Author: main-admin

ಚಿಕ್ಕಮಗಳೂರು: ಟ್ರೆಕ್ಕಿಂಗ್ ಗೆ ತೆರಳಿ ಕಾಡಿನಲ್ಲಿ ದಾರಿ ತಪ್ಪಿ ಸಿಕ್ಕಿಹಾಕಿಕೊಂಡಿದ್ದ 10 ವಿಧ್ಯಾರ್ಥಿಗಳನ್ನು ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನದುರ್ಗ ಕಾಡಿನಲ್ಲಿ ನಡೆದಿದೆ. ಚಿತ್ರದುರ್ಗದ ವಿವಿಧ ಕಾಲೇಜಿನ ಐವರು ವಿದ್ಯಾರ್ಥಿನಿಯರು ಮತ್ತು ಐವರು ವಿದ್ಯಾರ್ಥಿಗಳ ತಂಡ ಟೆಂಪೊ ಟ್ರಾವೆಲರ್ ವಾಹನ ಬಾಡಿಗೆಗೆ ಪಡೆದು ಪ್ರವಾಸ ಬಂದಿದ್ದರು. ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್ಕಿಂಗ್ ಮಾಡಿದ್ದರು. ರಾಣಿಝರಿ ಕಡೆಯಿಂದ ಚಾರಣ ಆರಂಭಿಸಬೇಕಿತ್ತು. ಗೂಗಲ್ ಮ್ಯಾಪ್‌ನಲ್ಲಿ ಬಂಡಾಜೆ ಟ್ರಕ್ಕಿಂಗ್ ಎಂದು ನಮೂದಿಸಿದಾಗ ದಕ್ಷಿಣ ಕನ್ನಡ ಜಿಲ್ಲೆಯ ದಿಡಪೆ ಮಾರ್ಗ ತೋರಿಸಿದೆ. ಅಲ್ಲಿಂದ ಚಾರಣ ಆರಂಭಿಸಿದ್ದು, ಬಂಡಾಜೆ ಜಲಪಾತ ತನಕ ಹೋಗಿದ್ದಾರೆ. ವಾಪಸ್ ಬರಲು ಬಲ್ಲಾಳರಾಯನದುರ್ಗ ಮತ್ತು ರಾಣಿಝರಿ ಕಡೆಯ ಮಾರ್ಗ ಹಿಡಿದಿದ್ದಾರೆ. ಅಷ್ಟರಲ್ಲಿ ಕತ್ತಲಾಗಿದ್ದರಿಂದ ದಾರಿ ತಪ್ಪಿದ್ದಾರೆ. ನೆಟ್‌ವರ್ಕ್ ಇಲ್ಲದ ಕಾರಣ ಗೂಗಲ್ ಮ್ಯಾಪ್ ಕೂಡ ಕೆಲಸ ಮಾಡಿಲ್ಲ.ವಾಪಸ್ ಬರಲು ಬಲ್ಲಾಳರಾಯನದುರ್ಗ ಮತ್ತು ರಾಣಿಝರಿ ಕಡೆಯ ಮಾರ್ಗ ಹಿಡಿದಿದ್ದಾರೆ. ಅಷ್ಟರಲ್ಲಿ ಕತ್ತಲಾಗಿದ್ದರಿಂದ ದಾರಿ ತಪ್ಪಿದ್ದಾರೆ. ನೆಟ್‌ವರ್ಕ್ ಇಲ್ಲದ ಕಾರಣ…

Read More

ಕುಂದಾಪುರ: ಸ್ಕೂಟಿನಲ್ಲಿ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ನದಿಗೆ ಹಾರಿ ನಾಪತ್ತೆಯಾದ ಘಟನೆ ಕೋಡಿಯ ಸೇತುವೆಯ ಬಳಿ ನಡೆದಿದ್ದು, ಮಹಿಳೆ ಪತ್ತೆಗೆ ಹುಡುಕಾಟ ಪ್ರಾರಂಭಿಸಲಾಗಿದೆ.ಟನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್‌ (32) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಇಬ್ಬರು ಮಕ್ಕಳಿದ್ದಾರೆ. ಹೀನಾ ತಾಯಿಯೊಂದಿಗೆ ವಿಠಲವಾಡಿಯ ಮನೆಯಲ್ಲಿ ನೆಲೆಸಿದ್ದು, ಸೋಮವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟು ಬಂದವರು ಸ್ಕೂಟಿಯನ್ನು ಸೇತುವೆಯ ಮೇಲಿಟ್ಟು, ನದಿಗೆ ಹಾರಿರಬಹುದು ಎನ್ನಲಾಗಿದೆ. ಅವರ ಚಪ್ಪಲಿ ಸೇತುವೆಯಲ್ಲಿ ಪತ್ತೆಯಾಗಿದೆ. ಸ್ಕೂಟಿಯಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕುಂದಾಪುರ ಪೊಲೀಸರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬಂದಿಯಿಂದ ಹಗಲಿಡೀ ನದಿಯಲ್ಲಿ ದೋಣಿಯ ಮೂಲಕ ಹುಡುಕಾಟ ನಡೆಯಿತು. ಆದರೆ ಯಾವುದೇ ಸುಳಿವು ಪತ್ತೆಯಾಗಿಲ್ಲ. ಹೀನಾ ಅವರ ತಾಯಿ ಸಾದಿಕಾ ಬಾನು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

Read More

ಕುಂದಾಪುರ : ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಚಾರಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ದಲತಿ ಯುವತಿಗೆ ಹಲ್ಲೆ ಮಾಡಿದ ಘಟನೆ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್‌ ಶಾಪ್‌ ನಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವತಿಯನ್ನು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಯಾಸ್ಮಿನ್‌ ಹಲ್ಲೆಗೈದ ಆರೋಪಿ. ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದಿದ್ದ ಆ ಮಹಿಳೆ ಔಷಧ ಖರೀದಿಸಿ 500 ರೂ. ಕೊಟ್ಟಳು. ಚಿಲ್ಲರೆ ಇಲ್ಲ, ಕೊಡಿ ಎಂದ ಯುವತಿ ಹೇಳಿದ್ದಾಳೆ. ಆದರೆ ಯಾಸ್ಮಿನ್‌ ಅದೇ ವಿಚಾರಕ್ಕೆ ಯುವತಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎನ್ನಲಾಗಿದೆ. ಹಲ್ಲೆಗೊಳಗಾದ ಲಕ್ಷ್ಮೀ ಅವರನ್ನು ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಭೇಟಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಆರೋಗ್ಯ ವಿಚಾರಿಸಿದರು. ಘಟನೆ ನಡೆದ ಔಷಧ ಅಂಗಡಿಗೂ ಭೇಟಿ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ಘಟನೆ ಕುರಿತಂತೆ ಕುಂದಾಪುರ ಗ್ರಾಮಾಂತರ ಠಾಣೆ ಯಲ್ಲಿ…

Read More

ಸ್ಟೇಟ್‌ಬ್ಯಾಂಕ್‌: ಸ್ಟೇಟ್‌ಬ್ಯಾಂಕ್‌ನ ಬಸ್‌ ನಿಲ್ದಾಣದಲ್ಲಿ ಕೊರತೆಗಳ ಸಾಲಿಗೆ ಮತ್ತೂಂದು ಸೇರ್ಪಡೆಯಾಗಿದೆ. ಒಂದಿಲ್ಲೊಂದು ಕೊರತೆ ಎದುರಿಸುತ್ತಾ ಬಂದಿರುವ ಬಸ್‌ ನಿಲ್ದಾಣದಲ್ಲಿ ಈಗ ಬೆಳಕಿನ ಸಮಸ್ಯೆ ಉಂಟಾಗಿದೆ. ರಾತ್ರಿಯಾ ಗುತ್ತಿದ್ದಂತೆ ನಿಲ್ದಾಣದೊಳಗೆ ಕತ್ತಲು ಆವರಿಸುತ್ತದೆ. ನಿಲ್ದಾಣದಲ್ಲಿ ಮೇಲ್ಬಾವಣಿಯ ಕೊರತೆಯಿಂದಾಗಿ ಪ್ರಯಾಣಿಕರು ಮಳೆ, ಬಿಸಿಲಿಗೆ ತೊಂದರೆಗೀಡಾಗುತ್ತಿದ್ದರು. ಕೆಲವು ತಿಂಗಳುಗಳ ಹಿಂದೆ ಮೇಲ್ಬಾವಣಿ ಹಾಕಲಾಗಿತ್ತು. ಆದರೆ ಮೇಲ್ಬಾವಣಿ ಹಾಕಿದ ಬಳಿಕ ಬೆಳಕಿನ ಕೊರತೆ ಉಂಟಾಗಿದೆ. ನಿಲ್ದಾಣದಲ್ಲಿ 5 ಪ್ಲಾಟ್‌ಫಾರಂಗಳಿದ್ದು ಇವು ಗಳಿಗೆ ಮೇಲ್ಬಾವಣಿ ಹಾಕಲಾಗಿದೆ. ಆದರೆ ಆ ಮೇಲ್ಪಾ ವಣಿಯ ಕೆಳಗೆ ಬೆಳಕಿಲ್ಲದೆ ಸಮಸ್ಯೆಯಾಗಿದೆ. ಪಶ್ಚಿಮ ಭಾಗದ ಪ್ಲಾಟ್‌ಫಾರಂಗಳಲ್ಲಿ ಸಂಪೂರ್ಣ ಕತ್ತಲು ಆವರಿಸುತ್ತದೆ. ನಿಲ್ದಾಣದೊಳಗೆ ಹೈಮಾಸ್ಟ್ ದೀಪ ವೊಂದಿದೆ. ಆದರೆ ಮೇಲ್ಬಾವಣಿ ಅದರ ಬೆಳಕಿಗೆ ತಡೆಯೊಡ್ಡುತ್ತಿದೆ. ಪ್ಲಾಟ್‌ಫಾರಂನಲ್ಲಿ ರಾತ್ರಿ ವೇಳೆ ಬಸ್‌ಗಾಗಿ ಕಾದು ನಿಲ್ಲುವವರಿಗೆ, ಮುಖ್ಯವಾಗಿ ಮಹಿಳೆಯರಿಗೆ ಇದರಿಂದ ಸಮಸ್ಯೆಯಾಗಿದೆ. ಸುರಕ್ಷೆಗಾಗಿ ಬೆಳಕಿನ ವ್ಯವಸ್ಥೆ ಅಗತ್ಯ ಇಡೀ ಬಸ್‌ ನಿಲ್ದಾಣಕ್ಕೆ ಒಂದು ಹೈಮಾಸ್ಟ್ ದೀಪ ಮಾತ್ರವಿದೆ. ನಿಲ್ದಾಣದ ಕೆಲವು ಭಾಗಕ್ಕೆ ಇದರ ಬೆಳಕು ಸರಿಯಾಗಿ ಬೀಳುತ್ತಿಲ್ಲ. ಮುಖ್ಯವಾಗಿ…

Read More

ಮಂಗಳೂರು: ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್‌ಪ್ರೆಸ್‌ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಆನ್‌ಲೈನ್ ಸಹಿ ಸಂಗ್ರಹ ಅಭಿಯಾನವನ್ನು ದಕ್ಷಿಣ ಕನ್ನಡ ಜಿಲ್ಲಾ ರೈಲು ಬಳಕೆದಾರರ ಸಮಿತಿ ಆರಂಭಿಸಿದೆ. ಕರಾವಳಿಯ ರೈಲು ಬಳಕೆದಾರರು ಕೈಜೋಡಿಸಿದ್ದು, ರೈಲು ಮಾರ್ಗವನ್ನು ಬದಲಾಯಿಸಿ ಪುನರಾರಂಭಿಸುವಂತೆ ಆಗ್ರಹಿಸಿದ್ದಾರೆ. ದೇಶದ ಅತಿ ದೀರ್ಘ ಪ್ರಯಾಣದ ರೈಲುಗಳ ಪೈಕಿ 4ನೇ ಸ್ಥಾನ ಪಡೆದಿದ್ದ ನವಯುಗ ಎಕ್ಸ್‌ಪ್ರೆಸ್‌ ರೈಲು ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ತನ್ನ ಸೇವೆ ನಿಲ್ಲಿಸಿ ಆಗಲೇ 5 ವರ್ಷ ಕಳೆದಿದೆ. ಬಹು ಬೇಡಿಕೆಯ ಈ ರೈಲು ಸಂಚಾರ ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ಆನ್‌ಲೈನ್‌ ಮೂಲಕ ಹಕ್ಕೊತ್ತಾಯ ಅಭಿಯಾನ ಆರಂಭಿಸಲಾಗಿದೆ. ಜೂ.6ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವರ್ಚುವಲ್‌ ಸಹಿ ಸಂಗ್ರಹ ಅಭಿಯಾನ ಆರಂಭಗೊಂಡಿದ್ದು, ಜುಲೈ 6 ರ ರಾತ್ರಿ 12 ಗಂಟೆಯ ತನಕ ನಡೆದಿದೆ. ಕರ್ನಾಟಕ ಕರಾವಳಿಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ನೇರ ರೈಲು ಸೇವೆ ಪುನರಾರಂಭಿಸುವ ಉದ್ದೇಶದಿಂದ…

Read More

ತಿರುವನಂತಪುರಂ,ಜೂ. 09 : ಸರಕು ಹಡಗಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕೋಝಿಕ್ಕೋಡ್‌ನ ಬೇಪೋರ್ ಕರಾವಳಿಯ ಬಳಿ ನಡೆದಿದೆ. ಬೆಂಕಿಯ ಪರಿಣಾಮ ಹಡಗಿನಲ್ಲಿದ್ದ ಸುಮಾರು 20 ಕಂಟೇನರ್‌ಗಳು ಸಮುದ್ರಕ್ಕೆ ಬಿದ್ದಿದೆ. 12.5 ಮೀಟರ್ ಡ್ರಾಫ್ಟ್ ಹೊಂದಿರುವ 270 ಮೀಟರ್ ಉದ್ದದ ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟು ಮುಂಬೈಗೆ ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 650 ಕಂಟೇನರ್‌ಗಳಿದ್ದ ಈ ಹಡಗಿನಲ್ಲಿ 40 ಮಂದಿ ಸಿಬ್ಬಂದಿ ಇದ್ದರು. ಬೆಂಕಿ ಕಾಣಿಸಿಕೊಂಡ ವೇಳೆ 18 ಮಂದಿ ಸಮುದ್ರಕ್ಕೆ ಹಾರಿದ್ದಾರೆ ಎಂದು ವರದಿಗಳು ತಿಳಿಸಿವೆ. ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆಯ ಹಡಗುಗಳು ಘಟನಾ ಸ್ಥಳಕ್ಕೆ ತೆರಳಿದ್ದು, ಹಡಗಿನಲ್ಲಿದ್ದವರ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Read More

ಉಡುಪಿ, ಜೂ. 09 : ಸಾಧಿಸುವ ಛಲವೊಂದಿದ್ದರೆ ಸಾಕು ಯಾವುದೇ ಮಹತ್ವಾಕಾಂಕ್ಷೆಯ ಕನಸುಗಳನ್ನು ನನಸಾಗಿಸಿಕೊಳ್ಳುವುದು ಕಷ್ಟವಲ್ಲ ಎಂಬುದನ್ನು ಉಡುಪಿ ಜಿಲ್ಲೆಯ ಒಂದು ಪುಟ್ಟ ಗ್ರಾಮದ ಯುವತಿಯೊಬ್ಬಳು ಸಾಬೀತುಪಡಿಸಿದ್ದಾರೆ. ಪೆರ್ಣಂಕಿಲ ಎಂಬ ಪುಟ್ಟ ಗ್ರಾಮದ ಸದಾನಂದ ನಾಯಕ್ ಮತ್ತು ಜಯಶ್ರೀ ತೆಂಡೂಲ್ಕರ್ ದಂಪತಿಯ ಪುತ್ರಿ ಸೀಮಾ ತೆಂಡೂಲ್ಕರ್, ಭಾರತೀಯ ನೌಕಾಪಡೆಯಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಬಾಲ್ಯದಿಂದಲೇ ಸೀಮಾ ಅವರು ಭಾರತೀಯ ಸೇನೆಗೆ ಸೇರ್ಪಡೆಗೊಳ್ಳಬೇಕೆಂಬ ಕನಸು ಕಂಡಿದ್ದರು. ಅದನ್ನೇ ಬದುಕಿನ ಗುರಿಯಾಗಿಸಿಕೊಂಡಿದ್ದ ಸೀಮಾ ಅವರು, ತಮ್ಮ ಬಾಲ್ಯದ ಆಕಾಂಕ್ಷೆಯನ್ನು ನನಸಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಿರಿಯಡಕದ ಖಾಸಗಿ ಶಾಲೆಯಲ್ಲಿ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿದ ಅವರು, ನಂತರ ಕಾರ್ಕಳದ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರ್ಣಗೊಳಿಸಿದರು. ನಂತರ ಬೆಂಗಳೂರಿನ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ಪದವಿ ಪಡೆದರು.ಇಂಜಿನಿಯರಿಂಗ್‌ನಲ್ಲಿ ಪದವಿ ಗಳಿಸಿದರೂ, ಮನಸ್ಸು ಇದ್ದದ್ದು ಭಾರತೀಯ ಸೇನೆ ಕಡೆಗೆ. ಸಶಸ್ತ್ರ ಪಡೆಗಳು ನಡೆಸಿದ ನೇರ ಸಂದರ್ಶನವನ್ನು ಯಶಸ್ವಿಯಾಗಿ ಪೂರೈಸಿದ ಅವರು, ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಆಯ್ಕೆಯಾದರು. ಪ್ರಸ್ತುತ ಅವರು…

Read More

ಬೆಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಇದೀಗ ಕೇಂದ್ರ ಸರಕಾರ ಎನ್ ಐಎ ತನಿಖೆಗೆ ವಹಿಸಿದೆ. ರಾಜ್ಯ ಸರಕಾರದ ಒಪ್ಪಿಗೆ ಇಲ್ಲದಿದ್ದರೂ ಕೇಂದ್ರ ಸರಕಾರ ಈ ಪ್ರಕರಣವನ್ನು ಎನ್ಐಎ ವಹಿಸಿದೆ. ಕಳೆದ ತಿಂಗಳು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ. ಇನ್ನು ಈ ಪ್ರಕರಣವನ್ನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾ‌ನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ…

Read More

ಮಂಗಳೂರು: ದಕ್ಷಿಣ ಕನ್ನಡದಲ್ಲಿ ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಸಮೀಪ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳು ಹನುಮಪ್ಪ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಮೂಲದ ಅಣ್ಣ-ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಪ್ಯಾಸೆಂಜರ್ ರೈಲಿನಲ್ಲಿ ಆಗಮಿಸಿದ ಇವರು ಬಜಕರೆ ರೈಲು ನಿಲ್ದಾಣದಲ್ಲಿ ಇಳಿದಿದ್ದಾರೆ. ರೈಲು ಹೋದ ನಂತರ ಸುಮಾರು 500 ಮೀಟರ್ ದೂರದವರೆಗೂ ಅಣ್ಣನನ್ನು ಕರೆದುಕೊಂಡು ಹೋದ ತಮ್ಮ ನಿಂಗಪ್ಪ ಏಕಾಏಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಹನಮುಪ್ಪ ಚರಂಡಿಗೆ ಹಾರಿದ್ದು, ಚರಂಡಿ ನೀರಿಗೆ ಬಿದ್ದ ಕಾರಣ ಬೆಂಕಿ ನಂದಿದೆ. ಅವರ ಕಿರುಚಾಟ ಕೇಳಿದ ಸ್ಥಳೀಯರು ಓಡಿ ಬಂದು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಡಬ ಠಾಣೆ ಪೊಲೀಸರು ನಿಂಗಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ.

Read More

ಮಂಗಳೂರು, ಜೂನ್ 07: ಸೆಮಿನಾರ್ ತಪ್ಪಿಸಲು ಓರ್ವ ವಿದ್ಯಾರ್ಥಿನಿ (Student) ತಾನು ವ್ಯಾಸಂಗ ಮಾಡುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ (Medical College) ಬಾಂಬ್ ಇದೆ ಎಂದು ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ವಿದ್ಯಾರ್ಥಿನಿ ಡಾ.ಚಲಸಾನಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ. ಡಾ.ಚಲಸಾನಿ ಮೋನಿಕಾ ಚೌಧರಿ ಜೂ.4 ರಂದು ಸೆಮಿನಾರ್ ಕೊಡಬೇಕಿತ್ತು. ಆದರೆ, ಈ ಸಮಿನಾರ್ನಿಂದ ತಪ್ಪಿಸಿಕೊಳ್ಳಲು ಮೋನಿಕಾ ಜೂನ್ 4ರ ಬೆಳಗ್ಗೆ 8.15ಕ್ಕೆ ತಾನು ಓದುತ್ತಿರುವ ಕಣಚೂರು ಮೆಡಿಕಲ್ ಕಾಲೇಜಿನ ಹೆರಿಗೆ ವಾರ್ಡ್ನ ಸ್ಥಿರ ದೂರವಾಣಿಗೆ ಕರೆ ಮಾಡಿ, “ಬೆಳಗ್ಗೆ 11ಕ್ಕೆ ಕಣಚೂರು ಆಸ್ಪತ್ರೆ ಸ್ಫೋಟಿಸುವುದಾಗಿ” ಬೆದರಿಕೆ ಹಾಕಿದ್ದಾರೆ. ನಂತರ, ಮೋನಿಕಾ ಚೌಧರಿಯೇ ನಮ್ಮ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ತಾಂತ್ರಿಕ ವಿಶ್ಲೇಷಣೆ ನಡೆಸಿದಾಗ, ದೂರು ನೀಡಿದ ವಿದ್ಯಾರ್ಥಿನಿ…

Read More