಂತದಿಂದ ಬರೋಬ್ಬರಿ ನಾಲ್ಕು ಕೋಟಿ ನಷ್ಟ ಉಂಟಾಗಿದೆ. ಘಟನೆ ಗಮನಿಸಿದ ಮಂಗಳೂರು ಕೆಮಿಕಲ್ ಫರ್ಟಿಲೈಸರ್ಸ್ (ಎಂ.ಸಿ.ಎಫ್) ಸಂಸ್ಥೆಯ ಸಿಬ್ಬಂದಿ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಸುದ್ದಿ ನೀಡಿದರು. ಕೇವಲ ಕೆಲವೇ ನಿಮಿಷಗಳಲ್ಲಿ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಹಲವು ಗಂಟೆಗಳ ಹೋರಾಟದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಮೂಲ ಮಾಹಿತಿಯ ಪ್ರಕಾರ, ಘಟನೆಯ ಮೂಲ ಕಾರಣ ಶಾರ್ಟ್ ಸರ್ಕ್ಯೂಟ್ ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸಂಸ್ಥೆಯೊಳಗೆ ಸೋಪ್ ಮತ್ತು ಪರ್ಫ್ಯೂಮ್ ತಯಾರಿಕೆಗೆ ಬಳಸುವ ಲಿಕ್ವಿಡ್ಗಳು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗಿದ್ದವು. ಈ ಕಾರಣದಿಂದ ಬೆಂಕಿ ತೀವ್ರವಾಗಿ ವ್ಯಾಪಿಸಿ ನಂದಿಸಲು ಅಡಚಣೆಯುಂಟಾಯಿತು. ಆದರೂ ಹರಸಾಹಸ ನಡೆಸಿ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಿದರು. ಸುಮಾರು ನಾಲ್ಕು ಕೋಟಿ ನಷ್ಟ ಘಟನೆಯ ಪರಿಣಾಮವಾಗಿ ಸಂಸ್ಥೆಗೆ ಭಾರೀ ಆರ್ಥಿಕ ಹಾನಿಯಾಗಿದ್ದು, ಸುಮಾರು…
ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು ಪ್ರತಿಯೊಂದು ಅಪಾರ್ಟ್ಮೆಂಟ್ಗೂ ಕಾಣಿಸುವಂತೆ ಇರುವ ಉತ್ಕೃಷ್ಟ ವಸತಿ ಯೋಜನೆಯಾಗಿದೆ. ಮಂಗಳೂರಿನ ಸುರತ್ಕಲ್ NITK ಬೀಚ್ ರಸ್ತೆಯಲ್ಲಿರುವ ರೋಹನ್ ಮರೀನಾ ಒನ್, ಒಟ್ಟು 8.2 ಎಕರೆ ವಿಸ್ತರಿಸಿದ್ದು ಮತ್ತು ಕಡಲ ತೀರದಲ್ಲಿ ಐಷಾರಾಮಿ ಜೀವನಶೈಲಿಯನ್ನು ನೀಡಬಲ್ಲ 433 ಅಲ್ಟ್ರಾ-ಲಕ್ಷುರಿ ಅಪಾರ್ಟ್ಮೆಂಟ್ ಗಳನ್ನು ಹೊಂದಿದೆ. ಈ ಯೋಜನೆಯಲ್ಲಿ, 39 ಮಹಡಿಗಳಿರುವ “ದಿ ರಿಟ್ರೀಟ್” ಮತ್ತು 47 ಮಹಡಿಗಳಿರುವ “ದಿ ರಿಸಾರ್ಟ್” ಎಂಬ ಎರಡು ಟವರ್ ಗಳಿದ್ದು, ರೋಹನ್ ಮರೀನಾ ಒನ್ ಅನ್ನು ಭಾರತದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲೇ ಹೊಸ ಮೈಲಿಗಲ್ಲಾಗಿ ನಿಲ್ಲುವಂತೆ ಮಾಡಿದೆ. ಕರಾವಳಿ ಜೀವನಶೈಲಿಯಲ್ಲೇ ಹೊಸ…
ಮಂಗಳೂರು: ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಎನಿಸಿದ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ ‘ಸ್ಕೈವಾಕರ್’ ಸರ್ಜರಿಯನ್ನು ಮಂಗಳೂರಿನ ಯೆನೆಪೋಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ. ಈ ವ್ಯವಸ್ಥೆಯನ್ನು ಹೊಂದಿದ ದಕ್ಷಿಣ ಏಷ್ಯಾದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಯೆನೆಪೋಯ ಪಾತ್ರವಾಗಿದೆ.ಅಮೆರಿಕದ ಮೈಕ್ರೋಸ್ಕೋಪ್ ಆರ್ಥೋಪೆಡಿಕ್ಸ್ ಇಂಕ್ ಸಹಭಾಗಿತ್ವದಲ್ಲಿ ಈ ಸರ್ಜರಿ ವ್ಯವಸ್ಥೆಯನ್ನು ಯೆನೆಪೋಯದಲ್ಲಿ ಆರಂಭಿಸಲಾಗಿದೆ. ಅದರೊಂದಿಗೆ ರೋಗಿಗಳ ಆರೈಕೆಗೆ ಜಾಗತಿಕ ದರ್ಜೆಯ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಮುಂಚೂಣಿಯಲ್ಲಿರುವ ಆಸ್ಪತ್ರೆಯು ಇನ್ನೊಂದು ಗರಿಯನ್ನು ತನ್ನ ಮುಡಿಗೆ ಏರಿಸಿಕೊಂಡಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ಮತ್ತು ಮೈಕ್ರೋಸ್ಕೋಪ್ ಆರ್ಥೋಪೆಡಿಕ್ಸ್ನ ದಕ್ಷಿಣ ಏಷ್ಯಾ ವಿಭಾಗದ ಹಿರಿಯ ನಿರ್ದೇಶಕ ಮತ್ತು ಜನರಲ್ ಮ್ಯಾನೇಜರ್ ಡಾ.ಮುಕೇಶ್ ಪಾರ್ಮರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎವೊಲ್ಯೂಷನ್ ಮೀಡಿಯಲ್-ಪೈವೊಟ್ ನೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ ರೊಬೊಟಿಕ್ ಸರ್ಜರಿ ತಂತ್ರಜ್ಞಾನ ಸ್ಕೈವಾಕರ್ ಆರ್ಥೋಪೆಡಿಕ್ ರೊಬೊಟಿಕ್ ಸಿಸ್ಟಮ್ ಆಗಿದೆ. ಇವೆರಡೂ ಸೇರಿಕೊಂಡು ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಮಿಲಿಮೀಟರ್ನ ಹತ್ತನೇ ಒಂದರಷ್ಟು ಮಟ್ಟದ…
ಉಡುಪಿ : ಸೋಮವಾರ ರಾತ್ರಿ ವೇಳೆ ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲ್ಲರಿ ವರ್ಕ್ ಶಾಪ್ ವೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ನಡೆದಿದೆ. ಚಿತ್ತರಂಜನ್ ಸರ್ಕಲ್ ಬಳಿ ಇರುವ ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ನಕಲಿ ಬೀಗ ಬಳಸಿ ಒಳನುಗ್ಗಿದ ಕಳ್ಳರು ಡ್ರಾವರ್ನ ನಕಲಿ ಬೀಗದಿಂದ 600 ಗ್ರಾo ತೂಕದ ಚಿನ್ನದ ಗಟ್ಟಿ ಮತ್ತು ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಅಂಗಡಿಯಲ್ಲಿ ದುಡಿಯುತ್ತಿದ್ದ ಕಾರ್ಮಿಕರೇ ಈ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿರುವ ಸಂದೇಹ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು: ನಗರದ ಬಜಿಲಕೇರಿ ಸಮೀಪದ ವಸತಿ ಸಮುಚ್ಚಯದಿಂದ ವಿದ್ಯಾರ್ಥಿನಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ. ಮೂಲತಃ ಉತ್ತರ ಪ್ರದೇಶ ಬನಾರಸ್ನ ಪ್ರಸಕ್ತ ಬಜಿಲಕೇರಿ ನಿವಾಸಿಯಾಗಿರುವ ಖುಷಿ (14) ಆತ್ಮಹತ್ಯೆ ಮಾಡಿಕೊಂಡಾಕೆ. ಈಕೆ ನಗರದ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಸೆ.7ರಂದು ಮಧ್ಯಾಹ್ನ ದೇವಸ್ಥಾನಕ್ಕೆ ತೆರಳಿದ್ದ ಖುಷಿ ಬಳಿಕ ತನ್ನ ಸಹೋದರಿ ಮತ್ತು ಸ್ನೇಹಿತೆಯ ಜತೆಗೆ ಅಪಾರ್ಟ್ ಮೆಂಟ್ನ ಟೇರೆಸ್ಗೆ ಹೋಗೋಣ ಎಂದು ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ ಅವರ ಜತೆ ಮಾತನಾಡುತ್ತಲೇ ಅವರ ಕಣ್ಮುಂದೆಯೇ ಟೇರೆಸ್ನಿಂದ ಹಾರಿದ್ದಾಳೆ. ಗಂಭೀರ ಗಾಯಗೊಂಡ ಖುಷಿಯನ್ನು ಅಪಾರ್ಟ್ಮೆಂಟ್ ನಿವಾಸಿಗಳು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಕೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ಬಂದರು ಠಾಣೆಯ ಪೊಲೀಸರು ತಿಳಿಸಿದ್ದಾರೆ. ಖುಷಿ ಪ್ರತಿಭಾನ್ವಿತೆ ವಿದ್ಯಾರ್ಥಿನಿಯಾಗಿದ್ದು, ಉತ್ತಮ ಅಂಕ ಪಡೆಯುತ್ತಿದ್ದಳು. ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದು ಈಕೆಯ ಹವ್ಯಾಸವಾಗಿತ್ತು. ಆದರೆ ಇತ್ತೀಚೆಗೆ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೊಳಗಾಗಿದ್ದಳು ಎನ್ನಲಾಗಿದೆ.
ಮಂಗಳೂರು: ದ್ವಿಚಕ್ರವಾಹನವೊಂದು ಹೆದ್ದಾರಿಯ ಗುಂಡಿಗೆ ಬಿದ್ದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸವಾರೆಯ ಮೇಲೆ ಮೀನಿನ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೂಳೂರು ರಾಯಲ್ ಓಕ್ ಬಳಿ ನಡೆದಿದೆ. ಮೃತರನ್ನು ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಎಂದು ಹೇಳಲಾಗುತ್ತಿದೆ. ಇವರು ತನ್ನ ದ್ವಿಚಕ್ರವಾಹನದಲ್ಲಿ ಕೂಳೂರು ಕಡೆಯಿಂದ ಮಂಗಳೂರಿನ ಎಜೆ ಆಸ್ಪತ್ರೆಗೆ ಉದ್ಯೋಗ ನಿಮಿತ್ತ ತೆರಳುತ್ತಿದ್ದ ವೇಳೆ ಸ್ಕೂಟಿ ಹೆದ್ದಾರಿಯ ಗುಂಡಿಗೆ ಬಿದ್ದು ಪಲ್ಟಿಯಾಗಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಮಾಧವಿ ಅವರಮೇಲೆ ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಹರಿದು ಅವರು ಸ್ಥಳದಲ್ಲೇ ಮೃತಪಟ್ಟರೆಂದು ಹೇಳಲಾಗಿದೆ. ಅಪಘಾತದ ರಭಸಕ್ಕೆ ಮಾಧವಿ ಅವರ ಹೊಟ್ಟೆಯ ಮೇಲ್ಬಾಗದಿಂದ ಲಾರಿ ಚಲಿಸಿತ್ತು ಎನ್ನಲಾಗಿದೆ. ಮೃತದೇಹವನ್ನು ನಗರದ ಎ.ಜೆ. ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಡಿಕ್ಕಿಹೊಡೆದ ಮೀನಿನ ಲಾರಿ ಮತ್ತು ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ…









