Author: main-admin

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯ ವ್ಯಾಪ್ತಿಯಲ್ಲಿ 36 ಮಂದಿ ರೌಡಿಶೀಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ್ಲ, ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ, ಬಂಟ್ವಾಳದ ಭರತ್ ಕುಮ್ಡೇಲ್ ಸೇರಿ 36 ಮಂದಿ ಲಿಸ್ಟ್ ನಲ್ಲಿದ್ದಾರೆ.ಬಂಟ್ವಾಳ ನಗರ ವ್ಯಾಪ್ತಿಯಿಂದ 4 ಮಂದಿ, ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯಿಂದ 6 ಮಂದಿ, ಬೆಳ್ತಂಗಡಿ ವ್ಯಾಪ್ತಿಯಿಂದ 2 ಮಂದಿ, ಪುಂಜಾಲಕಟ್ಟೆ ವ್ಯಾಪ್ತಿಯಿಂದ ಒರ್ವ, ಪುತ್ತೂರು ನಗರ ವ್ಯಾಪ್ತಿಯಿಂದ 6 ಮಂದಿ , ಪುತ್ತೂರು ಗ್ರಾಮಾಂತರ ವ್ಯಾಪ್ತಿಯಿಂದ 3 ಮಂದಿ, ಕಡಬ ವ್ಯಾಪ್ತಿಯಿಂದ ಓರ್ವ, ಉಪ್ಪಿನಂಗಡಿ ವ್ಯಾಪ್ತಿಯಿಂದ 6 ಮಂದಿ, ಸುಳ್ಯ ವ್ಯಾಪ್ತಿಯಿಂದ 2 ಮಂದಿ, ಬೆಳ್ಳಾರೆ ವ್ಯಾಪ್ತಿಯಿಂದ 2 ಮಂದಿ ಸೇರಿ ಒಟ್ಟು 36 ಮಂದಿ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡುವ ಕಾನೂನು…

Read More

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಎಚ್ಚರಿಕೆ ನೀಡಿದ್ದಾರೆ. ದ.ಕ. ಜಿಲ್ಲೆಯ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲ ತಿಂಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಆಗಿದೆ. ಕಳೆದ 5-10 ವರ್ಷಗಳಲ್ಲಿ ನಡೆದ ಕೊಲೆ ಪ್ರಕರಣಗಳ ವಿಶ್ಲೇಷಣೆಯಲ್ಲಿ ಕೆಲವು ಆರೋಪಿಗಳು ಕೋಮು ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆಂದು ತಿಳಿದುಬಂದಿದೆ. “ನಾವು ಅಂತಹ ಸಂಘಟನೆಗಳ ನಾಯಕರ ಚಲನವಲನಗಳು ಮತ್ತು ಚಟುವಟಿಕೆಗಳನ್ನು ಗುರುತಿಸಿದ್ದೇವೆ ಮತ್ತು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಂತಹ ಎಲ್ಲಾ ಗುಂಪುಗಳನ್ನು ಪರಿಶೀಲಿಸಲು ನಿರ್ದೇಶನಗಳನ್ನು ನೀಡಲಾಗಿದೆ ಮತ್ತು ತಡೆಗಟ್ಟುವ ಕ್ರಮಗಳು ಮುಂದುವರಿಯುತ್ತವೆ” ಎಂದು ಎಸ್ಪಿ ಹೇಳಿದರು. ಈ ಹಿನ್ನೆಲೆಯಲ್ಲಿ ಮತೀಯ ಸಂಘಟನೆಗಳ ಮುಖಂಡರು ನಿತ್ಯ ಇರುವ ಸ್ಥಳ ಹಾಗೂ ಅವರ…

Read More

ಮಂಗಳೂರು: ಅಪಾರ್ಟ್ಮೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿ ಇಂದು ಮುಂಜಾನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನ ಕಾರಣದಿಂದಾಗಿ ಅಪಾರ್ಟ್ಮೆಂಟ್ ನ ಎರಡನೇ ಫ್ಲೋರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಾಡಿಗೆಗೆ ವಿದ್ಯಾರ್ಥಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ. ಮನೆಯಲ್ಲಿದ್ದ ಸೋಫಾ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳು ಸಂಪೂರ್ಣವಾಗಿದೆ ಸುಟ್ಟು ಭಸ್ಮವಾಗಿದೆ. ಸುಮಾರು ಎಪ್ಪತ್ತೈದು ಸಾವಿರ ರೂ. ನಷ್ಟ ಸಂಭವಿಸಿದೆ ಎಂದು ಹೇಳಬಹುದು.

Read More

ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮವು ದಿನಾಂಕ: 12.05.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದಿರುತ್ತದೆ. ಈ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ರವರು ಭಾಗವಹಿಸಿದ್ದು, ಸದ್ರಿ ಕಲ್ಲಡ್ಕ ಪ್ರಭಾಕರ್ ಭಟ್ ರವರು ಅಲ್ಲಿ ನೆರೆದಿದ್ದ ಸುಮಾರು 500 ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾದ್ಯತೆಗಳಿರುವುದರಿಂದ, ಕಲ್ಲಡ್ಕ ಪ್ರಭಾಕರ್ ಭಟ್ ರವರ ವಿರುದ್ದ ದಿನಾಂಕ: 02.06.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

Read More

ಬಂಟ್ವಾಳ : ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ದುರುಪಯೋಗಪಡಿಸಿಕೊಂಡ ಕಿಡಿಗೇಡಿಗಳು ಇತ್ತೀಚೆಗೆ ನಡೆದ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ದ್ವೇಷ ಉಂಟು ಮಾಡುವ ಸಂದೇಶ ಪ್ರಸಾರ ಮಾಡಿದ ಬಗ್ಗೆ ವ್ಯಕ್ತಿಯೋರ್ವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಅಮ್ಮಾಡಿ ಗ್ರಾಮದ ಲೊರೆಟ್ರೊಪದವು ನಿವಾಸಿ ಪ್ರಜ್ವಲ್ ಶೆಟ್ಟಿ (29) ಅವರು ಪೊಲೀಸರಿಗೆ ದೂರು ನೀಡಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ಕಿಡಿಗೇಡಿಗಳು ದುರುಪಯೋಗ ಪಡಿಸಿಕೊಂಡು, ಇತ್ತೀಚೆಗೆ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಮುದ್ವೇಷವನ್ನು ಉಂಟು ಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡಿರುತ್ತಾರೆ. ಇದರಿಂದಾಗಿ ತಾನು ಜೀವ ಭಯ ಕ್ಕೊಳಗಾಗಿರುತ್ತೇನೆ ಎಂದು ದೂರು ನೀಡಿದ್ದಾರೆ.ಈ ಬಗ್ಗೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂದ್ದಾರೆ.

Read More

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮದ ಸಭಾ ಕಾರ್ಯಕ್ರಮ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು ಬಳಿಕ ಮಾತಾಡಿದ ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಸತೀಶ್ ಪಟ್ಲರಿಗೆ ಅವರ ಕಂಠವೇ ದೇವರು, ಆದರೆ ಯಕ್ಷಗಾನ ಕಲಾವಿದರಿಗೆ ಸತೀಶ್ ಪಟ್ಲರೇ ದೇವರು. ಯಕ್ಷಗಾನ ಕಲಾವಿದರು ತಮ್ಮ ಕಷ್ಟವನ್ನು ಬದಿಗಿರಿಸಿ ಜನರಿಗೆ ಮನೋರಂಜನೆ ನೀಡುತ್ತಾರೆ ಎಂದಿಗೂ ಯಾರ ಮುಂದೆಯೂ ಕೈಚಾಚುವುದಿಲ್ಲ. ಅವರ ಸ್ವಾಭಿಮಾನದ ಬದುಕು ಹಾಗಿರುತ್ತದೆ, ಇಂತಹ ಕಲಾವಿದರಿಗೆ ನೆರವಾಗಲು ಯಕ್ಷಧ್ರುವ ಪಟ್ಲ ಟ್ರಸ್ಟ್ ಸ್ಥಾಪಿಸಿ ರಾತ್ರಿ ಹಗಲು ಕಲಾವಿದರ ನೋವಿಗೆ ಸ್ಪಂದಿಸಿದರು. ಅವರು ಪ್ರಾರಂಭದಲ್ಲಿ ನನ್ನ ಬಳಿ ತೊಟ್ಟಿಲು ಕೇಳಿದಾಗ ನಾನು ಹಿಂದೆ ಮುಂದೆ ಯೋಚಿಸದೆ ಬೆಳ್ಳಿ ತೊಟ್ಟಿಲು ನೀಡಿದೆ. ಆದರೆ ನಂತರ ನನ್ನ ಜೀವನದಲ್ಲಿ ವ್ಯವಹಾರದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡೆ. ನಾವೆಲ್ಲರೂ ಅವರು ಮಾಡುವ ಒಳ್ಳೆಯ ಕೆಲಸಕ್ಕೆ ಕೈಜೋಡಿಸೋಣ. ಅವರ ಸಮಾಜಮುಖಿ ಚಿಂತನೆ,…

Read More

ಬೆಂಗಳೂರು: ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (ಡಿಸಿಗಳು) ಮತ್ತು ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಸಿಇಒಗಳೊಂದಿಗೆ ಎರಡು ದಿನಗಳ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ದ್ವೇಷ ಭಾಷಣ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು. ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದರು. ದ್ವೇಷ ಭಾಷಣ ಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಯ ಕ್ರಮ ಕೈಗೊಳ್ಳಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು. ಕಾನೂನು-ಸುವ್ಯವಸ್ಥೆ ಮತ್ತು ಅಭಿವೃದ್ಧಿಯ ನಡುವೆ ನೇರ ಸಂಬಂಧವಿದೆ. ರಾಜ್ಯಾದ್ಯಂತ ಅವುಗಳನ್ನು ಖಚಿತಪಡಿಸಿಕೊಳ್ಳಬೇಕು. ಸಂವಿಧಾನದ ಉದ್ದೇಶಗಳನ್ನು ಅಡ್ಡಿಪಡಿಸುವ ಶಕ್ತಿಗಳನ್ನು ಮೊಳಕೆಯಲ್ಲೇ ಕಿತ್ತುಹಾಕುವಂತೆ ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳಿಗೆ ಕಟ್ಟುನಿಟ್ಟಿನ…

Read More

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ.ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ ವೇಳೆ ಬಾಡಿ ವೋರ್ನ್‌ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಧರಿಸಿರಬೇಕು. ರಸ್ತೆಯಲ್ಲಿ ದಿಢೀರನೆ ಬಂದು ವಾಹನಗಳನ್ನು ಅಡ್ಡಗಟ್ಟುವುದಾಗಲಿ ಅಥವಾ ವಾಹನಗಳ ಕೀಲಿ ತೆಗೆದುಕೊಳ್ಳವುದಾಗಲಿ ಮಾಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಡಿಜಿಪಿ ವಾಹನ ತಪಾಸಣೆ ಸಲುವಾಗಿ ನೀಡಿದ ಮಾರ್ಗಸೂಚಿ ಇಂತಿದೆ: 1.ಸಕಾರಣವಿಲ್ಲದೆ ದಾಖಲೆಗಳನ್ನು ಪರೀಕ್ಷಿಸಲು ವಾಹನಗಳನ್ನು ತಡೆದು ತಪಾಸಣೆಗೊಳಪಡಿಸಬಾರದು. ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆಗಳು ಕಂಡು ಬಂದಲ್ಲಿ ಮಾತ್ರ ವಾಹನ ತಡೆ ತಪಾಸಣೆ ನಡೆಸಬೇಕು. ಪ್ರಕರಣಗಳನ್ನು ದಾಖಲಿಸುವಾಗ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವುದು. (ಅ) ಹೆದ್ದಾರಿಗಳಲ್ಲಿ ಜಿಗ್‌ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ವಾಹನಗಳನ್ನು…

Read More

ಮಂಗಳೂರು: ಯಾವುದೇ ಪ್ರಕರಣಗಳ ಆರೋಪಿಗಳಿಗೆ ಯಾರೇ ಆದರೂ ಆಶ್ರಯ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಅಪರಾಧ ಪ್ರಕರಣ ಮಾಡಿದ ಬಳಿಕ ಆರೋಪಿಗಳಿಗೆ ಆಶ್ರಯ ನೀಡುವುದು, ಆರ್ಥಿಕ ಸಹಾಯ ಮಾಡುವುದು, ಆಹಾರ, ಫೋನ್, ವಾಹನ ಇತ್ಯಾದಿ ರೂಪದಲ್ಲಿ ನೀಡಿದರೆ ಅವರನ್ನೂ ಕೂಡ ಆರೋಪಿಗಳನ್ನಾಗಿ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕೆಲವೊಂದು ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಪ್ರಕರಣದ ತನಿಖೆ ನಡೆಸಿದಾಗ ಕೃತ್ಯಕ್ಕೆ, ಆರೋಪಕ್ಕೆ ಸಹಕಾರ ನೀಡಿದ ವ್ಯಕ್ತಿ ಎಷ್ಟೇ ಪ್ರಭಾವಶಾಲಿಯಾದರೂ ಅವರನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

Read More

ಮಂಗಳೂರು: ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ, ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದು ಹೇಳಿದರು. ಈ ಸಂದರ್ಭ ಜತೆಯಲ್ಲಿದ್ದ ಎಸ್ಪಿ ಡಾ.ಅರುಣ್ ಕುಮಾರ್ ಅವರೂ ದನಿಗೂಡಿಸಿ, ಅದಕ್ಕಾಗಿಯೇ ನಾವು ಜತೆಯಲ್ಲಿಯೇ ಇಲ್ಲಿದ್ದೇವೆ ಎಂದರು. ಕೋಮುದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಾಕುತ್ತಿರುವವರ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸುಧೀರ್ ರೆಡ್ಡಿ ಅವರು, ಯಾರದ್ದೇ ಯಾವ ಮಾತು ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವಂತಿರಬಾರದು. ವಾಕ್ ಸ್ವಾತಂತ್ರ್ಯ…

Read More